AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ಫ್ಯಾನ್ಸ್​ ಕುತ್ತಿಗೆ ಮೇಲೆ ‘ಜೇಮ್ಸ್​’ ಟ್ಯಾಟೂ; ವೈರಲ್​ ಆಗ್ತಿದೆ ಅಭಿಮಾನದ ಫೋಟೋ

James movie tattoo: ಅಭಿಮಾನಿಗಳ ಪಾಲಿಗೆ ‘ಜೇಮ್ಸ್​’ ಎಂದರೆ ಬರೀ ಸಿನಿಮಾ ಆಗಿ ಉಳಿದಿಲ್ಲ. ಬದಲಿಗೆ ಒಂದು ಎಮೋಷನ್​ ಆಗಿ ಬದಲಾಗಿದೆ. ಅದಕ್ಕೆ ಈ ಟ್ಯಾಟೂ ಫೋಟೋ ಸೂಕ್ತ ಸಾಕ್ಷಿ ಎನ್ನಬಹುದು.

ಪುನೀತ್​ ಫ್ಯಾನ್ಸ್​ ಕುತ್ತಿಗೆ ಮೇಲೆ ‘ಜೇಮ್ಸ್​’ ಟ್ಯಾಟೂ; ವೈರಲ್​ ಆಗ್ತಿದೆ ಅಭಿಮಾನದ ಫೋಟೋ
‘ಜೇಮ್ಸ್’ ಶೀರ್ಷಿಕೆಯ ಟ್ಯಾಟೂ
TV9 Web
| Edited By: |

Updated on: Mar 10, 2022 | 7:59 AM

Share

ನಟ ಪುನೀತ್​ ರಾಜ್​ಕುಮಾರ್​ ( Puneeth Rajkumar) ಅವರನ್ನು ಎಲ್ಲರೂ ಮಿಸ್​ ಮಾಡಿಕೊಳ್ಳುತ್ತಿದ್ದಾರೆ. ಅಪ್ಪು ಇಲ್ಲ ಎಂಬುದನ್ನು ಒಪ್ಪಿಕೊಳ್ಳಲು ಅಭಿಮಾನಿಗಳಿಗೆ ಇಂದಿಗೂ ಕಷ್ಟ ಆಗುತ್ತಿದೆ. ಪುನೀತ್​ ರಾಜ್​ಕುಮಾರ್​ ಅವರು ಹೀರೋ ಆಗಿ ನಟಿಸಿದ ಕೊನೇ ಸಿನಿಮಾ ‘ಜೇಮ್ಸ್​’ (James Movie) ಬಗ್ಗೆ ಸಿನಿಪ್ರಿಯರಿಗೆ ಸಖತ್​ ನಿರೀಕ್ಷೆ ಇದೆ. ಮಾ.17ರಂದು ಪುನೀತ್​ ಜನ್ಮದಿನ. ಆ ವಿಶೇಷ ದಿನದಂದೇ ‘ಜೇಮ್ಸ್​’ ರಿಲೀಸ್​ ಆಗುತ್ತಿದೆ. ಈ ಸಿನಿಮಾವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲು ಪುನೀತ್​ ರಾಜ್​ಕುಮಾರ್​ ಅಭಿಮಾನಿಗಳು (Puneeth Rajkumar Fans) ರಾಜ್ಯಾದ್ಯಂತ ಭರದ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಹಲವು ಬಗೆಯಲ್ಲಿ ಜನರು ಅಭಿಮಾನ ಪ್ರದರ್ಶಿಸುತ್ತಿದ್ದಾರೆ. ‘ಪವರ್​ ಸ್ಟಾರ್​’ ಅವರ ಕೊನೇ ಸಿನಿಮಾಗೆ ಭರ್ಜರಿ ಓಪನಿಂಗ್ ಸಿಗಲಿದೆ. ಅಭಿಮಾನಿಗಳಲ್ಲಿ ಯಾವ ಪರಿ ಕ್ರೇಜ್​ ಸೃಷ್ಟಿ ಆಗಿದೆ ಎಂಬುದಕ್ಕೆ ಸಾಕ್ಷಿಯಾಗಿ ಹಲವು ಘಟನೆಗಳು ನಡೆಯುತ್ತಿವೆ. ರಿಲೀಸ್​ ಆಗುವುದಕ್ಕಿಂತ ಹತ್ತಾರು ದಿನಗಳಿಗೂ ಮುನ್ನವೇ ಚಿತ್ರಮಂದಿರಗಳ ಮುಂಭಾಗದಲ್ಲಿ ಪುನೀತ್​ ರಾಜ್​ಕುಮಾರ್​ ಅವರ ಕಟೌಟ್​ಗಳು ರಾರಾಜಿಸುತ್ತಿವೆ. ಅದರ ಜೊತೆಗೆ ‘ಜೇಮ್ಸ್​’ ಶೀರ್ಷಿಕೆಯ ಟ್ಯಾಟೂ ಫೋಟೋಗಳು ಕೂಡ ವೈರಲ್​ ಆಗಿವೆ. ಕೆಲವು ಅಭಿಮಾನಿಗಳು ಮೈಮೇಲೆ ‘ಜೇಮ್ಸ್​’ ಎಂದು ಹಚ್ಚೆ ಹಾಕಿಸಿಕೊಂಡಿದ್ದಾರೆ. ಆ ಮೂಲಕ ಅಪ್ಪು ಮೇಲೆ ತಮಗೆ ಇರುವ ಅಭಿಮಾನ ಎಂಥದ್ದು ಎಂಬುದನ್ನು ತೋರಿಸುತ್ತಿದ್ದಾರೆ.

ಅಭಿಮಾನಿಯೊಬ್ಬರು ಕುತ್ತಿಗೆಯ ಮೇಲೆ ‘ಜೇಮ್ಸ್​’ ಶೀರ್ಷಿಕೆಯನ್ನು ಇಂಗ್ಲಿಷ್​ ಅಕ್ಷರದಲ್ಲಿ ಟ್ಯಾಟೂ ಹಾಕಿಸಿಕೊಂಡಿದ್ದಾರೆ. ಸದ್ಯ ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿವೆ. ಆ ಪರಿಯಾಗಿ ಅಭಿಮಾನಿಗಳಲ್ಲಿ ಈ ಸಿನಿಮಾ ಕ್ರೇಜ್​ ಸೃಷ್ಟಿ ಮಾಡಿದೆ. ಪುನೀತ್​ ರಾಜ್​ಕುಮಾರ್​ ಅವರನ್ನು ದೊಡ್ಡ ಪರದೆ ಮೇಲೆ ಹೀರೋ ಆಗಿ ಕಾಣಲು ‘ಜೇಮ್ಸ್​’ ಮೂಲಕ ಕೊನೇ ಅವಕಾಶ ಸಿಗುತ್ತಿದೆ. ಹಾಗಾಗಿ ಅಭಿಮಾನಿಗಳ ಪಾಲಿಗೆ ಇದು ಬರೀ ಸಿನಿಮಾ ಆಗಿ ಉಳಿದಿಲ್ಲ. ಬದಲಿಗೆ ಒಂದು ಎಮೋಷನ್​ ಆಗಿ ಬದಲಾಗಿದೆ. ಅದಕ್ಕೆ ಈ ಟ್ಯಾಟೂ ಫೋಟೋ ಸೂಕ್ತ ಸಾಕ್ಷಿ ಎನ್ನಬಹುದು.

ಈಗಾಗಲೇ ಎಲ್ಲ ಚಿತ್ರಮಂದಿರಗಳ ಎದುರಿನಲ್ಲಿ ಪುನೀತ್​ ರಾಜ್​ಕುಮಾರ್​ ಅವರ ಕಟೌಟ್​ ನಿಲ್ಲಿಸಲಾಗಿದೆ. ಬಿಡುಗಡೆಯ ದಿನ ಕಟೌಟ್​ಗೆ ಹಾರ ಹಾಕಿ, ದೀಪ ಬೆಳಗಿ, ಹಾಲಿನ ಅಭಿಷೇಕ ಮಾಡಿ, ಜೈಕಾರ ಹಾಕುವುದು ಸಹಜ. ಆದರೆ ‘ಜೇಮ್ಸ್​’ ಚಿತ್ರದ ವಿಚಾರದಲ್ಲಿ ಇದು ಬೇರೆ ರೀತಿ ಆಗಿದೆ. ಚಿತ್ರದ ಬಿಡುಗಡೆ ಆಗುವುದಕ್ಕಿಂತ ಹಲವು ದಿನಗಳ ಮುನ್ನವೇ ಈ ಪರಿ ಸೆಲೆಬ್ರೇಷನ್​ ಶುರುವಾಗಿದೆ. ಅಪ್ಪು ಕಟೌಟ್​ಗೆ ಅಭಿಮಾನಿಗಳು ಅಭಿಷೇಕ ಮಾಡುತ್ತಿರುವ ಹಲವು ವಿಡಿಯೋಗಳು ಈಗಾಗಲೇ ವೈರಲ್​ ಆಗಿವೆ.

ವೀರೇಶ್​ ಚಿತ್ರಮಂದಿರದಲ್ಲಿ ಪುನೀತ್​ಗೆ 30 ಕಟೌಟ್:

ಈಗಾಗಲೇ ಬೆಂಗಳೂರಿನ ಹಲವು ಚಿತ್ರಮಂದಿರಗಳಲ್ಲಿ ಕಟೌಟ್​ ತಲೆ ಎತ್ತಿದೆ. ಮಾಗಡಿ ರಸ್ತೆಯಲ್ಲಿ ಇರುವ ವೀರೇಶ್​ ಥಿಯೇಟರ್​ ಮುಂಭಾಗ ಬರೋಬ್ಬರಿ 30 ಕಟೌಟ್​ ನಿಲ್ಲಿಸಲು ಪುನೀತ್​ ಅಭಿಮಾನಿಗಳು ಪ್ಲ್ಯಾನ್​ ಮಾಡಿದ್ದಾರೆ. ಅದಕ್ಕೆ ಕಾರಣ ಕೂಡ ಇದೆ. ‘ಇದು ಪುನೀತ್​ ಅಭಿನಯದ 30ನೇ ಸಿನಿಮಾ. ಹಾಗಾಗಿ ಈ ಬಾರಿ ವೀರೇಶ್​ ಚಿತ್ರಮಂದಿರದಲ್ಲಿ 30 ಕಟೌಟ್​ಗಳನ್ನು ನಿರ್ಮಿಸುತ್ತಿದ್ದೇವೆ’ ಎಂದು ಅಪ್ಪು ಫ್ಯಾನ್ಸ್​ ಹೇಳಿದ್ದಾರೆ. ಈ ಚಿತ್ರಕ್ಕೆ ಚೇತನ್​ ಕುಮಾರ್​ ನಿರ್ದೇಶನ ಮಾಡಿದ್ದು, ಪುನೀತ್​ಗೆ ನಾಯಕಿಯಾಗಿ ಪ್ರಿಯಾ ಆನಂದ್​ ಅಭಿನಯಿಸಿದ್ದಾರೆ. ಕಿಶೋರ್​ ಪತ್ತಿಕೊಂಡ ನಿರ್ಮಾಣ ಮಾಡಿದ್ದಾರೆ. ಈಗಾಗಲೇ ಟೀಸರ್​ ಧೂಳೆಬ್ಬಿಸಿದೆ. ಈ ಚಿತ್ರದಲ್ಲಿ ಪುನೀತ್​ ಪಾತ್ರಕ್ಕೆ ಶಿವರಾಜ್​ಕುಮಾರ್​ ಧ್ವನಿ ನೀಡಿದ್ದಾರೆ.

ಇದನ್ನೂ ಓದಿ:

‘ಫ್ಯಾನ್ಸ್​ಗೆ ಸೆಲ್ಫಿ ಕೊಡಲು ಕಾರು ತಿರುಗಿಸಿಕೊಂಡು ವಾಪಸ್​ ಬಂದಿದ್ದರು ಪುನೀತ್​’: ಆ ಘಟನೆ ನೆನೆದ ಹರ್ಷ

‘ಪುನೀತ್​ ರೀತಿ ನಾವು ಸ್ಟಂಟ್​ ಮಾಡೋದಿಲ್ಲ’; ನಿಜ ಒಪ್ಪಿಕೊಂಡಿದ್ದ ಅಲ್ಲು ಅರ್ಜುನ್​, ಜ್ಯೂ. ಎನ್​ಟಿಆರ್​

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?