AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೋಡಿಹಕ್ಕಿ’ ಧಾರಾವಾಹಿ ನಟ ತಾಂಡವ್ ರಾಮ್​ಗೆ ಸಿನಿಮಾ ಆಫರ್​; ಭರತ್​ ನಾವುಂದ ನಿರ್ದೇಶನ

‘ಅಡಚಣೆಗಾಗಿ ಕ್ಷಮಿಸಿ’ ಮತ್ತು ‘ಮುಗಿಲ್ ಪೇಟೆ’ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದ ಭರತ್​ ಎಸ್​. ನಾವುಂದ ಅವರು ಈಗ 3ನೇ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಈ ಸಿನಿಮಾದ ಮೂಲಕ ‘ಜೋಡಿಹಕ್ಕಿ’ ಧಾರಾವಾಹಿ ಖ್ಯಾತಿಯ ನಟ ತಾಂಡವ್ ರಾಮ್ ಅವರು ಹೀರೋ ಆಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದ್ದಾರೆ.

‘ಜೋಡಿಹಕ್ಕಿ’ ಧಾರಾವಾಹಿ ನಟ ತಾಂಡವ್ ರಾಮ್​ಗೆ ಸಿನಿಮಾ ಆಫರ್​; ಭರತ್​ ನಾವುಂದ ನಿರ್ದೇಶನ
ತಾಂಡವ್​ ರಾಮ್​, ಭರತ್​ ಎಸ್​. ನಾವುಂದ
ಮದನ್​ ಕುಮಾರ್​
|

Updated on: Oct 01, 2023 | 11:33 AM

Share

ಕಿರುತೆರೆಯ ಅನೇಕ ಪ್ರತಿಭೆಗಳು ಹಿರಿತೆರೆಯಲ್ಲಿ ಮಿಂಚುತ್ತಿದ್ದಾರೆ. ಧಾರಾವಾಹಿಗಳಲ್ಲಿ ಗುರುತಿಸಿಕೊಂಡ ಹಲವರಿಗೆ ಸ್ಯಾಂಡಲ್​ವುಡ್​ನಲ್ಲಿ (Sandalwood) ಅವಕಾಶ ಸಿಕ್ಕಿದೆ. ‘ಗೋಲ್ಡನ್​ ಸ್ಟಾರ್​’, ರಾಧಿಕಾ ಪಂಡಿತ್​, ಸೇರಿದಂತೆ ಅನೇಕ ಕಲಾವಿದರು ಕಿರುತೆರೆಯಿಂದಲೇ ಬಂದು ಹಿರಿತೆರೆಯಲ್ಲಿ ಯಶಸ್ಸು ಕಂಡಿದ್ದಾರೆ. ಇಂದಿಗೂ ಅನೇಕ ಸೀರಿಯಲ್​ ನಟ-ನಟಿಯರು ಸಿನಿಮಾರಂಗಕ್ಕೆ ಎಂಟ್ರಿ ನೀಡುತ್ತಲೇ ಇದ್ದಾರೆ. ದೊಡ್ಡ ಪರದೆಯಲ್ಲಿ ಸಕ್ಸಸ್​ ಕಾಣಲು ಹೊರಟಿರುವ ನಟರ ಸಾಲಿನಲ್ಲಿ ತಾಂಡವ್​ ರಾಮ್​ (Thandav Ram) ಕೂಡ ಇದ್ದಾರೆ. ಜೀ ಕನ್ನಡದ ‘ಜೋಡಿಹಕ್ಕಿ’ ಧಾರಾವಾಹಿ (Jodi Hakki Serial) ಮೂಲಕ ಅವರು ಫೇಮಸ್​ ಆಗಿದ್ದಾರೆ. ಈಗ ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಆ ಸಿನಿಮಾ ಬಗ್ಗೆ ಇಲ್ಲಿದೆ ಮಾಹಿತಿ..

2021ರಲ್ಲಿ ಮನೋರಂಜನ್​ ರವಿಚಂದ್ರನ್​ ನಟನೆಯ ‘ಮುಗಿಲ್ ಪೇಟೆ’ ಸಿನಿಮಾ ಬಿಡುಗಡೆ ಆಯಿತು. ಆ ಸಿನಿಮಾಗೆ ನಿರ್ದೇಶಕ ಭರತ್ ಎಸ್. ನಾವುಂದ ಅವರು ಆ್ಯಕ್ಷನ್​-ಕಟ್​ ಹೇಳಿದ್ದರು. ಈಗ ಅವರು ಮತ್ತೊಂದು ಹೊಸ ಕಥೆಯನ್ನು ಇಟ್ಟುಕೊಂಡು ಸಿನಿಮಾ ಮಾಡಲು ಸಜ್ಜಾಗಿದ್ದಾರೆ. ‘ಮುಗಿಲ್ ಪೇಟೆ’ ಸಿನಿಮಾ ಮೂಲಕ ಪ್ರೇಕ್ಷಕರಲ್ಲಿ ಭರವಸೆ ಮೂಡಿಸಿದ್ದ ಅವರು ‘ಜೋಡಿಹಕ್ಕಿ’ ಧಾರಾವಾಹಿ ಖ್ಯಾತಿಯ ನಟ ತಾಂಡವ್ ರಾಮ್ ಜೊತೆ ಸಿನಿಮಾ ಮಾಡಲಿದ್ದಾರೆ. ಈ ಸಿನಿಮಾ ಮೂಲಕ ತಾಂಡವ್​ ರಾಮ್​ ಅವರು ಹೀರೋ ಆಗಿ ಚಂದನವನಕ್ಕೆ ಎಂಟ್ರಿ ನೀಡಲಿದ್ದಾರೆ.

ಇದನ್ನೂ ಓದಿ: ನಟ ನಾಗಭೂಷಣ್​ ಕಾರು ಅಪಘಾತ; ಪಾದಚಾರಿ ಸಾವು; ಇನ್ನೊಬ್ಬರ ಸ್ಥಿತಿ ಗಂಭೀರ

ಭರತ್ ಎಸ್. ನಾವುಂದ ಅವರು ‘ಅಡಚಣೆಗಾಗಿ ಕ್ಷಮಿಸಿ’ ಚಿತ್ರದ ಮೂಲಕ ನಿರ್ದೇಶಕನಾಗಿ ಪ್ರೇಕ್ಷಕರಿಗೆ ಪರಿಚಯಗೊಂಡಿದ್ದರು. ಆ ನಂತರ ಅವರು ಮನ ಸೆಳೆಯುವ ಪ್ರೇಮಕಥೆ ಇರುವ, ಕೌಟುಂಬಿಕ ಮೌಲ್ಯಗಳನ್ನು ಒಳಗೊಂಡ ‘ಮುಗಿಲ್ ಪೇಟೆ’ ಚಿತ್ರವನ್ನು ನಿರ್ದೇಶಿಸಿದರು. ಆ ಎರಡು ಸಿನಿಮಾಗಳಿಂದ ಪಡೆದ ಅನುಭವವನ್ನು ಇಟ್ಟುಕೊಂಡು ಈಗ ಅವರು ಮೂರನೇ ಸಿನಿಮಾದ ನಿರ್ದೇಶನ ಮಾಡುತ್ತಿದ್ದಾರೆ. ಆ ಚಿತ್ರದ ಬಗ್ಗೆ ಹೆಚ್ಚಿನ ಅಪ್​ಡೇಟ್​ ತಿಳಿಯಲು ಸಿನಿಪ್ರಿಯರು ಕಾದಿದ್ದಾರೆ.

ಇದನ್ನೂ ಓದಿ: ‘Modi’ ಸಿನಿಮಾಗೆ ಹಾಲಿವುಡ್​ನಲ್ಲಿ ಶೂಟಿಂಗ್ ಶುರು; ಜಾನಿ ಡೆಪ್​ ನಿರ್ದೇಶನ: ಇದು ಯಾರ ಜೀವನದ ಕಥೆ?

ನಟ ತಾಂಡವ್ ರಾಮ್ ಅವರು ಕಿರುತೆರೆಯಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಅವರಿಗೆ ಸಿನಿಮಾದಲ್ಲಿ ಹೀರೋ ಆಗಿ ನಟಿಸುವ ಚಾನ್ಸ್​ ಸಿಕ್ಕಿದೆ. ವಿಶೇಷ ಏನೆಂದರೆ, ಮೊದಲ ಸಿನಿಮಾದಲ್ಲೇ ಅವರು ಏಕಕಾಲಕ್ಕೆ ಕನ್ನಡ ಮತ್ತು ತೆಲುಗು ಪ್ರೇಕ್ಷಕರ ಎದುರು ಬರಲಿದ್ದಾರೆ. ಈ ಎರಡೂ ಭಾಷೆಯಲ್ಲಿ ಈ ಸಿನಿಮಾ ನಿರ್ಮಾಣ ಆಗಲಿದೆ. ಪಾತ್ರವರ್ಗದಲ್ಲಿ ಅನೇಕ ಕಲಾವಿದರು ಇರಲಿದ್ದಾರೆ. ‘ಎ ಕ್ಯೂಬ್ ಫಿಲ್ಮ್ಸ್​’ ಬ್ಯಾನರ್​ ಮೂಲಕ ಅದ್ದೂರಿಯಾಗಿಯೇ ಈ ಚಿತ್ರ ನಿರ್ಮಾಣ ಆಗಲಿದೆ. ಚಿತ್ರದ ಶೀರ್ಷಿಕೆ ಏನು? ನಾಯಕಿ ಯಾರು? ತಂತ್ರಜ್ಞರು ಯಾರೆಲ್ಲ ಇದ್ದಾರೆ ಎಂಬ ಬಗ್ಗೆ ಶೀಘ್ರದಲ್ಲೇ ಮಾಹಿತಿ ಹೊರಬೀಳಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು