AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮನೆ ಬಳಿ ಬಂದು ಕಾಯಬೇಡಿ, ಹುಟ್ಟುಹಬ್ಬ ಆಚರಿಸಬೇಡಿ’: ಅಭಿಮಾನಿಗಳಿಗೆ ‘ಜೋಗಿ’ ಪ್ರೇಮ್ ಮನವಿ​

ನಿರ್ದೇಶಕ ‘ಜೋಗಿ’ ಪ್ರೇಮ್​ ಅವರು ಸದ್ಯ ‘ಏಕ್​ ಲವ್​ ಯಾ’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಬಾರಿ ಅಭಿಮಾನಿಗಳೊಂದಿಗೆ ಅವರು ಜನ್ಮದಿನ ಆಚರಿಸಿಕೊಳ್ಳುತ್ತಿಲ್ಲ. ಮುಂಚಿತವಾಗಿಯೇ ಈ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.

‘ಮನೆ ಬಳಿ ಬಂದು ಕಾಯಬೇಡಿ, ಹುಟ್ಟುಹಬ್ಬ ಆಚರಿಸಬೇಡಿ’: ಅಭಿಮಾನಿಗಳಿಗೆ ‘ಜೋಗಿ’ ಪ್ರೇಮ್ ಮನವಿ​
ಜೋಗಿ ಪ್ರೇಮ್​
TV9 Web
| Edited By: |

Updated on: Oct 21, 2021 | 9:58 AM

Share

ಸ್ಯಾಂಡಲ್​ವುಡ್​ನ ಯಶಸ್ವಿ ನಿರ್ದೇಶಕರಲ್ಲಿ ಒಬ್ಬರಾದ ‘ಜೋಗಿ’ ಪ್ರೇಮ್​ ಅವರಿಗೆ ಅ.22ರಂದು ಹುಟ್ಟುಹಬ್ಬದ ಸಂಭ್ರಮ. ಈ ಪ್ರಯುಕ್ತ ಅವರೊಂದು ವಿಡಿಯೋ ಸಂದೇಶ ನೀಡಿದ್ದಾರೆ. ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆ ಆಚರಿಸಿಕೊಳ್ಳದೇ ಇರಲು ಅವರು ನಿರ್ಧರಿಸಿದ್ದಾರೆ. ಅದನ್ನು ವಿಡಿಯೋ ಮೂಲಕ ಸ್ಪಷ್ಟಪಡಿಸಿದ್ದಾರೆ. ಸದ್ಯ ಅವರು ‘ಏಕ್​ ಲವ್​ ಯಾ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಆ ಸಿನಿಮಾ ಬಗ್ಗೆಯೂ ಅಪ್​ಡೇಟ್​ ನೀಡಿದ್ದಾರೆ. ದೀಪಾವಳಿ ಹಬ್ಬಕ್ಕೆ ‘ಏಕ್​ ಲವ್​ ಯಾ’ ಚಿತ್ರದ ಮೂರನೇ ಹಾಡು ಬಿಡುಗಡೆ ಆಗಲಿದೆ.

‘ಅ.22 ನನ್ನ ಹುಟ್ಟುಹಬ್ಬ. ಪ್ರತಿ ಸಾರಿ ನನ್ನ ಅನ್ನದಾತರು, ಸ್ನೇಹಿತರು ಹಾಗೂ ಬಂಧು-ಬಳಗದವರು ಬಂದು ವಿಶ್​ ಮಾಡುತ್ತಿದ್ರಿ. ಈ ಬಾರಿ ನಾನು ಮನೆಯಲ್ಲಿ ಇರುವುದಿಲ್ಲ. ಯಾಕೆಂದರೆ ಮುಂಬೈನಲ್ಲಿ ‘ಏಕ್​ ಲವ್​ ಯಾ’ ಸಿನಿಮಾ ಕೆಲಸ ನಡೆಯುತ್ತಿದೆ. ಹಾಗಾಗಿ ತಾವು ಯಾರೂ ಕೂಡ ನನ್ನ ಮನೆ ಬಳಿ ಬರುವುದಾಗಲಿ, ಬಂದು ಕಾಯುವುದಾಗಲಿ ಮಾಡಬೇಡಿ ಅಂತ ಪ್ರೀತಿಯಿಂದ ಮನವಿ ಮಾಡಿಕೊಳ್ಳುತ್ತಿದ್ದೇನೆ. ಎಲ್ಲೇ ಇದ್ದರೂ ದೂರದಿಂದ ಆಶೀರ್ವಾದ ಮಾಡಿ’ ಎಂದು ಪ್ರೇಮ್​ ಮನವಿ ಮಾಡಿಕೊಂಡಿದ್ದಾರೆ.

‘ನ.4ರಂದು ದೀಪಾವಳಿ ಹಬ್ಬದ ದಿನ ‘ಏಕ್​ ಲವ್​ ಯಾ’ ಸಿನಿಮಾದ ಮೂರನೇ ಹಾಡು ರಿಲೀಸ್​ ಮಾಡುತ್ತಿದ್ದೇವೆ. ಈಗಾಗಲೇ ಬಿಡುಗಡೆ ಆಗಿರುವ 2 ಹಾಡುಗಳನ್ನು ದೊಡ್ಡ ಹಿಟ್​ ಮಾಡಿಕೊಟ್ಟಿದ್ದೀರಿ. ಈಗ ಮೂರನೇ ಸಾಂಗ್​ ಬರುತ್ತಿದೆ. ಇದು ಲವ್​ ಬ್ರೇಕಪ್​ ಸಾಂಗ್​. ಅದು ಹುಡುಗಿಯರಿಗಾಗಿ ಮಾಡಿರುವ ವಿಶೇಷ ಹಾಡು. ಆ ಹಾಡು ನೋಡಿ ಹಾರೈಸಿ. ಜನವರಿ 21ಕ್ಕೆ ಎಲ್ಲ ಕಡೆ ಈ ಸಿನಿಮಾ ರಿಲೀಸ್​ ಮಾಡುತ್ತೇವೆ’ ಎಂದು ಪ್ರೇಮ್​ ಹೇಳಿದ್ದಾರೆ.

‘ಆ್ಯಕ್ಷನ್​ ಪ್ರಿನ್ಸ್’​ ಧ್ರುವ ಸರ್ಜಾ ಜೊತೆಗೂ ಪ್ರೇಮ್​ ಸಿನಿಮಾ ಮಾಡುತ್ತಿದ್ದಾರೆ. ಆ ಚಿತ್ರಕ್ಕೆ ಇನ್ನೂ ಶೀರ್ಷಿಕೆ ಅಂತಿಮವಾಗಿಲ್ಲ.

ಇದನ್ನೂ ಓದಿ:

16 Years of Jogi: ದಾಖಲೆ ಮೇಲೆ ದಾಖಲೆ ಬರೆದ ‘ಜೋಗಿ’ ಜಾತ್ರೆಗೆ 16 ವರ್ಷಗಳ ಸಂಭ್ರಮ

Salaga: ನಿರೀಕ್ಷೆಗೂ ಮೀರಿ ‘ಸಲಗ’ ಸಕ್ಸಸ್​; ಹಾಗಾದ್ರೆ ಈವರೆಗಿನ ಕಲೆಕ್ಷನ್​ ಲೆಕ್ಕ ಹೇಳೋರು ಯಾರು?

ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ