AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರ್ಜರಿ ನಿರ್ದೇಶಕ ಚೇತನ್​ ಕುಮಾರ್ ಮದುವೆಗೆ ಬಂದು ಹರಸಿದ ಸೆಲೆಬ್ರಿಟಿಗಳು

ಚೇತನ್​ ಕೈ ಹಿಡಿದಿರುವ ಹುಡುಗಿ ಹೆಸರು ಮಾನಸಾ. ಇವರು ಚೇತನ್​ಗೆ ಸ್ವಂತ ಅತ್ತೆಯ ಮಗಳು ಎಂಬುದು ವಿಶೇಷ. ಬಹಳ ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಎರಡೂ ಕುಟುಂಬದವರ ಒಪ್ಪಿಗೆ ಮೇರೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 16, 2021 | 3:00 PM

Share
ಲಾಕ್​ಡೌನ್​ನಲ್ಲಿ ಅನೇಕ ಸೆಲೆಬ್ರಿಟಿಗಳು ಸಿಂಪಲ್​ ಆಗಿ ಮದುವೆ ಆಗುತ್ತಿದ್ದಾರೆ. ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಚೇತನ್​ ಕುಮಾರ್​ ಅವರು ಭಾನುವಾರ (ಜೂ.13) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮೈಸೂರಿನ ಕಲ್ಪವೃಕ್ಷ ರಾಘವೇಂದ್ರ ಸ್ವಾಮಿ ಮಠದಲ್ಲಿ ಭಾನುವಾರ ಬೆಳಗ್ಗೆ ಮದುವೆ ನೆರವೇರಿದೆ.

ಲಾಕ್​ಡೌನ್​ನಲ್ಲಿ ಅನೇಕ ಸೆಲೆಬ್ರಿಟಿಗಳು ಸಿಂಪಲ್​ ಆಗಿ ಮದುವೆ ಆಗುತ್ತಿದ್ದಾರೆ. ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಚೇತನ್​ ಕುಮಾರ್​ ಅವರು ಭಾನುವಾರ (ಜೂ.13) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮೈಸೂರಿನ ಕಲ್ಪವೃಕ್ಷ ರಾಘವೇಂದ್ರ ಸ್ವಾಮಿ ಮಠದಲ್ಲಿ ಭಾನುವಾರ ಬೆಳಗ್ಗೆ ಮದುವೆ ನೆರವೇರಿದೆ.

1 / 6
ಕೆಲವೇ ಕೆಲವು ಮಂದಿ ಮಾತ್ರ ಈ ಶುಭ ಸಮಾರಂಭಕ್ಕೆ ಸಾಕ್ಷಿ ಆಗಿದ್ದರು. ಚಿತ್ರರಂಗದ ಕೆಲವು ಆಪ್ತರಿಗಷ್ಟೇ ಆಹ್ವಾನ ನೀಡಲಾಗಿತ್ತು. ಪುನೀತ್​ ರಾಜ್​ಕುಮಾರ್​, ಧ್ರುವ ಸರ್ಜಾ, ಶ್ರೀಮುರಳಿ, ಉಮಾಪತಿ ಶ್ರೀನಿವಾಸ್​ ಗೌಡ, ನಿರ್ದೇಶಕ ಮಹೇಶ್​ ಕುಮಾರ್​ ಮುಂತಾದವರು ಮದುವೆಗೆ ಆಗಮಿಸಿ ನವ ಜೋಡಿಗೆ ಆಶೀರ್ವಾದ ಮಾಡಿದರು. ಲಾಕ್​ಡೌನ್​ ಕಾರಣದಿಂದ ಅಭಿಮಾನಿಗಳಿಗೆ ಆಹ್ವಾನ ಇರಲಿಲ್ಲ.

ಕೆಲವೇ ಕೆಲವು ಮಂದಿ ಮಾತ್ರ ಈ ಶುಭ ಸಮಾರಂಭಕ್ಕೆ ಸಾಕ್ಷಿ ಆಗಿದ್ದರು. ಚಿತ್ರರಂಗದ ಕೆಲವು ಆಪ್ತರಿಗಷ್ಟೇ ಆಹ್ವಾನ ನೀಡಲಾಗಿತ್ತು. ಪುನೀತ್​ ರಾಜ್​ಕುಮಾರ್​, ಧ್ರುವ ಸರ್ಜಾ, ಶ್ರೀಮುರಳಿ, ಉಮಾಪತಿ ಶ್ರೀನಿವಾಸ್​ ಗೌಡ, ನಿರ್ದೇಶಕ ಮಹೇಶ್​ ಕುಮಾರ್​ ಮುಂತಾದವರು ಮದುವೆಗೆ ಆಗಮಿಸಿ ನವ ಜೋಡಿಗೆ ಆಶೀರ್ವಾದ ಮಾಡಿದರು. ಲಾಕ್​ಡೌನ್​ ಕಾರಣದಿಂದ ಅಭಿಮಾನಿಗಳಿಗೆ ಆಹ್ವಾನ ಇರಲಿಲ್ಲ.

2 / 6
ಸ್ಯಾಂಡಲ್​ವುಡ್​ನಲ್ಲಿ ಬಹುಬೇಡಿಕೆಯ ನಿರ್ದೇಶಕನಾಗಿ ಗುರುತಿಸಿಕೊಂಡಿರುವ ಚೇತನ್​ ಕುಮಾರ್​ ಅವರನ್ನು ಕೈ ಹಿಡಿದಿರುವ ಹುಡುಗಿ ಯಾರು ಎಂಬ ಕೌತುಕ ಪ್ರಶ್ನೆ ಅಭಿಮಾನಿಗಳ ಮನದಲ್ಲಿ ಮೂಡುವುದು ಸಹಜ. ಚೇತನ್​ ಕೈ ಹಿಡಿದಿರುವ ಹುಡುಗಿ ಹೆಸರು ಮಾನಸಾ. ಇವರು ಚೇತನ್​ಗೆ ಸ್ವಂತ ಅತ್ತೆಯ ಮಗಳು ಎಂಬುದು ವಿಶೇಷ. ಬಹಳ ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಎರಡೂ ಕುಟುಂಬದವರ ಒಪ್ಪಿಗೆ ಮೇರೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಸ್ಯಾಂಡಲ್​ವುಡ್​ನಲ್ಲಿ ಬಹುಬೇಡಿಕೆಯ ನಿರ್ದೇಶಕನಾಗಿ ಗುರುತಿಸಿಕೊಂಡಿರುವ ಚೇತನ್​ ಕುಮಾರ್​ ಅವರನ್ನು ಕೈ ಹಿಡಿದಿರುವ ಹುಡುಗಿ ಯಾರು ಎಂಬ ಕೌತುಕ ಪ್ರಶ್ನೆ ಅಭಿಮಾನಿಗಳ ಮನದಲ್ಲಿ ಮೂಡುವುದು ಸಹಜ. ಚೇತನ್​ ಕೈ ಹಿಡಿದಿರುವ ಹುಡುಗಿ ಹೆಸರು ಮಾನಸಾ. ಇವರು ಚೇತನ್​ಗೆ ಸ್ವಂತ ಅತ್ತೆಯ ಮಗಳು ಎಂಬುದು ವಿಶೇಷ. ಬಹಳ ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಎರಡೂ ಕುಟುಂಬದವರ ಒಪ್ಪಿಗೆ ಮೇರೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

3 / 6
ಮಾನಸಾ ಅವರು ಇಂಜಿನಿಯರಿಂಗ್​ ಓದಿದ್ದಾರೆ. ಪ್ರಸ್ತುತ ಅವರು ಇನ್ಫೋಸಿಸ್​ನಲ್ಲಿ ಕೆಲಸ ಮಾಡುತ್ತಿದ್ದಾರೆ. ಸದ್ಯ ಮದುವೆ ಫೋಟೋಗಳು ಕೂಡ ಲಭ್ಯವಾಗಿದ್ದು ಅಭಿಮಾನಿಗಳು, ಸ್ನೇಹಿತರು, ಸೆಲೆಬ್ರಿಟಿಗಳು ಚೇತನ್​-ಮಾನಸಾ ದಂಪತಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಲಾಕ್​ಡೌನ್​ ಇರುವುದರಿಂದ ಮೈಸೂರಿನಲ್ಲಿ ಸರಳವಾಗಿ ವಿವಾಹ ಸಮಾರಂಭ ಮಾಡಲಾಗಿದೆ.

ಮಾನಸಾ ಅವರು ಇಂಜಿನಿಯರಿಂಗ್​ ಓದಿದ್ದಾರೆ. ಪ್ರಸ್ತುತ ಅವರು ಇನ್ಫೋಸಿಸ್​ನಲ್ಲಿ ಕೆಲಸ ಮಾಡುತ್ತಿದ್ದಾರೆ. ಸದ್ಯ ಮದುವೆ ಫೋಟೋಗಳು ಕೂಡ ಲಭ್ಯವಾಗಿದ್ದು ಅಭಿಮಾನಿಗಳು, ಸ್ನೇಹಿತರು, ಸೆಲೆಬ್ರಿಟಿಗಳು ಚೇತನ್​-ಮಾನಸಾ ದಂಪತಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಲಾಕ್​ಡೌನ್​ ಇರುವುದರಿಂದ ಮೈಸೂರಿನಲ್ಲಿ ಸರಳವಾಗಿ ವಿವಾಹ ಸಮಾರಂಭ ಮಾಡಲಾಗಿದೆ.

4 / 6
ಮಾಸ್​ ಕಮರ್ಷಿಯಲ್​ ಅಂಶಗಳನ್ನು ಹೊಂದಿರುವ ಫ್ಯಾಮಿಲಿ ಎಂಟರ್​ಟೇನರ್​ ಸಿನಿಮಾಗಳನ್ನು ಮಾಡುವ ಮೂಲಕ ಚೇತನ್​ ಗುರುತಿಸಿಕೊಂಡಿದ್ದಾರೆ. ಧ್ರುವ ಸರ್ಜಾ ಜೊತೆ ಬಹದ್ದೂರ್​, ಭರ್ಜರಿ ಸಿನಿಮಾಗಳನ್ನು ಮಾಡಿ ಗೆದ್ದ ಚೇತನ್​, ನಂತರ ಶ್ರೀಮುರಳಿ ಜೊತೆ ‘ಭರಾಟೆ’ ಚಿತ್ರ ಮಾಡಿದರು. ಸದ್ಯ ಪುನೀತ್​ ರಾಜ್​ಕುಮಾರ್​ ನಾಯಕತ್ವದ ‘ಜೇಮ್ಸ್​’ ಚಿತ್ರಕ್ಕೆ ನಿರ್ದೇಶನ ಮಾಡುವ ಹೊಣೆಯನ್ನು ಅವರು ಹೊತ್ತುಕೊಂಡಿದ್ದಾರೆ. ಹಲವಾರು ಸಿನಿಮಾಗಳಿಗೆ ಹಾಡು ಬರೆದಿರುವ ಚೇತನ್​ ಓರ್ವ ಯಶಸ್ವಿ ಗೀತರಚನಾಕಾರ ಕೂಡ ಹೌದು.

ಮಾಸ್​ ಕಮರ್ಷಿಯಲ್​ ಅಂಶಗಳನ್ನು ಹೊಂದಿರುವ ಫ್ಯಾಮಿಲಿ ಎಂಟರ್​ಟೇನರ್​ ಸಿನಿಮಾಗಳನ್ನು ಮಾಡುವ ಮೂಲಕ ಚೇತನ್​ ಗುರುತಿಸಿಕೊಂಡಿದ್ದಾರೆ. ಧ್ರುವ ಸರ್ಜಾ ಜೊತೆ ಬಹದ್ದೂರ್​, ಭರ್ಜರಿ ಸಿನಿಮಾಗಳನ್ನು ಮಾಡಿ ಗೆದ್ದ ಚೇತನ್​, ನಂತರ ಶ್ರೀಮುರಳಿ ಜೊತೆ ‘ಭರಾಟೆ’ ಚಿತ್ರ ಮಾಡಿದರು. ಸದ್ಯ ಪುನೀತ್​ ರಾಜ್​ಕುಮಾರ್​ ನಾಯಕತ್ವದ ‘ಜೇಮ್ಸ್​’ ಚಿತ್ರಕ್ಕೆ ನಿರ್ದೇಶನ ಮಾಡುವ ಹೊಣೆಯನ್ನು ಅವರು ಹೊತ್ತುಕೊಂಡಿದ್ದಾರೆ. ಹಲವಾರು ಸಿನಿಮಾಗಳಿಗೆ ಹಾಡು ಬರೆದಿರುವ ಚೇತನ್​ ಓರ್ವ ಯಶಸ್ವಿ ಗೀತರಚನಾಕಾರ ಕೂಡ ಹೌದು.

5 / 6
ಮದುವೆಯಲ್ಲಿ ಪಾಲ್ಗೊಂಡ ಸೆಲೆಬ್ರಿಟಿಗಳು

ಮದುವೆಯಲ್ಲಿ ಪಾಲ್ಗೊಂಡ ಸೆಲೆಬ್ರಿಟಿಗಳು

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ