ಬಿಡುಗಡೆ ಆಯ್ತು ‘ತೋತಾಪುರಿ 2’ ಟ್ರೇಲರ್; ಈ ಚಿತ್ರದಲ್ಲಿ ಏನೆಲ್ಲ ಇರಲಿದೆ?

Totapuri 2 Trailer: ‘ತೋತಾಪುರಿ’ ಚಿತ್ರದಲ್ಲಿ ಈರೇಗೌಡ (ಜಗ್ಗೇಶ್) ಕೃಷಿಕ ಹಾಗೂ ಟೈಲರ್. ಆತನಿಗೆ ಶಕೀಲಾ (ಅದಿತಿ ಪ್ರಭುದೇವ) ಬಾನು ಮೇಲೆ ಪ್ರೀತಿ ಹುಟ್ಟುತ್ತದೆ. ಈ ಚಿತ್ರದ ಕೊನೆಯಲ್ಲಿ ಧನಂಜಯ್ ಕಾಣಿಸಿಕೊಂಡಿದ್ದರು. ಎರಡನೇ ಭಾಗದಲ್ಲಿ ಕಥೆ ಮುಂದುವರಿದಿದೆ.

ಬಿಡುಗಡೆ ಆಯ್ತು ‘ತೋತಾಪುರಿ 2’ ಟ್ರೇಲರ್; ಈ ಚಿತ್ರದಲ್ಲಿ ಏನೆಲ್ಲ ಇರಲಿದೆ?
ತೋತಾಪುರಿ ಟ್ರೇಲರ್
Follow us
|

Updated on: Sep 18, 2023 | 10:53 AM

ಗಣೇಶ ಚತುರ್ಥಿ ಪ್ರಯುಕ್ತ ಹೊಸ ಹೊಸ ಸಿನಿಮಾಗಳು ಘೋಷಣೆ ಆಗುತ್ತಿವೆ. ಇದರ ಜೊತೆಗೆ ಸಿನಿಮಾ ತಂಡದಿಂದ ಪೋಸ್ಟರ್​​ಗಳು, ಟೀಸರ್ ಬಿಡುಗಡೆ ಮಾಡುವ ಕೆಲಸವೂ ಆಗುತ್ತಿದೆ. ‘ತೋತಾಪುರಿ 2’ ಚಿತ್ರದ ಟ್ರೇಲರ್ ಈಗ ರಿಲೀಸ್ ಆಗಿದೆ. ಜಗ್ಗೇಶ್ (Jaggesh), ಧನಂಜಯ್, ಅದಿತಿ ಪ್ರಭುದೇವ (Aditi Prabhudeva) ಮೊದಲಾದವರು ನಟಿಸಿದ್ದಾರೆ. ಈ ಚಿತ್ರದ ಟ್ರೇಲರ್ ಗಮನ ಸೆಳೆಯುತ್ತಿದೆ. ‘ತೋತಾಪುರಿ’ ಚಿತ್ರದ ಮುಂದುವರಿದ ಭಾಗವಾಗಿ ‘ತೋತಾಪುರಿ 2’ ಸಿನಿಮಾ ಮೂಡಿ ಬಂದಿದೆ. ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ ಅವರು ಟ್ರೇಲರ್ ರಿಲೀಸ್ ಮಾಡಿ ತಂಡಕ್ಕೆ ಶುಭಕೋರಿದ್ದಾರೆ.

‘ತೋತಾಪುರಿ’ ಚಿತ್ರದಲ್ಲಿ ಈರೇಗೌಡ (ಜಗ್ಗೇಶ್) ಕೃಷಿಕ ಹಾಗೂ ಟೈಲರ್. ಆತನಿಗೆ ಶಕೀಲಾ (ಅದಿತಿ ಪ್ರಭುದೇವ) ಬಾನು ಮೇಲೆ ಪ್ರೀತಿ ಹುಟ್ಟುತ್ತದೆ. ಈ ಚಿತ್ರದ ಕೊನೆಯಲ್ಲಿ ಧನಂಜಯ್ ಕಾಣಿಸಿಕೊಂಡಿದ್ದರು. ಎರಡನೇ ಭಾಗದಲ್ಲಿ ಕಥೆ ಮುಂದುವರಿದಿದೆ. ಜಗ್ಗೇಶ್-ಅದಿತಿ ಪ್ರಭುದೇವ ರೀತಿಯೇ ಸುಮನ್ ರಂಗನಾಥ್-ಧನಂಜಯ್ ಅವರ ಪ್ರೇಮ ಕಥೆಯೂ ಸೀಕ್ವೆಲ್​ನಲ್ಲಿ ಹೈಲೈಟ್ ಆಗಲಿದೆ ಎಂಬುದು ಟ್ರೇಲರ್ ಮೂಲಕ ಗೊತ್ತಾಗಿದೆ.

ಇಂದು ಧರ್ಮದ ಹೆಸರಲ್ಲಿ ಕಿತ್ತಾಟ ನಡೆಯುತ್ತಿವೆ. ಅವುಗಳನ್ನು ಮೀರಿ ಬದುಕಬೇಕು. ಸಮಾಜದಲ್ಲಿ ಸಾಮರಸ್ಯ ತರಬೇಕು ಎನ್ನುವ ಸಂದೇಶವನ್ನು ‘ತೋತಾಪುರಿ’ ಸಿನಿಮಾ ವಿವರಿಸುತ್ತದೆ. ಇದರ ಜೊತೆಗೆ ಹೇರಳವಾಗಿ ಡಬಲ್ ಮೀನಿಂಗ್ ಡೈಲಾಗ್​ಗಳನ್ನು ಇಡಲಾಗಿದೆ. ಇವೆಲ್ಲವನ್ನೂ ಟ್ರೇಲರ್​ನಲ್ಲಿ ತೋರಿಸಲಾಗಿದೆ.

ಇದನ್ನೂ ಓದಿ: ‘ಜೈಲರ್​’ ಎದುರು ಪೈಪೋಟಿ ನೀಡಲಿರುವ ‘ತೋತಾಪುರಿ 2’; ಆಗಸ್ಟ್​ 11ರಂದು ಅದ್ದೂರಿಯಾಗಿ ಬಿಡುಗಡೆ

ಈ ಮೊದಲು ರಿಲೀಸ್ ಆಗಿದ್ದ ‘ತೋತಾಪುರಿ’ ಸಿನಿಮಾದಲ್ಲಿ ಹೇರಳವಾಗಿ ಡಬಲ್ ಮೀನಿಂಗ್ ಡೈಲಾಗ್​ಗಳನ್ನು ಇಡಲಾಗಿತ್ತು. ಈ ಕಾರಣದಿಂದ ಒಂದು ವರ್ಗದ ಜನರಿಗೆ ಸಿನಿಮಾ ಇಷ್ಟವಾಗಿರಲಿಲ್ಲ. ‘ತೋತಾಪುರಿ 2’ ಚಿತ್ರ ಯಾವ ರೀತಿಯಲ್ಲಿ ಇರಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ