AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗ್ಗೇಶ್ ಜನ್ಮದಿನಕ್ಕೆ ಪ್ರಧಾನಿ ಮೋದಿಯಿಂದ ಹಾರೈಕೆ ಪತ್ರ; ಹಿರಿಹಿರಿ ಹಿಗ್ಗಿದ ನವರಸ ನಾಯಕ

Jaggesh Birthday: ಪ್ರಸಿದ್ಧ ಕನ್ನಡ ನಟ ಜಗ್ಗೇಶ್ ಅವರಿಗೆ ಇಂದು 62ನೇ ಜನ್ಮದಿನ. ಪ್ರಧಾನಿ ನರೇಂದ್ರ ಮೋದಿ ಅವರು ಜಗ್ಗೇಶ್​ಗೆ ಶುಭಾಶಯ ಕೋರಿ ಪತ್ರ ಬರೆದಿದ್ದಾರೆ. ಜಗ್ಗೇಶ್ ಅವರು ತಮ್ಮ ವೃತ್ತಿಜೀವನದಲ್ಲಿ ಹಲವು ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಅವರ ಜನ್ಮದಿನದಂದು ಅಭಿಮಾನಿಗಳು ಮತ್ತು ಸಹೋದ್ಯೋಗಿಗಳು ಅವರಿಗೆ ಶುಭ ಹಾರೈಸಿದ್ದಾರೆ.

ಜಗ್ಗೇಶ್ ಜನ್ಮದಿನಕ್ಕೆ ಪ್ರಧಾನಿ ಮೋದಿಯಿಂದ ಹಾರೈಕೆ ಪತ್ರ; ಹಿರಿಹಿರಿ ಹಿಗ್ಗಿದ ನವರಸ ನಾಯಕ
ಜಗ್ಗೇಶ್-ಮೋದಿ
ರಾಜೇಶ್ ದುಗ್ಗುಮನೆ
|

Updated on: Mar 17, 2025 | 9:34 AM

Share

ನಟ ಜಗ್ಗೇಶ್ ಅವರಿಗೆ ಇಂದು (ಮಾರ್ಚ್ 17) ಜನ್ಮದಿನ. ಪುನೀತ್ ರಾಜ್​ಕುಮಾರ್ ಹಾಗೂ ಜಗ್ಗೇಶ್ ಮಧ್ಯೆ ಸಾಕಷ್ಟು ಆಪ್ತತೆ ಇತ್ತು. ಇಬ್ಬರ ಜನ್ಮದಿನ ಒಂದೇ ದಿನ ಬಂದಿದೆ ಅನ್ನೋದು ವಿಶೇಷ. ಪುನೀತ್ (Puneeth Rajkumar) ಅವರಿಗೆ ಎಲ್ಲ ಕಡೆಗಳಿಂದ ಜನ್ಮದಿನದ ವಿಶ್​ಗಳು ಬರುತ್ತಿವೆ. ಅದೇ ರೀತಿ ಪ್ರಧಾನಿ ನರೇಂದ್ರ ಮೋದಿ ಕಡೆಯಿಂದಲೂ ಜಗ್ಗೇಶ್​ಗೆ ಬರ್ತ್​ಡೇ ವಿಶ್ ಬಂದಿದೆ. ಪ್ರಧಾನಿ ಮೋದಿ ಬರೆದ ಪತ್ರವನ್ನು ಶೇರ್ ಮಾಡಿಕೊಂಡಿರೋ ಜಗ್ಗೇಶ್ ಅವರು ಹಿರಿಹಿರಿ ಹಿಗ್ಗಿದ್ದಾರೆ.

ಜಗ್ಗೇಶ್ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹೀರೋ ಆಗಿ, ಕಾಮಿಡಿಯನ್ ಆಗಿ, ವಿಲನ್ ಆಗಿ ಹೀಗೆ ಹಲವು ರೀತಿಯ ಪಾತ್ರಗಳ ಮೂಲಕ ಜನರ ಮನಸ್ಸಿನಲ್ಲಿ ಅವರು ಉಳಿದುಕೊಂಡಿದ್ದಾರೆ. ಜಗ್ಗೇಶ್ ನಟನೆಗೆ ಅವರ ಹಾವ ಭಾವಕ್ಕೆ ಅಭಿಮಾನಿಯಾದವರ ಸಂಖ್ಯೆ ದೊಡ್ಡದಿದೆ. ಅವರು ಇತ್ತೀಚೆಗೆ ರಾಜಕೀಯದಲ್ಲೂ ತೊಡಗಿಕೊಂಡಿದ್ದು, ಪ್ರಧಾನಿ ಮೋದಿ ಪರಿಚಯ ಆಗಿದೆ. ಕೆಲವು ಕಾರ್ಯಕ್ರಮಗಳಲ್ಲಿ ಇವರು ವೇದಿಕೆ ಹಂಚಿಕೊಂಡಿದ್ದರು.

ಇದನ್ನೂ ಓದಿ
Image
ಪುನೀತ್ ರಾಜ್​ಕುಮಾರ್ 50ನೇ ವರ್ಷದ ಜನ್ಮದಿನ; ಎಂದಿಗೂ ಕಮ್ಮಿ ಆಗಲ್ಲ ಅಭಿಮಾನ
Image
ಹೊಸ ನಟರು ಬಂದರೂ ಪುನೀತ್ ಫ್ಯಾನ್ಸ್ ನಿಯತ್ತು ಬದಲಾಗಲ್ಲ: ರಮ್ಯಾ ಮೆಚ್ಚುಗೆ
Image
ಪುನೀತ್ ಕಪ್ಪಿದ್ದಾರೆ ಎಂದವರಿಗೆ ಖಡಕ್ ಉತ್ತರ ಕೊಟ್ಟಿದ್ದ ರಾಜ್​ಕುಮಾರ್
Image
ಪುರಿ ಜಗನ್ನಾಥ ದೇವಾಲಯಕ್ಕೆ ಪ್ರವೇಶಿಸಲು ನಿರಾಕರಿಸಿದ್ದ ಪುನೀತ್, ಕಾರಣ?

ಮೋದಿ ಹಾರೈಕೆ ಪತ್ರ ಹಂಚಿಕೊಂಡಿರುವ ಜಗ್ಗೇಶ್ ಅವರು, ‘ಸ್ನೇಹಿತರೆ ಇಂದು ನನ್ನ ತಂದೆತಾಯಿ ದೇಣಿಗೆ ನೀಡಿದ ಈ ದೇಹಕ್ಕೆ 62ನೆ ಜನ್ಮದಿನ. ನನಗೆ ಮತ್ತೊಂದು ಸಂತೋಷ ವಿಶ್ವ ನಾಯಕ ನರೇಂದ್ರ ಮೋದಿ ಅವರು ಪ್ರೀತಿಯಿಂದ ಹರಸಿ ಕಳಿಸಿದ ಅಕ್ಕರೆಯ ಹಾರೈಕೆ ಪತ್ರ’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ನಿಮಗೇನು, ದುಡ್ಡಿದೆ.. ಕುಂಭಮೇಳಕ್ಕೆ ಹೋದ್ರಿ’ ಎಂದವರಿಗೆ ಜಗ್ಗೇಶ್ ಸ್ಪಷ್ಟನೆ

‘ಕಾಲ ನಿಲ್ಲದೆ ಓಡುತ್ತದೆ ನಾವು ಅದರೊಟ್ಟಿಗೆ ಸುಮ್ಮನೆ ಓಡದೆ ಹೋದಮೇಲು ನೆನಪಿಡುವ ಸಾಧನೆಯ ಓಟ ಆಗಿರಬೇಕು. ನನ್ನ ಸಲಹುತ್ತಿರುವ ಪ್ರೀತಿಪಾತ್ರರು ಸರ್ವರಿಗೂ ಧನ್ಯವಾದ’ ಎಂದು ಜಗ್ಗೇಶ್ ಹೇಳಿದ್ದಾರೆ. ಜಗ್ಗೇಶ್ ಅವರಿಗೆ ರಾಜಕೀಯ ನಾಯಕರು ಹಾಗೂ ಸಿನಿಮಾ ರಂಗದವರ ಕಡೆಯಿಂದಲೂ ಶುಭಾಶಯಗಳು ಬಂದಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ