AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈ ಥರ ಪ್ರಚಾರ ಯಾವ ಕಲಾವಿದರ ಜೀವನದಲ್ಲೂ ಬರಬಾರದು’: ‘ಜೇಮ್ಸ್​’ ಬಗ್ಗೆ ಚಿಕ್ಕಣ್ಣ ನೋವಿನ ನುಡಿ

‘ಜೇಮ್ಸ್​’ ಚಿತ್ರದಲ್ಲಿ ಚಿಕ್ಕಣ್ಣ ಅವರು ಪುನೀತ್​ ರಾಜ್​ಕುಮಾರ್​ ಜೊತೆ ನಟಿಸಿದ್ದಾರೆ. ಈ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಅವರು ತಮ್ಮ ಭಾವುಕ ಮಾತುಗಳನ್ನು ಹಂಚಿಕೊಂಡರು.

‘ಈ ಥರ ಪ್ರಚಾರ ಯಾವ ಕಲಾವಿದರ ಜೀವನದಲ್ಲೂ ಬರಬಾರದು’: ‘ಜೇಮ್ಸ್​’ ಬಗ್ಗೆ ಚಿಕ್ಕಣ್ಣ ನೋವಿನ ನುಡಿ
ಚಿಕ್ಕಣ್ಣ, ಪುನೀತ್ ರಾಜ್​ಕುಮಾರ್​
TV9 Web
| Edited By: |

Updated on:Mar 07, 2022 | 8:35 AM

Share

ಪುನೀತ್​ ರಾಜ್​ಕುಮಾರ್​ (Puneeth Rajkumar) ಜೊತೆ ತೆರೆಹಂಚಿಕೊಳ್ಳುವ ಅವಕಾಶ ಪಡೆದ ಅದೃಷ್ಟವಂತರಲ್ಲಿ ಚಿಕ್ಕಣ್ಣ ಕೂಡ ಒಬ್ಬರು. ಇನ್ನೇನು ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿರುವ ‘ಜೇಮ್ಸ್​’ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​ ಅವರ ಸ್ನೇಹಿತನ ಪಾತ್ರವನ್ನು ಚಿಕ್ಕಣ್ಣ ಮಾಡಿದ್ದಾರೆ. ‘ರಾಜಕುಮಾರ’, ‘ನಟಸಾರ್ವಭೌಮ’, ‘ದೊಡ್ಮನೆ ಹುಡುಗ’ ಸಿನಿಮಾದಲ್ಲೂ ಅವರು ಅಪ್ಪು ಜೊತೆ ನಟಿಸಿದ್ದರು. ಈಗ ‘ಜೇಮ್ಸ್​’ (James Movie) ಚಿತ್ರದ ಪ್ರಚಾರ ಕಾರ್ಯದಲ್ಲಿ ಚಿಕ್ಕಣ್ಣ ಭಾಗವಹಿಸಿದ್ದಾರೆ. ಆದರೆ ಪುನೀತ್​ ರಾಜ್​ಕುಮಾರ್ ಇಲ್ಲ ಎಂಬ ನೋವು ಅವರನ್ನು ಬಹುವಾಗಿ ಕಾಡುತ್ತಿದೆ. ಅಪ್ಪು ಇಲ್ಲದೇ ‘ಜೇಮ್ಸ್​’ ಸಿನಿಮಾದ ಪ್ರಚಾರ ಮಾಡುತ್ತಿರುವುದು ಅವರ ಪಾಲಿಗೆ ತುಂಬ ನೋವಿನ ಸಂಗತಿ. ಭಾನುವಾರ (ಮಾ.6) ಈ ಚಿತ್ರದ ಸುದ್ದಿಗೋಷ್ಠಿ ನಡೆಯಿತು. ಈ ವೇಳೆ ಚಿಕ್ಕಣ್ಣ (Chikkanna) ಭಾವುಕರಾಗಿ ಮಾತನಾಡಿದರು. ಪುನೀತ್​ ರಾಜ್​ಕುಮಾರ್​ ಜೊತೆಗಿನ ಒಡನಾಟವನ್ನು ನೆನಪಿಸಿಕೊಂಡರು. ‘ಈ ಥರ ಪ್ರಚಾರ ಯಾವ ಕಲಾವಿದರ ಜೀವನದಲ್ಲೂ ಬರಬಾರದು’ ಎಂದು ಚಿಕ್ಕಣ್ಣ ನೊಂದುಕೊಂಡರು. ಈ ಸುದ್ದಿಗೋಷ್ಠಿಯಲ್ಲಿ ನಟ ಶಿವರಾಜ್​ಕುಮಾರ್​, ನಿರ್ದೇಶಕ ಚೇತನ್​ ಕುಮಾರ್​, ನಿರ್ಮಾಪಕ ಕಿಶೋರ್​ ಪತ್ತಿಕೊಂಡ, ಸಂಗೀತ ನಿರ್ದೇಶಕ ಚರಣ್​ ರಾಜ್​ ಮುಂತಾದವರು ಭಾಗವಹಿಸಿದ್ದರು.

‘ಜೇಮ್ಸ್​’ ಚಿತ್ರದಲ್ಲಿ ಚಿಕ್ಕಣ್ಣ, ಗಜಪಡೆ ಹರ್ಷ, ತಿಲಕ್​ ಶೇಖರ್​ ಅವರು ಹೀರೋ ಫ್ರೆಂಡ್ಸ್​ ಪಾತ್ರ ಮಾಡಿದ್ದಾರೆ. ಈ ಮೂವರು ಒಟ್ಟಿಗೆ ವೇದಿಕೆಗೆ ಬಂದು ತಮ್ಮ ಮಾತುಗಳನ್ನು ಹಂಚಿಕೊಂಡರು. ‘ಏನು ಮಾತನಾಡಬೇಕೋ ತಿಳಿಯುತ್ತಿಲ್ಲ. ಈ ಥರ ಪ್ರಚಾರ ಯಾವ ಕಲಾವಿದರ ಜೀವನದಲ್ಲೂ ಬರಬಾರದು. ಪುನೀತ್​ ಅವರ ಕೊನೇ ಸಿನಿಮಾದಲ್ಲಿ ನಾವು ಇದ್ದೇವೆ ಅನ್ನೋದನ್ನು ಅದೃಷ್ಟ ಅಂದುಕೊಳ್ಳುತ್ತೇವೆ. ಈ ಸಿನಿಮಾದಿಂದ ನಮ್ಮ ಚಿತ್ರರಂಗದಲ್ಲಿ ಇತಿಹಾಸ ಸೃಷ್ಟಿ ಆಗಲಿದೆ. ಈ ಮಾತನ್ನು ನಾನೊಬ್ಬನೇ ಹೇಳುತ್ತಿಲ್ಲ. ಅಪ್ಪು ಸರ್​ ಅಭಿಮಾನಿಗಳು ಮತ್ತು ಅಭಿಮಾನಿಗಳಲ್ಲದವರು ಕೂಡ ಇದನ್ನೇ ಹೇಳುತ್ತಿದ್ದಾರೆ. ದೇವರು ಈ ಚಿತ್ರಕ್ಕೆ ಒಳ್ಳೆಯದು ಮಾಡಲಿ’ ಎಂದು ಚಿಕ್ಕಣ್ಣ ಹೇಳಿದರು.

ಚಿಕ್ಕಣ್ಣನ ಬಗ್ಗೆ ಶಿವರಾಜ್​ಕುಮಾರ್​ ಅವರಿಗೆ ಪ್ರೀತಿ ಇದೆ. ಪುನೀತ್​ ರೀತಿ ಚಿಕ್ಕಣ್ಣ ಅವರನ್ನು ಕೂಡ ಓರ್ವ ಸಹೋದರನ ರೀತಿಯಲ್ಲಿ ಶಿವಣ್ಣ ನೋಡುತ್ತಾರೆ. ಆ ಕುರಿತು ವೇದಿಕೆಯಲ್ಲಿ ಶಿವರಾಜ್​ಕುಮಾರ್​ ಮಾತನಾಡಿದರು. ‘ಚಿಕ್ಕಣ್ಣನನ್ನು ನೋಡಿದಾಗೆಲ್ಲ ತುಂಬ ನೋವಾಗುತ್ತದೆ. ನನಗೆ ಅಪ್ಪು ಒಬ್ಬ ತಮ್ಮನಾದರೆ ಚಿಕ್ಕಣ್ಣ ಇನ್ನೊಬ್ಬ ತಮ್ಮನ ರೀತಿ ಕಾಣ್ತಾರೆ. ಪುನೀತ್ ಜೊತೆ ತುಂಬ ಹತ್ತಿರವಾಗಿದ್ದವರು. ‘ರಾಜಕುಮಾರ’ ಸಿನಿಮಾದಲ್ಲಿ ಅವರು ಜೊತೆಯಾಗಿ ನಟಿಸಿದ್ದರು. ಅದನ್ನೆಲ್ಲ ನೋಡಿದರೆ ಇನ್ನೂ ದುಃಖ ಆಗುತ್ತದೆ’ ಎಂದು ಶಿವಣ್ಣ ಹೇಳಿದರು.

ಮಾ.17ರಂದು ಪುನೀತ್​ ರಾಜ್​ಕಮಾರ್​ ಜನ್ಮದಿನ. ಆ ಪ್ರಯುಕ್ತ ‘ಜೇಮ್ಸ್​’ ಸಿನಿಮಾ ಅದ್ದೂರಿಯಾಗಿ ಬಿಡುಗಡೆ ಆಗಲಿದೆ. ಈಗಾಗಲೇ ರಿಲೀಸ್​ ಆಗಿರುವ ಟೀಸರ್​ ಮತ್ತು ಟ್ರೇಡ್​ಮಾರ್ಕ್​ ಹಾಡು ಸೂಪರ್​ ಹಿಟ್​ ಆಗಿದೆ. ಆ ಮೂಲಕ ಸಿನಿಮಾ ಮೇಲಿನ ಕ್ರೇಜ್​ ಹೆಚ್ಚಿದೆ. ಈಗಾಗಲೇ ಎಲ್ಲ ಚಿತ್ರಮಂದಿರಗಳ ಎದುರಿನಲ್ಲಿ ಕಟೌಟ್​ ನಿಲ್ಲಿಸಲು ಭರದ ಸಿದ್ಧತೆ ನಡೆದಿದೆ. ‘ಜೇಮ್ಸ್​’ ಚಿತ್ರವನ್ನು ಭರ್ಜರಿಯಾಗಿ ಸ್ವಾಗತಿಸಲು ಫ್ಯಾನ್ಸ್​ ಕಾಯುತ್ತಿದ್ದಾರೆ.

ಈ ಸಿನಿಮಾದಲ್ಲಿ ಪುನೀತ್​ ಪಾತ್ರಕ್ಕೆ ಶಿವಣ್ಣ ಧ್ವನಿ ನೀಡಿದ್ದಾರೆ. ‘ಅಪ್ಪು ವಾಯ್ಸ್​ಗೆ ನಾನೇ ಡಬ್ಬಿಂಗ್​ ಮಾಡಬೇಕು ಎಂದಾಗ ಅವನದ್ದೇ ವಾಯ್ಸ್​ ಬಳಕೆ ಮಾಡೋಕೆ ಆಗತ್ತ ನೋಡಿ ಅಂತ ನಾನು ಹೇಳಿದ್ದೆ. ಮಿಮಿಕ್ರಿ ಮಾಡುವವರ ಬಳಿ ಡಬ್​ ಮಾಡಿಸೋಕೆ ಟ್ರೈ ಮಾಡಿ ಎಂದಿದ್ದೆ. ಚೇತನ್​ ಅವರು ಪ್ರಯತ್ನ ಮಾಡಿದರು. ಆದರೆ, ಸರಿಯಾಗಿ ಬರಲಿಲ್ಲ. ನಾನು ತುಂಬಾನೇ ಹೆದರಿಕೊಂಡು ಮಾಡಿದೆ. ಅಪ್ಪುದು ಅದ್ಭುತ ವಾಯ್ಸ್​ ಆಗಿತ್ತು. ಸ್ವಲ್ಪ ಟ್ರೈ ಮಾಡಿದ್ದೇನೆ. ಅಪ್ಪು ಪಾತ್ರಕ್ಕೆ ಎರಡು ದಿನ ಡಬ್ ಮಾಡಿದ್ದೇನೆ’ ಎಂದರು ಶಿವಣ್ಣ.

ಇದನ್ನೂ ಓದಿ:

‘ಪುನೀತ್​ ಪಾತ್ರಕ್ಕೆ ಡಬ್​ ಮಾಡುವಾಗ ಭಯವಾಯ್ತು’; ‘ಜೇಮ್ಸ್​’ ಕಾರ್ಯಕ್ರಮದಲ್ಲಿ ಶಿವಣ್ಣ ಭಾವುಕ ನುಡಿ

ಪುನೀತ್​ ಮೇಲಿನ ಅಭಿಮಾನಕ್ಕೆ ಮೂರ್ತಿ ಪ್ರತಿಷ್ಠಾಪಿಸಿ ಸಂಭ್ರಮಿಸಿದ ಫ್ಯಾನ್ಸ್​; ಇಲ್ಲಿದೆ ವಿಡಿಯೋ

Published On - 8:06 am, Mon, 7 March 22

ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?