AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧ್ರುವ ಸರ್ಜಾ-ಪ್ರೇಮ್​ ಕಾಂಬಿನೇಷನ್​ನಲ್ಲಿ ಹೊಸ ಸಿನಿಮಾ; ಗಾಂಧಿನಗರದಲ್ಲಿ ಭರ್ಜರಿ ಮಾತುಕತೆ

ಒಂದು ಮಾಸ್​ ಕಮರ್ಷಿಯಲ್​ ಸಿನಿಮಾಗೋಸ್ಕರ ಪ್ರೇಮ್ ಮತ್ತು ಧ್ರುವ ಸರ್ಜಾ ಕೈ ಜೋಡಿಸಲಿದ್ದಾರೆ. ಈಗಾಗಲೇ ಅವರು ಈ ಚಿತ್ರಕ್ಕೆ ಸಂಬಂಧಪಟ್ಟಂತೆ ಒಂದು ಸುತ್ತಿನ ಮಾತುಕತೆ ಕೂಡ ಮುಗಿಸಿದ್ದಾರೆ ಎನ್ನಲಾಗುತ್ತಿದೆ.

ಧ್ರುವ ಸರ್ಜಾ-ಪ್ರೇಮ್​ ಕಾಂಬಿನೇಷನ್​ನಲ್ಲಿ ಹೊಸ ಸಿನಿಮಾ; ಗಾಂಧಿನಗರದಲ್ಲಿ ಭರ್ಜರಿ ಮಾತುಕತೆ
ಪ್ರೇಮ್​, ಧ್ರುವ ಸರ್ಜಾ
Follow us
TV9 Web
| Updated By: ಮದನ್​ ಕುಮಾರ್​

Updated on: Aug 03, 2021 | 8:21 AM

ನಟ ಧ್ರುವ ಸರ್ಜಾ (Dhruva Sarja) ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಈಗಾಗಲೇ ಅದ್ದೂರಿ, ಭರ್ಜರಿ, ಬಹದ್ದೂರ್​ ಸಿನಿಮಾಗಳ ಮೂಲಕ ಹಿಟ್​ ನೀಡಿರುವ ಅವರಿಗೆ ‘ಪೊಗರು’ ಚಿತ್ರದಿಂದ ನಿರೀಕ್ಷಿತ ಮಟ್ಟದ ಗೆಲುವು ಸಿಗಲಿಲ್ಲ. ‘ಪೊಗರು’ (Pogaru) ಸಿನಿಮಾದ ಬಳಿಕ ನಿರ್ದೇಶಕ ನಂದಕಿಶೋರ್​ ಜೊತೆ ಅವರು ‘ದುಬಾರಿ’ ಸಿನಿಮಾ ಮಾಡುತ್ತಾರೆ ಎನ್ನಲಾಗಿತ್ತು. ಆದರೆ ನಂತರದಲ್ಲಿ ಪ್ಲ್ಯಾನ್ ತಲೆಕೆಳಗಾಯಿತು. ಹಾಗಾದರೆ ಧ್ರುವ ಅವರ ಮುಂದಿನ ಸಿನಿಮಾ ಯಾವುದು ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ಈ ನಡುವೆ ಖ್ಯಾತ ನಿರ್ದೇಶಕ ಪ್ರೇಮ್​ (Prem) ಜೊತೆಗೆ ಧ್ರುವ ಸರ್ಜಾ ಕೈ ಜೋಡಿಸುತ್ತಾರೆ ಎಂಬ ಸುದ್ದಿ ಜೋರಾಗಿ ಕೇಳಿಬರುತ್ತಿದೆ.

ಒಂದು ಮಾಸ್​ ಕಮರ್ಷಿಯಲ್​ ಸಿನಿಮಾಗೋಸ್ಕರ ಪ್ರೇಮ್ ಮತ್ತು ಧ್ರುವ ಸರ್ಜಾ ಕೈ ಜೋಡಿಸಲಿದ್ದಾರೆ. ಈಗಾಗಲೇ ಅವರು ಚಿತ್ರಕ್ಕೆ ಸಂಬಂಧಪಟ್ಟಂತೆ ಒಂದು ಸುತ್ತಿನ ಮಾತುಕತೆ ಕೂಡ ಮುಗಿಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ ದೊಡ್ಡ ನಿರ್ಮಾಣ ಸಂಸ್ಥೆಯು ಇವರಿಬ್ಬರ ಕಾಂಬಿನೇಷನ್​ನ ಚಿತ್ರಕ್ಕೆ ಬಂಡವಾಳ ಹೂಡಲಿದೆ ಎಂಬ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದೆ.

ಪ್ರೇಮ್​ ಅವರು ಸದ್ಯ ‘ಏಕ್​ ಲವ್​ ಯಾ’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಲಾಕ್​ಡೌನ್​ ಕಾರಣದಿಂದ ಆ ಸಿನಿಮಾದ ಕೆಲಸಗಳು ಕೊಂಚ ವಿಳಂಬ ಆಗಿದ್ದವು. ರಕ್ಷಿತಾ ಪ್ರೇಮ್​ ಸಹೋದರ ರಾಣ ನಟಿಸುತ್ತಿರುವ ಈ ಚಿತ್ರಕ್ಕೆ ರೀಷ್ಮಾ ನಾಣಯ್ಯ ಹಾಗೂ ರಚಿತಾ ರಾಮ್​ ನಾಯಕಿಯರು. ‘ಏಕ್​ ಲವ್​ ಯಾ’ ಬಳಿಕವೇ ಧ್ರುವ ಜೊತೆ ಪ್ರೇಮ್​ ಕೈ ಜೋಡಿಸುತ್ತಾರಾ ಅಥವಾ ಇನ್ನೂ ತಡವಾಗಲಿದೆಯಾ ಎಂಬುದಕ್ಕೆ ಇನ್ನಷ್ಟೇ ಉತ್ತರ ಸಿಗಬೇಕಿದೆ.

ಇನ್ನು, ಧ್ರುವ ಸರ್ಜಾ ಕೈಯಲ್ಲೂ ಹಲವು ಪ್ರಾಜೆಕ್ಟ್​ಗಳಿವೆ. ತಮ್ಮ ಚೊಚ್ಚಲ ಸಿನಿಮಾ (ಅದ್ದೂರಿ) ನಿರ್ದೇಶಕ ಎ.ಪಿ. ಅರ್ಜುನ್​ ಜೊತೆ ಅವರು ಹೊಸ ಚಿತ್ರಕ್ಕಾಗಿ ಕೈ ಜೋಡಿಸುತ್ತಿದ್ದು, ಆ.15ರಂದು ಅದರ ಮುಹೂರ್ತ ನೆರವೇರಲಿದೆ. ‘ಜಗ್ಗುದಾದ’ ನಿರ್ದೇಶಕ ರಾಘವೇಂದ್ರ ಹೆಗಡೆ ಜೊತೆಗೂ ಧ್ರುವ ಒಂದು ಸಿನಿಮಾ ಮಾಡಬೇಕಿದೆ. ಈ ಎಲ್ಲ ಪ್ರಾಜೆಕ್ಟ್​ಗಳ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಇವುಗಳ ಪೈಕಿ ಯಾವುದರ ಚಿತ್ರೀಕರಣವನ್ನು ಧ್ರುವ ಮೊದಲು ಆರಂಭಿಸುತ್ತಾರೆ ಎಂಬ ಕೌತುಕ ಈಗ ಮೂಡಿದೆ.

ಇದನ್ನೂ ಓದಿ:

Dhruva Sarja : ಧ್ರುವ ಸರ್ಜಾ ಬೌನ್ಸರ್​ಗೆ ಹಿಗ್ಗಾಮುಗ್ಗ ತರಾಟೆ, ನೂಕುನುಗ್ಗಲು ಜಟಾಪಟಿ

ಕೊವಿಡ್​ ಲಸಿಕೆ ಹಾಕಿಸಿಕೊಂಡ ಧ್ರುವ ಸರ್ಜಾ; ಬೈಸೆಪ್ಸ್​ ನೋಡಿ ದಂಗಾದ ಫ್ಯಾನ್ಸ್​

ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ