AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪು ಫೋಟೋ ಮುಂದೆ ಶಾಂಪೇನ್​ ವಿವಾದ: ‘ಇದು ಇಷ್ಟು ದೊಡ್ಡದು ಆಗುತ್ತೆ ಅಂತ ಗೊತ್ತಿರಲಿಲ್ಲ’: ಪ್ರೇಮ್​ ಪ್ರತಿಕ್ರಿಯೆ

Puneeth Rajkumar | Jogi Prem: ‘ಇದು ಇಷ್ಟು ದೊಡ್ಡ ಇಶ್ಯೂ ಆಗುತ್ತೆ ಅಂತ ನನಗೆ ಗೊತ್ತಿರಲಿಲ್ಲ. ನನ್ನಿಂದಾಗಿ ಯಾರಿಗಾದರೂ ನೋವಾಗಿದ್ದರೆ ಖಂಡಿತ ಅಭಿಮಾನಿಗಳಲ್ಲಿ ಕ್ಷಮೆ ಕೇಳುತ್ತೇನೆ’ ಎಂದು ‘ಏಕ್​ ಲವ್​ ಯಾ’ ನಿರ್ದೇಶಕ ಜೋಗಿ ಪ್ರೇಮ್​ ಹೇಳಿದ್ದಾರೆ.

ಅಪ್ಪು ಫೋಟೋ ಮುಂದೆ ಶಾಂಪೇನ್​ ವಿವಾದ: ‘ಇದು ಇಷ್ಟು ದೊಡ್ಡದು ಆಗುತ್ತೆ ಅಂತ ಗೊತ್ತಿರಲಿಲ್ಲ’: ಪ್ರೇಮ್​ ಪ್ರತಿಕ್ರಿಯೆ
ಪುನೀತ್​ ರಾಜ್​ಕುಮಾರ್​, ಜೋಗಿ ಪ್ರೇಮ್
TV9 Web
| Edited By: |

Updated on: Nov 13, 2021 | 1:59 PM

Share

ಪುನೀತ್​ ರಾಜ್​ಕುಮಾರ್​ (Puneeth Rajkumar) ಜೊತೆ ‘ರಾಜ್​: ದಿ ಶೋ ಮ್ಯಾನ್​’ ಸಿನಿಮಾ ಮಾಡಿದ್ದವರು ನಿರ್ದೇಶಕ ಜೋಗಿ ಪ್ರೇಮ್​. ಅವರ ಪತ್ನಿ ರಕ್ಷಿತಾ ಪ್ರೇಮ್​ (Rachita Ram) ಅವರು ಪುನೀತ್​ ಜೊತೆ ‘ಅಪ್ಪು’ ಸಿನಿಮಾದಿಂದಲೇ ಚಿತ್ರರಂಗಕ್ಕೆ ಕಾಲಿಟ್ಟವರು. ಆದರೆ ಈಗ ಈ ದಂಪತಿಯಿಂದಲೇ ಪುನೀತ್​ ರಾಜ್​ಕುಮಾರ್​ಗೆ ಅವಮಾನ ಆಗುವಂತಹ ಘಟನೆ ನಡೆದಿದ್ದು ವಿಪರ್ಯಾಸ. ರಕ್ಷಿತಾ ಪ್ರೇಮ್​ ನಿರ್ಮಾಣದ, ಪ್ರೇಮ್​ (Jogi Prem) ನಿರ್ದೇಶನದ ‘ಏಕ್​ ಲವ್​ ಯಾ’ (Ek Love Ya) ಚಿತ್ರದ ಒಂದು ಹಾಡನ್ನು ಶುಕ್ರವಾರ (ನ.12) ಸಂಜೆ ಬೆಂಗಳೂರಿನ ಸ್ಟಾರ್​ ಹೋಟೆಲ್​ನಲ್ಲಿ ಬಿಡುಗಡೆ ಮಾಡಲಾಯಿತು. ಈ ವೇಳೆ ಪುನೀತ್​ ರಾಜ್​ಕುಮಾರ್​ ಅವರಿಗೆ ನಮನ ಸಲ್ಲಿಸಲು ಇರಿಸಿದ್ದ ಫೋಟೋದ ಎದುರಿನಲ್ಲಿಯೇ ಶಾಂಪೇನ್​ (Champagne) ಬಾಟಲ್​ ಓಪನ್​ ಮಾಡಲಾಯಿತು. ಅದೀಗ ವಿವಾದಕ್ಕೆ ಕಾರಣ ಆಗಿದ್ದು, ಘಟನೆ ಸಂಬಂಧಿಸಿದಂತೆ ಪ್ರೇಮ್​ ಪ್ರತಿಕ್ರಿಯೆ ನೀಡಿದ್ದಾರೆ.

‘ಇದು ಇಷ್ಟು ದೊಡ್ಡ ಇಶ್ಯೂ ಆಗುತ್ತೆ ಅಂತ ನನಗೆ ಗೊತ್ತಿರಲಿಲ್ಲ. ನನ್ನಿಂದಾಗಿ ಯಾರಿಗಾದರೂ ನೋವಾಗಿದ್ದರೆ ಖಂಡಿತ ಅಭಿಮಾನಿಗಳಲ್ಲಿ ಕ್ಷಮೆ ಕೇಳುತ್ತೇನೆ. ಅಪ್ಪು ಅವರು ಬೆಡ್​ ಮೇಲೆ ಮಲಗಿದ್ದಾಗ ನಾನು ಆಸ್ಪತ್ರೆಗೆ ಹೋಗಿದ್ದೆ. ಅವರ ಎರಡೂ ಕಾಲುಗಳನ್ನು ಹಿಡಿದುಕೊಂಡು ಕ್ಷಮೆ ಕೇಳಿದ್ದೆ. ನಮ್ಮ ಅಮ್ಮ ತೀರಿಹೋದಾಗಲೂ ಸಹ ಮೊದಲು ಅವರ ಮುಖ ನೋಡಲಿಲ್ಲ. ನನ್ನಿಂದ ಏನಾದರೂ ತಪ್ಪಾಗಿದ್ದರೆ ಕ್ಷಮಿಸಿಬಿಡು ಅಂತ ಕಾಲು ಹಿಡಿದುಕೊಂಡಿದ್ದೆ. ಈಗಲೂ ನನ್ನಿಂದ ಕಿಂಚಿತ್ತು ತೊಂದರೆ ಆಗಿದ್ದರೂ ಕ್ಷಮಿಸಿ ಅಂತ ಜನರಲ್ಲಿ ಕೇಳಿಕೊಳ್ಳುತ್ತೇನೆ’ ಎಂದಿದ್ದಾರೆ ಪ್ರೇಮ್​

‘ಗೊತ್ತಿಲ್ಲದೇ ನಡೆದ ತಪ್ಪನ್ನು ತಿದ್ದಿ ಹೇಳಿದಾಗ ನಮಗೆ ಅರಿವಾಗುತ್ತದೆ. ಗೊತ್ತಿದ್ದೂ ನಾವು ಇಂಥ ತಪ್ಪು ಮಾಡುವುದಿಲ್ಲ. ರಕ್ಷಿತಾಗೂ ಇದು ತಿಳಿಯಲಿಲ್ಲ. ನಾವು ತುಂಬಾ ಪ್ರೀತಿ ಮಾಡುವ ವ್ಯಕ್ತಿ ಅಪ್ಪು. ಅವರ ಇಡೀ ಕುಟುಂಬದ ಜೊತೆ ಒಳ್ಳೆಯ ಆಪ್ತತೆ ಇದೆ. ಅವರಿಂದ ತುಂಬ ಕಲಿತಿದ್ದೇನೆ. ಅವರ ಜೊತೆಯಲ್ಲೇ ಬೆಳೆದುಬಂದವನು ನಾನು. ಇಂದು ನನ್ನಿಂದ ಇಂಥ ತಪ್ಪಾಗುತ್ತೆ ಅಂತ ಗೊತ್ತಿರಲಿಲ್ಲ’ ಎಂದು ಪ್ರೇಮ್​ ಹೇಳಿದ್ದಾರೆ.

ರಚಿತಾ ರಾಮ್​ ಪ್ರತಿಕ್ರಿಯೆ ಏನು?

ಸೋಶಿಯಲ್​ ಮೀಡಿಯಾದಲ್ಲಿ ಈ ಘಟನೆ ಬಗ್ಗೆ ರಚಿತಾ ರಾಮ್​ ಸಮಜಾಯಿಷಿ ನೀಡಿದ್ದಾರೆ. ‘ನಿನ್ನೆಯ ಏಕ್​ ಲವ್​ ಯಾ ಸಿನಿಮಾದ ಸಾಂಗ್​ ಲಾಂಚ್​ ಕಾರ್ಯಕ್ರಮದಲ್ಲಿ ಶಾಂಪೇನ್​ ಬಾಟಲ್​ ಓಪನ್​ ಮಾಡಿ ಹಾಡನ್ನು ಬಿಡುಗಡೆಗೊಳಿಸಿರುವ ಬಗ್ಗೆ ನಿಮ್ಮೆಲ್ಲರಿಗೆ ಅಸಮಾಧಾನ ಆಗಿದೆ. ಆ ಬಗ್ಗೆ ದಯವಿಟ್ಟು ಕ್ಷಮೆ ಇರಲಿ. ನಾನೂ ಕೂಡ ಚಿತ್ರದ ಭಾಗವಾಗಿರುವುದರಿಂದ ಕ್ಷಮೆ ಕೇಳುತ್ತೇನೆ. ಅಪ್ಪು ಅವರಿಗೆ ಅವಮಾನ ಮಾಡುವ ಉದ್ದೇಶ, ಆಲೋಚನೆ ಯಾವ ಕನ್ನಡಿಗರಿಗೂ ಇರುವುದಿಲ್ಲ. ಆದಾಗಿಯೂ ಉದ್ದೇಶಪೂರ್ವಕವಲ್ಲದ ತಪ್ಪನ್ನು ಅಭಿಮಾನಿಗಳು ಮನ್ನಿಸುತ್ತಾರೆಂದು ನಂಬಿದ್ದೇನೆ’ ಎಂದು ರಚಿತಾ ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ:

ಅಪ್ಪು ಫೋಟೋ ಮುಂದೆ ಶಾಂಪೇನ್​; ತಲೆ ತಗ್ಗಿಸುವ ಕೆಲಸ ಮಾಡಿದ ಚಿತ್ರತಂಡ ಕ್ಷಮೆ ಕೇಳ್ಬೇಕು: ಸಾ.ರಾ. ಗೋವಿಂದು

Puneeth Rajkumar: ಪುನೀತ್​ ಬಗ್ಗೆ ಅವಹೇಳನಕಾರಿ ಪೋಸ್ಟ್​ ಮಾಡಿದ್ದ ವ್ಯಕ್ತಿ ಅರೆಸ್ಟ್​; ಸೈಬರ್​ ಪೊಲೀಸರ ಬಲೆಗೆ ಬಿದ್ದ ಕಿಡಿಗೇಡಿ

Follow Us
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ