AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ: ಚಾಪ್ಟರ್ 1’ ಚಿತ್ರಕ್ಕೆ ಪೈಪೋಟಿ ನೀಡುತ್ತಾ ಅಕ್ಷಯ್ ಕುಮಾರ್ ಸಿನಿಮಾ?

ಅಕ್ಟೋಬರ್ 2ರಂದು ಬಹಳ ಅದ್ದೂರಿಯಾಗಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಆಗಲಿದೆ. ಅದೇ ದಿನ ‘ಜಾಲಿ ಎಲ್​ಎಲ್​ಬಿ 3’ ಸಿನಿಮಾ ಕೂಡ ಬಿಡುಗಡೆ ಆಗುವ ಸಾಧ್ಯತೆ ದಟ್ಟವಾಗಿದೆ. ಈ ಸಿನಿಮಾದಲ್ಲಿ ಅರ್ಷದ್ ವಾರ್ಸಿ, ಅಕ್ಷಯ್ ಕುಮಾರ್ ಮುಂತಾದವರು ನಟಿಸಿದ್ದಾರೆ. ಎರಡೂ ಸಿನಿಮಾಗಳ ಮೇಲೆ ನಿರೀಕ್ಷೆ ಜಾಸ್ತಿ ಇದೆ.

‘ಕಾಂತಾರ: ಚಾಪ್ಟರ್ 1’ ಚಿತ್ರಕ್ಕೆ ಪೈಪೋಟಿ ನೀಡುತ್ತಾ ಅಕ್ಷಯ್ ಕುಮಾರ್ ಸಿನಿಮಾ?
Arshad Warsi, Akshay Kumar, Rishab Shetty
ಮದನ್​ ಕುಮಾರ್​
|

Updated on: Jul 09, 2025 | 7:57 PM

Share

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ ‘ಕಾಂತಾರ’ ಸಿನಿಮಾ ದೇಶವ್ಯಾಪಿ ಜನಮೆಚ್ಚುಗೆ ಗಳಿಸಿತ್ತು. ಈಗ ಆ ಸಿನಿಮಾದ ಪ್ರೀಕ್ವೆಲ್ ಸಿದ್ಧವಾಗುತ್ತಿದೆ. ಅದಕ್ಕೆ ‘ಕಾಂತಾರ: ಚಾಪ್ಟರ್ 1’ (Kantara Chapter 1) ಎಂದು ಹೆಸರು ಇಡಲಾಗಿದೆ. ಈ ಸಿನಿಮಾ ಅಕ್ಟೋಬರ್ 2ರಂದು ಬಿಡುಗಡೆ ಆಗಲಿದೆ. ಅದಕ್ಕಾಗಿ ಸಕಲ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಅಕ್ಟೋಬರ್ 2ರಂದು ‘ಕಾಂತಾರ: ಚಾಪ್ಟರ್ 1’ ತೆರೆಕಂಡರೆ ಈ ಸಿನಿಮಾದ ಎದುರು ಬೇರೆ ಸಿನಿಮಾಗಳು ಬಿಡುಗಡೆ ಆಗಲು ಹಿಂದೇಟು ಹಾಕುತ್ತವೆ. ಯಾಕೆಂದರೆ, ‘ಕಾಂತಾರ: ಚಾಪ್ಟರ್ 1’ ಹವಾ ಆ ರೀತಿ ಇದೆ. ಹಾಗಿದ್ದರೂ ಕೂಡ ಅಕ್ಷಯ್ ಕುಮಾರ್ ನಟನೆಯ ‘ಜಾಲಿ ಎಲ್​ಎಲ್​ಬಿ 3’ (Jolly LLB 3) ಸಿನಿಮಾ ಅದೇ ದಿನ ರಿಲೀಸ್ ಆಗುವ ಸಾಧ್ಯತೆ ಇದೆ.

ಈಗಾಗಲೇ ‘ಜಾಲಿ ಎಲ್​ಎಲ್​ಬಿ’ ಮತ್ತು ‘ಜಾಲಿ ಎಲ್​ಎಲ್​ಬಿ 2’ ಸಿನಿಮಾಗಳು ಹಿಟ್ ಆಗಿವೆ. ಈಗ ಅದರ ಮೂರನೇ ಪಾರ್ಟ್ ‘ಜಾಲಿ ಎಲ್​ಎಲ್​ಬಿ 3’ ನಿರ್ಮಾಣ ಆಗುತ್ತಿದೆ. ಈ ಮೊದಲು ಈ ಚಿತ್ರವನ್ನು ಸೆಪ್ಟೆಂಬರ್ 19ರಂದು ತೆರೆಕಾಣಿಸುವ ಪ್ಲ್ಯಾನ್ ಇತ್ತು. ಆದರೆ ಈಗ ಚಿತ್ರತಂಡದವರು ನಿರ್ಧಾರ ಬದಲಿಸಿದಂತಿದೆ. ಸೆಪ್ಟೆಂಬರ್ 19ರ ಬದಲು ಅಕ್ಟೋಬರ್ 2ರಂದು ಬಿಡುಗಡೆ ಮಾಡುವುದು ಸೂಕ್ತ ಎಂದು ಚಿತ್ರತಂಡದ ಒಳಗೆ ಚರ್ಚೆ ನಡೆದಿದೆ ಎನ್ನಲಾಗಿದೆ.

‘ಜಾಲಿ ಎಲ್​ಎಲ್​ಬಿ 3’ ಸಿನಿಮಾಗೆ ಸುಭಾಷ್ ಕಪೂರ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಅಕ್ಷಯ್ ಕುಮಾರ್ ಮತ್ತು ಅರ್ಷದ್ ವಾರ್ಸಿ ಅವರು ಪ್ರಮುಖ ಪಾತ್ರಗಳನ್ನು ಮಾಡುತ್ತಿದ್ದಾರೆ. ಹಾಗಾಗಿ ಅಭಿಮಾನಿಗಳಿಗೆ ನಿರೀಕ್ಷೆ ಜಾಸ್ತಿ ಇದೆ. ಗಾಂಧಿ ಜಯಂತಿ ದಿನ (ಅಕ್ಟೋಬರ್ 2) ಸರ್ಕಾರಿ ರಜೆ ಇರುತ್ತದೆ. ಹಾಗಾಗಿ ಆ ದಿನವೇ ಸಿನಿಮಾ ತೆರೆಕಂಡರೆ ಹೆಚ್ಚು ಕಲೆಕ್ಷನ್ ಆಗುತ್ತದೆ ಎಂಬುದು ಚಿತ್ರತಂಡದ ಲೆಕ್ಕಾಚಾರ.

ಇತ್ತ, ‘ಕಾಂತಾರ: ಚಾಪ್ಟರ್ 1’ ತಂಡದವರು ಬಹಳ ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಇತ್ತೀಚೆಗೆ ರಿಷಬ್ ಶೆಟ್ಟಿ ಅವರ ಜನ್ಮದಿನದ ಪ್ರಯುಕ್ತ ಹೊಸ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಅದನ್ನು ನೋಡಿದ ಅಭಿಮಾನಿಗಳಿಗೆ ಕೌತುಕ ಹೆಚ್ಚಾಗಿದೆ. ಈ ಸಿನಿಮಾವನ್ನು ‘ಹೊಂಬಾಳೆ ಫಿಲ್ಮ್ಸ್’ ನಿರ್ಮಾಣ ಮಾಡುತ್ತಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ಬಿಡುಗಡೆ ಆಗಲಿದೆ.

ಇದನ್ನೂ ಓದಿ: ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ; ಇಲ್ಲಿದೆ ಸೆಲೆಬ್ರೇಷನ್ ವಿಡಿಯೋ

ರಿಷಬ್ ಶೆಟ್ಟಿ ಅವರು ರಾಷ್ಟ್ರ ಮಟ್ಟದಲ್ಲಿ ಖ್ಯಾತಿ ಹೊಂದಿದ್ದಾರೆ. ‘ಕಾಂತಾರ’ ಸಿನಿಮಾದ ಯಶಸ್ಸಿನಿಂದ ಅವರಿಗೆ ಈ ಪರಿ ಜನಪ್ರಿಯತೆ ಸಿಕ್ಕಿತು. ಬಾಲಿವುಡ್ ಹೀರೋಗಳಿಗೆ ಪೈಪೋಟಿ ನೀಡುವ ಮಟ್ಟಕ್ಕೆ ಅವರು ಬೆಳೆದಿದ್ದಾರೆ. ಬಾಲಿವುಡ್​ನಿಂದಲೂ ಅವರಿಗೆ ಅವಕಾಶಗಳು ಬರುತ್ತಿವೆ. ನಟನಾಗಿ, ನಿರ್ದೇಶಕನಾಗಿ ಅವರಿಗೆ ಸಖತ್ ಬೇಡಿಕೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ