AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೇವರ’ ಚಿತ್ರಕ್ಕಾಗಿ ಗೋವಾದಲ್ಲಿ ಜೂನಿಯರ್​ ಎನ್​ಟಿಆರ್​; ಫ್ಯಾನ್ಸ್​ಗೆ ನೆನಪಾಯ್ತು ‘ಕಾಂತಾರ’ ಲುಕ್

ಅನೇಕರಿಗೆ ಜೂನಿಯರ್ ಎನ್​ಟಿಆರ್ ಫೋಟೋ ನೋಡಿದ ಬಳಿಕ ‘ಕಾಂತಾರ’ ಸಿನಿಮಾ ನೆನಪಾಗಿದೆ. ‘ಕಾಂತಾರ’ ಚಿತ್ರದಲ್ಲಿ ರಿಷಬ್ ಶೆಟ್ಟಿ ಲುಕ್ ಇದೇ ರೀತಿ ಇದೆ. ಈ ಕಾರಣಕ್ಕೆ ಅನೇಕರು ‘ಕಾಂತಾರ ಎರಡನೇ ಭಾಗದಲ್ಲಿ ರಿಷಬ್ ಶೆಟ್ಟಿ’ ಎಂದು ಫನ್ ಆಗಿ ಟ್ವೀಟ್ ಮಾಡಿದ್ದಾರೆ.

‘ದೇವರ’ ಚಿತ್ರಕ್ಕಾಗಿ ಗೋವಾದಲ್ಲಿ ಜೂನಿಯರ್​ ಎನ್​ಟಿಆರ್​; ಫ್ಯಾನ್ಸ್​ಗೆ ನೆನಪಾಯ್ತು ‘ಕಾಂತಾರ’ ಲುಕ್
ಎನ್​ಟಿಆರ್​-ರಿಷಬ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Mar 23, 2024 | 7:58 AM

Share

‘ದೇವರ: ಪಾರ್ಟ್ 1’ ’ (Devara Movie Part 1) ಸಿನಿಮಾ ಸಾಕಷ್ಟು ಸದ್ದು ಮಾಡಿದ ಚಿತ್ರ. 2024ರ ಬಹುನಿರೀಕ್ಷಿತ ಸಿನಿಮಾಗಳ ಸಾಲಿನಲ್ಲಿ ಈ ಚಿತ್ರಕ್ಕೂ ಸ್ಥಾನ ಇದೆ. ಈ ಚಿತ್ರದ ಬಗ್ಗೆ ಒಂದಿಲ್ಲೊಂದು ಅಪ್​ಡೇಟ್ ಸಿಗುತ್ತಲೇ ಇರುತ್ತದೆ. ಈ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಚಿತ್ರದ ಸೆಟ್​ನ ಎಚ್​ಡಿ ಫೋಟೋ ಒಂದು ವೈರಲ್ ಆಗಿದೆ. ಇದನ್ನು ನೋಡಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಜೂನಿಯರ್ ಎನ್​ಟಿಆರ್ ಅವರು ರಾ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನು ನೋಡಿದ ಅನೇಕರಿಗೆ ‘ಕಾಂತಾರ’ ಸಿನಿಮಾದಲ್ಲಿನ ರಿಷಬ್ ಶೆಟ್ಟಿ ಲುಕ್ ನೆನಪಾಗಿದೆ.

ಜೂನಿಯರ್​ ಎನ್​ಟಿಆರ್ ನಟನೆಯ ‘ಆರ್​ಆರ್​ಆರ್’ ಸಿನಿಮಾ 2022ರಲ್ಲಿ ರಿಲೀಸ್ ಆಯಿತು. ಇದಾದ ಬಳಿಕ ಜೂನಿಯರ್​ ಎನ್​ಟಿಆರ್ ಅವರು ಚಿತ್ರದ ಅವಾರ್ಡ್​ ಫಂಕ್ಷನ್​ಗಳಲ್ಲಿ ಭಾಗಿ ಆದರು. ‘ಆರ್​ಆರ್​ಆರ್’ ಚಿತ್ರ ಹಲವು ಅವಾರ್ಡ್​ ಗೆದ್ದಿದೆ. ಈ ಸಿನಿಮಾದ ‘ನಾಟು ನಾಟು..’ ಹಾಡು ಆಸ್ಕರ್ ಅವಾರ್ಡ್​ನಲ್ಲಿ ಪ್ರಶಸ್ತಿ ಗೆದ್ದಿದೆ. ಇದಾದ ಬಳಿಕ ಜೂನಿಯರ್ ಎನ್​ಟಿಆರ್ ಅವರು ‘ದೇವರ’ ಸಿನಿಮಾ ಘೋಷಣೆ ಮಾಡಿದರು. ಬಾಲಿವುಡ್​ನ ಜಾನ್ವಿ ಕಪೂರ್ ಹಾಗೂ ಸೈಫ್ ಅಲಿ ಖಾನ್ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಜೂನಿಯರ್ ಎನ್​​ಟಿಆರ್​ ಅವರ ‘ದೇವರ: ಚಾಪ್ಟರ್ 1’ ಸಿನಿಮಾದ ಶೂಟಿಂಗ್ ಗೋವಾದಲ್ಲಿ ನಡೆಯುತ್ತಿದೆ. ಈ ಚಿತ್ರದ ಫೋಟೋ ವೈರಲ್ ಆಗಿದೆ. ಈ ಫೋಟೋದಲ್ಲಿ ಕೊರಿಯೋಗ್ರಾಫರ್ ರಾಜು ಸುಂದರಮ್ ಹಾಗೂ ನಿರ್ದೇಶಕ ಕೊರಟಾಲ ಶಿವ ಇದ್ದಾರೆ. ಈ ಫೋಟೋ ವೈರಲ್ ಆಗಿದೆ. ಜೂನಿಯರ್ ಎನ್​ಟಿಆರ್ ಅವರ ಲುಕ್ ಗಮನ ಸೆಳೆದಿದೆ.

ಅನೇಕರಿಗೆ ಜೂನಿಯರ್ ಎನ್​ಟಿಆರ್ ಫೋಟೋ ನೋಡಿದ ಬಳಿಕ ‘ಕಾಂತಾರ’ ಸಿನಿಮಾ ನೆನಪಾಗಿದೆ. ‘ಕಾಂತಾರ’ ಚಿತ್ರದಲ್ಲಿ ರಿಷಬ್ ಶೆಟ್ಟಿ ಲುಕ್ ಇದೇ ರೀತಿ ಇದೆ. ಈ ಕಾರಣಕ್ಕೆ ಅನೇಕರು ‘ಕಾಂತಾರ ಎರಡನೇ ಭಾಗದಲ್ಲಿ ರಿಷಬ್ ಶೆಟ್ಟಿ’ ಎಂದು ಫನ್ ಆಗಿ ಟ್ವೀಟ್ ಮಾಡಿದ್ದಾರೆ.

ಅನೇಕರಿಗೆ ಜೂನಿಯರ್ ಎನ್​ಟಿಆರ್ ಫೋಟೋ ನೋಡಿದ ಬಳಿಕ ‘ಕಾಂತಾರ’ ಸಿನಿಮಾ ನೆನಪಾಗಿದೆ. ‘ಕಾಂತಾರ’ ಚಿತ್ರದಲ್ಲಿ ರಿಷಬ್ ಶೆಟ್ಟಿ ಲುಕ್ ಇದೇ ರೀತಿ ಇದೆ. ಈ ಕಾರಣಕ್ಕೆ ಅನೇಕರು ‘ಕಾಂತಾರ ಎರಡನೇ ಭಾಗದಲ್ಲಿ ರಿಷಬ್ ಶೆಟ್ಟಿ’ ಎಂದು ಫನ್ ಆಗಿ ಟ್ವೀಟ್ ಮಾಡಿದ್ದಾರೆ.

ಸದ್ಯ ‘ದೇವರ’ ಸಿನಿಮಾದ ಸಾಂಗ್ ಶೂಟಿಂಗ್ ಗೋವಾದಲ್ಲಿ ನಡೆಯುತ್ತಿದೆ. ಇದಕ್ಕೆ ರಾಜು ಸುಂದರಂ ಅವರು ಕೊರಿಯೋಗ್ರಫಿ ಮಾಡುತ್ತಿದ್ದಾರೆ. ಈ ಚಿತ್ರಕ್ಕಾಗಿ ಅಭಿಮಾನಿಗಳು ಕಾದು ಕೂತಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಏಪ್ರಿಲ್​ನಲ್ಲೇ ಸಿನಿಮಾ ರಿಲೀಸ್ ಆಗಬೇಕಿತ್ತು. ಆದರೆ, ಸಿನಿಮಾ ಕೆಲಸ ಪೂರ್ಣಗೊಳ್ಳದ ಕಾರಣ ಚಿತ್ರದ ಕೆಲಸವನ್ನು ಅಕ್ಟೋಬರ್ 10ಕ್ಕೆ ಮುಂದೂಡಲಾಗಿದೆ. ‘ಎನ್​ಟಿಆರ್ ಆರ್ಟ್ಸ್’ ಮೂಲಕ ಕಲ್ಯಾಣ್ ರಾಮ್ ಅವರು ಈ ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿದ್ದಾರೆ. ಸುಧಾಕರ್ ಮಿಕ್ಕಿಲಿನೇನಿ ಹಾಗೂ ಕೊಸರಾಜು ಹರಿಕೃಷ್ಣನ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಇದನ್ನೂ ಓದಿ: ಹಿಂದಿ ಮಂದಿಗೆ ಪರಿಚಯಗೊಳ್ಳಲು ಹೊಸ ತಂತ್ರದ ಮೊರೆ ಹೋದ ಜೂನಿಯರ್ ಎನ್​ಟಿಆರ್

ಜೂನಿಯರ್ ಎನ್​ಟಿಆರ್ ಅವರು ‘ವಾರ್ 2’ ಸಿನಿಮಾ ಕೆಲಸಗಳಲ್ಲೂ ಬ್ಯುಸಿ ಆಗಲಿದ್ದಾರೆ. ಇದು ಬಾಲಿವುಡ್ ಸಿನಿಮಾ ಎನ್ನುವ ಕಾರಣಕ್ಕೆ ನಿರೀಕ್ಷೆ ಹೆಚ್ಚಿದೆ. ಈ ಚಿತ್ರದಲ್ಲಿ ಹೃತಿಕ್ ರೋಷನ್ ಅವರು ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ಈ ಚಿತ್ರಕ್ಕಾಗಿ ಅವರು 60 ದಿನಗಳ ಕಾಲ್​ಶೀಟ್ ನೀಡಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು