ಶಿವಣ್ಣ-ರಜನಿ ನಟನೆಯ ‘ಜೈಲರ್’ ಬುಕಿಂಗ್ ಶುರು; ತಮಿಳಿಗೆ 800, ಕನ್ನಡಕ್ಕೆ 4 ಶೋ

ಗಳೂರಿನಲ್ಲಿ ಈ ಚಿತ್ರಕ್ಕೆ ಮೊದಲ ದಿನ 800ಕ್ಕೂ ಅಧಿಕ ಶೋ ಸಿಕ್ಕಿದೆ. ಆ ಪೈಕಿ ತಮಿಳು ವರ್ಷನ್​​ಗೆ 806 ಶೋ ಹಾಗೂ ಕನ್ನಡಕ್ಕೆ ಕೇವಲ ನಾಲ್ಕು ಶೋ ಸಿಕ್ಕಿದೆ.

ಶಿವಣ್ಣ-ರಜನಿ ನಟನೆಯ ‘ಜೈಲರ್’ ಬುಕಿಂಗ್ ಶುರು; ತಮಿಳಿಗೆ 800, ಕನ್ನಡಕ್ಕೆ 4 ಶೋ
ಶಿವಣ್ಣ-ರಜನಿ
Follow us
|

Updated on: Aug 06, 2023 | 11:05 AM

ಇತ್ತೀಚೆಗೆ ಪ್ಯಾನ್ ಇಂಡಿಯಾ ಸಿನಿಮಾಗಳ ಸಂಖ್ಯೆ ಹೆಚ್ಚುತ್ತಿದೆ. ಪರಭಾಷೆಯ ಸಿನಿಮಾಗಳು ಕನ್ನಡಕ್ಕೆ ಡಬ್ ಆಗಿ ರಿಲೀಸ್ ಆಗುತ್ತಿದೆ. ಈಗ ಆ ಸಾಲಿಗೆ ‘ಜೈಲರ್’ ಸಿನಿಮಾ (Jailer Movie) ಕೂಡ ಸೇರ್ಪಡೆ ಆಗುತ್ತಿದೆ. ರಜನಿಕಾಂತ್, ಶಿವರಾಜ್​ಕುಮಾರ್ (Shivarajkumar), ಮೋಹನ್​ಲಾಲ್ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಆಗಸ್ಟ್ 10ರಂದು ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ. ಈಗ ಕನ್ನಡಿಗರಿಗೆ ಬೇಸರ ಆಗುವಂಥ ಘಟನೆ ಒಂದು ನಡೆದಿದೆ. ಇದನ್ನು ಸೋಶಿಯಲ್ ಮೀಡಿಯಾ ಮೂಲಕ ಪ್ರಶ್ನೆ ಮಾಡಲಾಗುತ್ತಿದೆ.

‘ಜೈಲರ್’ ಸಿನಿಮಾ ಆಗಸ್ಟ್ 10ರಂದು ರಿಲೀಸ್ ಆಗುತ್ತಿದ್ದು, ಈಗಾಗಲೇ ಆನ್​​ಲೈನ್​​ಲ್ಲಿ ಟಿಕೆಟ್ ಬುಕಿಂಗ್ ಶುರು ಆಗಿದೆ. ಇದು ಪ್ಯಾನ್ ಇಂಡಿಯಾ ಸಿನಿಮಾ. ತಮಿಳು ಮಾತ್ರವಲ್ಲದೆ, ಕನ್ನಡ ಮೊದಲಾದ ಭಾಷೆಗಳಲ್ಲಿ ‘ಜೈಲರ್’ ಸಿನಿಮಾ ಮೂಡಿ ಬರುತ್ತಿದೆ. ಬೆಂಗಳೂರಿನಲ್ಲಿ ಈ ಚಿತ್ರಕ್ಕೆ ಮೊದಲ ದಿನ 800ಕ್ಕೂ ಅಧಿಕ ಶೋ ಸಿಕ್ಕಿದೆ. ಆ ಪೈಕಿ ತಮಿಳು ವರ್ಷನ್​​ಗೆ 806 ಶೋ ಹಾಗೂ ಕನ್ನಡಕ್ಕೆ ಕೇವಲ ನಾಲ್ಕು ಶೋ ಸಿಕ್ಕಿದೆ. ಇದು ಅನೇಕರಿಗೆ ಬೇಸರ ಮೂಡಿಸಿದೆ.

ರಿಲೀಸ್​ಗೆ ಇನ್ನೂ ನಾಲ್ಕೈದು ದಿನ ಬಾಕಿ ಇದೆ. ಕನ್ನಡಕ್ಕೆ ಇನ್ನೂ ಹೆಚ್ಚಿನ ಶೋ ಸೇರ್ಪಡೆ ಆಗಬಹುದು. ಆದರೆ, ತಮಿಳು ವರ್ಷನ್​ಗೆ ಕೊಟ್ಟಷ್ಟು ಶೋಗಳನ್ನು ಕನ್ನಡಕ್ಕೆ ನೀಡುವುದಿಲ್ಲ. ಹೀಗಾಗಿ, ಅನೇಕರು ಶಿವರಾಜ್​ಕುಮಾರ್ ವಿರುದ್ಧ ಬೇಸರಗೊಂಡಿದ್ದಾರೆ. ಅವರು ಕರ್ನಾಟಕದಲ್ಲಿ ಕನ್ನಡಕ್ಕೆ ಹೆಚ್ಚಿನ ಶೋ ಕೊಡಿಸಬಹುದಿತ್ತು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

‘ಜೈಲರ್’ ಸಿನಿಮಾದ ಟ್ರೇಲರ್ ಇತ್ತೀಚೆಗೆ ರಿಲೀಸ್ ಆಗಿದೆ. ಟ್ರೇಲರ್ ನೋಡಿದ ಅನೇಕರು ಮೆಚ್ಚಿಕೊಂಡಿದ್ದಾರೆ. ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಈ ಚಿತ್ರ ಸೂಪರ್ ಹಿಟ್ ಆಗುವ ಸೂಚನೆ ಸಿಕ್ಕಿದೆ. ಈ ಚಿತ್ರದ ಮೂಲಕ ರಜನಿಕಾಂತ್ ಮತ್ತೊಂದು ದೊಡ್ಡ ಗೆಲುವು ಕಾಣುವ ಭರವಸೆಯಲ್ಲಿದ್ದಾರೆ. ಈ ಚಿತ್ರಕ್ಕೆ ನೆಲ್ಸನ್ ದಿಲೀಪ್ ಕುಮಾರ್ ಅವರು ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ: ಜ‘ಜೈಲರ್​’ ಎದುರು ಪೈಪೋಟಿ ನೀಡಲಿರುವ ‘ತೋತಾಪುರಿ 2’; ಆಗಸ್ಟ್​ 11ರಂದು ಅದ್ದೂರಿಯಾಗಿ ಬಿಡುಗಡೆ

‘ಜೈಲರ್​’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಅವರ ಪಾತ್ರ ಕೇವಲ 10 ನಿಮಿಷ ಬರಲಿದೆ. ಈ ವಿಚಾರವನ್ನು ಅವರು ಈ ಮೊದಲೇ ಹೇಳಿಕೊಂಡಿದ್ದರು. ಈ ಚಿತ್ರದ ಟ್ರೇಲರ್​ನಲ್ಲಿ ಅವರು ಕಾಣಿಸಲಿದ್ದಾರೆ ಎಂದು ಅನೇಕರು ಭಾವಿಸಿದ್ದರು. ಆದರೆ, ಅದು ಸುಳ್ಳಾಗಿದೆ. ಈ ಚಿತ್ರದ ‘ಕಾವಾಲ’ ಹಾಡು ಸೂಪರ್ ಹಿಟ್ ಎನಿಸಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್