AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗ ಚೈತನ್ಯ ಜೊತೆ ನಟಿಸಲಿರುವ ಬಾಲಿವುಡ್ ಸ್ಟಾರ್ ನಟಿ

ನಾಗ ಚೈತನ್ಯ ಟಾಲಿವುಡ್​ನ ಜನಪ್ರಿಯ ನಟ ಕೆಲವು ಹಿಟ್ ಸಿನಿಮಾಗಳನ್ನು ನೀಡಿದ್ದಾರಾದರೂ ಮಾಸ್ ಹೀರೋ ಎನಿಸಿಕೊಳ್ಳಲು ಅವರಿಗೆ ಸಾಧ್ಯವಾಗಿಲ್ಲ. ಇದೀಗ ನಾಗ ಚೈತನ್ಯ ದೊಡ್ಡ ಪ್ರಾಜೆಕ್ಟ್ ಒಂದಕ್ಕೆ ಕೈ ಹಾಕಿದ್ದು, ಬಾಲಿವುಡ್​ನ ಸ್ಟಾರ್ ನಟಿ ನಾಗ ಚೈತನ್ಯಗೆ ನಾಯಕಿಯಾಗಿ ನಟಿಸುತ್ತಿದ್ದಾರೆ.

ನಾಗ ಚೈತನ್ಯ ಜೊತೆ ನಟಿಸಲಿರುವ ಬಾಲಿವುಡ್ ಸ್ಟಾರ್ ನಟಿ
ಮಂಜುನಾಥ ಸಿ.
|

Updated on: Oct 31, 2024 | 12:40 PM

Share

ನಾಗ ಚೈತನ್ಯ ಟಾಲಿವುಡ್​ನ ಸ್ಟಾರ್ ಹೀರೋ, ಆದರೆ ಪ್ರಭಾಸ್, ಜೂ ಎನ್​ಟಿಆರ್, ಅಲ್ಲು ಅರ್ಜುನ್, ರಾಮ್ ಚರಣ್ ರೀತಿ ಭಾರಿ ದೊಡ್ಡ ಸ್ಟಾರ್ ಎನಿಸಿಕೊಳ್ಳಲು ವಿಫಲರಾಗಿದ್ದಾರೆ. ಭಾರಿ ದೊಡ್ಡ ಹಿಟ್ ಹಿಟ್ ಸಿನಿಮಾ ಒಂದನ್ನು ನೀಡುವಲ್ಲಿ ನಾಗ ಚೈತನ್ಯ ಈ ವರೆಗೆ ಸಫಲರಾಗಿಲ್ಲ. ಆದರೆ ಅವರ ಸಿನಿಮಾಗಳಿಗೆ ಪ್ರೇಕ್ಷಕರಂತೂ ಇದ್ದಾರೆ. ಕೌಟುಂಬಿಕ ಪ್ರೇಕ್ಷಕರನ್ನು ಅವರ ಸಿನಿಮಾಗಳು ಸೆಳೆಯುತ್ತವೆ, ಆದರೆ ಮಾಸ್ ಹೀರೋ ಇಮೇಜು ಅವರಿಂದ ದೂರವೇ ಇದೆ. ಇದೀಗ ನಾಗ ಚೈತನ್ಯ ದೊಡ್ಡ ಬಜೆಟ್ ಒಂದಕ್ಕೆ ಕೈ ಹಾಕಿದ್ದಾರೆ. ಸಿನಿಮಾದಲ್ಲಿ ಬಾಲಿವುಡ್​ನ ಸ್ಟಾರ್ ನಟಿ ನಾಯಕಿಯಾಗಿ ನಟಿಸಲಿದ್ದಾರೆ.

ದೀಪಿಕಾ ಪಡುಕೋಣೆ, ಆಲಿಯಾ ಭಟ್ ಬಳಿಕ ಬಾಲಿವುಡ್​ನ ಜನಪ್ರಿಯ ನಟಿಯಾಗಿರುವ ಜಾನ್ಹವಿ ಕಪೂರ್ ಈಗಾಗಲೇ ಒಂದು ತೆಲುಗು ಸಿನಿಮಾದಲ್ಲಿ ನಟಿಸಿದ್ದಾರೆ. ಇದೀಗ ಜಾನ್ಹವಿ ಕಪೂರ್ ನಾಗ ಚೈತನ್ಯ ಅವರ ಜೊತೆಗೂ ನಟಿಸಲಿದ್ದಾರೆ. ದೊಡ್ಡ ಹಿಟ್​ ಸಿನಿಮಾ ಒಂದರ ಹುಡುಕಾಟದಲ್ಲಿರುವ ನಾಗ ಚೈತನ್ಯ ಈಗ ದೊಡ್ಡ ಬಜೆಟ್ ಸಿನಿಮಾಕ್ಕೆ ಕೈ ಹಾಕಿದ್ದು, ಸಿನಿಮಾದಲ್ಲಿ ದೊಡ್ಡ ತಾರಾಗಣ, ತಂತ್ರಜ್ಞರ ತಂಡ ಇರಲಿದೆ. ಸಿನಿಮಾದಲ್ಲಿ ನಾಯಕಿ ಪಾತ್ರಕ್ಕೆ ಸಾಕಷ್ಟು ಪ್ರಾಧಾನ್ಯತೆ ಇರುವ ಕಾರಣ ಜಾನ್ಹವಿಯನ್ನು ಚಿತ್ರತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಇದನ್ನೂ ಓದಿ:ತೆಲುಗಿನ ಬಳಿಕ ತಮಿಳು ಚಿತ್ರರಂಗಕ್ಕೆ ಹೊರಟ ಜಾನ್ಹವಿ ಕಪೂರ್

ನಾಗ ಚೈತನ್ಯ ವೃತ್ತಿ ಬದುಕಿನ ದೊಡ್ಡ ಹಿಟ್ ಗಳಲ್ಲಿ ಒಂದಾದ ‘ಮಜಿಲಿ’ ಸಿನಿಮಾ ನಿರ್ದೇಶನ ಮಾಡಿರುವ ಶಿವ ನಿರ್ವಾನಾ ನಾಗ ಚೈತನ್ಯರ ಮುಂದಿನ ಸಿನಿಮಾ ನಿರ್ದೇಶನ ಮಾಡಲಿದ್ದು, ಈ ಸಿನಿಮಾ ಆಕ್ಷನ್ ಹಾಗೂ ರೊಮ್ಯಾಂಟಿಕ್ ಕತೆಯನ್ನು ಒಳಗೊಂಡಿದೆ. ಸಿನಿಮಾದ ನಾಯಕಿಗೆ ಗ್ಲಾಮರಸ್ ಪಾತ್ರ ಇರುವ ಕಾರಣ ಜಾನ್ಹವಿಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಸಿನಿಮಾದಲ್ಲಿ ನಾಗ ಚೈತನ್ಯ ಮಾಸ್ ಹಾಗೂ ಕ್ಲಾಸ್ ಎರಡು ಶೇಡ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ನಾಗ ಚೈತನ್ಯ ಪ್ರಸ್ತುತ ‘ತಾಂಡೇಲ್’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಸಾಯಿ ಪಲ್ಲವಿ ನಾಯಕಿ. ನಾಗ ಚೈತನ್ಯ ಹಾಗೂ ಸಾಯಿ ಪಲ್ಲವಿ ಎರಡನೇ ಬಾರಿ ಸಿನಿಮಾಕ್ಕಾಗಿ ಜೊತೆಯಾಗಿದ್ದಾರೆ. ಸಿನಿಮಾ ಕರಾವಳಿ ಭಾಗದ ಕತೆ ಹೊಂದಿದ್ದು, ಮೀನುಗಾರನಾಗಿ ನಾಗ ಚೈತನ್ಯ ಕಾಣಿಸಿಕೊಂಡಿದ್ದಾರೆ. ಸಿನಿಮಾದ ಚಿತ್ರೀಕರಣವನ್ನು ಕರ್ನಾಟಕದ ಉಡುಪಿ ಇನ್ನೂ ಕೆಲವು ಕರಾವಳಿ ಭಾಗಗಳಲ್ಲಿಯೂ ಮಾಡಲಾಗಿದೆ. ಸಿನಿಮಾ ಶೀಘ್ರವೇ ತೆರೆಗೆ ಬರಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್​​ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್
‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್​​ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್