AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರ ಎದುರು ವಿಚಾರಣೆ ಎದುರಿಸಲಿದ್ದಾರೆ ನೋಟಿಸ್ ಪಡೆದ ಸೆಲೆಬ್ರಿಟಿಗಳು; ಇಲ್ಲಿದೆ ವಿವರ

ನೋಟಿಸ್ ಪಡೆದ ಎಲ್ಲರೂ ಇಂದು (ಡಿಸೆಂಬರ್ 12) ಮಧ್ಯಾಹ್ನ 2.30ಕ್ಕೆ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಗೆ ವಿಚಾರಣೆಗೆ ತೆರಳಲಿದ್ದಾರೆ. ಈ ಬಗ್ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಪೊಲೀಸರ ಎದುರು ವಿಚಾರಣೆ ಎದುರಿಸಲಿದ್ದಾರೆ ನೋಟಿಸ್ ಪಡೆದ ಸೆಲೆಬ್ರಿಟಿಗಳು; ಇಲ್ಲಿದೆ ವಿವರ
ಅಭಿಷೇಕ್​-ದರ್ಶನ್
ರಾಜೇಶ್ ದುಗ್ಗುಮನೆ
|

Updated on:Jan 12, 2024 | 9:46 AM

Share

ಇತ್ತೀಚೆಗೆ ‘ಕಾಟೇರ’ ಸಿನಿಮಾ (Kaatera Movie) ಸಕ್ಸಸ್ ಮೀಟ್ ಬಳಿಕ ಇಡೀ ತಂಡ ಪಾರ್ಟಿ ಮಾಡಿತ್ತು. ಇದರ ಜೊತೆ ಅನೇಕ ಸೆಲೆಬ್ರಿಟಿಗಳು ಸೇರಿಕೊಂಡಿದ್ದರು. ಬೆಂಗಳೂರಿನ ರಾಜಾಜಿನಗರದಲ್ಲಿರುವ ಜೆಟ್​ ಲ್ಯಾಗ್ ಪಬ್​​ನಲ್ಲಿ ಮುಂಜಾನೆವರೆಗೆ ಪಾರ್ಟಿ ನಡೆದಿತ್ತು. ಈ ಆರೋಪದ ಮೇಲೆ ಬೆಂಗಳೂರಿನ ಸುಬ್ರಹ್ಮಣ್ಯನಗರ ಪೊಲೀಸರು ದರ್ಶನ್​, ರಾಕ್​ಲೈನ್ ವೆಂಕಟೇಶ್ ಸೇರಿ ಕೆಲವು ಸೆಲೆಬ್ರಿಟಿಗಳಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಈ ಬಗ್ಗೆ ಅಪ್​ಡೇಟ್ ಸಿಕ್ಕಿದೆ.

ನೋಟಿಸ್ ಪಡೆದ ಎಲ್ಲರೂ ಇಂದು (ಡಿಸೆಂಬರ್ 12) ಮಧ್ಯಾಹ್ನ 2.30ಕ್ಕೆ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಗೆ ವಿಚಾರಣೆಗೆ ತೆರಳಲಿದ್ದಾರೆ. ಈ ಬಗ್ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಸೆಲೆಬ್ರಿಟಿಗಳು ಬರುತ್ತಿರುವುದರಿಂದ ಠಾಣೆಯ ಎದುರು ಅಭಿಮಾನಿಗಳು ನೆರೆಯುವ ಸಾಧ್ಯತೆ ಇದೆ. ಹೀಗಾಗಿ, ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ.

ಪ್ರಕರಣ ಏನು?

ಕಳೆದ ವರ್ಷಾಂತ್ಯಕ್ಕೆ ‘ಕಾಟೇರ’ ಸಿನಿಮಾ ಬಿಡುಗಡೆ ಆಗಿ ಯಶಸ್ಸು ಕಂಡಿದೆ. ಈ ಚಿತ್ರದ ಸಕ್ಸಸ್ ಸೆಲೆಬ್ರೇಷನ್ ಬಳಿಕ ದರ್ಶನ್, ಧನಂಜಯ್, ಅಭಿಷೇಕ್ ಅಂಬರೀಷ್ ಸೇರಿ ಅನೇಕರು ಬೆಂಗಳೂರಿನ ಒರಾಯನ್‌ ಮಾಲ್ ಬಳಿ ಇರುವ ಜೆಟ್ ಲ್ಯಾಗ್ ಪಬ್​​ನಲ್ಲಿ ಮುಂಜಾನೆವರೆಗೆ ಪಾರ್ಟಿ ಮಾಡಿದ್ದರು. ನಿಯಮದ ಪ್ರಕಾರ ಮಧ್ಯರಾತ್ರಿ 1 ಗಂಟೆವರೆಗೆ ಮಾತ್ರ ಪಬ್ ಓಪನ್ ಇಡಬಹುದು. ಆದರೆ, ನಿಯಮವನ್ನು ಇಲ್ಲಿ ಮೀರಲಾಗಿತ್ತು.

ಇದನ್ನೂ ಓದಿ: ‘ಕ್ಲಾಂತ’ ಸಿನಿಮಾ ಕಾರ್ಯಕ್ರಮದಲ್ಲಿ ‘ಕಾಟೇರ’ನ ಗುಣಗಾನ ಮಾಡಿದ ಅಜಯ್ ರಾವ್

ಪಾರ್ಟಿಯಲ್ಲಿ ಯಾರೆಲ್ಲ ಭಾಗಿ?

‘ಕಾಟೇರ’ ತಂಡದ ದರ್ಶನ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ನಿರ್ದೇಶಕ ತರುಣ್ ಸುಧೀರ್, ಸಂಗೀತ ನಿರ್ದೇಶಕ ಹರಿಕೃಷ್ಣ ಭಾಗಿ ಆಗಿದ್ದರು. ಉಳಿದಂತೆ ದರ್ಶನ್ ಆಪ್ತರಾದ ಅಭಿಷೇಕ್ ಅಂಬರೀಷ್,​ ಡಾಲಿ ಧನಂಜಯ್, ನಟ ಚಿಕ್ಕಣ್ಣ, ನಿನಾಸಂ ಸತೀಶ್ ಕೂಡ ಪಾರ್ಟಿಯಲ್ಲಿ ಇದ್ದರು. ಇವರೆಲ್ಲರಿಗೂ ನೋಟಿಸ್ ನೀಡಲಾಗಿದ್ದು ಅವರು ವಿಚಾರಣೆಗೆ ಹಾಜರಾಗೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:29 am, Fri, 12 January 24

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು