AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಕಾಶ್ಮೀರ್​ ಫೈಲ್ಸ್​’ಗಿಂತಲೂ ಹೆಚ್ಚು IMDb ರೇಟಿಂಗ್​ ಪಡೆದ ‘ಜೇಮ್ಸ್​’; 10ಕ್ಕೆ 9.9 ನೀಡಿದ ಪ್ರೇಕ್ಷಕರು

James Movie IMDb Rating: ಜಾಗತಿಕವಾಗಿ ಐಎಂಡಿಬಿ ರೇಟಿಂಗ್​ ಅನ್ನು ಸಿನಿಮಾ ವಲಯದವರು ಗಂಭೀರವಾಗಿ ಪರಿಗಣಿಸುತ್ತಾರೆ. ‘ಜೇಮ್ಸ್’ ಸಿನಿಮಾಗೆ 9.9 /10 ರೇಟಿಂಗ್​ ಸಿಕ್ಕಿದೆ.

‘ದಿ ಕಾಶ್ಮೀರ್​ ಫೈಲ್ಸ್​’ಗಿಂತಲೂ ಹೆಚ್ಚು IMDb ರೇಟಿಂಗ್​ ಪಡೆದ ‘ಜೇಮ್ಸ್​’; 10ಕ್ಕೆ 9.9 ನೀಡಿದ ಪ್ರೇಕ್ಷಕರು
ಜೇಮ್ಸ್​, ದಿ ಕಾಶ್ಮೀರ್​ ಫೈಲ್ಸ್ ಐಎಂಡಿಬಿ ರೇಟಿಂಗ್
TV9 Web
| Edited By: |

Updated on: Mar 20, 2022 | 2:19 PM

Share

ಸದ್ಯಕ್ಕೆ ದೇಶಾದ್ಯಂತ ಸದ್ದು ಮಾಡುತ್ತಿರುವ ಸಿನಿಮಾಗಳಲ್ಲಿ ಹಿಂದಿಯ ‘ದಿ ಕಾಶ್ಮೀರ್​ ಫೈಲ್ಸ್​’ ಮತ್ತು ಕನ್ನಡದ ಜೇಮ್ಸ್​ ಚಿತ್ರಗಳ ಹೆಸರು ಮುಂಚೂಣಿಯಲ್ಲಿದೆ. ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಆಧರಿಸಿ ತಯಾರಾದ ‘ದಿ ಕಾಶ್ಮೀರ್​ ಫೈಲ್ಸ್​’ (The Kashmir Files) ಸಿನಿಮಾವನ್ನು ಜನರು ಮುಗಿಬಿದ್ದು ನೋಡುತ್ತಿದ್ದಾರೆ. ಅದೇ ರೀತಿ, ಪುನೀತ್​ ರಾಜ್​ಕುಮಾರ್​ ಹೀರೋ ಆಗಿ ನಟಿಸಿದ ಕೊನೇ ಸಿನಿಮಾ ಎಂಬ ಕಾರಣಕ್ಕೆ ‘ಜೇಮ್ಸ್​’ ಚಿತ್ರ(James Movie) ಕೂಡ ಜನಮನ ಗೆದ್ದಿದೆ. ಮೊದಲ ದಿನವೇ ಈ ಚಿತ್ರಕ್ಕೆ 30 ಕೋಟಿಗೂ ಅಧಿಕ ಕಲೆಕ್ಷನ್​ ಆಗಿದೆ. ಅತ್ತ ‘ದಿ ಕಾಶ್ಮೀರ್​ ಫೈಲ್ಸ್​’ ಕೂಡ ಭರ್ಜರಿ ಕಲೆಕ್ಷನ್​ ಮಾಡುತ್ತಿದೆ. ವಿಶೇಷ ಏನೆಂದರೆ ಐಎಂಡಿಬಿ ರೇಟಿಂಗ್​ನಲ್ಲಿ (IMDb Rating) ಈ ಸಿನಿಮಾಗಳ ನಡುವೆ ಪೈಪೋಟಿ ಇದೆ. ಇದರಲ್ಲಿ ‘ಜೇಮ್ಸ್​’ ಸಿನಿಮಾ 10ಕ್ಕೆ 9.9 ರೇಟಿಂಗ್​ ಪಡೆದುಕೊಂಡಿದೆ. ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾಗೆ 8.3 ರೇಟಿಂಗ್​ ನೀಡಲಾಗಿದೆ. ಆ ಮೂಲಕ ಹಿಂದಿ ಸಿನಿಮಾವನ್ನೂ ಮೀರಿಸಿ, ರೇಟಿಂಗ್ ವಿಚಾರದಲ್ಲಿ ‘ಜೇಮ್ಸ್​’ ಗಮನ ಸೆಳೆಯುತ್ತಿದೆ. ಇದು ಪುನೀತ್​ ರಾಜ್​ಕುಮಾರ್​ ಅಭಿಮಾನಿಗಳಿಗೆ ಖುಷಿ ನೀಡಿದೆ.

ಜಾಗತಿಕವಾಗಿ ಐಎಂಡಿಬಿ ರೇಟಿಂಗ್​ ಅನ್ನು ಸಿನಿಮಾ ವಲಯದವರು ಗಂಭೀರವಾಗಿ ಪರಿಗಣಿಸುತ್ತಾರೆ. ಇಲ್ಲಿ ಹೆಚ್ಚು ರೇಟಿಂಗ್​ ಪಡೆಯುವ ಸಿನಿಮಾಗಳ ಬಗ್ಗೆ ಪ್ರೇಕ್ಷಕರು ಕೂಡ ಆಸಕ್ತಿ ತೋರಿಸುತ್ತಾರೆ. ಜಗತ್ತಿನ ಅನೇಕ ಸಿನಿಮಾಗಳು ಐಎಂಡಿಬಿ ರೇಟಿಂಗ್​ ಸಲುವಾಗಿ ಪೈಪೋಟಿ ನಡೆಸಿದ್ದುಂಟು. ಜನರು ನೀಡುವ ವೋಟಿಂಗ್​ ಆಧಾರದ ಮೇಲೆ ರೇಟಿಂಗ್​ ನಿರ್ಧಾರ ಆಗುತ್ತದೆ. ಒಂದು ವೇಳೆ ಜನರ ವೋಟಿಂಗ್​ನಲ್ಲಿ ಅನುಮಾನ ಕಂಡುಬಂದರೆ ಬೇರೆ ಮಾನದಂಡವನ್ನು ಬಳಸಿ ರೇಟಿಂಗ್​ ನೀಡಲಾಗುತ್ತದೆ.

‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಮಾ.11ರಂದು ತೆರೆಕಂಡಿತು. ಆರಂಭದಲ್ಲಿ ಈ ಚಿತ್ರಕ್ಕೆ ಹೆಚ್ಚು ರೇಟಿಂಗ್​ ನೀಡಲಾಗಿತ್ತು. ಆದರೆ ವೋಟಿಂಗ್​ ಪ್ರತಿಕ್ರಿಯೆಯಲ್ಲಿ ಅನುಮಾನ ವ್ಯಕ್ತವಾಗಿದ್ದರಿಂದ ಬೇರೆ ವ್ಯವಸ್ಥೆಯ ಮೂಲಕ ಈ ಚಿತ್ರಕ್ಕೆ ರೇಟಿಂಗ್​ ನೀಡಲಾಯಿತು. ಆಗ ಸಿಕ್ಕಿದ್ದೇ 8.3 ರೇಟಿಂಗ್​. ಈ ಚಿತ್ರಕ್ಕೆ 5 ಲಕ್ಷಕ್ಕೂ ಅಧಿಕ ಜನರು ವೋಟ್​ ಮಾಡಿದ್ದಾರೆ. ‘ಜೇಮ್ಸ್​’ ಸಿನಿಮಾಗೆ ಸದ್ಯಕ್ಕೆ ಮೂರೂವರೆ ಸಾವಿರ ಜನರು ವೋಟ್​ ಮಾಡಿದ್ದಾರೆ. ವೋಟಿಂಗ್​ ಆಧಾರದ ಮೇಲೆ ಮುಂದಿನ ದಿನಗಳಲ್ಲಿ ರೇಟಿಂಗ್​ನಲ್ಲಿ ವ್ಯತ್ಯಾಸ ಆಗಬಹುದು.

‘ಜೇಮ್ಸ್​’ ಸಿನಿಮಾಗೆ ಚೇತನ್​ ಕುಮಾರ್​ ನಿರ್ದೇಶನ ಮಾಡಿದ್ದಾರೆ. ಕಿಶೋರ್​ ಪತ್ತಿಕೊಂಡು ನಿರ್ಮಾಣ ಮಾಡಿದ್ದಾರೆ. ಪುನೀತ್​ ರಾಜ್​ಕುಮಾರ್​ಗೆ ಜೋಡಿಯಾಗಿ ಪ್ರಿಯಾ ಆನಂದ್​ ನಟಿಸಿದ್ದಾರೆ. ಪುನೀತ್​ ಅಭಿಮಾನಿಗಳು ಈ ಚಿತ್ರವನ್ನು ಒಂದು ಎಮೋಷನ್​ ರೀತಿ ಸ್ವೀಕರಿಸಿದ್ದಾರೆ. ಸಿನಿಮಾದ ಆ್ಯಕ್ಷನ್​ ದೃಶ್ಯಗಳನ್ನು ಜನರು ಇಷ್ಟಪಟ್ಟಿದ್ದಾರೆ. ರಾಘವೇಂದ್ರ ರಾಜ್​, ಶಿವರಾಜ್​ಕುಮಾರ್​, ವಿನಯ್​ ರಾಜ್​ಕುಮಾರ್​ ಸೇರಿದಂತೆ ಡಾ. ರಾಜ್​ಕುಮಾರ್​ ಕುಟುಂಬದ ಅನೇಕರು ಮೊದಲ ದಿನವೇ ಚಿತ್ರವನ್ನು ಕಣ್ತುಂಬಿಕೊಂಡರು.

ಐಎಂಡಿಬಿ ರೇಟಿಂಗ್​ನಲ್ಲಿ ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರಕ್ಕೆ ಹಿನ್ನಡೆ ಆಗಿದ್ದರಿಂದ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರು ಇತ್ತೀಚೆಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಪರ್ಯಾಯ ಮಾರ್ಗದ ಮೂಲಕ ತಮ್ಮ ಸಿನಿಮಾಗೆ 8.3 ರೇಟಿಂಗ್​ ನೀಡಿರುವುದು ಸಹಜವಲ್ಲ ಮತ್ತು ನೈತಿಕವಾಗಿಲ್ಲ ಎಂದು ಅವರು ಹೇಳಿದ್ದರು. ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾಗೆ ರೇಟಿಂಗ್​ ನೀಡಲು ಐಎಂಡಿಬಿ ಬಳಸಿದ ಪರ್ಯಾಯ ಮಾರ್ಗ ಯಾವುದು ಎಂಬುದನ್ನು ಬಹಿರಂಗ ಪಡಿಸಿಲ್ಲ. ಈ ವಿಚಾರದ ಬಗ್ಗೆ ಪರ-ವಿರೋಧದ ಬಗ್ಗೆ ಚರ್ಚೆ ನಡೆಯುತ್ತಿದೆ. ರೇಟಿಂಗ್​ ವಿಷಯ ಏನೇ ಇರಲಿ, ಗಲ್ಲಾಪೆಟ್ಟಿಗೆ ವಿಚಾರದಲ್ಲಿ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ದೊಡ್ಡ ಸಾಧನೆ ಮಾಡಿದೆ. ಚಿತ್ರ ಬಿಡುಗಡೆಯಾಗಿ 9 ದಿನ ಕಳೆದಿದ್ದು, 141 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ. ಶೀಘ್ರದಲ್ಲೇ ಈ ಸಿನಿಮಾ 200 ಕೋಟಿ ರೂಪಾಯಿ ಗಳಿಸುವ ಸಾಧ್ಯತೆ ದಟ್ಟವಾಗಿದೆ.

ಇದನ್ನೂ ಓದಿ:

The Kashmir Files Review: ಕಾಶ್ಮೀರದ ಭಯಾನಕ ಇತಿಹಾಸ ಮರೆಯಬಾರದು; ಮರುಕಳಿಸಲೂಬಾರದು

‘ದಿ ಕಾಶ್ಮೀರ್​ ಫೈಲ್ಸ್​’ 200 ಕೋಟಿ ರೂ. ಗಳಿಸೋದು ಖಚಿತ; ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರದ್ದೇ ಆರ್ಭಟ

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!