AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗ್ಗೇಶ್​ ಮಗ ವೇಗವಾಗಿ ಬಂದಿದ್ದೇ ಅಪಘಾತಕ್ಕೆ ಕಾರಣ, ಡಿವೈಡರ್​ಗೆ ಡಿಕ್ಕಿ ಹೊಡೆದ ಕಾರು 10 ಅಡಿ ಎತ್ತರಕ್ಕೆ ಹಾರಿ ಬಿದ್ದಿದೆ: ಪ್ರತ್ಯಕ್ಷದರ್ಶಿಗಳು

Yathiraj Jaggesh Car Accident: ಟಿವಿ9ಗೆ ಈ ಬಗ್ಗೆ ಮಾಹಿತಿ ನೀಡಿದ ಪ್ರತ್ಯಕ್ಷದರ್ಶಿಗಳು, ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು ಹತ್ತು ಅಡಿ ಮೇಲೆ ಹಾರಿ ಉರುಳಿ ಬಿದ್ದಿದೆ. ಇದಕ್ಕೆ ಕಾರು ಅತಿವೇಗವಾಗಿ ಚಲಿಸಿದ್ದೇ ಕಾರಣ. ರಭಸವಾಗಿ ಗುದ್ದಿದರೂ ಸಣ್ಣಪುಟ್ಟ ಗಾಯವಾಗಿದೆಯೆಂದರೆ ಅವರನ್ನು ಕಾರ್​ನಲ್ಲಿದ್ದ ಏರ್​ಬ್ಯಾಗ್​ ಕಾಪಾಡಿದೆ ಎಂದಿದ್ದಾರೆ.

ಜಗ್ಗೇಶ್​ ಮಗ ವೇಗವಾಗಿ ಬಂದಿದ್ದೇ ಅಪಘಾತಕ್ಕೆ ಕಾರಣ, ಡಿವೈಡರ್​ಗೆ ಡಿಕ್ಕಿ ಹೊಡೆದ ಕಾರು 10 ಅಡಿ ಎತ್ತರಕ್ಕೆ ಹಾರಿ ಬಿದ್ದಿದೆ: ಪ್ರತ್ಯಕ್ಷದರ್ಶಿಗಳು
ಜಗ್ಗೇಶ್​ ಪುತ್ರ ಚಲಿಸುತ್ತಿದ್ದ ಕಾರು ಅಪಘಾತ
TV9 Web
| Edited By: |

Updated on: Jul 01, 2021 | 3:04 PM

Share

ಚಿಕ್ಕಬಳ್ಳಾಪುರ: ಕನ್ನಡ ಚಿತ್ರರಂಗದ ಹಿರಿಯ ನಟ ಜಗ್ಗೇಶ್ ಅವರ ದ್ವಿತೀಯ ಪುತ್ರ ಯತಿರಾಜ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಬೆಂಗಳೂರು ಹೈದರಾಬಾದ್​ ರಸ್ತೆಯಲ್ಲಿ ಚಲಿಸುವಾಗ ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಅಗಲಗುರ್ಕಿ ಗ್ರಾಮದ ಬಳಿ ಯತಿರಾಜ್​ ಚಲಿಸುತ್ತಿದ್ದ KA 51 ME 9339 ಸಂಖ್ಯೆಯ ಬಿಳಿ ಬಣ್ಣದ BMW ಕಾರು ಅಪಘಾತಕ್ಕೆ ತುತ್ತಾಗಿದ್ದು, ಕಾರಿನ ಮುಂಬಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಪ್ರತ್ಯಕ್ಷದರ್ಶಿಗಳು ಹೇಳುವಂತೆ ಕಾರು ಡಿವೈಡರ್​ಗೆ ಗುದ್ದಿದ ರಭಸಕ್ಕೆ ಹೆಚ್ಚಿನ ಅವಘಡ ಆಗದೇ ಇರುವುದು ಅದೃಷ್ಟವೇ ಸರಿ. ವೇಗವಾಗಿ ಬಂದ ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದು 10 ಅಡಿ ಮೇಲಕ್ಕೆ ಹಾರಿ ಉರುಳಿ ಬಿದ್ದಿದೆ ಎಂದು ಅಲ್ಲಿದ್ದವರು ಘಟನೆಯನ್ನು ವಿವರಿಸಿದ್ದಾರೆ.

​ಟಿವಿ9ಗೆ ಈ ಬಗ್ಗೆ ಮಾಹಿತಿ ನೀಡಿದ ಪ್ರತ್ಯಕ್ಷದರ್ಶಿಗಳು, ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು ಹತ್ತು ಅಡಿ ಮೇಲೆ ಹಾರಿ ಉರುಳಿ ಬಿದ್ದಿದೆ. ಇದಕ್ಕೆ ಕಾರು ಅತಿವೇಗವಾಗಿ ಚಲಿಸಿದ್ದೇ ಕಾರಣ. ರಭಸವಾಗಿ ಗುದ್ದಿದರೂ ಸಣ್ಣಪುಟ್ಟ ಗಾಯವಾಗಿದೆಯೆಂದರೆ ಅವರನ್ನು ಕಾರ್​ನಲ್ಲಿದ್ದ ಏರ್​ಬ್ಯಾಗ್​ ಕಾಪಾಡಿದೆ. ಒಂದುವೇಳೆ ಕಾರಿನಲ್ಲಿ ಆ ಸೌಲಭ್ಯ ಇಲ್ಲದೇ ಇದ್ದರೆ ಹೆಚ್ಚು ಪೆಟ್ಟಾಗುವ ಸಂಭವ ಇತ್ತು, ಕಾರಿನಲ್ಲಿದ್ದ ಏರ್​ಬ್ಯಾಗ್​ನಿಂದ ಜಗ್ಗೇಶ್​ ಮಗ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಾವು ಕಣ್ಣಾರೆ ನೋಡಿದ್ದನ್ನು ಹೇಳಿದ್ದಾರೆ.

ಜಗ್ಗೇಶ್​ ಅವರ ಎರಡನೇ ಮಗ ಯತಿರಾಜ ಪ್ರಯಾಣಿಸುತ್ತಿದ್ದ ಕಾರು ಅದಾಗಿದ್ದು, ಅಪಘಾತದ ನಂತರ ಅವರು ಸ್ಥಳೀಯ ಆಸ್ಪತ್ರೆ, ಸ್ಥಳೀಯ ಪೊಲೀಸ್ ಠಾಣೆಗೆ ಬಂದಿಲ್ಲ. ಆದರೆ, ಚಿಕ್ಕಬಳ್ಳಾಪುರ ಸರ್ಕಲ್ ಇನ್ಸ್​ಪೆಕ್ಟರ್​ಗೆ ಮಾಹಿತಿ ನೀಡಿರುವ ಯತಿರಾಜ್ ಸುರಕ್ಷಿತವಾಗಿರುವುದಾಗಿ ತಿಳಿಸಿದ್ದಾರೆ. ತನಗೆ ಏನೂ ಆಗಿಲ್ಲವೆಂದು ಹೇಳಿರುವ ಅವರು ಸುರಕ್ಷಿತವಾಗಿರುವ ಬಗ್ಗೆ ಪೋನ್ ಕರೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಕಾರನ್ನು ಸ್ವತಃ ಯತಿರಾಜ್ ಡ್ರೈವ್ ಮಾಡುತ್ತಿದ್ದರು. ಆದರೆ, ಹೇಗೆ ಅಪಘಾತವಾಯಿತು ಎನ್ನುವ ಬಗ್ಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸದ್ಯಕ್ಕೆ ಯತಿರಾಜ್ ಅವರ ಆರೋಗ್ಯ ಸ್ಥಿತಿ ಚೆನ್ನಾಗಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಯತಿರಾಜ್​ ಬಲಗೈಗೆ ಸಣ್ಣ ಗಾಯವಾಗಿದೆ. ತೀರಾ ಗಂಭೀರ ಗಾಯಗಳೇನೂ ಆಗಿಲ್ಲ. ಹೀಗಾಗಿ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಜಗ್ಗೇಶ್​ ಕುಟುಂಬದಿಂದ ಮಾಹಿತಿ ಲಭ್ಯವಾಗಿದೆ.

ನಾಯಿ ಅಡ್ಡ ಬಂದಿದ್ದರಿಂದ ಅಪಘಾತವಾಯಿತು: ಜಗ್ಗೇಶ್ ಅಪಘಾತದ ಬಗ್ಗೆ ಟ್ವೀಟ್​ ಮಾಡಿರುವ ಜಗ್ಗೇಶ್​, ಕೊರೊನಾ ಬಂದಾಗಿನಿಂದ ಆತ ಹೊರ ಹೋಗಿಲ್ಲ. ಹೋಗಿಬರುವೆ ಎಂದು ಅಮ್ಮನಿಗೆ ಹೇಳಿ ಹೊರ ಹೋದ ಮಗ ಯತಿರಾಜ, ಅವನ ಇಷ್ಟದ ಬೆಂಗಳೂರು – ಚಿಕ್ಕಬಳ್ಳಾಪುರ ರಸ್ತೆಯಲ್ಲಿ ಹೋಗಿ ಬರುವಾಗ ಅಡ್ಡ ಬಂದ ನಾಯಿಯನ್ನು ರಕ್ಷಿಸಲು ಹೋಗಿ ರಸ್ತೆ ವಿಭಜಕಕ್ಕೆ ಕಾರು ಹೊಡೆದು ಪಕ್ಕದ ರಸ್ತೆಗೆಬಿದ್ದಿದೆ. ರಾಯರ ದಯೆ ಹಾಗೂ ನಿಮ್ಮ ಶುಭ ಹಾರೈಕೆ, ಯತಿರಾಜನಿಗೆ ಸಣ್ಣ ಗಾಯವೂ ಇಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Jaggesh Son Car Accident: ನಟ ಜಗ್ಗೇಶ್​ ಪುತ್ರ ಯತಿರಾಜ್​ ಇದ್ದ ಕಾರು ಅಪಘಾತ; ಹೈದರಾಬಾದ್​ ರಸ್ತೆಯಲ್ಲಿ ಅವಘಡ 

ಅಪಘಾತದಲ್ಲಿ ನಟ ಜಗ್ಗೇಶ್​ ಮಗ ಯತಿರಾಜ್​​ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜು; ಇಲ್ಲಿವೆ ಫೋಟೋಗಳು

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು