AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಖಲೆಯ ವೀಕ್ಷಣೆ ಕಾಣುತ್ತಿದೆ ‘ಜೇಮ್ಸ್​’ ಟೀಸರ್​; ನಂಬರ್ 1 ಟ್ರೆಂಡಿಂಗ್​ನಲ್ಲಿ ಅಪ್ಪು ಸಿನಿಮಾ

ಇಂದು (ಫೆಬ್ರವರಿ 11) ಬೆಳಗ್ಗೆ 11 ಗಂಟೆ 11 ನಿಮಿಷಕ್ಕೆ ‘ಜೇಮ್ಸ್​’ ಚಿತ್ರದ ಟೀಸರ್​ ರಿಲೀಸ್​ ಆಯಿತು. ‘ಪಿಆರ್​ಕೆ ಆಡಿಯೋ’ದಲ್ಲಿ ಚಿತ್ರದ ಟೀಸರ್​ ರಿಲೀಸ್​ ಆಗಿದ್ದು, ಅಭಿಮಾನಿಗಳು ಪುನೀತ್​ ಅವರನ್ನು ಕಣ್ತುಂಬಿಕೊಳ್ಳೋಕೆ ಮುಗಿಬೀಳುತ್ತಿದ್ದಾರೆ.

ದಾಖಲೆಯ ವೀಕ್ಷಣೆ ಕಾಣುತ್ತಿದೆ ‘ಜೇಮ್ಸ್​’ ಟೀಸರ್​; ನಂಬರ್ 1 ಟ್ರೆಂಡಿಂಗ್​ನಲ್ಲಿ ಅಪ್ಪು ಸಿನಿಮಾ
ಪುನೀತ್
TV9 Web
| Edited By: |

Updated on:Feb 11, 2022 | 7:30 PM

Share

ಪುನೀತ್​ ರಾಜ್​ಕುಮಾರ್ (Puneeth Rajkumar) ಇಲ್ಲ ಎಂಬ ನೋವಿನಲ್ಲೇ ‘ಜೇಮ್ಸ್​’ ಚಿತ್ರದ ಟೀಸರ್​ಅನ್ನು ಅಭಿಮಾನಿಗಳು ಕಣ್ತುಂಬಿಕೊಳ್ಳುತ್ತಿದ್ದಾರೆ. ಪ್ರತಿ ದೃಶ್ಯಗಳಲ್ಲೂ ಅವರನ್ನು ನೆನಪುಮಾಡಿಕೊಳ್ಳಲಾಗುತ್ತಿದೆ. ಸೋಶಿಯಲ್​ ಮೀಡಿಯಾದಲ್ಲಿ ‘ಜೇಮ್ಸ್​’ ಟೀಸರ್​ನ (James Teaser) ಸ್ಕ್ರೀನ್​ಶಾಟ್​ಗಳನ್ನು ಹಂಚಿಕೊಳ್ಳಲಾಗುತ್ತಿದೆ. ಈ ಚಿತ್ರದ ಟೀಸರ್​ಅನ್ನು ನೋಡೋಕೆ ಅಭಿಮಾನಿಗಳು ಮುಗಿಬೀಳುತ್ತಿದ್ದಾರೆ. ಹೀಗಾಗಿ, ಟೀಸರ್​ 7 ಗಂಟೆಗಳಲ್ಲಿ 40 ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡಿದೆ. ಪರಭಾಷೆಗಳಲ್ಲೂ ಟೀಸರ್ ರಿಲೀಸ್​ ಆಗಿದ್ದು ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಭಿಮಾನಿಗಳು ಈ ಟೀಸರ್​ಅನ್ನು ನೋಡಿ ನಿಜಕ್ಕೂ ಸಂಭ್ರಮಿಸುತ್ತಿದ್ದಾರೆ. ಹೀಗಾಗಿ, ಯೂಟ್ಯೂಬ್​ನಲ್ಲಿ (YouTube)  ಈ ಟೀಸರ್​ ಟ್ರೆಂಡಿಂಗ್​ನಲ್ಲಿ ನಂಬರ್​ 1 ಇದೆ.

ಇಂದು (ಫೆಬ್ರವರಿ 11) ಬೆಳಗ್ಗೆ 11 ಗಂಟೆ 11 ನಿಮಿಷಕ್ಕೆ ‘ಜೇಮ್ಸ್​’ ಚಿತ್ರದ ಟೀಸರ್​ ರಿಲೀಸ್​ ಆಯಿತು. ‘ಪಿಆರ್​ಕೆ ಆಡಿಯೋ’ದಲ್ಲಿ ಚಿತ್ರದ ಟೀಸರ್​ ರಿಲೀಸ್​ ಆಗಿದ್ದು, ಅಭಿಮಾನಿಗಳು ಪುನೀತ್​ ಅವರನ್ನು ಕಣ್ತುಂಬಿಕೊಳ್ಳೋಕೆ ಮುಗಿಬೀಳುತ್ತಿದ್ದಾರೆ. ಈ ಮೊದಲು ಸಿನಿಮಾದ ಹಲವು ಪೋಸ್ಟರ್​ಗಳು ರಿಲೀಸ್​ ಆಗಿ ಧೂಳೆಬ್ಬಿಸಿದೆ. ಆದರೆ, ಚಿತ್ರತಂಡದ ಕಡೆಯಿಂದ ಯಾವುದೇ ಟೀಸರ್​ ರಿಲೀಸ್​ ಆಗಿರಲಿಲ್ಲ. ಇಂದು ಟೀಸರ್​ ರಿಲೀಸ್​ ಮಾಡಿರುವ ಚಿತ್ರತಂಡ, ಅಭಿಮಾನಿಗಳಿಗೆ ಖುಷಿ ನೀಡಿದೆ.

ಸಂಜೆ 6 ಗಂಟೆ ಸುಮಾರಿಗೆ ಈ ಟೀಸರ್​ 4 ಮಿಲಿಯನ್​ ವೀಕ್ಷಣೆ ಕಂಡಿದೆ. ಸುಮಾರು 58 ಸಾವಿರಕ್ಕೂ ಅಧಿಕ ಕಮೆಂಟ್​ಗಳು ಈ ಟೀಸರ್​ಗೆ ಬಂದಿವೆ. 4.35 ಲಕ್ಷ ಲೈಕ್ಸ್​ ಗಿಟ್ಟಿಸಿಕೊಂಡಿದೆ. ‘ಜೇಮ್ಸ್ ಟೀಸರ್ ಇತಿಹಾಸ ಸೃಷ್ಟಿಸಬೇಕು’ ಎಂದು ಕೆಲವರು ಬರೆದುಕೊಂಡಿದ್ದಾರೆ. ‘ಒಂದಾನೊಂದು ಊರಲ್ಲಿ ಒಬ್ಬ ರಾಜನಿದ್ದ , ಯುದ್ಧವಿಲ್ಲದೆ ರಾಜ್ಯವನ್ನು ಗೆದ್ದಿದ್ದ’ ಎಂದು ಕೆಲವರು ಕಮೆಂಟ್​ ಮಾಡಿದ್ದಾರೆ.

ಪುನೀತ್ ‘ಜೇಮ್ಸ್​’ ಸಿನಿಮಾದ ಡಬ್ಬಿಂಗ್​ ಕೆಲಸ ಮಾಡಿರಲಿಲ್ಲ. ಹೀಗಾಗಿ, ಈ ಕೆಲಸವನ್ನು ಅವರ ಸಹೋದರ ಶಿವರಾಜ್​ಕುಮಾರ್ ಮಾಡಿದ್ದಾರೆ. ‘ನನಗೆ ರೆಕಾರ್ಡ್​ ಬ್ರೇಕ್​ ಮಾಡಿಯೇ’ ಅಭ್ಯಾಸ ಎನ್ನುವ ಡೈಲಾಗ್​ ಪ್ರೇಕ್ಷಕರಿಗೆ ಖುಷಿ ನೀಡಿದೆ. ಇಂತಹ ಹಲವು ಡೈಲಾಗ್​ಗಳು ಸಿನಿಮಾದಲ್ಲಿದೆ ಎನ್ನಲಾಗಿದೆ. ಈ ಡೈಲಾಗ್​ಗಳಿಗೆ ಚಿತ್ರಮಂದಿರಗಳಲ್ಲಿ ಸಿಳ್ಳೆ ಬೀಳೋದು ಪಕ್ಕಾ. ಟೀಸರ್​ನಲ್ಲಿ ಚಿತ್ರದ ರಿಲೀಸ್​ ದಿನಾಂಕವನ್ನೂ ಉಲ್ಲೇಖ ಮಾಡಲಾಗಿದೆ. ಮಾರ್ಚ್​ 17ರಂದು ಈ ಸಿನಿಮಾ ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ.

ಟೀಸರ್​ ನೋಡಿ ಪುನೀತ್​ ರಾಜ್​ಕುಮಾರ್​ ಅಭಿಮಾನಿಗಳು  ಫಿದಾ ಆಗಿದ್ದಾರೆ. ಎಲ್ಲರಿಂದಲೂ ಪಾಸಿಟಿವ್​ ಪ್ರತಿಕ್ರಿಯೆ ಸಿಗುತ್ತಿದೆ. ಈ ಮೂಲಕ ‘ಜೇಮ್ಸ್​’ ಸಿನಿಮಾ ಮೇಲಿದ್ದ ನಿರೀಕ್ಷೆ ದುಪ್ಪಟ್ಟಾಗಿದೆ. ‘ಪರಭಾಷೆಯ ಯಾವ ಚಿತ್ರಕ್ಕೂ ಜೇಮ್ಸ್​ ಸಿನಿಮಾ ಟೀಸರ್​ ಕಮ್ಮಿ ಇಲ್ಲ. ಅಪ್ಪು ಅವರು ತುಂಬ ಯಂಗ್​ ಆಗಿ ಕಾಣಿಸುತ್ತಿದ್ದಾರೆ. ಈ ರೀತಿ ಕ್ವಾಲಿಟಿ ಸಿನಿಮಾ ನೀಡಿದರೆ ನಾವು ಹಿಂದೆಂದಿಗಿಂತಲೂ ಭರ್ಜರಿಯಾಗಿ ಸೆಲೆಬ್ರೇಟ್​ ಮಾಡುತ್ತೇವೆ’ ಎಂದು ಅಭಿಮಾನಿಗಳು ಹಾಡಿ ಹೊಗಳಿದ್ದಾರೆ. ‘ಪುನೀತ್​ ರಾಜ್​ಕುಮಾರ್​ ಅವರು ನಮಗೆ ಸ್ಫೂರ್ತಿ. ಜೇಮ್ಸ್​ ಎಷ್ಟು ದಿನ ಪ್ರದರ್ಶನ ಕಾಣಲಿದೆಯೋ ಅಷ್ಟು ದಿನಗಳ ಕಾಲ ಚಿತ್ರಮಂದಿರದ ಎದುರು ಅನ್ನದಾನ, ನೇತ್ರದಾನ ಮುಂತಾದ ಕಾರ್ಯಕ್ರಮ ಹಮ್ಮಿಕೊಳ್ಳುತ್ತೇವೆ’ ಎಂದಿದ್ದಾರೆ ಅಪ್ಪು ಫ್ಯಾನ್ಸ್​.

ಇದನ್ನೂ ಓದಿ: ‘ಜೇಮ್ಸ್​ ಚಿತ್ರವನ್ನು ನಾನು ಪ್ರಚಾರ ಮಾಡಿದ್ರೆ ತುಂಬಾ ಚೀಪ್​ ಆಗತ್ತೆ, ಅದನ್ನು ಅಭಿಮಾನಿಗಳು ನೋಡಿಕೊಳ್ತಾರೆ’ ಪಾಟರಿಟೌನ್ ಮೆಟ್ರೊ ನಿಲ್ದಾಣಕ್ಕೆ ಪುನೀತ್ ರಾಜ್​ಕುಮಾರ್ ಹೆಸರು ಇರಿಸಲು ಮನವಿ: ಪ್ರಧಾನಿ ಕಚೇರಿ ಸ್ಪಂದನೆ

Published On - 7:06 pm, Fri, 11 February 22

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ