AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಜಾನ್ವಿ ಎಡವಟ್ಟು; ಇದೆಲ್ಲಾ ಬೇಕಿತ್ತಾ?

ಬಿಗ್ ಬಾಸ್ ಕನ್ನಡ 12 ಫಿನಾಲೆ ಸಂದರ್ಭದಲ್ಲಿ ಜಾನ್ವಿ ಅವರ ಸಾಮಾಜಿಕ ಮಾಧ್ಯಮದ ಪೋಸ್ಟ್‌ಗಳು ತೀವ್ರ ಚರ್ಚೆಗೆ ಗ್ರಾಸವಾಗಿವೆ. 'ಗಿಲ್ಲಿ'ಗೆ ಅತಿಯಾದ ಹೈಪ್ ನೀಡಲಾಗುತ್ತಿದೆ ಎಂದು ಬೇರೆಯವರು ಮಾಡಿರೋ ಪೋಸ್ಟ್​​ನ ಇವರು ಹಂಚಿಕೊಂಡಿದ್ದಾರೆ. ಜಾನ್ವಿಯ ಈ ವರ್ತನೆಯಿಂದ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ಅವರ ಉದ್ದೇಶದ ಬಗ್ಗೆ ಪ್ರಶ್ನಿಸಿದ್ದಾರೆ.

ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಜಾನ್ವಿ ಎಡವಟ್ಟು; ಇದೆಲ್ಲಾ ಬೇಕಿತ್ತಾ?
ಗಿಲ್ಲಿ-ಜಾನ್ವಿ
ರಾಜೇಶ್ ದುಗ್ಗುಮನೆ
|

Updated on:Jan 18, 2026 | 5:21 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ಜಾನ್ವಿ ಅವರು ಎಲಿಮಿನೇಟ್ ಆಗಿ ಹಲವು ವಾರ ಕಳೆದಿದೆ. ಬಿಗ್ ಬಾಸ್​​ನಿಂದ ಹೊರ ಬಂದ ಬಳಿಕ ಅವರು ವಿವಿಧ ಫೋಟೋಶೂಟ್ ಮಾಡುತ್ತಾ ಗಮನ ಸೆಳೆಯುತ್ತಿದ್ದಾರೆ. ಫಿನಾಲೆ ಸಂದರ್ಭದಲ್ಲಿ ಅವರು ಎಡವಟ್ಟೊಂದನ್ನು ಮಾಡಿಕೊಂಡಿದ್ದಾರೆ. ಅವರು ಮಾಡಿರುವ ಪೋಸ್ಟ್ ಬಗ್ಗೆ ಚರ್ಚೆ ಶುರುವಾಗಿದೆ. ಜಾನ್ವಿ ಹೊಟ್ಟೆ ಉರಿದುಕೊಂಡು ಈ ರೀತಿ ಪೋಸ್ಟ್ ಹಾಕಿರಬಹುದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಬಿಗ್ ಬಾಸ್ ಅಲ್ಲಿ ಇದ್ದಷ್ಟು ದಿನ ಜಾನ್ವಿ ಚರ್ಚೆಯಲ್ಲಿ ಇದ್ದರು. ಕಲರ್ಸ್ ಕನ್ನಡದವರು ಸ್ಪಂದನಾ ಅವರನ್ನು ಉಳಿಸಿಕೊಳ್ಳುತ್ತಿದ್ದಾರೆ ಎಂದು ನೇರವಾಗಿ ಆರೋಪಿಸಿದ್ದರು. ಈ ಬಗ್ಗೆ ಚರ್ಚೆ ನಡೆದಿತ್ತು. ಸುದೀಪ್ ಕೂಡ ಇದನ್ನು ಪ್ರಶ್ನೆ ಮಾಡಿದ್ದರು. ಬಿಗ್ ಬಾಸ್ ಮನೆಯಿಂದ ಹೊರ ಬಂದ ಬಳಿಕವೂ ಜಾನ್ವಿ ಚರ್ಚೆಯಲ್ಲಿರುವ ಪ್ರಯತ್ನ ಮಾಡುತ್ತಿದ್ದಾರೆ.

ಇದನ್ನೂ ಓದಿ: ಟಾಪ್​ 6ನಿಂದ ಒಬ್ಬರು ಔಟ್; ವಿನ್ ನನ್ನ ಹಣೆಯಲ್ಲಿ ಬರೆದಿಲ್ಲ ಎಂದ ಗಿಲ್ಲಿ

ಬಿಗ್ ಬಾಸ್ ಫಿನಾಲೆ ನಡೆಯುತ್ತಿದೆ. ಗಿಲ್ಲಿ ನಟನಿಗೆ ಸಾಕಷ್ಟು ಹೈಪ್ ಸಿಗುತ್ತಿದೆ. ಈ ಹೈಪ್ ನೋಡಿದ ಅನೇಕರಿಗೆ ಈರ್ಷೆ ಬಂದಿದೆ ಎಂಬ ಅಭಿಪ್ರಾಯ ಅಭಿಮಾನಿಗಳದ್ದು. ‘ಗಿಲ್ಲಿಗೆ ಹೈಪ್ ನೀಡೋದು ಸರಿ ಎನಿಸುತ್ತಿಲ್ಲ’ ಎಂಬರ್ಥದ ಸ್ಟೇಟಸ್​​ನ ಅವರು ಹಾಕಿದ್ದರು. ನಂತರ, ‘ಅಶ್ವಿನಿ ದುಡ್ಡು ಕೊಟ್ಟು ವೋಟ್ ಖರೀದಿ ಮಾಡಿದ್ದಾರೆ ಎಂದು ಆರೋಪಿಸುವವರು ಚುನಾವಣೆ ಸಂದರ್ಭದಲ್ಲೂ ಈ ಬಗ್ಗೆ ಪ್ರಶ್ನೆ ಮಾಡಿ’ ಎಂಬ ಸ್ಟೇಟಸ್​​ನ ಹಂಚಿಕೊಂಡಿದ್ದಾರೆ.

View this post on Instagram

A post shared by Kalki (@rj.typical)

View this post on Instagram

A post shared by techibox (@techi.box)

ಯಾವುದೇ ಸ್ಪರ್ಧಿಗೆ ಹೈಪ್ ಕೊಡೋದು ತಪ್ಪೇ ಎಂಬುದು ಅನೇಕರ ಪ್ರಶ್ನೆ. ‘ಇಷ್ಟೆಲ್ಲಾ ಬುದ್ಧಿವಂತಿಕೆ ಮಾತಾಡೋರು ಮತ್ತೆ ಬಿಗ್ ಬಾಸ್ ಮನೆಗೆ ಯಾಕೆ ಹೋಗಿದ್ದು ಜಾನವಿ ಮೇಡಂ’ ಎಂದು ಜಾನ್ವಿಯನ್ನು ಕೆಲವರು ಪ್ರಶ್ನೆ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 5:21 pm, Sun, 18 January 26

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?