AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡುಗಡೆ ಆಯ್ತು ‘ತೋತಾಪುರಿ 2’ ಟ್ರೇಲರ್; ಈ ಚಿತ್ರದಲ್ಲಿ ಏನೆಲ್ಲ ಇರಲಿದೆ?

Totapuri 2 Trailer: ‘ತೋತಾಪುರಿ’ ಚಿತ್ರದಲ್ಲಿ ಈರೇಗೌಡ (ಜಗ್ಗೇಶ್) ಕೃಷಿಕ ಹಾಗೂ ಟೈಲರ್. ಆತನಿಗೆ ಶಕೀಲಾ (ಅದಿತಿ ಪ್ರಭುದೇವ) ಬಾನು ಮೇಲೆ ಪ್ರೀತಿ ಹುಟ್ಟುತ್ತದೆ. ಈ ಚಿತ್ರದ ಕೊನೆಯಲ್ಲಿ ಧನಂಜಯ್ ಕಾಣಿಸಿಕೊಂಡಿದ್ದರು. ಎರಡನೇ ಭಾಗದಲ್ಲಿ ಕಥೆ ಮುಂದುವರಿದಿದೆ.

ಬಿಡುಗಡೆ ಆಯ್ತು ‘ತೋತಾಪುರಿ 2’ ಟ್ರೇಲರ್; ಈ ಚಿತ್ರದಲ್ಲಿ ಏನೆಲ್ಲ ಇರಲಿದೆ?
ತೋತಾಪುರಿ ಟ್ರೇಲರ್
ರಾಜೇಶ್ ದುಗ್ಗುಮನೆ
|

Updated on: Sep 18, 2023 | 10:53 AM

Share

ಗಣೇಶ ಚತುರ್ಥಿ ಪ್ರಯುಕ್ತ ಹೊಸ ಹೊಸ ಸಿನಿಮಾಗಳು ಘೋಷಣೆ ಆಗುತ್ತಿವೆ. ಇದರ ಜೊತೆಗೆ ಸಿನಿಮಾ ತಂಡದಿಂದ ಪೋಸ್ಟರ್​​ಗಳು, ಟೀಸರ್ ಬಿಡುಗಡೆ ಮಾಡುವ ಕೆಲಸವೂ ಆಗುತ್ತಿದೆ. ‘ತೋತಾಪುರಿ 2’ ಚಿತ್ರದ ಟ್ರೇಲರ್ ಈಗ ರಿಲೀಸ್ ಆಗಿದೆ. ಜಗ್ಗೇಶ್ (Jaggesh), ಧನಂಜಯ್, ಅದಿತಿ ಪ್ರಭುದೇವ (Aditi Prabhudeva) ಮೊದಲಾದವರು ನಟಿಸಿದ್ದಾರೆ. ಈ ಚಿತ್ರದ ಟ್ರೇಲರ್ ಗಮನ ಸೆಳೆಯುತ್ತಿದೆ. ‘ತೋತಾಪುರಿ’ ಚಿತ್ರದ ಮುಂದುವರಿದ ಭಾಗವಾಗಿ ‘ತೋತಾಪುರಿ 2’ ಸಿನಿಮಾ ಮೂಡಿ ಬಂದಿದೆ. ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ ಅವರು ಟ್ರೇಲರ್ ರಿಲೀಸ್ ಮಾಡಿ ತಂಡಕ್ಕೆ ಶುಭಕೋರಿದ್ದಾರೆ.

‘ತೋತಾಪುರಿ’ ಚಿತ್ರದಲ್ಲಿ ಈರೇಗೌಡ (ಜಗ್ಗೇಶ್) ಕೃಷಿಕ ಹಾಗೂ ಟೈಲರ್. ಆತನಿಗೆ ಶಕೀಲಾ (ಅದಿತಿ ಪ್ರಭುದೇವ) ಬಾನು ಮೇಲೆ ಪ್ರೀತಿ ಹುಟ್ಟುತ್ತದೆ. ಈ ಚಿತ್ರದ ಕೊನೆಯಲ್ಲಿ ಧನಂಜಯ್ ಕಾಣಿಸಿಕೊಂಡಿದ್ದರು. ಎರಡನೇ ಭಾಗದಲ್ಲಿ ಕಥೆ ಮುಂದುವರಿದಿದೆ. ಜಗ್ಗೇಶ್-ಅದಿತಿ ಪ್ರಭುದೇವ ರೀತಿಯೇ ಸುಮನ್ ರಂಗನಾಥ್-ಧನಂಜಯ್ ಅವರ ಪ್ರೇಮ ಕಥೆಯೂ ಸೀಕ್ವೆಲ್​ನಲ್ಲಿ ಹೈಲೈಟ್ ಆಗಲಿದೆ ಎಂಬುದು ಟ್ರೇಲರ್ ಮೂಲಕ ಗೊತ್ತಾಗಿದೆ.

ಇಂದು ಧರ್ಮದ ಹೆಸರಲ್ಲಿ ಕಿತ್ತಾಟ ನಡೆಯುತ್ತಿವೆ. ಅವುಗಳನ್ನು ಮೀರಿ ಬದುಕಬೇಕು. ಸಮಾಜದಲ್ಲಿ ಸಾಮರಸ್ಯ ತರಬೇಕು ಎನ್ನುವ ಸಂದೇಶವನ್ನು ‘ತೋತಾಪುರಿ’ ಸಿನಿಮಾ ವಿವರಿಸುತ್ತದೆ. ಇದರ ಜೊತೆಗೆ ಹೇರಳವಾಗಿ ಡಬಲ್ ಮೀನಿಂಗ್ ಡೈಲಾಗ್​ಗಳನ್ನು ಇಡಲಾಗಿದೆ. ಇವೆಲ್ಲವನ್ನೂ ಟ್ರೇಲರ್​ನಲ್ಲಿ ತೋರಿಸಲಾಗಿದೆ.

ಇದನ್ನೂ ಓದಿ: ‘ಜೈಲರ್​’ ಎದುರು ಪೈಪೋಟಿ ನೀಡಲಿರುವ ‘ತೋತಾಪುರಿ 2’; ಆಗಸ್ಟ್​ 11ರಂದು ಅದ್ದೂರಿಯಾಗಿ ಬಿಡುಗಡೆ

ಈ ಮೊದಲು ರಿಲೀಸ್ ಆಗಿದ್ದ ‘ತೋತಾಪುರಿ’ ಸಿನಿಮಾದಲ್ಲಿ ಹೇರಳವಾಗಿ ಡಬಲ್ ಮೀನಿಂಗ್ ಡೈಲಾಗ್​ಗಳನ್ನು ಇಡಲಾಗಿತ್ತು. ಈ ಕಾರಣದಿಂದ ಒಂದು ವರ್ಗದ ಜನರಿಗೆ ಸಿನಿಮಾ ಇಷ್ಟವಾಗಿರಲಿಲ್ಲ. ‘ತೋತಾಪುರಿ 2’ ಚಿತ್ರ ಯಾವ ರೀತಿಯಲ್ಲಿ ಇರಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?