AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬರೀಷ್ ಮಾಡಿದ ಎಡವಟ್ಟಿನಿಂದ ಮೂರು ದಿನ ಪ್ರಜ್ಞೆ ಕಳೆದುಕೊಂಡಿದ್ದ ಜಯಮಾಲಾ

Ambareesh-Jayamala: ಅಂಬರೀಶ್ ಬಗ್ಗೆ ಹಲವಾರು ಕತೆಗಳು ಕನ್ನಡ ಚಿತ್ರರಂಗದಲ್ಲಿ ಚಾಲ್ತಿಯಲ್ಲಿವೆ. ಅಂಬರೀಶ್ ಅವರ ಗೆಳೆಯರು, ಅವರ ಸಾಹಸಗಳ ಬಗ್ಗೆ ದಿನಕ್ಕೊಂದು ಕತೆಗಳನ್ನು ಹೇಳಬಲ್ಲರು. ಇದೀಗ ಹಿರಿಯ ನಟಿ ಜಯಮಾಲ, ಅಂಬರೀಶ್ ಇಂದಾಗಿ ತಾವು ಅನುಭವಿಸಿದ್ದ ಸಂಕಷ್ಟದ ಬಗ್ಗೆ ಹೇಳಿಕೊಂಡಿದ್ದಾರೆ.

ಅಂಬರೀಷ್ ಮಾಡಿದ ಎಡವಟ್ಟಿನಿಂದ ಮೂರು ದಿನ ಪ್ರಜ್ಞೆ ಕಳೆದುಕೊಂಡಿದ್ದ ಜಯಮಾಲಾ
Ambareesh Jayamala
 ಶ್ರೀಲಕ್ಷ್ಮೀ ಎಚ್
| Edited By: |

Updated on: Mar 14, 2025 | 10:50 PM

Share

ನಟ ಅಂಬರೀಷ್ (Ambareesh) ಅವರು ಸ್ಟಾರ್ ನಟ ಆಗಿದ್ದರು. ಅವರು ಕನ್ನಡದ ಜಲೀಲಾ ಆಗಿದ್ದರು. ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ಹಲವು ವಿಷಯಗಳ ಬಗ್ಗೆ ಕ್ರೇಜ್ ಹೊಂದಿದ್ದರು. ಅಂಬರೀಷ್ ಯಾವುದೇ ವಿಚಾರ ಇದ್ದರೂ ನೇರವಾಗಿ ಹೇಳುತ್ತಿದ್ದರು. ಈ ಕಾರಣಕ್ಕೆ ಸಾಕಷ್ಟು ಹೈಲೈಟ್ ಆಗುತ್ತಿದ್ದರು. ಅವರ ಕುರಿತು ಹಿರಿಯ ನಟಿ ಜಯಮಾಲಾ ಅವರು ಒಂದು ಅಪರೂಪದ ಮಾಹಿತಿ ಹಂಚಿಕೊಂಡಿದ್ದಾರೆ. ಅದೇನೆಂಬುದು ಎಂಬುದನ್ನು ನಾವು ಇಂದು ನಿಮಗೆ ಹೇಳುತ್ತಿದ್ದೇವೆ.

ಇತ್ತೀಚೆಗೆ ಸೃಜನ್ ಲೋಕೇಶ್ ಅವರ ‘ಮಜಾ ಟಾಕೀಸ್’ ವೇದಿಕೆ ಮೇಲೆ ಅನೇಕ ಹಿರಿಯ ನಟಿಯರು ಆಗಮಿಸಿದ್ದರು. ಜಯಮಾಲಾ, ಗಿರಿಜಾ ಲೋಕೇಶ್, ವಿನಯಾ ಪ್ರಸಾದ್ ಮೊದಲದವರು ಈ ವೇದಿಕೆಯಲ್ಲಿ ಇದ್ದರು. ಅವರುಗಳು ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಚಿತ್ರರಂಗದಲ್ಲಿ ನಡೆದ ಘಟನೆಗಳನ್ನು ಅವರು ವಿವರಿಸಿದ್ದರು.

‘ಒಮ್ಮೆ ಅಂಬರೀಷ್ ಅವರು ಸ್ಕೂಟರ್ ಬೋಟ್​ನಲ್ಲಿ ಕರೆದುಕೊಂಡು ಹೋದರು. ಹಿಂದೆ ನಾವು ಕುಳಿತುಕೊಳ್ಳಬೇಕಿತ್ತು. ಅವರ ಜೊತೆ ಕಾರಿನಲ್ಲಿ ಹೋಗೋಕೆ ಹೋಗೋಕೆ ಭಯ ಆಗುತ್ತಿತ್ತು, ಇನ್ನು ಸಮುದ್ರ ಎಂದರೆ ಕೇಳಬೇಕಾ? ಅಂಬರೀಷ್​ ನನಗೆ ಭಯ ಆಗುತ್ತಿದೆ, ಸಮುದ್ರ ಕಂಡರೆ ಭಯ ಎಂದರೆ. ಏನೂ ಆಗಲ್ಲ ಎಂದರು. ಸ್ಪೀಡ್​ ಅಲ್ಲಿ ಹೋಗ್ತಾ ಇದ್ವಿ. ನನಗೆ ಪ್ರಜ್ಞೆ ತಪ್ಪೋಯ್ತು. ಸಮುದ್ರದಲ್ಲಿ ಬಿದ್ದೋದೆ’ ಎಂದರು ಜಯಮಾಲಾ.

ಇದನ್ನೂ ಓದಿ:ಅಭಿಷೇಕ್-ಅವಿವಾ ಮಗನಿಗೆ ‘ಅಂಬರೀಷ್’ ಎಂದು ನಾಮಕರಣ? ಕಾರಣ ಇಲ್ಲಿದೆ

‘ಹೀರೋಯಿನ್ ಎಲ್ಲಿ ಎಂದು ಅಂಬರೀಷ್ ಕೇಳಿದರು. ಅವರು ಬಿದ್ದೋಗಿದಾರೆ ಎಂದು ಅಂಬರೀಷ್ ಅವರಿಗೆ ಹೇಳಲಾಯಿತು. ಮೂರು ದಿನ ಆದಮೇಲೆ ಎಚ್ಚರಿಕೆ ಆಯಿತು. ನನಗೆ ಯಾಕೆ ಸಮುದ್ರದಲ್ಲಿ ಹಾಕಿದೆ ಎಂದು ಕೇಳಿದೆ. ಹೋಗಮ್ಮೋ ನನಗೆ ಎಲ್ಲಿದ್ದೆ ಅಂತ ಗೊತ್ತಾಗಲಿಲ್ಲ ಎಂದು ಅಂಬರೀಷ್ ನನಗೆ ತಿಳಿಸಿದ್ದರು’ ಎಂದಿದ್ದಾರೆ ಜಯಮಾಲಾ.

ಅಂಬರೀಷ್ ಹಾಗೂ ಜಯಮಾಲಾ ಅವರು ಈ ಮೊದಲು ಕೆಲವು ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದ್ದರು. ಅಂಬರೀಷ್ ಅವರು ಈಗ ನಮ್ಮ ಜೊತೆ ಇಲ್ಲ. ಜಯಮಾಲಾ ಅವರು ಇತ್ತೀಚೆಗೆ ಸುದ್ದಿ ಆಗಿದ್ದಾರೆ. ಇತ್ತೀಚೆಗೆ ಅವರ ಮಗಳು ಸೌಂದರ್ಯಾ ವಿವಾಹವನ್ನು ಅದ್ದೂರಿಯಾಗಿ ಆಚರಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ