‘ಹುಲಿ ಉಗುರು’ ಪ್ರಕರಣದ ಬಗ್ಗೆ ನಗಿಸುತ್ತಲೇ ಬೇಸರ ಹೇಳಿಕೊಂಡ ಜಗ್ಗೇಶ್

Jaggesh: ವರ್ತೂರು ಸಂತೋಷ್ ಅವರಿಂದ ಆರಂಭವಾದ ಹುಲಿ ಉಗುರಿನ ಪ್ರಕರಣ ದರ್ಶನ್ ಸೇರಿದಂತೆ ಹಲವು ಸೆಲೆಬ್ರಿಟಿಗಳನ್ನು ಸುತ್ತಿಕೊಂಡಿತ್ತು. ಜಗ್ಗೇಶ್ ಅವರ ಮನೆಗೂ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದರು. ಆ ಪ್ರಕರಣದ ಬಗ್ಗೆ ಇದೀಗ ಜಗ್ಗೇಶ್ ಮಾತನಾಡಿದ್ದಾರೆ.

‘ಹುಲಿ ಉಗುರು’ ಪ್ರಕರಣದ ಬಗ್ಗೆ ನಗಿಸುತ್ತಲೇ ಬೇಸರ ಹೇಳಿಕೊಂಡ ಜಗ್ಗೇಶ್
Follow us
|

Updated on: Feb 16, 2024 | 8:08 PM

ಬಿಗ್​ಬಾಸ್ (BiggBoss) ಮನೆಯಿಂದ ಶುರುವಾದ ಹುಲಿ ಉಗುರು ಪ್ರಕರಣ ರಾಜ್ಯದಾದ್ಯಂತ ಸುದ್ದಿಯಾಗಿತ್ತು. ಬಿಗ್​ಬಾಸ್ ಸ್ಪರ್ಧಿಯಾಗಿ ಬಂದಿದ್ದ ವರ್ತೂರು ಸಂತೋಷ್ ಧರಿಸಿದ್ದ ಹುಲಿ ಉಗುರು ಕೊರಳಲ್ಲಿ ಧರಿಸಿದ್ದಾರೆಂದು ಅವರನ್ನು ಬಿಗ್​ಬಾಸ್ ಮನೆಯಿಂದಲೇ ಬಂಧಿಸಲಾಗಿತ್ತು. ಅದಾದ ಬಳಿಕ ಹುಲಿ ಉಗುರಿನ ಲಾಕೆಟ್ ಧರಿಸಿದ್ದ ಸೆಲೆಬ್ರಿಟಿಗಳ ಮನೆಗಳ ಮೇಲೆಲ್ಲ ದಾಳಿ ಮಾಡಲಾಯ್ತು. ದರ್ಶನ್, ಜಗ್ಗೇಶ್, ನಿಖಿಲ್ ಕುಮಾರಸ್ವಾಮಿ ಇನ್ನೂ ಹಲವು ಸೆಲೆಬ್ರಿಟಿಗಳ ಹೆಸರು ಪ್ರಕರಣದಲ್ಲಿ ಕೇಳಿ ಬಂತು. ಜಗ್ಗೇಶ್ ಅವರು ತಾವು ಧರಿಸಿದ್ದ ಹುಲಿ ಉಗುರಿನ ಪೆಂಡೆಂಟ್ ಅನ್ನು ತಮ್ಮ ತಾಯಿ ತಮಗಾಗಿ ಕೊಟ್ಟಿದ್ದೆಂದು ಹೆಮ್ಮೆಯಿಂದ ಹೇಳಿಕೊಂಡಿದ್ದ ಹಳೆಯ ವಿಡಿಯೋ ವೈರಲ್ ಆಗಿತ್ತು. ಆ ಪ್ರಕರಣದ ಬಗ್ಗೆ ಜಗ್ಗೇಶ್ ಇತ್ತೀಚೆಗೆ ವೇದಿಕೆಯಲ್ಲಿ ತಮ್ಮದೇ ಶೈಲಿಯಲ್ಲಿ ಮಾತನಾಡಿದರು.

‘ರಂಗನಾಯಕ’ ಸಿನಿಮಾದ ಕಾರ್ಯಕ್ರಮದಲ್ಲಿ ತಮ್ಮದೇ ಬಿಡು-ಬೀಸು ಶೈಲಿಯಲ್ಲಿ ಮಾತನಾಡಿದ ಜಗ್ಗೇಶ್, ‘ನಮ್ಮ ಅಮ್ಮ ಒಂದು ಹುಲಿ ಉಗುರಿನ ಪೆಂಡೆಂಟ್ ಕೊಟ್ಟಿದ್ದರು, ನನ್ನ 40 ವರ್ಷದ ಸಿನಿಮಾ ಜರ್ನಿಯ ಸಂದರ್ಶನದಲ್ಲಿ ನಮ್ಮ ತಾಯಿ ಕೊಟ್ಟಿದ್ದ ಹುಲಿ ಉಗುರಿನ ಪೆಂಡೆಂಟ್ ಬಗ್ಗೆ ಹೆಮ್ಮೆಯಿಂದ ಹೇಳಿದ್ದೆ. ಅವನ್ಯಾರೋ ಕಿತ್ತೋದ್ ನನ್ಮಗ ರಿಯಲ್ ಆಗಿರೋದನ್ನು ಹಾಕ್ಕೊಂಡು ತಗಲಾಕ್ಕೊಂಡ್ ಬಿಟ್ಟ. ಅದಾಗಿದ್ದೆ ತಡ ಎಲ್ಲ ಚಾನೆಲ್, ಯೂಟ್ಯೂಬ್ ಚಾನೆಲ್​ನವರು ನಮ್ಮ ಮನೆ ಮುಂದೆ ಬಂದು ನಿಂತರು. ಸುದ್ದಿಗಳಲ್ಲಿ ಏನೇನೋ ಡೈಲಾಗ್​ಗಳನ್ನು ಬಿಟ್ಟರು’ ಎಂದು ತಮಾಷೆಯಾಗಿಯೇ ಬೇಸರ ಹೇಳಿಕೊಂಡರು.

ಇದನ್ನೂ ಓದಿ:ಹುಲಿ ಉಗುರು ಪ್ರಕರಣ: ಜಗ್ಗೇಶ್​ಗೆ ರಿಲೀಫ್ ನೀಡಿದ ಹೈಕೋರ್ಟ್​

‘ನಾನು ಮಾತೃಪ್ರೇಮಿ, ಹಾಗಾಗಿ ನಮ್ಮಮ್ಮ ಕೊಟ್ಟ ಉಡುಗೊರೆ ಬಗ್ಗೆ ಪ್ರೀತಿಯಿಂದ ಹೇಳಿಕೊಂಡೆ. ಆದರೆ ಅದನ್ನೆಲ್ಲ ಧರಿಸಬಾರದು ಎಂಬ ಕಾನೂನು ಇದೆಯಂತೆ. ಅದರ ಬಗ್ಗೆ ಯಾರಿಗೂ ಜಾಗೃತಿ ಇರಲಿಲ್ಲ. ಧರಿಸುವುದು ಸಹಜ ಎಂಬಂತೆ ನಾನೂ ಧರಿಸಿದ್ದೆ. ಆತ ಸಿಕ್ಕಿ ಹಾಕಿಕೊಂಡಮೇಲೆ, ನನ್ನ ಹಳೆಯ ವಿಡಿಯೋ ವೈರಲ್ ಮಾಡಿದರು. ಪಾಪ ಜನರಿಗೇನು ಗೊತ್ತು, ಬಡವರಿಗೆ ಒಂದು ನ್ಯಾಯ, ಸೆಲೆಬ್ರಿಟಿಗಳಿಗೆ ಒಂದು ನ್ಯಾಯಾನ ಎಂದು ಪ್ರಶ್ನೆ ಮಾಡಿದರು. ಯಾವುದೋ ಕೆಲವು ವ್ಯೀವ್ಸ್​ಗಳಿಗಾಗಿ ಎಂಥೆಂಥವರೋ ಏನೇನೋ ಮಾತನಾಡಿದರು’ ಎಂದು ಬೇಸರದಿಂದ ನುಡಿದರು.

‘ನಂತರ, ಕೆಲವು ಅಧಿಕಾರಿಗಳು ಮನೆಗೆ ಬಂದರು, ಅವರ ಕರ್ತವ್ಯ ಅವರು ಮಾಡಿದರು. ಅಂದು ನಾನು ಮನೆಯಲ್ಲಿರಲಿಲ್ಲ, ಆ ಪೆಂಡೆಂಟ್ ಅನ್ನು ಕೊಟ್ಟುಬಿಡುವಂತೆ ನಾನು ಪತ್ನಿಗೆ ಹೇಳಿದ್ದೆ, ಹಾಗೆಯೇ ಅಧಿಕಾರಿಗಳಿಗೆ ಅದನ್ನು ಕೊಡಲಾಯ್ತು, ಅದನ್ನು ಡಸ್ಟ್​ಬಿನ್​ನಲ್ಲಿ ಎಸೆದರು. ನನ್ನ ತಾಯಿ ಪ್ರೀತಿಯಿಂದ ಕೊಟ್ಟಿದ್ದರು, ಅದು ನನ್ನಿಂದ ದೂರವಾಯ್ತು. ವಸ್ತು ಹೋದರೆ ಏನಂತೆ ನನ್ನ ತಾಯಿ ನನ್ನ ಹೃದಯದಲ್ಲಿ ಇದ್ದಾರೆ. ಈ ದೇಹವನ್ನೇ ಅವರು ನೀಡಿದ್ದಾರೆ’ ಎಂದರು.

ಇದನ್ನೂ ಓದಿ:ಅನಾರೋಗ್ಯದ ನಡುವೆಯೂ ಬಂದು ಮನವಿಯೊಂದನ್ನು ಮಾಡಿದ ಜಗ್ಗೇಶ್

‘ಆ ಪ್ರಕರಣದ ಬಗ್ಗೆ ಚರ್ಚೆ ಹೆಚ್ಚಾದಾಗ ಅನಿವಾರ್ಯವಾಗಿ ನ್ಯಾಯಾಲಯಕ್ಕೆ ಹೋಗಿ ಸ್ಟೇ ತರಬೇಕಾಯ್ತು. ಅದಾದ ಬಳಿಕ ನನ್ನ ಆತ್ಮೀಯ ಗೆಳೆಯರೂ ಆಗಿರುವ ಗೃಹ ಸಚಿವ ಡಿಕೆ ಶಿವಕುಮಾರ್ ಅವರಿಗೆ ಕರೆ ಮಾಡಿ ಇಂಥಹಾ ಕಾನೂನಿನಂದ ಸಮಸ್ಯೆ ಆಗುತ್ತಿದೆ ನಿಮ್ಮ ನೆರವು ಬೇಕು ಎಂದು ಕೇಳಿಕೊಂಡೆ. ಕೂಡಲೇ ಅವರು ಹೇಳಬೇಕಾದವರಿಗೆ ಹೇಳಿ ಆ ಘಟನೆ ಬಗ್ಗೆ ಜಾಗೃತಿ ಮೂಡಿಸಿ, ಆ ಪ್ರಕರಣದ ಜೋರು ಕಡಿಮೆ ಆಗುವಂತೆ ಮಾಡಿದರು. ಆದರೆ ನನಗೆ ಬೇಸರವಾಗಿದ್ದೆಂದರೆ, ನಾನು ನಾಲ್ಕು ದಶಕದಿಂದಲೂ ಚಿತ್ರರಂಗದಲ್ಲಿದ್ದೇನೆ, ಮಾಧ್ಯಮದವರೊಟ್ಟಿಗೆ ಒಳ್ಳೆಯ ಸಂಬಂಧ ಇಟ್ಟುಕೊಂಡಿದ್ದೀನಿ, ನನ್ನ ತಪ್ಪು ಕಂಡಾಗ ಎಚ್ಚರಿಸಬೇಕಿತ್ತು, ಅದರ ಬದಲಿಗೆ ವೈರಲ್ ಮಾಡುವ ಅವಶ್ಯಕತೆ ಇರಲಿಲ್ಲ’ ಎಂದು ಬೇಸರ ಹೊರಹಾಕಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಹೊಸ ಜೀವನ ಸಿಕ್ಕಿದೆ’; ಅಪಘಾತದ ನಂತರ ಮುಶೀರ್ ಖಾನ್ ಮೊದಲ ಮಾತು
‘ಹೊಸ ಜೀವನ ಸಿಕ್ಕಿದೆ’; ಅಪಘಾತದ ನಂತರ ಮುಶೀರ್ ಖಾನ್ ಮೊದಲ ಮಾತು
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?