AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಒನಕೆ ಓಬವ್ವ ಅಂದ್ರೆ ನೆನಪಾಗೋದೇ ಜಯಂತಿ’; ಅಭಿನಯ ಶಾರದೆಗೆ ಸ್ಯಾಂಡಲ್​ವುಡ್ ಶ್ರದ್ಧಾಂಜಲಿ

‘ಬಹುಭಾಷಾ ನಟಿ, ಅಭಿನಯ ಶಾರದೆ ಜಯಂತಿ ಅಮ್ಮಾವ್ರು ಇಂದು ದೈಹಿಕವಾಗಿ ನಮ್ಮನ್ನು ಅಗಲಿದ್ದಾರೆ. ದೇವರು ಅವರ ಕುಟುಂಬಕ್ಕೆ ಈ ದುಃಖವನ್ನು ತಡೆದುಕೊಳ್ಳುವ ಶಕ್ತಿ ನೀಡಲಿ. ಭಾರತೀಯ ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರ’ ಎಂದು ನಟ ದರ್ಶನ್​ ಟ್ವೀಟ್​ ಮಾಡಿದ್ದಾರೆ.

‘ಒನಕೆ ಓಬವ್ವ ಅಂದ್ರೆ ನೆನಪಾಗೋದೇ ಜಯಂತಿ’; ಅಭಿನಯ ಶಾರದೆಗೆ ಸ್ಯಾಂಡಲ್​ವುಡ್ ಶ್ರದ್ಧಾಂಜಲಿ
ಅಭಿನಯ ಶಾರದೆ ಜಯಂತಿ
TV9 Web
| Edited By: |

Updated on:Jul 26, 2021 | 12:35 PM

Share

ಹಿರಿಯ ನಟಿ ಜಯಂತಿ ನಿಧನವು ಕನ್ನಡ ಚಿತ್ರರಂಗಕ್ಕೆ ನೋವುಂಟು ಮಾಡಿದೆ. ಅಭಿನಯ ಶಾರದೆ ಎಂದೇ ಕರೆಸಿಕೊಳ್ಳುತ್ತಿದ್ದ ಪ್ರತಿಭಾವಂತ ನಟಿಯನ್ನು ಸ್ಯಾಂಡಲ್​ವುಡ್​ ಕಳೆದುಕೊಂಡಿದೆ. ರವೀಂದ್ರ ಕಲಾಕ್ಷೇತ್ರದಲ್ಲಿ ಜಯಂತಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಂದು (ಜು.26) ಸಂಜೆ ಬನಶಂಕರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಅಗಲಿಗೆ ನಟಿಗೆ ಚಂದನವನದ ಹಲವು ಸೆಲೆಬ್ರಿಟಿಗಳು ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ. ‘ಜಯಂತಿ 500ಕ್ಕೂ ಹೆಚ್ಚು ಚಿತ್ರಗಳನ್ನ ಮಾಡಿದ್ದಾರೆ. ಇವತ್ತಿನ ನಟಿಯರು ಅಷ್ಟು ಸಿನಿಮಾ ಮಾಡಲು‌ ಸಾಧ್ಯವಿಲ್ಲ. ಒನಕೆ ಓಬವ್ವ ಅಂದ್ರೆ ಜಯಂತಿಯಮ್ಮಾನೇ ನೆನಪಿಗೆ ಬರ್ತಾರೆ’ ಎಂದು ನಟಿ ಸೋನು ಗೌಡ ಕಂಬನಿ ಮಿಡಿದಿದ್ದಾರೆ.

ಹಿರಿಯ ನಟ ಶ್ರೀನಿವಾಸ್​ ಮೂರ್ತಿ ಕೂಡ ಸಂತಾಪ ಸೂಚಿಸಿದ್ದಾರೆ. ‘ನಮ್ಮದು ಹಲವು ವರ್ಷಗಳ ಒಡನಾಟ. ಕೊರೊನಾ ಬಗ್ಗೆಯೂ ಇತ್ತೀಚಿಗೆ ಮಾತನಾಡಿದ್ರು. ಇತ್ತೀಚಿಗೆ ನೋಡೋಕೆ ಸಾಧ್ಯವಾಗಲಿಲ್ಲ. ಅವರನ್ನ ಈ ರೀತಿ ನೋಡೋ ದೌರ್ಭಾಗ್ಯ ನಮ್ಮದಾಗಿದೆ. ಯಾವುದೇ ಪಾತ್ರವಾದ್ರೂ ಸುಲಭವಾಗಿ ನಿರ್ವಹಿಸುತ್ತಿದ್ದರು. ದೇವರು ಜಯಂತಿ ಆತ್ಮಕ್ಕೆ ಶಾಂತಿ ನೀಡಲಿ. ಅವರ ಮಾತೃಭಾಷೆ ತೆಲುಗು ಆಗಿದ್ರೂ ಕನ್ನಡ ಭಾಷೆಯನ್ನು ನಿರರ್ಗಳವಾಗಿ ಮಾತನಾಡುತ್ತಿದ್ದರು’ ಎಂದಿದ್ದಾರೆ ಶ್ರೀನಿವಾಸ ಪೂರ್ತಿ.

‘ನಾಗರಹಾವು ಚಿತ್ರದಲ್ಲಿ ಒನಕೆ ಓಬವ್ವ ಪಾತ್ರ ಮಾಡಿ ಅತ್ಯುತ್ತಮ ನಟಿ ಅನ್ನೋದನ್ನು ಜಯಂತಿ ತೋರಿಸಿಕೊಟ್ಟಿದ್ರು. ಅವರ ಅಗಲಿಕೆಯಿಂದ ಚಿತ್ರೋದ್ಯಮಕ್ಕೆ ದೊಡ್ಡ ನಷ್ಟ ಆಗಿದೆ. ದೇವರು ಅವರ ಮಗನಿಗೆ ದುಃಖ ಭರಿಸುವ ಧೈರ್ಯ ಕೊಡಲಿ. ಅವರ ಅಗಲಿಕೆ ನನಗೆ ತುಂಬಾ ನೋವಾಗಿದೆ. ಭಗವಂತ ಕುಟುಂಬ ವರ್ಗಕ್ಕೆ ನೋವು ಸಹಿಸುವ ಶಕ್ತಿ ನೀಡಲಿ. ಸಮಸ್ತ ಅಭಿಮಾನಿಗಳು ಅವರ ಮಗನಿಗೆ ಹಾರೈಸಲಿ’ ಎಂದು ನೆಲಮಂಗಲದ ಸೋಲದೇವನಹಳ್ಳಿಯಲ್ಲಿ ಹಿರಿಯ ನಟಿ ಲೀಲಾವತಿ ಹೇಳಿದ್ದಾರೆ.

‘ಬಹುಭಾಷಾ ನಟಿ, ಅಭಿನಯ ಶಾರದೆ ಜಯಂತಿ ಅಮ್ಮಾವ್ರು ಇಂದು ದೈಹಿಕವಾಗಿ ನಮ್ಮನ್ನು ಅಗಲಿದ್ದಾರೆ. ದೇವರು ಅವರ ಕುಟುಂಬಕ್ಕೆ ಈ ದುಃಖವನ್ನು ತಡೆದುಕೊಳ್ಳುವ ಶಕ್ತಿ ನೀಡಲಿ. ಭಾರತೀಯ ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರ’ ಎಂದು ನಟ ದರ್ಶನ್​ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ:

ಹಿರಿಯ ನಟಿ ‘ಅಭಿನಯ ಶಾರದೆ’ ಜಯಂತಿ ನಿಧನ; ಗಣ್ಯರ, ಅಭಿಮಾನಿಗಳ ಸಂತಾಪ

Jayanthi Photos: ಕಮಲಾಕುಮಾರಿಯಿಂದ ಅಭಿನಯ ಶಾರದೆಯಾಗುವ ತನಕ ಜಯಂತಿ ನಡೆದುಬಂದ ಹಾದಿ

Published On - 12:19 pm, Mon, 26 July 21

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!