AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧ್ರುವ ಸರ್ಜಾ-ಪ್ರೇಮ್​ ಕಾಂಬಿನೇಷನ್​ನಲ್ಲಿ ಹೊಸ ಸಿನಿಮಾ; ಗಾಂಧಿನಗರದಲ್ಲಿ ಭರ್ಜರಿ ಮಾತುಕತೆ

ಒಂದು ಮಾಸ್​ ಕಮರ್ಷಿಯಲ್​ ಸಿನಿಮಾಗೋಸ್ಕರ ಪ್ರೇಮ್ ಮತ್ತು ಧ್ರುವ ಸರ್ಜಾ ಕೈ ಜೋಡಿಸಲಿದ್ದಾರೆ. ಈಗಾಗಲೇ ಅವರು ಈ ಚಿತ್ರಕ್ಕೆ ಸಂಬಂಧಪಟ್ಟಂತೆ ಒಂದು ಸುತ್ತಿನ ಮಾತುಕತೆ ಕೂಡ ಮುಗಿಸಿದ್ದಾರೆ ಎನ್ನಲಾಗುತ್ತಿದೆ.

ಧ್ರುವ ಸರ್ಜಾ-ಪ್ರೇಮ್​ ಕಾಂಬಿನೇಷನ್​ನಲ್ಲಿ ಹೊಸ ಸಿನಿಮಾ; ಗಾಂಧಿನಗರದಲ್ಲಿ ಭರ್ಜರಿ ಮಾತುಕತೆ
ಪ್ರೇಮ್​, ಧ್ರುವ ಸರ್ಜಾ
TV9 Web
| Edited By: |

Updated on: Aug 03, 2021 | 8:21 AM

Share

ನಟ ಧ್ರುವ ಸರ್ಜಾ (Dhruva Sarja) ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಈಗಾಗಲೇ ಅದ್ದೂರಿ, ಭರ್ಜರಿ, ಬಹದ್ದೂರ್​ ಸಿನಿಮಾಗಳ ಮೂಲಕ ಹಿಟ್​ ನೀಡಿರುವ ಅವರಿಗೆ ‘ಪೊಗರು’ ಚಿತ್ರದಿಂದ ನಿರೀಕ್ಷಿತ ಮಟ್ಟದ ಗೆಲುವು ಸಿಗಲಿಲ್ಲ. ‘ಪೊಗರು’ (Pogaru) ಸಿನಿಮಾದ ಬಳಿಕ ನಿರ್ದೇಶಕ ನಂದಕಿಶೋರ್​ ಜೊತೆ ಅವರು ‘ದುಬಾರಿ’ ಸಿನಿಮಾ ಮಾಡುತ್ತಾರೆ ಎನ್ನಲಾಗಿತ್ತು. ಆದರೆ ನಂತರದಲ್ಲಿ ಪ್ಲ್ಯಾನ್ ತಲೆಕೆಳಗಾಯಿತು. ಹಾಗಾದರೆ ಧ್ರುವ ಅವರ ಮುಂದಿನ ಸಿನಿಮಾ ಯಾವುದು ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ಈ ನಡುವೆ ಖ್ಯಾತ ನಿರ್ದೇಶಕ ಪ್ರೇಮ್​ (Prem) ಜೊತೆಗೆ ಧ್ರುವ ಸರ್ಜಾ ಕೈ ಜೋಡಿಸುತ್ತಾರೆ ಎಂಬ ಸುದ್ದಿ ಜೋರಾಗಿ ಕೇಳಿಬರುತ್ತಿದೆ.

ಒಂದು ಮಾಸ್​ ಕಮರ್ಷಿಯಲ್​ ಸಿನಿಮಾಗೋಸ್ಕರ ಪ್ರೇಮ್ ಮತ್ತು ಧ್ರುವ ಸರ್ಜಾ ಕೈ ಜೋಡಿಸಲಿದ್ದಾರೆ. ಈಗಾಗಲೇ ಅವರು ಚಿತ್ರಕ್ಕೆ ಸಂಬಂಧಪಟ್ಟಂತೆ ಒಂದು ಸುತ್ತಿನ ಮಾತುಕತೆ ಕೂಡ ಮುಗಿಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ ದೊಡ್ಡ ನಿರ್ಮಾಣ ಸಂಸ್ಥೆಯು ಇವರಿಬ್ಬರ ಕಾಂಬಿನೇಷನ್​ನ ಚಿತ್ರಕ್ಕೆ ಬಂಡವಾಳ ಹೂಡಲಿದೆ ಎಂಬ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದೆ.

ಪ್ರೇಮ್​ ಅವರು ಸದ್ಯ ‘ಏಕ್​ ಲವ್​ ಯಾ’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಲಾಕ್​ಡೌನ್​ ಕಾರಣದಿಂದ ಆ ಸಿನಿಮಾದ ಕೆಲಸಗಳು ಕೊಂಚ ವಿಳಂಬ ಆಗಿದ್ದವು. ರಕ್ಷಿತಾ ಪ್ರೇಮ್​ ಸಹೋದರ ರಾಣ ನಟಿಸುತ್ತಿರುವ ಈ ಚಿತ್ರಕ್ಕೆ ರೀಷ್ಮಾ ನಾಣಯ್ಯ ಹಾಗೂ ರಚಿತಾ ರಾಮ್​ ನಾಯಕಿಯರು. ‘ಏಕ್​ ಲವ್​ ಯಾ’ ಬಳಿಕವೇ ಧ್ರುವ ಜೊತೆ ಪ್ರೇಮ್​ ಕೈ ಜೋಡಿಸುತ್ತಾರಾ ಅಥವಾ ಇನ್ನೂ ತಡವಾಗಲಿದೆಯಾ ಎಂಬುದಕ್ಕೆ ಇನ್ನಷ್ಟೇ ಉತ್ತರ ಸಿಗಬೇಕಿದೆ.

ಇನ್ನು, ಧ್ರುವ ಸರ್ಜಾ ಕೈಯಲ್ಲೂ ಹಲವು ಪ್ರಾಜೆಕ್ಟ್​ಗಳಿವೆ. ತಮ್ಮ ಚೊಚ್ಚಲ ಸಿನಿಮಾ (ಅದ್ದೂರಿ) ನಿರ್ದೇಶಕ ಎ.ಪಿ. ಅರ್ಜುನ್​ ಜೊತೆ ಅವರು ಹೊಸ ಚಿತ್ರಕ್ಕಾಗಿ ಕೈ ಜೋಡಿಸುತ್ತಿದ್ದು, ಆ.15ರಂದು ಅದರ ಮುಹೂರ್ತ ನೆರವೇರಲಿದೆ. ‘ಜಗ್ಗುದಾದ’ ನಿರ್ದೇಶಕ ರಾಘವೇಂದ್ರ ಹೆಗಡೆ ಜೊತೆಗೂ ಧ್ರುವ ಒಂದು ಸಿನಿಮಾ ಮಾಡಬೇಕಿದೆ. ಈ ಎಲ್ಲ ಪ್ರಾಜೆಕ್ಟ್​ಗಳ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಇವುಗಳ ಪೈಕಿ ಯಾವುದರ ಚಿತ್ರೀಕರಣವನ್ನು ಧ್ರುವ ಮೊದಲು ಆರಂಭಿಸುತ್ತಾರೆ ಎಂಬ ಕೌತುಕ ಈಗ ಮೂಡಿದೆ.

ಇದನ್ನೂ ಓದಿ:

Dhruva Sarja : ಧ್ರುವ ಸರ್ಜಾ ಬೌನ್ಸರ್​ಗೆ ಹಿಗ್ಗಾಮುಗ್ಗ ತರಾಟೆ, ನೂಕುನುಗ್ಗಲು ಜಟಾಪಟಿ

ಕೊವಿಡ್​ ಲಸಿಕೆ ಹಾಕಿಸಿಕೊಂಡ ಧ್ರುವ ಸರ್ಜಾ; ಬೈಸೆಪ್ಸ್​ ನೋಡಿ ದಂಗಾದ ಫ್ಯಾನ್ಸ್​

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ