AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗ್ಗೇಶ್ ಜನ್ಮದಿನಕ್ಕೆ ಪ್ರಧಾನಿ ಮೋದಿಯಿಂದ ಹಾರೈಕೆ ಪತ್ರ; ಹಿರಿಹಿರಿ ಹಿಗ್ಗಿದ ನವರಸ ನಾಯಕ

Jaggesh Birthday: ಪ್ರಸಿದ್ಧ ಕನ್ನಡ ನಟ ಜಗ್ಗೇಶ್ ಅವರಿಗೆ ಇಂದು 62ನೇ ಜನ್ಮದಿನ. ಪ್ರಧಾನಿ ನರೇಂದ್ರ ಮೋದಿ ಅವರು ಜಗ್ಗೇಶ್​ಗೆ ಶುಭಾಶಯ ಕೋರಿ ಪತ್ರ ಬರೆದಿದ್ದಾರೆ. ಜಗ್ಗೇಶ್ ಅವರು ತಮ್ಮ ವೃತ್ತಿಜೀವನದಲ್ಲಿ ಹಲವು ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಅವರ ಜನ್ಮದಿನದಂದು ಅಭಿಮಾನಿಗಳು ಮತ್ತು ಸಹೋದ್ಯೋಗಿಗಳು ಅವರಿಗೆ ಶುಭ ಹಾರೈಸಿದ್ದಾರೆ.

ಜಗ್ಗೇಶ್ ಜನ್ಮದಿನಕ್ಕೆ ಪ್ರಧಾನಿ ಮೋದಿಯಿಂದ ಹಾರೈಕೆ ಪತ್ರ; ಹಿರಿಹಿರಿ ಹಿಗ್ಗಿದ ನವರಸ ನಾಯಕ
ಜಗ್ಗೇಶ್-ಮೋದಿ
ರಾಜೇಶ್ ದುಗ್ಗುಮನೆ
|

Updated on: Mar 17, 2025 | 9:34 AM

Share

ನಟ ಜಗ್ಗೇಶ್ ಅವರಿಗೆ ಇಂದು (ಮಾರ್ಚ್ 17) ಜನ್ಮದಿನ. ಪುನೀತ್ ರಾಜ್​ಕುಮಾರ್ ಹಾಗೂ ಜಗ್ಗೇಶ್ ಮಧ್ಯೆ ಸಾಕಷ್ಟು ಆಪ್ತತೆ ಇತ್ತು. ಇಬ್ಬರ ಜನ್ಮದಿನ ಒಂದೇ ದಿನ ಬಂದಿದೆ ಅನ್ನೋದು ವಿಶೇಷ. ಪುನೀತ್ (Puneeth Rajkumar) ಅವರಿಗೆ ಎಲ್ಲ ಕಡೆಗಳಿಂದ ಜನ್ಮದಿನದ ವಿಶ್​ಗಳು ಬರುತ್ತಿವೆ. ಅದೇ ರೀತಿ ಪ್ರಧಾನಿ ನರೇಂದ್ರ ಮೋದಿ ಕಡೆಯಿಂದಲೂ ಜಗ್ಗೇಶ್​ಗೆ ಬರ್ತ್​ಡೇ ವಿಶ್ ಬಂದಿದೆ. ಪ್ರಧಾನಿ ಮೋದಿ ಬರೆದ ಪತ್ರವನ್ನು ಶೇರ್ ಮಾಡಿಕೊಂಡಿರೋ ಜಗ್ಗೇಶ್ ಅವರು ಹಿರಿಹಿರಿ ಹಿಗ್ಗಿದ್ದಾರೆ.

ಜಗ್ಗೇಶ್ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹೀರೋ ಆಗಿ, ಕಾಮಿಡಿಯನ್ ಆಗಿ, ವಿಲನ್ ಆಗಿ ಹೀಗೆ ಹಲವು ರೀತಿಯ ಪಾತ್ರಗಳ ಮೂಲಕ ಜನರ ಮನಸ್ಸಿನಲ್ಲಿ ಅವರು ಉಳಿದುಕೊಂಡಿದ್ದಾರೆ. ಜಗ್ಗೇಶ್ ನಟನೆಗೆ ಅವರ ಹಾವ ಭಾವಕ್ಕೆ ಅಭಿಮಾನಿಯಾದವರ ಸಂಖ್ಯೆ ದೊಡ್ಡದಿದೆ. ಅವರು ಇತ್ತೀಚೆಗೆ ರಾಜಕೀಯದಲ್ಲೂ ತೊಡಗಿಕೊಂಡಿದ್ದು, ಪ್ರಧಾನಿ ಮೋದಿ ಪರಿಚಯ ಆಗಿದೆ. ಕೆಲವು ಕಾರ್ಯಕ್ರಮಗಳಲ್ಲಿ ಇವರು ವೇದಿಕೆ ಹಂಚಿಕೊಂಡಿದ್ದರು.

ಇದನ್ನೂ ಓದಿ
Image
ಪುನೀತ್ ರಾಜ್​ಕುಮಾರ್ 50ನೇ ವರ್ಷದ ಜನ್ಮದಿನ; ಎಂದಿಗೂ ಕಮ್ಮಿ ಆಗಲ್ಲ ಅಭಿಮಾನ
Image
ಹೊಸ ನಟರು ಬಂದರೂ ಪುನೀತ್ ಫ್ಯಾನ್ಸ್ ನಿಯತ್ತು ಬದಲಾಗಲ್ಲ: ರಮ್ಯಾ ಮೆಚ್ಚುಗೆ
Image
ಪುನೀತ್ ಕಪ್ಪಿದ್ದಾರೆ ಎಂದವರಿಗೆ ಖಡಕ್ ಉತ್ತರ ಕೊಟ್ಟಿದ್ದ ರಾಜ್​ಕುಮಾರ್
Image
ಪುರಿ ಜಗನ್ನಾಥ ದೇವಾಲಯಕ್ಕೆ ಪ್ರವೇಶಿಸಲು ನಿರಾಕರಿಸಿದ್ದ ಪುನೀತ್, ಕಾರಣ?

ಮೋದಿ ಹಾರೈಕೆ ಪತ್ರ ಹಂಚಿಕೊಂಡಿರುವ ಜಗ್ಗೇಶ್ ಅವರು, ‘ಸ್ನೇಹಿತರೆ ಇಂದು ನನ್ನ ತಂದೆತಾಯಿ ದೇಣಿಗೆ ನೀಡಿದ ಈ ದೇಹಕ್ಕೆ 62ನೆ ಜನ್ಮದಿನ. ನನಗೆ ಮತ್ತೊಂದು ಸಂತೋಷ ವಿಶ್ವ ನಾಯಕ ನರೇಂದ್ರ ಮೋದಿ ಅವರು ಪ್ರೀತಿಯಿಂದ ಹರಸಿ ಕಳಿಸಿದ ಅಕ್ಕರೆಯ ಹಾರೈಕೆ ಪತ್ರ’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ನಿಮಗೇನು, ದುಡ್ಡಿದೆ.. ಕುಂಭಮೇಳಕ್ಕೆ ಹೋದ್ರಿ’ ಎಂದವರಿಗೆ ಜಗ್ಗೇಶ್ ಸ್ಪಷ್ಟನೆ

‘ಕಾಲ ನಿಲ್ಲದೆ ಓಡುತ್ತದೆ ನಾವು ಅದರೊಟ್ಟಿಗೆ ಸುಮ್ಮನೆ ಓಡದೆ ಹೋದಮೇಲು ನೆನಪಿಡುವ ಸಾಧನೆಯ ಓಟ ಆಗಿರಬೇಕು. ನನ್ನ ಸಲಹುತ್ತಿರುವ ಪ್ರೀತಿಪಾತ್ರರು ಸರ್ವರಿಗೂ ಧನ್ಯವಾದ’ ಎಂದು ಜಗ್ಗೇಶ್ ಹೇಳಿದ್ದಾರೆ. ಜಗ್ಗೇಶ್ ಅವರಿಗೆ ರಾಜಕೀಯ ನಾಯಕರು ಹಾಗೂ ಸಿನಿಮಾ ರಂಗದವರ ಕಡೆಯಿಂದಲೂ ಶುಭಾಶಯಗಳು ಬಂದಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?