AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನಾರ್ಧನ ರೆಡ್ಡಿ ಪುತ್ರ ಕಿರೀಟಿಯ ಮೊದಲ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ

Janardhana Reddy son Kireeti Reddy: ಮಾಜಿ ಸಚಿವ, ರಾಜಕಾರಣಿ ಜನಾರ್ಧನ ರೆಡ್ಡಿ ಅವರ ಪುತ್ರ ಕಿರೀಟಿ ರೆಡ್ಡಿ ಅವರ ಮೊದಲ ಸಿನಿಮಾ ‘ಜೂನಿಯರ್’ ಸೆಟ್ಟೇರಿ ಮೂರು ವರ್ಷಗಳಾಗಿವೆ. ಶ್ರೀಲೀಲಾ ನಾಯಕಿಯಾಗಿರುವ ಈ ಸಿನಿಮಾ ನಿಂತೇ ಹೋಯಿತು ಎಂಬ ಸುದ್ದಿ ಹರಿದಾಡಿತ್ತು. ಇದೀಗ ಹಠಾತ್ತನೆ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗಿದೆ.

ಜನಾರ್ಧನ ರೆಡ್ಡಿ ಪುತ್ರ ಕಿರೀಟಿಯ ಮೊದಲ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
Junior Kannada Movie
ಮಂಜುನಾಥ ಸಿ.
|

Updated on:May 15, 2025 | 3:11 PM

Share

ಮಾಜಿ ಸಚಿವ ಜನಾರ್ಧನ ರೆಡ್ಡಿ (Janardhan Reddy) ಅವರ ಪುತ್ರ ಕಿರೀಟಿ ಮೊದಲ ಸಿನಿಮಾ ‘ಜೂನಿಯರ್’ ಪ್ರಾರಂಭವಾಗಿ ವರ್ಷಗಳೇ ಕಳೆದಿವೆ. ಆ ಸಿನಿಮಾ ನಿಂತೇ ಹೋಗಿದೆ ಎಂಬ ಸುದ್ದಿಗಳೂ ಹರಿದಾಡಿದ್ದವು. 2022 ರಲ್ಲಿ ಕಿರೀಟಿ ಅವರ ಮೊದಲ ಸಿನಿಮಾದ ಮುಹೂರ್ತ ಅದ್ಧೂರಿಯಾಗಿ ನಡೆದಿತ್ತು. ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ಈ ಸಿನಿಮಾವನ್ನು ನಿರ್ಮಾಣ ಮತ್ತು ಬಿಡುಗಡೆ ಮಾಡುವುದಾಗಿ ಹೇಳಲಾಗಿತ್ತು. ಆರಂಭದಲ್ಲಿ ಚಿತ್ರೀಕರಣ ಜೋರಾಗಿಯೇ ನಡೆಯಿತು. ಆದರೆ ಬಳಿಕ ಸಿನಿಮಾದ ಸುದ್ದಿಯೇ ಇರಲಿಲ್ಲ. ಇದೀಗ ರೆಡ್ಡಿ ಪುತ್ರನ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ ಆಗಿದೆ.

ಜನಾರ್ಧನ ರೆಡ್ಡಿ ಅವರ ಪುತ್ರ ಕಿರೀಟಿಯ ಮೊದಲ ಸಿನಿಮಾ ‘ಜೂನಿಯರ್ ಜುಲೈ 18ಕ್ಕೆ ಬಿಡುಗಡೆ ಆಗಲಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಕಾಲೇಜು ಪ್ರೇಮಕತೆ ತೆರೆಗೆ ಬರಲಿದೆ. ಕನ್ನಡದ ‘ಮಾಯಾಬಜಾರ್’ ತಮಿಳುನ ‘ನಾಂಗು ರೊಂಬ ಬ್ಯುಸಿ’ ಸಿನಿಮಾಗಳನ್ನು ನಿರ್ದೇಶಿಸಿರುವ ರಾಧಾ ಕೃಷ್ಣ ರೆಡ್ಡಿ ಅವರು ಈ ಸಿನಿಮಾ ನಿರ್ದೇಶನ ಮಾಡಿದ್ದಾರೆ. ‘ಈಗ’ ಸೇರಿದಂತೆ ಹಲವು ಬ್ಲಾಕ್ ಬಸ್ಟರ್ ಸಿನಿಮಾ ನಿರ್ಮಾಣ ಮಾಡಿರುವ ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ವರಾಹಿ ‘ಜೂನಿಯರ್’ ಸಿನಿಮಾಕ್ಕೆ ಬಂಡವಾಳ ಹೂಡಿದೆ.

ಇದನ್ನೂ ಓದಿ:ಮೊದಲ ಹಿಂದಿ ಸಿನಿಮಾ ಚಿತ್ರೀಕರಣ ಮುಗಿಸಿದ ನಟಿ ಶ್ರೀಲೀಲಾ

‘ಜೂನಿಯರ್’ ಸಿನಿಮಾದ ಮೊದಲ ಹಾಡು ಇದೇ ತಿಂಗಳ 19ನೇ ತಾರೀಖು ಬಿಡುಗಡೆ ಆಗಲಿದೆ. ಸಿನಿಮಾಕ್ಕೆ ದೇವಿಶ್ರೀ ಪ್ರಸಾದ್ ಸಂಗೀತ ನೀಡಿದ್ದಾರೆ. ‘ಜೂನಿಯರ್’ ಸಿನಿಮಾನಲ್ಲಿ ಶ್ರೀಲೀಲಾ ನಾಯಕಿ. ಈ ಸಿನಿಮಾನಲ್ಲಿ ಜೆನಿಲಿಯಾ ಹಾಗೂ ನಟ ರವಿಚಂದ್ರನ್ ಸಹ ನಟಿಸಿದ್ದಾರೆ. ತೆಲುಗು ಹಾಗೂ ಕನ್ನಡ ಚಿತ್ರರಂಗದ ಇನ್ನೂ ಕೆಲವು ಸ್ಟಾರ್ ನಟ, ನಟಿಯರು ಈ ಸಿನಿಮಾನಲ್ಲಿದ್ದಾರೆ.

ಸಿನಿಮಾ ಪ್ರಾರಂಭವಾದಾಗ ನಿರ್ದೇಶಕ ರಾಜಮೌಳಿ ಮುಹೂರ್ತಕ್ಕೆ ಆಗಮಿಸಿ ಶುಭಾಶಯ ತಿಳಿಸಿದ್ದರು. ‘ಬಾಹುಬಲಿ’ ಖ್ಯಾತಿಯ ಸೆಂಥಿಲ್ ಈ ಸಿನಿಮಾಕ್ಕೆ ಕ್ಯಾಮೆರಾಮನ್ ಆಗಿದ್ದು, ಆರಂಭದಲ್ಲಿ ಬಿಡುಗಡೆ ಮಾಡಿದ್ದ ಸಿನಿಮಾದ ಟೀಸರ್ ಸಹ ಸಖತ್ ಸದ್ದು ಮಾಡಿತ್ತು. ಸಿನಿಮಾಕ್ಕೆ ಖ್ಯಾತ ಆಕ್ಷನ್ ಕೊರಿಯೋಗ್ರಾಫರ್ ಪೀಟರ್ ಹೇನ್​ ಆಕ್ಷನ್ ನೀಡಿದ್ದಾರೆ. ಇದೇ ತಿಂಗಳ 19 ರಂದು ಹಾಡು ಬಿಡುಗಡೆ ಮೂಲಕ ಸಿನಿಮಾದ ಪ್ರಚಾರ ಆರಂಭವಾಗುತ್ತಿದ್ದು, ಜುಲೈ 18ಕ್ಕೆ ಸಿನಿಮಾ ಬಿಡುಗಡೆ ಆಗಲಿದೆ. ಮೂರು ವರ್ಷಗಳ ಬಳಿಕ ಕಿರೀಟಿಯ ಸಿನಿಮಾ ತೆರೆಗೆ ಬರುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:07 pm, Thu, 15 May 25

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ