AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮನೆ ಬಳಿ ಬಂದು ಕಾಯಬೇಡಿ, ಹುಟ್ಟುಹಬ್ಬ ಆಚರಿಸಬೇಡಿ’: ಅಭಿಮಾನಿಗಳಿಗೆ ‘ಜೋಗಿ’ ಪ್ರೇಮ್ ಮನವಿ​

ನಿರ್ದೇಶಕ ‘ಜೋಗಿ’ ಪ್ರೇಮ್​ ಅವರು ಸದ್ಯ ‘ಏಕ್​ ಲವ್​ ಯಾ’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಬಾರಿ ಅಭಿಮಾನಿಗಳೊಂದಿಗೆ ಅವರು ಜನ್ಮದಿನ ಆಚರಿಸಿಕೊಳ್ಳುತ್ತಿಲ್ಲ. ಮುಂಚಿತವಾಗಿಯೇ ಈ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.

‘ಮನೆ ಬಳಿ ಬಂದು ಕಾಯಬೇಡಿ, ಹುಟ್ಟುಹಬ್ಬ ಆಚರಿಸಬೇಡಿ’: ಅಭಿಮಾನಿಗಳಿಗೆ ‘ಜೋಗಿ’ ಪ್ರೇಮ್ ಮನವಿ​
ಜೋಗಿ ಪ್ರೇಮ್​
TV9 Web
| Edited By: |

Updated on: Oct 21, 2021 | 9:58 AM

Share

ಸ್ಯಾಂಡಲ್​ವುಡ್​ನ ಯಶಸ್ವಿ ನಿರ್ದೇಶಕರಲ್ಲಿ ಒಬ್ಬರಾದ ‘ಜೋಗಿ’ ಪ್ರೇಮ್​ ಅವರಿಗೆ ಅ.22ರಂದು ಹುಟ್ಟುಹಬ್ಬದ ಸಂಭ್ರಮ. ಈ ಪ್ರಯುಕ್ತ ಅವರೊಂದು ವಿಡಿಯೋ ಸಂದೇಶ ನೀಡಿದ್ದಾರೆ. ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆ ಆಚರಿಸಿಕೊಳ್ಳದೇ ಇರಲು ಅವರು ನಿರ್ಧರಿಸಿದ್ದಾರೆ. ಅದನ್ನು ವಿಡಿಯೋ ಮೂಲಕ ಸ್ಪಷ್ಟಪಡಿಸಿದ್ದಾರೆ. ಸದ್ಯ ಅವರು ‘ಏಕ್​ ಲವ್​ ಯಾ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಆ ಸಿನಿಮಾ ಬಗ್ಗೆಯೂ ಅಪ್​ಡೇಟ್​ ನೀಡಿದ್ದಾರೆ. ದೀಪಾವಳಿ ಹಬ್ಬಕ್ಕೆ ‘ಏಕ್​ ಲವ್​ ಯಾ’ ಚಿತ್ರದ ಮೂರನೇ ಹಾಡು ಬಿಡುಗಡೆ ಆಗಲಿದೆ.

‘ಅ.22 ನನ್ನ ಹುಟ್ಟುಹಬ್ಬ. ಪ್ರತಿ ಸಾರಿ ನನ್ನ ಅನ್ನದಾತರು, ಸ್ನೇಹಿತರು ಹಾಗೂ ಬಂಧು-ಬಳಗದವರು ಬಂದು ವಿಶ್​ ಮಾಡುತ್ತಿದ್ರಿ. ಈ ಬಾರಿ ನಾನು ಮನೆಯಲ್ಲಿ ಇರುವುದಿಲ್ಲ. ಯಾಕೆಂದರೆ ಮುಂಬೈನಲ್ಲಿ ‘ಏಕ್​ ಲವ್​ ಯಾ’ ಸಿನಿಮಾ ಕೆಲಸ ನಡೆಯುತ್ತಿದೆ. ಹಾಗಾಗಿ ತಾವು ಯಾರೂ ಕೂಡ ನನ್ನ ಮನೆ ಬಳಿ ಬರುವುದಾಗಲಿ, ಬಂದು ಕಾಯುವುದಾಗಲಿ ಮಾಡಬೇಡಿ ಅಂತ ಪ್ರೀತಿಯಿಂದ ಮನವಿ ಮಾಡಿಕೊಳ್ಳುತ್ತಿದ್ದೇನೆ. ಎಲ್ಲೇ ಇದ್ದರೂ ದೂರದಿಂದ ಆಶೀರ್ವಾದ ಮಾಡಿ’ ಎಂದು ಪ್ರೇಮ್​ ಮನವಿ ಮಾಡಿಕೊಂಡಿದ್ದಾರೆ.

‘ನ.4ರಂದು ದೀಪಾವಳಿ ಹಬ್ಬದ ದಿನ ‘ಏಕ್​ ಲವ್​ ಯಾ’ ಸಿನಿಮಾದ ಮೂರನೇ ಹಾಡು ರಿಲೀಸ್​ ಮಾಡುತ್ತಿದ್ದೇವೆ. ಈಗಾಗಲೇ ಬಿಡುಗಡೆ ಆಗಿರುವ 2 ಹಾಡುಗಳನ್ನು ದೊಡ್ಡ ಹಿಟ್​ ಮಾಡಿಕೊಟ್ಟಿದ್ದೀರಿ. ಈಗ ಮೂರನೇ ಸಾಂಗ್​ ಬರುತ್ತಿದೆ. ಇದು ಲವ್​ ಬ್ರೇಕಪ್​ ಸಾಂಗ್​. ಅದು ಹುಡುಗಿಯರಿಗಾಗಿ ಮಾಡಿರುವ ವಿಶೇಷ ಹಾಡು. ಆ ಹಾಡು ನೋಡಿ ಹಾರೈಸಿ. ಜನವರಿ 21ಕ್ಕೆ ಎಲ್ಲ ಕಡೆ ಈ ಸಿನಿಮಾ ರಿಲೀಸ್​ ಮಾಡುತ್ತೇವೆ’ ಎಂದು ಪ್ರೇಮ್​ ಹೇಳಿದ್ದಾರೆ.

‘ಆ್ಯಕ್ಷನ್​ ಪ್ರಿನ್ಸ್’​ ಧ್ರುವ ಸರ್ಜಾ ಜೊತೆಗೂ ಪ್ರೇಮ್​ ಸಿನಿಮಾ ಮಾಡುತ್ತಿದ್ದಾರೆ. ಆ ಚಿತ್ರಕ್ಕೆ ಇನ್ನೂ ಶೀರ್ಷಿಕೆ ಅಂತಿಮವಾಗಿಲ್ಲ.

ಇದನ್ನೂ ಓದಿ:

16 Years of Jogi: ದಾಖಲೆ ಮೇಲೆ ದಾಖಲೆ ಬರೆದ ‘ಜೋಗಿ’ ಜಾತ್ರೆಗೆ 16 ವರ್ಷಗಳ ಸಂಭ್ರಮ

Salaga: ನಿರೀಕ್ಷೆಗೂ ಮೀರಿ ‘ಸಲಗ’ ಸಕ್ಸಸ್​; ಹಾಗಾದ್ರೆ ಈವರೆಗಿನ ಕಲೆಕ್ಷನ್​ ಲೆಕ್ಕ ಹೇಳೋರು ಯಾರು?

Follow Us
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!