AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಣ್ಣ-ರಜನಿ ನಟನೆಯ ‘ಜೈಲರ್’ ಬುಕಿಂಗ್ ಶುರು; ತಮಿಳಿಗೆ 800, ಕನ್ನಡಕ್ಕೆ 4 ಶೋ

ಗಳೂರಿನಲ್ಲಿ ಈ ಚಿತ್ರಕ್ಕೆ ಮೊದಲ ದಿನ 800ಕ್ಕೂ ಅಧಿಕ ಶೋ ಸಿಕ್ಕಿದೆ. ಆ ಪೈಕಿ ತಮಿಳು ವರ್ಷನ್​​ಗೆ 806 ಶೋ ಹಾಗೂ ಕನ್ನಡಕ್ಕೆ ಕೇವಲ ನಾಲ್ಕು ಶೋ ಸಿಕ್ಕಿದೆ.

ಶಿವಣ್ಣ-ರಜನಿ ನಟನೆಯ ‘ಜೈಲರ್’ ಬುಕಿಂಗ್ ಶುರು; ತಮಿಳಿಗೆ 800, ಕನ್ನಡಕ್ಕೆ 4 ಶೋ
ಶಿವಣ್ಣ-ರಜನಿ
Follow us
ರಾಜೇಶ್ ದುಗ್ಗುಮನೆ
|

Updated on: Aug 06, 2023 | 11:05 AM

ಇತ್ತೀಚೆಗೆ ಪ್ಯಾನ್ ಇಂಡಿಯಾ ಸಿನಿಮಾಗಳ ಸಂಖ್ಯೆ ಹೆಚ್ಚುತ್ತಿದೆ. ಪರಭಾಷೆಯ ಸಿನಿಮಾಗಳು ಕನ್ನಡಕ್ಕೆ ಡಬ್ ಆಗಿ ರಿಲೀಸ್ ಆಗುತ್ತಿದೆ. ಈಗ ಆ ಸಾಲಿಗೆ ‘ಜೈಲರ್’ ಸಿನಿಮಾ (Jailer Movie) ಕೂಡ ಸೇರ್ಪಡೆ ಆಗುತ್ತಿದೆ. ರಜನಿಕಾಂತ್, ಶಿವರಾಜ್​ಕುಮಾರ್ (Shivarajkumar), ಮೋಹನ್​ಲಾಲ್ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಆಗಸ್ಟ್ 10ರಂದು ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ. ಈಗ ಕನ್ನಡಿಗರಿಗೆ ಬೇಸರ ಆಗುವಂಥ ಘಟನೆ ಒಂದು ನಡೆದಿದೆ. ಇದನ್ನು ಸೋಶಿಯಲ್ ಮೀಡಿಯಾ ಮೂಲಕ ಪ್ರಶ್ನೆ ಮಾಡಲಾಗುತ್ತಿದೆ.

‘ಜೈಲರ್’ ಸಿನಿಮಾ ಆಗಸ್ಟ್ 10ರಂದು ರಿಲೀಸ್ ಆಗುತ್ತಿದ್ದು, ಈಗಾಗಲೇ ಆನ್​​ಲೈನ್​​ಲ್ಲಿ ಟಿಕೆಟ್ ಬುಕಿಂಗ್ ಶುರು ಆಗಿದೆ. ಇದು ಪ್ಯಾನ್ ಇಂಡಿಯಾ ಸಿನಿಮಾ. ತಮಿಳು ಮಾತ್ರವಲ್ಲದೆ, ಕನ್ನಡ ಮೊದಲಾದ ಭಾಷೆಗಳಲ್ಲಿ ‘ಜೈಲರ್’ ಸಿನಿಮಾ ಮೂಡಿ ಬರುತ್ತಿದೆ. ಬೆಂಗಳೂರಿನಲ್ಲಿ ಈ ಚಿತ್ರಕ್ಕೆ ಮೊದಲ ದಿನ 800ಕ್ಕೂ ಅಧಿಕ ಶೋ ಸಿಕ್ಕಿದೆ. ಆ ಪೈಕಿ ತಮಿಳು ವರ್ಷನ್​​ಗೆ 806 ಶೋ ಹಾಗೂ ಕನ್ನಡಕ್ಕೆ ಕೇವಲ ನಾಲ್ಕು ಶೋ ಸಿಕ್ಕಿದೆ. ಇದು ಅನೇಕರಿಗೆ ಬೇಸರ ಮೂಡಿಸಿದೆ.

ರಿಲೀಸ್​ಗೆ ಇನ್ನೂ ನಾಲ್ಕೈದು ದಿನ ಬಾಕಿ ಇದೆ. ಕನ್ನಡಕ್ಕೆ ಇನ್ನೂ ಹೆಚ್ಚಿನ ಶೋ ಸೇರ್ಪಡೆ ಆಗಬಹುದು. ಆದರೆ, ತಮಿಳು ವರ್ಷನ್​ಗೆ ಕೊಟ್ಟಷ್ಟು ಶೋಗಳನ್ನು ಕನ್ನಡಕ್ಕೆ ನೀಡುವುದಿಲ್ಲ. ಹೀಗಾಗಿ, ಅನೇಕರು ಶಿವರಾಜ್​ಕುಮಾರ್ ವಿರುದ್ಧ ಬೇಸರಗೊಂಡಿದ್ದಾರೆ. ಅವರು ಕರ್ನಾಟಕದಲ್ಲಿ ಕನ್ನಡಕ್ಕೆ ಹೆಚ್ಚಿನ ಶೋ ಕೊಡಿಸಬಹುದಿತ್ತು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

‘ಜೈಲರ್’ ಸಿನಿಮಾದ ಟ್ರೇಲರ್ ಇತ್ತೀಚೆಗೆ ರಿಲೀಸ್ ಆಗಿದೆ. ಟ್ರೇಲರ್ ನೋಡಿದ ಅನೇಕರು ಮೆಚ್ಚಿಕೊಂಡಿದ್ದಾರೆ. ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಈ ಚಿತ್ರ ಸೂಪರ್ ಹಿಟ್ ಆಗುವ ಸೂಚನೆ ಸಿಕ್ಕಿದೆ. ಈ ಚಿತ್ರದ ಮೂಲಕ ರಜನಿಕಾಂತ್ ಮತ್ತೊಂದು ದೊಡ್ಡ ಗೆಲುವು ಕಾಣುವ ಭರವಸೆಯಲ್ಲಿದ್ದಾರೆ. ಈ ಚಿತ್ರಕ್ಕೆ ನೆಲ್ಸನ್ ದಿಲೀಪ್ ಕುಮಾರ್ ಅವರು ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ: ಜ‘ಜೈಲರ್​’ ಎದುರು ಪೈಪೋಟಿ ನೀಡಲಿರುವ ‘ತೋತಾಪುರಿ 2’; ಆಗಸ್ಟ್​ 11ರಂದು ಅದ್ದೂರಿಯಾಗಿ ಬಿಡುಗಡೆ

‘ಜೈಲರ್​’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಅವರ ಪಾತ್ರ ಕೇವಲ 10 ನಿಮಿಷ ಬರಲಿದೆ. ಈ ವಿಚಾರವನ್ನು ಅವರು ಈ ಮೊದಲೇ ಹೇಳಿಕೊಂಡಿದ್ದರು. ಈ ಚಿತ್ರದ ಟ್ರೇಲರ್​ನಲ್ಲಿ ಅವರು ಕಾಣಿಸಲಿದ್ದಾರೆ ಎಂದು ಅನೇಕರು ಭಾವಿಸಿದ್ದರು. ಆದರೆ, ಅದು ಸುಳ್ಳಾಗಿದೆ. ಈ ಚಿತ್ರದ ‘ಕಾವಾಲ’ ಹಾಡು ಸೂಪರ್ ಹಿಟ್ ಎನಿಸಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಭಾರತ-ಯುಎಇ ಸಹಭಾಗಿತ್ವ ಮಹತ್ವದ್ದು: ಸಚಿವ ಹರ್ದೀಪ್ ಸಿಂಗ್
ಭಾರತ-ಯುಎಇ ಸಹಭಾಗಿತ್ವ ಮಹತ್ವದ್ದು: ಸಚಿವ ಹರ್ದೀಪ್ ಸಿಂಗ್
ಈ ಬಾರಿ 11 ದಿನ ಮೈಸೂರು ದಸರಾ ಆಚರಣೆ: ವಿಶೇಷತೆ ಏನು ಗೊತ್ತಾ?
ಈ ಬಾರಿ 11 ದಿನ ಮೈಸೂರು ದಸರಾ ಆಚರಣೆ: ವಿಶೇಷತೆ ಏನು ಗೊತ್ತಾ?
ಡಿಎನ್​ಎ ಮೂಲಕ 211 ಜನರ ಗುರುತು ಪತ್ತೆ, 189 ಮೃತದೇಹಗಳ ಹಸ್ತಾಂತರ:ಡಾ. ರಾಕೇ
ಡಿಎನ್​ಎ ಮೂಲಕ 211 ಜನರ ಗುರುತು ಪತ್ತೆ, 189 ಮೃತದೇಹಗಳ ಹಸ್ತಾಂತರ:ಡಾ. ರಾಕೇ
ಅಕ್ಕಿ ಸಾಗಿಸುತ್ತಿದ್ದ ಸರಕು ಸಾಗಣೆ ವಾಹನದಲ್ಲಿ 41 ಮೂಟೆಗಳು ಪತ್ತೆ
ಅಕ್ಕಿ ಸಾಗಿಸುತ್ತಿದ್ದ ಸರಕು ಸಾಗಣೆ ವಾಹನದಲ್ಲಿ 41 ಮೂಟೆಗಳು ಪತ್ತೆ
ಒಂಟೆ ಮೇಲೆ ಮಲಗಿ ಎಕ್ಸ್​ಪ್ರೆಸ್​ವೇನಲ್ಲಿ ಸವಾರಿ ಹೊರಟ ಕುಡುಕ
ಒಂಟೆ ಮೇಲೆ ಮಲಗಿ ಎಕ್ಸ್​ಪ್ರೆಸ್​ವೇನಲ್ಲಿ ಸವಾರಿ ಹೊರಟ ಕುಡುಕ
ಯಶ್ ಲುಕ್​ನಲ್ಲಿ ಬಂದ ತುಕಾಲಿ ಸಂತೋಷ್; ನಗುವಿನ ಹೊಳೆ
ಯಶ್ ಲುಕ್​ನಲ್ಲಿ ಬಂದ ತುಕಾಲಿ ಸಂತೋಷ್; ನಗುವಿನ ಹೊಳೆ