AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧ್ರುವ ಸರ್ಜಾ-ಪ್ರೇಮ್​ ಕಾಂಬಿನೇಷನ್​ನಲ್ಲಿ ಹೊಸ ಸಿನಿಮಾ; ಗಾಂಧಿನಗರದಲ್ಲಿ ಭರ್ಜರಿ ಮಾತುಕತೆ

ಒಂದು ಮಾಸ್​ ಕಮರ್ಷಿಯಲ್​ ಸಿನಿಮಾಗೋಸ್ಕರ ಪ್ರೇಮ್ ಮತ್ತು ಧ್ರುವ ಸರ್ಜಾ ಕೈ ಜೋಡಿಸಲಿದ್ದಾರೆ. ಈಗಾಗಲೇ ಅವರು ಈ ಚಿತ್ರಕ್ಕೆ ಸಂಬಂಧಪಟ್ಟಂತೆ ಒಂದು ಸುತ್ತಿನ ಮಾತುಕತೆ ಕೂಡ ಮುಗಿಸಿದ್ದಾರೆ ಎನ್ನಲಾಗುತ್ತಿದೆ.

ಧ್ರುವ ಸರ್ಜಾ-ಪ್ರೇಮ್​ ಕಾಂಬಿನೇಷನ್​ನಲ್ಲಿ ಹೊಸ ಸಿನಿಮಾ; ಗಾಂಧಿನಗರದಲ್ಲಿ ಭರ್ಜರಿ ಮಾತುಕತೆ
ಪ್ರೇಮ್​, ಧ್ರುವ ಸರ್ಜಾ
TV9 Web
| Edited By: |

Updated on: Aug 03, 2021 | 8:21 AM

Share

ನಟ ಧ್ರುವ ಸರ್ಜಾ (Dhruva Sarja) ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಈಗಾಗಲೇ ಅದ್ದೂರಿ, ಭರ್ಜರಿ, ಬಹದ್ದೂರ್​ ಸಿನಿಮಾಗಳ ಮೂಲಕ ಹಿಟ್​ ನೀಡಿರುವ ಅವರಿಗೆ ‘ಪೊಗರು’ ಚಿತ್ರದಿಂದ ನಿರೀಕ್ಷಿತ ಮಟ್ಟದ ಗೆಲುವು ಸಿಗಲಿಲ್ಲ. ‘ಪೊಗರು’ (Pogaru) ಸಿನಿಮಾದ ಬಳಿಕ ನಿರ್ದೇಶಕ ನಂದಕಿಶೋರ್​ ಜೊತೆ ಅವರು ‘ದುಬಾರಿ’ ಸಿನಿಮಾ ಮಾಡುತ್ತಾರೆ ಎನ್ನಲಾಗಿತ್ತು. ಆದರೆ ನಂತರದಲ್ಲಿ ಪ್ಲ್ಯಾನ್ ತಲೆಕೆಳಗಾಯಿತು. ಹಾಗಾದರೆ ಧ್ರುವ ಅವರ ಮುಂದಿನ ಸಿನಿಮಾ ಯಾವುದು ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ಈ ನಡುವೆ ಖ್ಯಾತ ನಿರ್ದೇಶಕ ಪ್ರೇಮ್​ (Prem) ಜೊತೆಗೆ ಧ್ರುವ ಸರ್ಜಾ ಕೈ ಜೋಡಿಸುತ್ತಾರೆ ಎಂಬ ಸುದ್ದಿ ಜೋರಾಗಿ ಕೇಳಿಬರುತ್ತಿದೆ.

ಒಂದು ಮಾಸ್​ ಕಮರ್ಷಿಯಲ್​ ಸಿನಿಮಾಗೋಸ್ಕರ ಪ್ರೇಮ್ ಮತ್ತು ಧ್ರುವ ಸರ್ಜಾ ಕೈ ಜೋಡಿಸಲಿದ್ದಾರೆ. ಈಗಾಗಲೇ ಅವರು ಚಿತ್ರಕ್ಕೆ ಸಂಬಂಧಪಟ್ಟಂತೆ ಒಂದು ಸುತ್ತಿನ ಮಾತುಕತೆ ಕೂಡ ಮುಗಿಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ ದೊಡ್ಡ ನಿರ್ಮಾಣ ಸಂಸ್ಥೆಯು ಇವರಿಬ್ಬರ ಕಾಂಬಿನೇಷನ್​ನ ಚಿತ್ರಕ್ಕೆ ಬಂಡವಾಳ ಹೂಡಲಿದೆ ಎಂಬ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದೆ.

ಪ್ರೇಮ್​ ಅವರು ಸದ್ಯ ‘ಏಕ್​ ಲವ್​ ಯಾ’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಲಾಕ್​ಡೌನ್​ ಕಾರಣದಿಂದ ಆ ಸಿನಿಮಾದ ಕೆಲಸಗಳು ಕೊಂಚ ವಿಳಂಬ ಆಗಿದ್ದವು. ರಕ್ಷಿತಾ ಪ್ರೇಮ್​ ಸಹೋದರ ರಾಣ ನಟಿಸುತ್ತಿರುವ ಈ ಚಿತ್ರಕ್ಕೆ ರೀಷ್ಮಾ ನಾಣಯ್ಯ ಹಾಗೂ ರಚಿತಾ ರಾಮ್​ ನಾಯಕಿಯರು. ‘ಏಕ್​ ಲವ್​ ಯಾ’ ಬಳಿಕವೇ ಧ್ರುವ ಜೊತೆ ಪ್ರೇಮ್​ ಕೈ ಜೋಡಿಸುತ್ತಾರಾ ಅಥವಾ ಇನ್ನೂ ತಡವಾಗಲಿದೆಯಾ ಎಂಬುದಕ್ಕೆ ಇನ್ನಷ್ಟೇ ಉತ್ತರ ಸಿಗಬೇಕಿದೆ.

ಇನ್ನು, ಧ್ರುವ ಸರ್ಜಾ ಕೈಯಲ್ಲೂ ಹಲವು ಪ್ರಾಜೆಕ್ಟ್​ಗಳಿವೆ. ತಮ್ಮ ಚೊಚ್ಚಲ ಸಿನಿಮಾ (ಅದ್ದೂರಿ) ನಿರ್ದೇಶಕ ಎ.ಪಿ. ಅರ್ಜುನ್​ ಜೊತೆ ಅವರು ಹೊಸ ಚಿತ್ರಕ್ಕಾಗಿ ಕೈ ಜೋಡಿಸುತ್ತಿದ್ದು, ಆ.15ರಂದು ಅದರ ಮುಹೂರ್ತ ನೆರವೇರಲಿದೆ. ‘ಜಗ್ಗುದಾದ’ ನಿರ್ದೇಶಕ ರಾಘವೇಂದ್ರ ಹೆಗಡೆ ಜೊತೆಗೂ ಧ್ರುವ ಒಂದು ಸಿನಿಮಾ ಮಾಡಬೇಕಿದೆ. ಈ ಎಲ್ಲ ಪ್ರಾಜೆಕ್ಟ್​ಗಳ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಇವುಗಳ ಪೈಕಿ ಯಾವುದರ ಚಿತ್ರೀಕರಣವನ್ನು ಧ್ರುವ ಮೊದಲು ಆರಂಭಿಸುತ್ತಾರೆ ಎಂಬ ಕೌತುಕ ಈಗ ಮೂಡಿದೆ.

ಇದನ್ನೂ ಓದಿ:

Dhruva Sarja : ಧ್ರುವ ಸರ್ಜಾ ಬೌನ್ಸರ್​ಗೆ ಹಿಗ್ಗಾಮುಗ್ಗ ತರಾಟೆ, ನೂಕುನುಗ್ಗಲು ಜಟಾಪಟಿ

ಕೊವಿಡ್​ ಲಸಿಕೆ ಹಾಕಿಸಿಕೊಂಡ ಧ್ರುವ ಸರ್ಜಾ; ಬೈಸೆಪ್ಸ್​ ನೋಡಿ ದಂಗಾದ ಫ್ಯಾನ್ಸ್​

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ