AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Varthur Santhosh: ‘ಕಿತ್ತೋದ್ ನನ್ ಮಗ’ ಎಂಬ ಹೇಳಿಕೆ ಸಮರ್ಥಿಸಿಕೊಂಡು ಪೊಲೀಸರಿಗೆ ಜಗ್ಗೇಶ್ ದೂರು

ಹುಲಿ ಉಗುರಿನ ಪ್ರಕರಣದ ಬಗ್ಗೆ ಮಾತನಾಡುವಾಗ ಜಗ್ಗೇಶ್ ಅವರು ‘ಕಿತ್ತೋದ್​ ನನ್​ ಮಗ’ ಎಂದು ಹೇಳಿದ್ದು ವರ್ತೂರು ಸಂತೋಷ್​ ಅಭಿಮಾನಿಗಳ ಬೇಸರಕ್ಕೆ ಕಾರಣ ಆಗಿತ್ತು. ಕೆಲವರು ಜಗ್ಗೇಶ್​ ವಿರುದ್ಧ ಸೋಶಿಯಲ್​ ಮೀಡಿಯಾದಲ್ಲಿ ಕಿಡಿಕಾರಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಜಗ್ಗೇಶ್​ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ತಮ್ಮ ಹೇಳಿಕೆಯನ್ನು ಅವರು ಸಮರ್ಥಿಸಿಕೊಂಡಿದ್ದಾರೆ.

Varthur Santhosh: ‘ಕಿತ್ತೋದ್ ನನ್ ಮಗ’ ಎಂಬ ಹೇಳಿಕೆ ಸಮರ್ಥಿಸಿಕೊಂಡು ಪೊಲೀಸರಿಗೆ ಜಗ್ಗೇಶ್ ದೂರು
ಜಗ್ಗೇಶ್​, ವರ್ತೂರು ಸಂತೋಷ್​
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Feb 20, 2024 | 10:29 AM

Share

ನಟ ಜಗ್ಗೇಶ್​ (Jaggesh) ಅವರು ಇತ್ತೀಚೆಗೆ ವರ್ತೂರು ಸಂತೋಷ್​ ಬಗ್ಗೆ ಆಡಿದ ಮಾತುಗಳು ವಿವಾದಕ್ಕೆ ಕಾರಣ ಆಗಿವೆ. ಹುಲಿ ಉಗುರಿನ ಕೇಸ್​ಗೆ ಸಂಬಂಧಿಸಿದಂತೆ ‘ರಂಗನಾಯಕ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಮಾತನಾಡುವಾಗ ‘ಕಿತ್ತೋದ್ ನನ್ ಮಗ’ ಎಂಬ ಪದವನ್ನು ಜಗ್ಗೇಶ್​ ಬಳಕೆ ಮಾಡಿದ್ದರು. ಅದನ್ನು ಖಂಡಿಸಿ ವರ್ತೂರು ಸಂತೋಷ್​ (Varthur Santhosh) ಅವರ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದರು. ಈಗ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಜಗ್ಗೇಶ್​ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ತಮ್ಮ ಹೇಳಿಕೆಯನ್ನು ತಿರುಚಿ, ಸೋಶಿಯಲ್​ ಮೀಡಿಯಾದಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಅವರು ಆರೋಪ ಮಾಡಿದ್ದಾರೆ.

ಹೆಬ್ಬಗೋಡಿಯ ನಾರಾಯಣಸ್ವಾಮಿ ಮತ್ತು ಇನ್ನೋರ್ವ ವ್ಯಕ್ತಿಯ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಜಾತಿನಿಂದನೆ ,ಅವಾಚ್ಯ ಪದಗಳ ಬಳಕೆ, ಮುಖಕ್ಕೆ ಮಸಿ ಬಳಿಯುವ ಬೆದರಿಕೆ ಹಾಕಲಾಗಿದೆ ಎಂದು ಜಗ್ಗೇಶ್​ ಅವರು ಆರೋಪ ಮಾಡಿದ್ದಾರೆ. ‘ತಪ್ಪು ಸಂದೇಶ ಕೊಟ್ಟು ಜಾತಿ ಗಲಭೆಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನೆ ನೀಡಲಾಗುತ್ತಿದೆ. ಕಿತ್ತೋದ್ ನನ್ ಮಗ ಎಂಬುದು ಗ್ರಾಮೀಣ ಭಾಷೆಯಾಗಿದ್ದು, ಅದನ್ನು ತಿರುಚಿ ಪ್ರಚೋದಿಸಲಾಗುತ್ತಿದೆ’ ಎಂದು ಜಗ್ಗೇಶ್​ ದೂರು ನೀಡಿದ್ದಾರೆ.

ಜಗ್ಗೇಶ್ ಅವರು ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಿದ್ದಾರೆ. ವರ್ತೂರು ಸಂತೋಷ್​ ಅವರು ಹುಲಿ ಉಗುರಿನ ಲಾಕೆಟ್​ ಧರಿಸಿ ಬಿಗ್​ ಬಾಸ್​ ಮನೆಗೆ ಹೋಗಿದ್ದಾಗ ಅವರನ್ನು ಬಂಧಿಸಲಾಗಿತ್ತು. ಆ ಬಳಿಕ ಹುಲಿ ಉಗುರು ಹೊಂದಿದ ಆರೋಪದಲ್ಲಿ ಅನೇಕ ಸೆಲೆಬ್ರಿಟಿಗಳು ಕಾನೂನಿನ ಸಂಕಷ್ಟ ಎದುರಿಸಿದ್ದರು. ಜಗ್ಗೇಶ್​ ಅವರಿಗೂ ನೋಟಿಸ್​ ನೀಡಲಾಗಿತ್ತು. ಆ ಘಟನೆಯನ್ನು ನೆನಪಿಸಿಕೊಂಡು ‘ರಂಗನಾಯಕ’ ಸುದ್ದಿಗೋಷ್ಠಿಯಲ್ಲಿ ಜಗ್ಗೇಶ್​ ಇತ್ತೀಚೆಗೆ ಮಾತನಾಡುವಾಗ ‘ಕಿತ್ತೋದ್ ನನ್ ಮಗ’ ಎಂಬ ಪದಬಳಕೆ ಮಾಡಿದ್ದರು.

ವರ್ತೂರು ಸಂತೋಷ್​ ಪ್ರತಿಕ್ರಿಯೆ ಏನು?

ಜಗ್ಗೇಶ್​ ಅವರ ಹೇಳಿಕೆ ವೈರಲ್​ ಆದ ಬಳಿಕ ವರ್ತೂರು ಸಂತೋಷ್​ ಅವರು ಪ್ರತಿಕ್ರಿಯೆ ನೀಡಿದರು. ‘ಅವರು ದೊಡ್ಡವರು ಬಿಡಿ. ನಾನು ಹೇಳೋಕೆ ಇಚ್ಛಿಸುವುದು ಇಷ್ಟೇ.. ಕಾಲಾಯ ತಸ್ಮೈ ನಮಃ. ಎಲ್ಲದಕ್ಕೂ ನಾವು ಉತ್ತರ ಕೊಡಲೇಬೇಕು ಅಂತೇನಿಲ್ಲ. ಕೆಲವೊಂದಕ್ಕೆ ಉತ್ತರ ಕೊಡಬೇಕು, ಕೆಲವೊಂದಕ್ಕೆ ಮೌನವಾಗಿ ಇದ್ದರೆ ಸಾಕು. ಉತ್ತರ ಸಿಗುತ್ತದೆ’ ಎಂದರು.

ಇದನ್ನೂ ಓದಿ: ಕ್ಷಮೆ ಕೇಳದಿದ್ದರೆ ಪ್ರತಿಭಟನೆ, ಮನೆಗೆ ಮುತ್ತಿಗೆ: ಜಗ್ಗೇಶ್​ಗೆ ಎಚ್ಚರಿಕೆ

ಬಿಗ್​ ಬಾಸ್​ಗೆ ಕಾಲಿಟ್ಟ ಬಳಿಕ ವರ್ತೂರು ಸಂತೋಷ್​ ಅವರ ಖ್ಯಾತಿ ಹೆಚ್ಚಾಗಿದೆ. ಹಳ್ಳಿಕಾರ್​ ತಳಿಯ ಸಂರಕ್ಷಣೆ ಮಾಡುವ ಮೂಲಕ ಅವರು ಜನಪ್ರಿಯತೆ ಪಡೆದಿದ್ದಾರೆ. ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ರಿಯಾಲಿಟಿ ಶೋನಲ್ಲಿ ಅವರು ಫಿನಾಲೆ ತನಕ ಸ್ಪರ್ಧಿಸಿದರು. ದೊಡ್ಮನೆಯಿಂದ ಹೊರಬಂದ ಬಳಿಕ ಅವರಿಗೆ ಜನರು ಪ್ರೀತಿ ತೋರಿಸುತ್ತಿದ್ದಾರೆ. ಅವರ ಅಭಿಮಾನಿ ಬಳಗ ಹಿರಿದಾಗಿದೆ. ಅವರ ಬಗ್ಗೆ ಜಗ್ಗೇಶ್​ ಮಾತನಾಡಿದ ರೀತಿಯನ್ನು ಅನೇಕರು ಖಂಡಿಸಿದ್ದಾರೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಪರ-ವಿರೋಧದ ಚರ್ಚೆ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ