AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನಾರ್ದನ ರೆಡ್ಡಿ ಮಗ ಕಿರೀಟಿ ಈಗ ‘ಜೂನಿಯರ್​’; ರಿವೀಲ್ ಆಯ್ತು ಮೊದಲ ಸಿನಿಮಾ ಟೈಟಲ್

ಕಿರೀಟಿ ಅವರನ್ನು ಇಂಟ್ರಡ್ಯೂಸ್ ಮಾಡಲು ಟೀಸರ್ ಒಂದನ್ನು ರಿಲೀಸ್ ಮಾಡಲಾಗಿತ್ತು. ಈ ಟೀಸರ್​ನಲ್ಲಿ ಸ್ಟಂಟ್​ಗಳನ್ನು ಮಾಡಿ ಅವರು ಗಮನ ಸೆಳೆದಿದ್ದರು. ಈಗ ಸಿನಿಮಾ ಟೈಟಲ್ ರಿವೀಲ್ ಆಗಿದೆ.

ಜನಾರ್ದನ ರೆಡ್ಡಿ ಮಗ ಕಿರೀಟಿ ಈಗ ‘ಜೂನಿಯರ್​’; ರಿವೀಲ್ ಆಯ್ತು ಮೊದಲ ಸಿನಿಮಾ ಟೈಟಲ್
ಕಿರೀಟಿ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Sep 29, 2022 | 6:39 PM

Share

ರಾಜಕೀಯಕ್ಕೆ ಬಂದ ಅನೇಕರು ನಂತರ ಚಿತ್ರರಂಗಕ್ಕೆ ಕಾಲಿಟ್ಟ ಉದಾಹರಣೆ ಇದೆ. ಅದೇ ರೀತಿ ಹಲವು ರಾಜಕಾರಣಿ ಮಕ್ಕಳು ಬಣ್ಣದ ಬದುಕು ಆರಂಭಿಸಿದ್ದಾರೆ. ಮಾಜಿ ಸಚಿವ ಜನಾರ್ದನ ರೆಡ್ಡಿ (Janardhana Reddy) ಮಗ ಕಿರೀಟಿ (Kireeti Reddy ) ಈಗ ಬಣ್ಣದ ಲೋಕಕ್ಕೆ ಎಂಟ್ರಿ ಕೊಡೋಕೆ ರೆಡಿ ಆಗಿದ್ದಾರೆ. ಈಗಾಗಲೇ ಅವರ ಚೊಚ್ಚಲ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಆದರೆ, ಈ ಚಿತ್ರದ ಟೈಟಲ್ ರಿವೀಲ್ ಆಗಿರಲಿಲ್ಲ. ಅವರ ಬರ್ತ್​​ಡೇ ಪ್ರಯುಕ್ತ ಇಂದು (ಸೆಪ್ಟೆಂಬರ್ 29) ಟೈಟಲ್ ಅನಾವರಣಗೊಂಡಿದೆ. ಈ ಚಿತ್ರಕ್ಕೆ ‘ಜೂನಿಯರ್’ ಎಂದು ಶೀರ್ಷಿಕೆ ಇಡಲಾಗಿದೆ.

ಕಿರೀಟಿ ಅವರನ್ನು ಇಂಟ್ರಡ್ಯೂಸ್ ಮಾಡಲು ಟೀಸರ್ ಒಂದನ್ನು ರಿಲೀಸ್ ಮಾಡಲಾಗಿತ್ತು. ಈ ಟೀಸರ್​ನಲ್ಲಿ ಸ್ಟಂಟ್​ಗಳನ್ನು ಮಾಡಿ ಅವರು ಗಮನ ಸೆಳೆದಿದ್ದರು. ಏಕಕಾಲದಲ್ಲಿ ‘ಜೂನಿಯರ್’ ಸಿನಿಮಾ ಕನ್ನಡ, ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ. ಈ ಕಾರಣದಿಂದ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಅವರು ಗುರುತಿಸಿಕೊಳ್ಳುತ್ತಿದ್ದಾರೆ. ರಾಧಾಕೃಷ್ಣ ರೆಡ್ಡಿ ನಿರ್ದೇಶನದಲ್ಲಿ ಈ ಚಿತ್ರ ಅದ್ದೂರಿಯಾಗಿ ಮೂಡಿ ಬರುತ್ತಿದೆ. ಈವರೆಗೆ ಟೈಟಲ್ ರಿವೀಲ್ ಮಾಡದೇ ಚಿತ್ರೀಕರಣದಲ್ಲಿ ತೊಡಗಿದ್ದ ತಂಡ ಈಗ ಟೈಟಲ್ ರಿವೀಲ್ ಮಾಡಿದೆ. ಆ ಮೂಲಕ ಇಷ್ಟು ದಿನದ ಕುತೂಹಲಕ್ಕೆ ಚಿತ್ರತಂಡ ತೆರೆ ಎಳೆದಿದೆ.

ಇಂದು ಕಿರೀಟಿ ಹುಟ್ಟುಹಬ್ಬ. ಆ ಪ್ರಯುಕ್ತ ಟೈಟಲ್ ರಿವೀಲ್ ಮಾಡುವ ಮೂಲಕ ಅವರಿಗೆ ದೊಡ್ಡ ಗಿಫ್ಟ್ ನೀಡಿದೆ. ಸಂಜೆ 6.39ಕ್ಕೆ ಟೈಟಲ್ ವೀಡಿಯೋ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾಗೆ ‘ಜೂನಿಯರ್’ ಎಂದು ಚಿತ್ರತಂಡ ಟೈಟಲ್ ಫಿಕ್ಸ್ ಮಾಡಿದೆ. ಎಲ್ಲಾ ಭಾಷೆಗಳಿಗೂ ಹೊಂದುವಂತಹ ಟೈಟಲ್​ಅನ್ನೇ ಚಿತ್ರತಂಡ ಆಯ್ಕೆ ಮಾಡಿಕೊಂಡಿರುವುದು ವಿಶೇಷ.

ಇದನ್ನೂ ಓದಿ
Image
Kireeti: ಜನಾರ್ದನ​ ರೆಡ್ಡಿ ಪುತ್ರ ಕಿರೀಟಿ ಸಿನಿಮಾ ಶೂಟಿಂಗ್​ ಸೆಟ್​ಗೆ ಭೇಟಿ ನೀಡಿದ ಶಿವಣ್ಣ; ಇಲ್ಲಿದೆ ವಿಡಿಯೋ
Image
Genelia D’Souza: ಸಿಇಒ ಪಾತ್ರದಲ್ಲಿ ನಟಿ ಜೆನಿಲಿಯಾ ಡಿಸೋಜಾ​; ಕಿರೀಟಿ ಸಿನಿಮಾ ಬಗ್ಗೆ ಕೇಳಿಬಂತು ಸ್ಪೆಷಲ್​ ನ್ಯೂಸ್​
Image
‘ಅಪ್ಪು ಸರ್​ ನೋಡಿ ನಾನು ನಟನಾದೆ’; ಹೆಮ್ಮೆಯಿಂದ ಹೇಳಿಕೊಂಡ ಕಿರೀಟಿ
Image
ಜನಾರ್ದನ್​ ರೆಡ್ಡಿ ಮಗ ಕಿರೀಟಿ ಬಗ್ಗೆ ಎಸ್​.ಎಸ್​. ರಾಜಮೌಳಿ ಹೇಳಿದ್ದೇನು?

‘ಮಾಯಾಬಜಾರ್’ ಸಿನಿಮಾ ನಿರ್ದೇಶನ ಮಾಡಿ ರಾಧಾಕೃಷ್ಣ ರೆಡ್ಡಿ ಗಮನ ಸೆಳೆದಿದ್ದಾರೆ. ಅವರೇ ಈಗ ಕಿರೀಟಿ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ‘ವಾರಾಹಿ ಫಿಲ್ಮ್​ ಪ್ರೊಡಕ್ಷನ್’ ಕಿರೀಟಿ ಮೊದಲ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ. ದೊಡ್ಡ ಬಜೆಟ್​ನಲ್ಲಿ ಸಿನಿಮಾ ಸಿದ್ಧಗೊಳ್ಳುತ್ತಿದೆ.  ಬಹುದೊಡ್ಡ ತಾರಾಗಣವೂ ಚಿತ್ರದ ಹೈಲೈಟ್​. ಕ್ರೇಜಿ ಸ್ಟಾರ್ ರವಿಚಂದ್ರನ್, ನಟಿ ಜೆನಿಲಿಯಾ, ಶ್ರೀಲೀಲಾ ಸೇರಿದಂತೆ ಇನ್ನೂ ಹಲವು ತಾರೆಯರು ಈ ಚಿತ್ರದಲ್ಲಿ ಬಣ್ಣ ಹಚ್ಚುತ್ತಿದ್ದಾರೆ.

ಇದನ್ನು ಓದಿ: ಜನಾರ್ದನ ರೆಡ್ಡಿ ಮಗ ಕಿರೀಟಿ ಬರ್ತ್​​ಡೇ ದಿನವೇ ಅನಾವರಣ ಆಗಲಿದೆ ಚೊಚ್ಚಲ ಸಿನಿಮಾದ ಟೈಟಲ್

ಚಿತ್ರದ ತಾಂತ್ರಿಕ ಬಳಗ ಕೂಡ ಶ್ರೀಮಂತವಾಗಿದೆ. ತೆಲುಗಿನ ಖ್ಯಾತ ಸಂಗೀತ ನಿರ್ದೇಶಕ ದೇವಿಶ್ರೀ ಪ್ರಸಾದ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಬಾಹುಬಲಿ ಸಿನಿಮಾ ಖ್ಯಾತಿಯ ಕೆ.ಕೆ. ಸೆಂಥಿಲ್ ಕುಮಾರ್ ಛಾಯಾಗ್ರಹಣ, ಪೀಟರ್ ಹೆನ್ ಸಾಹಸ ನಿರ್ದೇಶನ ಚಿತ್ರಕ್ಕೆ ಇದೆ.

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ