AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಮತ್ತು ಗುಂಡ 2’ ಸಿನಿಮಾದ ಶೀರ್ಷಿಕೆ ಗೀತೆ ಬಿಡುಗಡೆ ಮಾಡಿದ ಜೋಗಿ ಪ್ರೇಮ್

ರಾಕೇಶ್ ಅಡಿಗ, ರಚನಾ ಇಂದರ್ ಮುಂತಾದವರು ‘ನಾನು ಮತ್ತು ಗುಂಡ 2’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಖ್ಯಾತ ಸಂಗೀತ ನಿರ್ದೇಶಕ ಆರ್​.ಪಿ. ಪಟ್ನಾಯಕ್ ಅವರು ಸಂಗೀತ ನೀಡಿದ್ದಾರೆ. ಚಿತ್ರದ ಟೈಟಲ್ ಸಾಂಗ್ ಬಿಡುಗಡೆ ಮಾಡಲಾಗಿದೆ. ಜೋಗಿ ಪ್ರೇಮ್ ಅವರು ಈ ಹಾಡನ್ನು ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

‘ನಾನು ಮತ್ತು ಗುಂಡ 2’ ಸಿನಿಮಾದ ಶೀರ್ಷಿಕೆ ಗೀತೆ ಬಿಡುಗಡೆ ಮಾಡಿದ ಜೋಗಿ ಪ್ರೇಮ್
Naanu Matthu Gunda 2 Movie Team
ಮದನ್​ ಕುಮಾರ್​
|

Updated on: Apr 30, 2025 | 9:37 PM

Share

ಕನ್ನಡದಲ್ಲಿ ಸಾಕಷ್ಟು ಸೂಪರ್ ಹಿಟ್ ಹಾಡುಗಳನ್ನು ನೀಡಿದ ಸಂಗೀತ ನಿರ್ದೇಶಕ ಆರ್​.ಪಿ. ಪಟ್ನಾಯಕ್ (R. P. Patnaik) ಅವರು ಈಗ ‘ನಾನು ಮತ್ತು ಗುಂಡ 2’ ಸಿನಿಮಾಗೆ ಸಂಗೀತ ನೀಡಿದ್ದಾರೆ. ಈ ಸಿನಿಮಾದ ಟೈಟಲ್ ಸಾಂಗ್ ಬಿಡುಗಡೆ ಮಾಡಲಾಗಿದೆ. ಜೋಗಿ ಪ್ರೇಮ್ ಅವರು ಮುಖ್ಯ ಅತಿಥಿಯಾಗಿ ಬಂದು ಈ ಗೀತೆಯನ್ನು ರಿಲೀಸ್ ಮಾಡಿದ್ದಾರೆ. ರಾಕೇಶ್ ಅಡಿಗ ಮತ್ತು ರಚನಾ ಇಂದರ್ ಅವರು ಈ ಸಿನಿಮಾದಲ್ಲಿ ನಾಯಕ-ನಾಯಕಿಯಾಗಿ ನಟಿಸಿದ್ದಾರೆ. ರಘು ಹಾಸನ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ‘ನಾನು ಮತ್ತು ಗುಂಡ 2’ (Naanu Matthu Gunda 2) ಚಿತ್ರತಂಡದವರು ಮಾತನಾಡಿದರು. ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಂಡರು.

ನಾಯಿ ಮತ್ತು ಹುಡುಗನೊಬ್ಬನ ನಡುವಿನ ಬಾಂಧವ್ಯದ ಕಥೆಯನ್ನು ‘ನಾನು ಮತ್ತು ಗುಂಡ 2’ ಸಿನಿಮಾದಲ್ಲಿ ತೋರಿಸಲಾಗುವುದು. ‘ಪೊಯೆಮ್ ಪಿಕ್ಚರ್ಸ್’ ಮೂಲಕ ಈ ಸಿನಿಮಾವನ್ನು ರಘು ಹಾಸನ್ ಅವರೇ ನಿರ್ಮಿಸಿದ್ದಾರೆ. ಈ ಹಿಂದೆ ಬಿಡುಗಡೆಯಾಗಿ ಗಮನ ಸೆಳೆದಿದ್ದ ‘ನಾನು ಮತ್ತು ಗುಂಡ’ ಸಿನಿಮಾದ ಮುಂದುವರಿದ ಭಾಗವಾಗಿ ‘ನಾನು ಮತ್ತು ಗುಂಡ 2’ ಸಿನಿಮಾ ಬರುತ್ತಿದೆ. ಕೆಲವೇ ದಿನಗಳ ಹಿಂದೆ ಶೈಲಜಾ ಕಿರಗಂದೂರು ಅವರು ಈ ಸಿನಿಮಾದ ಟೀಸರ್ ಬಿಡುಗಡೆ ಮಾಡಿದ್ದರು. ರಾಕೇಶ್ ಅಡಿಗ, ರಚನಾ ಇಂದರ್ ಮಾತ್ರವಲ್ಲದೇ ಮಾಸ್ಟರ್ ಯುವನ್ ಕೂಡ ಈ ಸಿನಿಮಾದ ಪಾತ್ರವರ್ಗದಲ್ಲಿದ್ದಾರೆ.

ಸಾಂಗ್ ಬಿಡುಗಡೆ ವೇಳೆ ಜೋಗಿ ಪ್ರೇಮ್ ಮಾತನಾಡಿದರು. ‘ರಘು ನನ್ನ ಜೊತೆ ಬಹಳ ವರ್ಷ ಕೆಲಸ ಮಾಡಿದ್ದಾರೆ. ಅವರು ಒಳ್ಳೆಯ ತಂತ್ರಜ್ಞ. ಒಂದು ನಾಯಿಯನ್ನು ಪಳಗಿಸಿ ನಟನೆ ಮಾಡಿಸುವುದು ಸುಲಭದ ಕೆಲಸ ಅಲ್ಲ. ಈ ಹಾಡು ಕೇಳಿದಾಗಲೇ ಇದು ಖಂಡಿತಾ ಹಿಟ್ ಆಗುತ್ತದೆ ಅಂತ ರಘುಗೆ ಹೇಳಿದ್ದೆ. ಆರ್.ಪಿ. ಪಟ್ನಾಯಕ್ ಸಂಗೀತ ನೀಡಿದ ಎಕ್ಸ್​ಕ್ಯೂಸ್​ ಮಿ ಸಿನಿಮಾದ ಸಾಂಗ್ಸ್ ಇಂದಿಗೂ ಎವರ್ ಗ್ರೀನ್ ಆಗಿವೆ’ ಎಂದು ಚಿತ್ರತಂಡದವನ್ನು ಪ್ರೇಮ್ ಹೊಗಳಿದರು.

ಇದನ್ನೂ ಓದಿ
Image
‘ಸ್ಯಾಂಡಲ್​​ವುಡ್ ಸಣ್ಣ ಇಂಡಸ್ಟ್ರಿ ಆಗಿತ್ತು, ಈಗ ಹೇಗೆ ಬೆಳೆದಿದೆ ನೋಡಿ’
Image
ಸಿನಿಮಾ ರಂಗದವರಿಗೆ ಡಿಕೆ ಶಿವಕುಮಾರ್ ಎಚ್ಚರಿಕೆ ಉಮಾಪತಿ ಹೇಳಿದ್ದೇನು?
Image
4 ಚಿತ್ರಮಂದಿರ, 23 ಸಿನಿಮಾ ಸ್ಕ್ರೀನ್​, ಡಿಸಿಎಂ ಡಿಕೆಶಿಯ ಸಿನಿಮಾ ನಂಟು
Image
‘ನೆಟ್ಟು, ಬೋಲ್ಟ್ ಟೈಟ್ ಮಾಡುವೆ’: ನಟರಿಗೆ ನೇರ ಎಚ್ಚರಿಕೆ ಕೊಟ್ಟ ಡಿಕೆಶಿ

‘ನಾನು ಮತ್ತು ಗುಂಡ 2’ ಶೀರ್ಷಿಕೆ ಗೀತೆ:

‘ಈಗಾಗಲೇ ಸಿನಿಮಾದ ಫಸ್ಟ್ ಕಾಪಿ ಸಿದ್ಧವಾಗಿದೆ. ಶೀಘ್ರದಲ್ಲೇ ಸೆನ್ಸಾರ್ ಆಗಲಿದೆ. ಸದ್ಯದಲ್ಲೇ ಇನ್ನೊಂದು ಹಾಡು ಮತ್ತು ಟ್ರೇಲರ್ ಬಿಡುಗಡೆ ಮಾಡುತ್ತೇವೆ’ ಎಂದು ನಿರ್ದೇಶಕ ರಘು ಹಾಸನ್ ಮಾಹಿತಿ ನೀಡಿದರು. ಊಟಿ, ತೀರ್ಥಹಳ್ಳಿ, ಶಿವಮೊಗ್ಗ, ಬಾಳೆಹೊನ್ನೂರು ಮುಂತಾದ ಕಡೆಗಳಲ್ಲಿ ಈ ಸಿನಿಮಾಗೆ ಚಿತ್ರೀಕರಣ ನಡೆದಿದೆ.

ಇದನ್ನೂ ಓದಿ: ಅತ್ಯುತ್ತಮ ಕಮ್​ಬ್ಯಾಕ್, ಮೂರು ಸಿನಿಮಾಗಳಲ್ಲಿ ರಾಕೇಶ್ ಅಡಿಗ

ಸಿನಿಮಾದ ಆರು ಹಾಡುಗಳಿಗೆ ಆರ್.ಪಿ. ಪಟ್ನಾಯಕ್ ಸಂಗೀತ ನೀಡಿದ್ದಾರೆ. ತನ್ವಿಕ್ ಛಾಯಾಗ್ರಹಣ ಮಾಡಿದ್ದಾರೆ. ರೋಹಿತ್ ರಮನ್ ಸಂಭಾಷಣೆ ಬರೆದಿದ್ದಾರೆ. ಕನ್ನಡ, ತೆಲುಗು, ಹಿಂದಿ ಸೇರಿ 5 ಭಾಷೆಗಳಲ್ಲಿ ‘ನಾನು ಮತ್ತು ಗುಂಡ 2’ ಚಿತ್ರ ಬಿಡುಗಡೆ ಆಗಲಿದೆ. ರಿತ್ವಿಕ್ ಮುರಳಿದರ್ ಅವರು ಹಿನ್ನೆಲೆ ಸಂಗೀತ ನೀಡುತ್ತಿದ್ದಾರೆ. ಕೆ.ಎಂ. ಪ್ರಕಾಶ್ ಅವರ ಸಂಕಲನ ಈ ಚಿತ್ರಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ