AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗ್ಗೇಶ್ ಬದುಕು ಬದಲಿಸಿತು ಆ ರಾತ್ರಿ.. ಎಲ್ಲಾ ರಾಯರ ಕೃಪೆ

ಜಗ್ಗೇಶ್ ಅವರು ರಾಯರ ಮೇಲಿನ ಅಪಾರ ಭಕ್ತಿಯನ್ನು ಹೊಂದಿದ್ದಾರೆ. ರಾಯರು ಅವರ ಜೀವನವನ್ನು ಬದಲಾಯಿಸಿದರು ಎಂಬುದನ್ನು ಅವರು ನಂಬುತ್ತಾರೆ. ಅವರ ಮದುವೆ, ವೃತ್ತಿ, ಮತ್ತು ಕುಟುಂಬದ ಮೇಲೆ ರಾಯರ ಪ್ರಭಾವ ಇದೆ ಎಂದು ಅವರು ನಂಬುತ್ತಾರೆ. ಆ ಬಗ್ಗೆ ಇಲ್ಲಿದೆ ವಿವರ.

ಜಗ್ಗೇಶ್ ಬದುಕು ಬದಲಿಸಿತು ಆ ರಾತ್ರಿ.. ಎಲ್ಲಾ ರಾಯರ ಕೃಪೆ
ಜಗ್ಗೇಶ್
ರಾಜೇಶ್ ದುಗ್ಗುಮನೆ
|

Updated on:Jul 10, 2025 | 10:21 AM

Share

ಜಗ್ಗೇಶ್​ಗೆ ರಾಯರ ಮೇಲೆ ಅಪಾರ ಭಕ್ತಿ. ಅವರ ಇಡೀ ಕುಟುಂಬ ರಾಯರ ಮೇಲೆ ಅಪಾರ ಭಕ್ತಿಯನ್ನು ಹೊಂದಿದೆ. ಗುರು ರಾಯರನ್ನು ಅವರು ಯಾವಾಗಲೂ ನೆನಪಿಸಿಕೊಳ್ಳುತ್ತಾರೆ. ಜಗ್ಗೇಶ್ ಅವರ ಬದುಕು ಸಂಪೂರ್ಣವಾಗಿ ಬದಲಾಗಿದ್ದು ರಾಯರಿಂದ ಎಂದು ಅವರು ಅಪಾರವಾಗಿ ನಂಬುತ್ತಾರೆ. ಗುರುವಿನ ಮೇಲಿನ ನಂಬಿಕೆಯನ್ನು ಅವರು ಎಂದಿಗೂ ಕಳೆದುಕೊಳ್ಳುವುದಿಲ್ಲ. ತಮ್ಮ ಜೀವನ ರಾಯರಿಮದ ಯಾವ ರೀತಿಯಲ್ಲಿ ಬದಲಾಯಿತು ಎಂಬುದನ್ನು ಅವರು ಈ ಮೊದಲು ಹೇಳಿದ್ದರು. ಗುರು ಪೂರ್ಣಿಮೆ (Guru Poornima) ದಿನ ಅದನ್ನು ನೆನಪಿಸಿಕೊಳ್ಳೋಣ.

‘ಪರಿಮಳ ಎಂಬ ಪಕ್ಕದ ರಾಜ್ಯದ ಮಹಿಳೆ. ಅವಳಿಗೂ ನನಗೂ ಸಂಬಂಧವೇ ಇರಲಿಲ್ಲ. ಈ ಹೆಸರನ್ನು ಇಡಿಸಿದ್ದು ರಾಯರು. ರಾಯರು ಜನ್ಮ ಜನ್ಮವನ್ನು ನೋಡ್ತಾರೆ. ನಾವಿಬ್ಬರೂ ಮದುವೆ ಆದೆವು. ಮದುವೆ ಆದ ಬಳಿಕ ನಮ್ಮನ್ನು ಹೊರಕ್ಕೆ ಹಾಕಿದರು. ಆಗಿನ ಕಾಲದಲ್ಲಿ ಪ್ರೇಮ ವಿವಾಹವನ್ನು ಬೆಂಬಲಿಸುತ್ತಿರಲಿಲ್ಲ. ನಾವು ಹಳ್ಳಿಯಿಂದ ನೇರವಾಗಿ ಬೆಂಗಳೂರಿನ ಗೋವರ್ಧನ ಥಿಯೇಟರ್ ಬಳಿ ಬಂದೆವು. ಅಲ್ಲಿ ಮಂತ್ರಾಲಯ ಬಸ್ ಕಾಣುತ್ತದೆ. ಬಸ್ ಹತ್ತಿ ನಾವು ಅಲ್ಲಿಗೆ ಹೋದೆವು’ ಎಂದು ಜಗ್ಗೇಶ್ ಹೇಳಿದರು. ಅ

‘ನಿತ್ಯ ಮಠದಲ್ಲಿ ಹೊಟ್ಟೆ ತುಂಬ ಊಟ ಮಾಡೋದು. ರಾಯರ ಗುಡಿ ಹುಚ್ಚರ ರೀತಿ ಸುತ್ತೋದು. ಅಲ್ಲೊಂದು ಆನೆ ಇತ್ತು, ಅದನ್ನು ನೋಡೋದು. ಟೆಂಟ್ ಇಟ್ಟಿದ್ದರು, ಟೆಂಟ್​ನಲ್ಲಿ ಸಿನಿಮಾ ನೋಡದು. ಇದೇ ಕೆಲಸ ಆಗಿತ್ತು. ದಯವಿಟ್ಟು ನನ್ನತ್ರ ಕರೆದುಕೊಳ್ಳಿ ಎಂದು ರಾಯರ ಬಳಿ ಕೇಳಿದೆ. ವೃತ್ತಿ ಹಾಗೂ ಪತ್ನಿಯನ್ನು ಜೋಪಾನ ಮಾಡಿಕೊಳ್ಳಬೇಕು ಎಂದು ಕೇಳಿದೆ’ ಎಂದಿದ್ದರು ಜಗ್ಗೇಶ್.

ಇದನ್ನೂ ಓದಿ
Image
ವಿಎಫ್​ಎಕ್ಸ್ ಮಶಿನ್, 86 ಕ್ಯಾಮೆರಾಗಳ ಮಧ್ಯೆ ಶೂಟ್ ಮಾಡಿದ ಯಶ್
Image
ಟಾಲಿವುಡ್​​ನ ಸ್ಟಾರ್ ಹೀರೋ ಚಿತ್ರಕ್ಕೆ ನಾಯಕಿ ಆದ ರಶ್ಮಿಕಾ ಮಂದಣ್ಣ
Image
ಆಂಧ್ರ ಪ್ರದೇಶದಲ್ಲಿ ಗಾಂಜಾ ಕಡಿಮೆ ಮಾಡಿದ ನಟ ಪವನ್ ಕಲ್ಯಾಣ್
Image
‘ನಿವೇದಿತಾಳನ್ನು ಈಗಲೂ ಮಿಸ್ ಮಾಡಿ ಕೊಳ್ತೀನಿ’; ಚಂದನ್ ಶೆಟ್ಟಿ

‘ಪತ್ನಿ ಬಳಿ ಹೇಳಿದೆ.. ನಮಗೆ ಇಬ್ಬರು ಮಕ್ಕಳು ಹುಟ್ಟುತ್ತಾರೆ. ಒಬ್ಬನಿಗೆ ಗುರುರಾಜ್, ಮತ್ತೊಬ್ಬನಿಗೆ ಯತಿರಾಜ್ ಎಂದು ಇಡ್ತೀನಿ ಎಂದೆ. ಹಾಗೆಯೇ ಆಯ್ತು. ಮೊಮ್ಮೊಗನಿಗೆ ಅರ್ಜುನ ಎಂದು ಹೆಸರು ಇಟ್ಟೆ. ನನ್ನ ಪುಟ್ಟ ಪರಿವಾರ ರಾಯರ ಕುಟುಂಬ ಆಯ್ತು’ ಎಂದಿದ್ದರು ಅವರು.

ಇದನ್ನೂ ಓದಿ: ಗುರುಪೂರ್ಣಿಮೆ: ಗುರು ರಾಯರಿಂದ ಸಾಕಷ್ಟು ಪ್ರಭಾವಿತರಾಗಿದ್ದ ರಾಜ್​ಕುಮಾರ್

‘ರಾಜ್​ಕುಮಾರ್ ಎರಡನೇ ರಾಯರ ತರಹ ಕಂಡರು. ಅವರು ರಾಯರ ಕಥೆ ಹೇಳಿದರು. ರಾಯರ ಮೇಲಿನ ನಂಬಿಕೆ ಹೆಚ್ಚುವಂತೆ ಮಾಡಿದರು’ ಎಂದು ಹೇಳಿದ್ದರು ಜಗ್ಗೇಶ್. ರಾಜ್​ಕುಮಾರ್ ಹಾಗೂ ಜಗ್ಗೇಶ್ ಸೇರಿದಾಗಲೆಲ್ಲ ರಾಯರ ಬಗ್ಗೆಯೇ ಚರ್ಚೆಗಳು ಆಗುತ್ತಿದ್ದವಂತೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:08 am, Thu, 10 July 25

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?