AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀವು ಕುಂದಾಪುರದವರು ಎಂದೇ ಅನಿಸುತ್ತದೆ’; ರಿಷಬ್-ಜೂ. ಎನ್​ಟಿಆರ್ ಕನ್ನಡ ಸಂಭಾಣೆ ಹೇಗಿತ್ತು ನೋಡಿ

ಇತ್ತೀಚೆಗೆ ಸೈಮಾ ಅವಾರ್ಡ್​ ಕಾರ್ಯಕ್ರಮ ನಡೆದಿದೆ. ರಿಷಬ್ ಶೆಟ್ಟಿ, ಜೂನಿಯರ್ ಎನ್​ಟಿಆರ್ ಕೂಡ ಈ ಕಾರ್ಯಕ್ರಮಕ್ಕೆ ಹಾಜರಿ ಹಾಕಿದ್ದರು. ರಿಷಬ್ ನಟನೆಯ ‘ಕಾಂತಾರ’ ಸಿನಿಮಾಗೆ 10 ಪ್ರಶಸ್ತಿ ಸಿಕ್ಕಿದೆ. ರಿಷಬ್ ಕೂಡ ಅವಾರ್ಡ್ ಗೆದ್ದಿದ್ದಾರೆ. ರಿಷಬ್ ವೇದಿಕೆ ಮೇಲೆ ಮಾತನಾಡುವಾಗ ಜೂನಿಯರ್ ಎನ್​ಟಿಆರ್​ಗೆ ಧನ್ಯವಾದ ಹೇಳಿದ್ದಾರೆ.

‘ನೀವು ಕುಂದಾಪುರದವರು ಎಂದೇ ಅನಿಸುತ್ತದೆ’; ರಿಷಬ್-ಜೂ. ಎನ್​ಟಿಆರ್ ಕನ್ನಡ ಸಂಭಾಣೆ ಹೇಗಿತ್ತು ನೋಡಿ
ರಿಷಬ್-ಜೂನಿಯರ್ ಎನ್​ಟಿಆರ್
ರಾಜೇಶ್ ದುಗ್ಗುಮನೆ
|

Updated on: Sep 23, 2023 | 7:08 AM

Share

ಜೂನಿಯರ್ ಎನ್​ಟಿಆರ್ (Jr NTR) ಅವರಿಗೆ ಕನ್ನಡದ ಮೇಲೆ ವಿಶೇಷ ಪ್ರೀತಿ ಇದೆ. ಅವರು ಅನೇಕ ಬಾರಿ ಕನ್ನಡದಲ್ಲಿ ಮಾತನಾಡಿದ್ದಿದೆ. ‘ಆರ್​ಆರ್​ಆರ್’ ಚಿತ್ರದಲ್ಲಿ ಅವರು ಮಾಡಿದ ಪಾತ್ರಕ್ಕೆ ಅವರೇ ಡಬ್ ಮಾಡಿದ್ದರು. ಪುನೀತ್ ರಾಜ್​ಕುಮಾರ್ ನಟನೆಯ ‘ಚಕ್ರವ್ಯೂಹ’ ಸಿನಿಮಾದ ‘ಗೆಳೆಯ..’ ಹಾಡನ್ನು ಅವರೇ ಹಾಡಿದ್ದರು. ಈಗ ಜೂನಿಯರ್ ಎನ್​ಟಿಆರ್ ಹಾಗೂ ರಿಷಬ್ ಶೆಟ್ಟಿ (Rishab Shetty) ಕನ್ನಡದಲ್ಲಿ ಮಾತನಾಡಿದ ವಿಡಿಯೋ ವೈರಲ್ ಆಗಿದೆ. ಅಭಿಮಾನಿಗಳು ಇದನ್ನು ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ. ಅವರು ಮುಖಾಮುಖಿ ಆಗಿದ್ದು ಎಲ್ಲಿ? ಎಂಬಿತ್ಯಾದಿ ವಿಚಾರಗಳ ಬಗ್ಗೆ ಇಲ್ಲಿದೆ ಮಾಹಿತಿ.

ಇತ್ತೀಚೆಗೆ ಸೈಮಾ ಅವಾರ್ಡ್​ ಕಾರ್ಯಕ್ರಮ ನಡೆದಿದೆ. ರಿಷಬ್ ಶೆಟ್ಟಿ, ಜೂನಿಯರ್ ಎನ್​ಟಿಆರ್ ಕೂಡ ಈ ಕಾರ್ಯಕ್ರಮಕ್ಕೆ ಹಾಜರಿ ಹಾಕಿದ್ದರು. ರಿಷಬ್  ನಟನೆಯ ‘ಕಾಂತಾರ’ ಸಿನಿಮಾಗೆ 10 ಪ್ರಶಸ್ತಿ ಸಿಕ್ಕಿದೆ. ರಿಷಬ್ ಕೂಡ ಅವಾರ್ಡ್ ಗೆದ್ದಿದ್ದಾರೆ. ರಿಷಬ್ ವೇದಿಕೆ ಮೇಲೆ ಮಾತನಾಡುವಾಗ ಜೂನಿಯರ್ ಎನ್​ಟಿಆರ್​ಗೆ ಧನ್ಯವಾದ ಹೇಳಿದ್ದಾರೆ.

ರಿಷಬ್​ಗೆ ‘ಕಂಗ್ರಾಜ್ಯುಲೇಷನ್ಸ್’ ಎಂದರು ಜೂನಿಯರ್ ಎನ್​ಟಿಆರ್. ಆ ಬಳಿಕ ಅಕುಲ್ ಬಾಲಾಜಿ ಅವರು ಜೂನಿಯರ್ ಎನ್​ಟಿಆರ್ ಬಳಿ ತೆರಳಿ, ‘ನಿಮ್ಮ ಬಾಯಲ್ಲಿ ಕನ್ನಡ ಕೇಳೋಕೆ ಖುಷಿ ಆಗುತ್ತದೆ. ಮನೆಯಲ್ಲಿ ಹೀಗೆಯೇ ಮಾತನಾಡೋದಾ’ ಎಂದು ಕೇಳಿದರು. ‘ಅಮ್ಮನ ಜೊತೆ ನಾನು ಹೀಗೆಯೇ ಮಾತನಾಡೋದು’ ಎಂದರು ಜೂನಿಯರ್ ಎನ್​ಟಿಆರ್.

ಇದನ್ನೂ ಓದಿ: ‘ಹ್ಯಾಪಿ ಬರ್ತ್​ಡೇ ಸೈಫ್​ ಸರ್​..’: ಸೈಫ್​ ಅಲಿ ಖಾನ್​ಗೆ ಜನ್ಮದಿನದ ಶುಭ ಕೋರಿದ ಜೂನಿಯರ್​ ಎನ್​ಟಿಆರ್​

‘ನೀವು ತುಂಬಾ ಚೆನ್ನಾಗಿ ಕನ್ನಡ ಮಾತನಾಡ್ತೀರ’ ಎಂದು ಜೂನಿಯರ್ ಎನ್​ಟಿಆರ್ ಅವರನ್ನು ಹೊಗಳಿದರು ಅಕುಲ್. ‘ಅವರು (ರಿಷಬ್) ಕನ್ನಡ ಮಾತಾಡಿದ್ಮೇಲೆ ನಮ್ಮದೆಲ್ಲ ಎಲ್ಲಿ’ ಎಂದರು ಜೂ. ಎನ್​ಟಿಆರ್​. ಆಗ ವೇದಿಕೆ ಮೇಲಿದ್ದ ರಿಷಬ್ ಮಾತು ಆರಂಭಿಸಿದರು. ‘ನಿಮಗೆ ನೇರವಾಗಿ ಸಿಕ್ಕಿ ಧನ್ಯವಾದ ಹೇಳೋಕೆ ಚಾನ್ಸ್ ಸಿಗಲೇ ಇಲ್ಲ. ಕಿರಿಕ್ ಪಾರ್ಟಿ ಸಿನಿಮಾ ಸೈಮಾ ಗೆದ್ದಾಗ ನಮಗೆ ಅವಾರ್ಡ್​ ನೀಡಿದ್ದು ನೀವೇ ಆಗಿತ್ತು. ನಿಮ್ಮ ತಾಯಿ ಊರು, ನಮ್ಮ ಊರು ಎರಡೂ ಒಂದೇ. ಹೀಗಾಗಿ, ನೀವು ಆಂಧ್ರದವರು ಅನಿಸುವುದೇ ಇಲ್ಲ. ನಿಮ್ಮದು ಕುಂದಾಪುರ ಎನ್ನುವುದೇ ನನ್ನ ಭಾವನೆ’ ಎಂದರು ರಿಷಬ್ ಶೆಟ್ಟಿ. ಈ ವೇಳೆ ಜೂನಿಯರ್ ಎನ್​ಟಿಆರ್ ಮನಃಪೂರ್ತಿಯಾಗಿ ನಕ್ಕರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ