AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೋಡಿಹಕ್ಕಿ’ ಧಾರಾವಾಹಿ ನಟ ತಾಂಡವ್ ರಾಮ್​ಗೆ ಸಿನಿಮಾ ಆಫರ್​; ಭರತ್​ ನಾವುಂದ ನಿರ್ದೇಶನ

‘ಅಡಚಣೆಗಾಗಿ ಕ್ಷಮಿಸಿ’ ಮತ್ತು ‘ಮುಗಿಲ್ ಪೇಟೆ’ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದ ಭರತ್​ ಎಸ್​. ನಾವುಂದ ಅವರು ಈಗ 3ನೇ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಈ ಸಿನಿಮಾದ ಮೂಲಕ ‘ಜೋಡಿಹಕ್ಕಿ’ ಧಾರಾವಾಹಿ ಖ್ಯಾತಿಯ ನಟ ತಾಂಡವ್ ರಾಮ್ ಅವರು ಹೀರೋ ಆಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದ್ದಾರೆ.

‘ಜೋಡಿಹಕ್ಕಿ’ ಧಾರಾವಾಹಿ ನಟ ತಾಂಡವ್ ರಾಮ್​ಗೆ ಸಿನಿಮಾ ಆಫರ್​; ಭರತ್​ ನಾವುಂದ ನಿರ್ದೇಶನ
ತಾಂಡವ್​ ರಾಮ್​, ಭರತ್​ ಎಸ್​. ನಾವುಂದ
ಮದನ್​ ಕುಮಾರ್​
|

Updated on: Oct 01, 2023 | 11:33 AM

Share

ಕಿರುತೆರೆಯ ಅನೇಕ ಪ್ರತಿಭೆಗಳು ಹಿರಿತೆರೆಯಲ್ಲಿ ಮಿಂಚುತ್ತಿದ್ದಾರೆ. ಧಾರಾವಾಹಿಗಳಲ್ಲಿ ಗುರುತಿಸಿಕೊಂಡ ಹಲವರಿಗೆ ಸ್ಯಾಂಡಲ್​ವುಡ್​ನಲ್ಲಿ (Sandalwood) ಅವಕಾಶ ಸಿಕ್ಕಿದೆ. ‘ಗೋಲ್ಡನ್​ ಸ್ಟಾರ್​’, ರಾಧಿಕಾ ಪಂಡಿತ್​, ಸೇರಿದಂತೆ ಅನೇಕ ಕಲಾವಿದರು ಕಿರುತೆರೆಯಿಂದಲೇ ಬಂದು ಹಿರಿತೆರೆಯಲ್ಲಿ ಯಶಸ್ಸು ಕಂಡಿದ್ದಾರೆ. ಇಂದಿಗೂ ಅನೇಕ ಸೀರಿಯಲ್​ ನಟ-ನಟಿಯರು ಸಿನಿಮಾರಂಗಕ್ಕೆ ಎಂಟ್ರಿ ನೀಡುತ್ತಲೇ ಇದ್ದಾರೆ. ದೊಡ್ಡ ಪರದೆಯಲ್ಲಿ ಸಕ್ಸಸ್​ ಕಾಣಲು ಹೊರಟಿರುವ ನಟರ ಸಾಲಿನಲ್ಲಿ ತಾಂಡವ್​ ರಾಮ್​ (Thandav Ram) ಕೂಡ ಇದ್ದಾರೆ. ಜೀ ಕನ್ನಡದ ‘ಜೋಡಿಹಕ್ಕಿ’ ಧಾರಾವಾಹಿ (Jodi Hakki Serial) ಮೂಲಕ ಅವರು ಫೇಮಸ್​ ಆಗಿದ್ದಾರೆ. ಈಗ ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಆ ಸಿನಿಮಾ ಬಗ್ಗೆ ಇಲ್ಲಿದೆ ಮಾಹಿತಿ..

2021ರಲ್ಲಿ ಮನೋರಂಜನ್​ ರವಿಚಂದ್ರನ್​ ನಟನೆಯ ‘ಮುಗಿಲ್ ಪೇಟೆ’ ಸಿನಿಮಾ ಬಿಡುಗಡೆ ಆಯಿತು. ಆ ಸಿನಿಮಾಗೆ ನಿರ್ದೇಶಕ ಭರತ್ ಎಸ್. ನಾವುಂದ ಅವರು ಆ್ಯಕ್ಷನ್​-ಕಟ್​ ಹೇಳಿದ್ದರು. ಈಗ ಅವರು ಮತ್ತೊಂದು ಹೊಸ ಕಥೆಯನ್ನು ಇಟ್ಟುಕೊಂಡು ಸಿನಿಮಾ ಮಾಡಲು ಸಜ್ಜಾಗಿದ್ದಾರೆ. ‘ಮುಗಿಲ್ ಪೇಟೆ’ ಸಿನಿಮಾ ಮೂಲಕ ಪ್ರೇಕ್ಷಕರಲ್ಲಿ ಭರವಸೆ ಮೂಡಿಸಿದ್ದ ಅವರು ‘ಜೋಡಿಹಕ್ಕಿ’ ಧಾರಾವಾಹಿ ಖ್ಯಾತಿಯ ನಟ ತಾಂಡವ್ ರಾಮ್ ಜೊತೆ ಸಿನಿಮಾ ಮಾಡಲಿದ್ದಾರೆ. ಈ ಸಿನಿಮಾ ಮೂಲಕ ತಾಂಡವ್​ ರಾಮ್​ ಅವರು ಹೀರೋ ಆಗಿ ಚಂದನವನಕ್ಕೆ ಎಂಟ್ರಿ ನೀಡಲಿದ್ದಾರೆ.

ಇದನ್ನೂ ಓದಿ: ನಟ ನಾಗಭೂಷಣ್​ ಕಾರು ಅಪಘಾತ; ಪಾದಚಾರಿ ಸಾವು; ಇನ್ನೊಬ್ಬರ ಸ್ಥಿತಿ ಗಂಭೀರ

ಭರತ್ ಎಸ್. ನಾವುಂದ ಅವರು ‘ಅಡಚಣೆಗಾಗಿ ಕ್ಷಮಿಸಿ’ ಚಿತ್ರದ ಮೂಲಕ ನಿರ್ದೇಶಕನಾಗಿ ಪ್ರೇಕ್ಷಕರಿಗೆ ಪರಿಚಯಗೊಂಡಿದ್ದರು. ಆ ನಂತರ ಅವರು ಮನ ಸೆಳೆಯುವ ಪ್ರೇಮಕಥೆ ಇರುವ, ಕೌಟುಂಬಿಕ ಮೌಲ್ಯಗಳನ್ನು ಒಳಗೊಂಡ ‘ಮುಗಿಲ್ ಪೇಟೆ’ ಚಿತ್ರವನ್ನು ನಿರ್ದೇಶಿಸಿದರು. ಆ ಎರಡು ಸಿನಿಮಾಗಳಿಂದ ಪಡೆದ ಅನುಭವವನ್ನು ಇಟ್ಟುಕೊಂಡು ಈಗ ಅವರು ಮೂರನೇ ಸಿನಿಮಾದ ನಿರ್ದೇಶನ ಮಾಡುತ್ತಿದ್ದಾರೆ. ಆ ಚಿತ್ರದ ಬಗ್ಗೆ ಹೆಚ್ಚಿನ ಅಪ್​ಡೇಟ್​ ತಿಳಿಯಲು ಸಿನಿಪ್ರಿಯರು ಕಾದಿದ್ದಾರೆ.

ಇದನ್ನೂ ಓದಿ: ‘Modi’ ಸಿನಿಮಾಗೆ ಹಾಲಿವುಡ್​ನಲ್ಲಿ ಶೂಟಿಂಗ್ ಶುರು; ಜಾನಿ ಡೆಪ್​ ನಿರ್ದೇಶನ: ಇದು ಯಾರ ಜೀವನದ ಕಥೆ?

ನಟ ತಾಂಡವ್ ರಾಮ್ ಅವರು ಕಿರುತೆರೆಯಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಅವರಿಗೆ ಸಿನಿಮಾದಲ್ಲಿ ಹೀರೋ ಆಗಿ ನಟಿಸುವ ಚಾನ್ಸ್​ ಸಿಕ್ಕಿದೆ. ವಿಶೇಷ ಏನೆಂದರೆ, ಮೊದಲ ಸಿನಿಮಾದಲ್ಲೇ ಅವರು ಏಕಕಾಲಕ್ಕೆ ಕನ್ನಡ ಮತ್ತು ತೆಲುಗು ಪ್ರೇಕ್ಷಕರ ಎದುರು ಬರಲಿದ್ದಾರೆ. ಈ ಎರಡೂ ಭಾಷೆಯಲ್ಲಿ ಈ ಸಿನಿಮಾ ನಿರ್ಮಾಣ ಆಗಲಿದೆ. ಪಾತ್ರವರ್ಗದಲ್ಲಿ ಅನೇಕ ಕಲಾವಿದರು ಇರಲಿದ್ದಾರೆ. ‘ಎ ಕ್ಯೂಬ್ ಫಿಲ್ಮ್ಸ್​’ ಬ್ಯಾನರ್​ ಮೂಲಕ ಅದ್ದೂರಿಯಾಗಿಯೇ ಈ ಚಿತ್ರ ನಿರ್ಮಾಣ ಆಗಲಿದೆ. ಚಿತ್ರದ ಶೀರ್ಷಿಕೆ ಏನು? ನಾಯಕಿ ಯಾರು? ತಂತ್ರಜ್ಞರು ಯಾರೆಲ್ಲ ಇದ್ದಾರೆ ಎಂಬ ಬಗ್ಗೆ ಶೀಘ್ರದಲ್ಲೇ ಮಾಹಿತಿ ಹೊರಬೀಳಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್