AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೇವರ’ ಚಿತ್ರಕ್ಕಾಗಿ ಗೋವಾದಲ್ಲಿ ಜೂನಿಯರ್​ ಎನ್​ಟಿಆರ್​; ಫ್ಯಾನ್ಸ್​ಗೆ ನೆನಪಾಯ್ತು ‘ಕಾಂತಾರ’ ಲುಕ್

ಅನೇಕರಿಗೆ ಜೂನಿಯರ್ ಎನ್​ಟಿಆರ್ ಫೋಟೋ ನೋಡಿದ ಬಳಿಕ ‘ಕಾಂತಾರ’ ಸಿನಿಮಾ ನೆನಪಾಗಿದೆ. ‘ಕಾಂತಾರ’ ಚಿತ್ರದಲ್ಲಿ ರಿಷಬ್ ಶೆಟ್ಟಿ ಲುಕ್ ಇದೇ ರೀತಿ ಇದೆ. ಈ ಕಾರಣಕ್ಕೆ ಅನೇಕರು ‘ಕಾಂತಾರ ಎರಡನೇ ಭಾಗದಲ್ಲಿ ರಿಷಬ್ ಶೆಟ್ಟಿ’ ಎಂದು ಫನ್ ಆಗಿ ಟ್ವೀಟ್ ಮಾಡಿದ್ದಾರೆ.

‘ದೇವರ’ ಚಿತ್ರಕ್ಕಾಗಿ ಗೋವಾದಲ್ಲಿ ಜೂನಿಯರ್​ ಎನ್​ಟಿಆರ್​; ಫ್ಯಾನ್ಸ್​ಗೆ ನೆನಪಾಯ್ತು ‘ಕಾಂತಾರ’ ಲುಕ್
ಎನ್​ಟಿಆರ್​-ರಿಷಬ್
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Mar 23, 2024 | 7:58 AM

‘ದೇವರ: ಪಾರ್ಟ್ 1’ ’ (Devara Movie Part 1) ಸಿನಿಮಾ ಸಾಕಷ್ಟು ಸದ್ದು ಮಾಡಿದ ಚಿತ್ರ. 2024ರ ಬಹುನಿರೀಕ್ಷಿತ ಸಿನಿಮಾಗಳ ಸಾಲಿನಲ್ಲಿ ಈ ಚಿತ್ರಕ್ಕೂ ಸ್ಥಾನ ಇದೆ. ಈ ಚಿತ್ರದ ಬಗ್ಗೆ ಒಂದಿಲ್ಲೊಂದು ಅಪ್​ಡೇಟ್ ಸಿಗುತ್ತಲೇ ಇರುತ್ತದೆ. ಈ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಚಿತ್ರದ ಸೆಟ್​ನ ಎಚ್​ಡಿ ಫೋಟೋ ಒಂದು ವೈರಲ್ ಆಗಿದೆ. ಇದನ್ನು ನೋಡಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಜೂನಿಯರ್ ಎನ್​ಟಿಆರ್ ಅವರು ರಾ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನು ನೋಡಿದ ಅನೇಕರಿಗೆ ‘ಕಾಂತಾರ’ ಸಿನಿಮಾದಲ್ಲಿನ ರಿಷಬ್ ಶೆಟ್ಟಿ ಲುಕ್ ನೆನಪಾಗಿದೆ.

ಜೂನಿಯರ್​ ಎನ್​ಟಿಆರ್ ನಟನೆಯ ‘ಆರ್​ಆರ್​ಆರ್’ ಸಿನಿಮಾ 2022ರಲ್ಲಿ ರಿಲೀಸ್ ಆಯಿತು. ಇದಾದ ಬಳಿಕ ಜೂನಿಯರ್​ ಎನ್​ಟಿಆರ್ ಅವರು ಚಿತ್ರದ ಅವಾರ್ಡ್​ ಫಂಕ್ಷನ್​ಗಳಲ್ಲಿ ಭಾಗಿ ಆದರು. ‘ಆರ್​ಆರ್​ಆರ್’ ಚಿತ್ರ ಹಲವು ಅವಾರ್ಡ್​ ಗೆದ್ದಿದೆ. ಈ ಸಿನಿಮಾದ ‘ನಾಟು ನಾಟು..’ ಹಾಡು ಆಸ್ಕರ್ ಅವಾರ್ಡ್​ನಲ್ಲಿ ಪ್ರಶಸ್ತಿ ಗೆದ್ದಿದೆ. ಇದಾದ ಬಳಿಕ ಜೂನಿಯರ್ ಎನ್​ಟಿಆರ್ ಅವರು ‘ದೇವರ’ ಸಿನಿಮಾ ಘೋಷಣೆ ಮಾಡಿದರು. ಬಾಲಿವುಡ್​ನ ಜಾನ್ವಿ ಕಪೂರ್ ಹಾಗೂ ಸೈಫ್ ಅಲಿ ಖಾನ್ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಜೂನಿಯರ್ ಎನ್​​ಟಿಆರ್​ ಅವರ ‘ದೇವರ: ಚಾಪ್ಟರ್ 1’ ಸಿನಿಮಾದ ಶೂಟಿಂಗ್ ಗೋವಾದಲ್ಲಿ ನಡೆಯುತ್ತಿದೆ. ಈ ಚಿತ್ರದ ಫೋಟೋ ವೈರಲ್ ಆಗಿದೆ. ಈ ಫೋಟೋದಲ್ಲಿ ಕೊರಿಯೋಗ್ರಾಫರ್ ರಾಜು ಸುಂದರಮ್ ಹಾಗೂ ನಿರ್ದೇಶಕ ಕೊರಟಾಲ ಶಿವ ಇದ್ದಾರೆ. ಈ ಫೋಟೋ ವೈರಲ್ ಆಗಿದೆ. ಜೂನಿಯರ್ ಎನ್​ಟಿಆರ್ ಅವರ ಲುಕ್ ಗಮನ ಸೆಳೆದಿದೆ.

ಅನೇಕರಿಗೆ ಜೂನಿಯರ್ ಎನ್​ಟಿಆರ್ ಫೋಟೋ ನೋಡಿದ ಬಳಿಕ ‘ಕಾಂತಾರ’ ಸಿನಿಮಾ ನೆನಪಾಗಿದೆ. ‘ಕಾಂತಾರ’ ಚಿತ್ರದಲ್ಲಿ ರಿಷಬ್ ಶೆಟ್ಟಿ ಲುಕ್ ಇದೇ ರೀತಿ ಇದೆ. ಈ ಕಾರಣಕ್ಕೆ ಅನೇಕರು ‘ಕಾಂತಾರ ಎರಡನೇ ಭಾಗದಲ್ಲಿ ರಿಷಬ್ ಶೆಟ್ಟಿ’ ಎಂದು ಫನ್ ಆಗಿ ಟ್ವೀಟ್ ಮಾಡಿದ್ದಾರೆ.

ಅನೇಕರಿಗೆ ಜೂನಿಯರ್ ಎನ್​ಟಿಆರ್ ಫೋಟೋ ನೋಡಿದ ಬಳಿಕ ‘ಕಾಂತಾರ’ ಸಿನಿಮಾ ನೆನಪಾಗಿದೆ. ‘ಕಾಂತಾರ’ ಚಿತ್ರದಲ್ಲಿ ರಿಷಬ್ ಶೆಟ್ಟಿ ಲುಕ್ ಇದೇ ರೀತಿ ಇದೆ. ಈ ಕಾರಣಕ್ಕೆ ಅನೇಕರು ‘ಕಾಂತಾರ ಎರಡನೇ ಭಾಗದಲ್ಲಿ ರಿಷಬ್ ಶೆಟ್ಟಿ’ ಎಂದು ಫನ್ ಆಗಿ ಟ್ವೀಟ್ ಮಾಡಿದ್ದಾರೆ.

ಸದ್ಯ ‘ದೇವರ’ ಸಿನಿಮಾದ ಸಾಂಗ್ ಶೂಟಿಂಗ್ ಗೋವಾದಲ್ಲಿ ನಡೆಯುತ್ತಿದೆ. ಇದಕ್ಕೆ ರಾಜು ಸುಂದರಂ ಅವರು ಕೊರಿಯೋಗ್ರಫಿ ಮಾಡುತ್ತಿದ್ದಾರೆ. ಈ ಚಿತ್ರಕ್ಕಾಗಿ ಅಭಿಮಾನಿಗಳು ಕಾದು ಕೂತಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಏಪ್ರಿಲ್​ನಲ್ಲೇ ಸಿನಿಮಾ ರಿಲೀಸ್ ಆಗಬೇಕಿತ್ತು. ಆದರೆ, ಸಿನಿಮಾ ಕೆಲಸ ಪೂರ್ಣಗೊಳ್ಳದ ಕಾರಣ ಚಿತ್ರದ ಕೆಲಸವನ್ನು ಅಕ್ಟೋಬರ್ 10ಕ್ಕೆ ಮುಂದೂಡಲಾಗಿದೆ. ‘ಎನ್​ಟಿಆರ್ ಆರ್ಟ್ಸ್’ ಮೂಲಕ ಕಲ್ಯಾಣ್ ರಾಮ್ ಅವರು ಈ ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿದ್ದಾರೆ. ಸುಧಾಕರ್ ಮಿಕ್ಕಿಲಿನೇನಿ ಹಾಗೂ ಕೊಸರಾಜು ಹರಿಕೃಷ್ಣನ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಇದನ್ನೂ ಓದಿ: ಹಿಂದಿ ಮಂದಿಗೆ ಪರಿಚಯಗೊಳ್ಳಲು ಹೊಸ ತಂತ್ರದ ಮೊರೆ ಹೋದ ಜೂನಿಯರ್ ಎನ್​ಟಿಆರ್

ಜೂನಿಯರ್ ಎನ್​ಟಿಆರ್ ಅವರು ‘ವಾರ್ 2’ ಸಿನಿಮಾ ಕೆಲಸಗಳಲ್ಲೂ ಬ್ಯುಸಿ ಆಗಲಿದ್ದಾರೆ. ಇದು ಬಾಲಿವುಡ್ ಸಿನಿಮಾ ಎನ್ನುವ ಕಾರಣಕ್ಕೆ ನಿರೀಕ್ಷೆ ಹೆಚ್ಚಿದೆ. ಈ ಚಿತ್ರದಲ್ಲಿ ಹೃತಿಕ್ ರೋಷನ್ ಅವರು ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ಈ ಚಿತ್ರಕ್ಕಾಗಿ ಅವರು 60 ದಿನಗಳ ಕಾಲ್​ಶೀಟ್ ನೀಡಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ
ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ
ಕ್ರೀಡಾ ಸ್ಫೂರ್ತಿ ಅಲ್ಲ... ರಿಷಭ್ ಪಂತ್​ ಮಾಡಿದ್ದು ನಾಟಕ: ಇಲ್ಲಿದೆ ವಿಡಿಯೋ
ಕ್ರೀಡಾ ಸ್ಫೂರ್ತಿ ಅಲ್ಲ... ರಿಷಭ್ ಪಂತ್​ ಮಾಡಿದ್ದು ನಾಟಕ: ಇಲ್ಲಿದೆ ವಿಡಿಯೋ
VIDEO: ನಿಜಕ್ಕೂ ಇದು ನೋ ಬಾಲಾ? ಇಲ್ಲಿದೆ ಉತ್ತರ 
VIDEO: ನಿಜಕ್ಕೂ ಇದು ನೋ ಬಾಲಾ? ಇಲ್ಲಿದೆ ಉತ್ತರ 
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್
VIDEO: ಮಂಕಡ್ ರನೌಟ್​ಗೆ ಅಪೀಲ್​ ಮಾಡುತ್ತಿದ್ದಂತೆ, ವಿರಾಟ್ ಕೊಹ್ಲಿ ಆಕ್ರೋಶ
VIDEO: ಮಂಕಡ್ ರನೌಟ್​ಗೆ ಅಪೀಲ್​ ಮಾಡುತ್ತಿದ್ದಂತೆ, ವಿರಾಟ್ ಕೊಹ್ಲಿ ಆಕ್ರೋಶ
ಪರೀಕ್ಷಾರ್ಥ ಹಾರಾಟ ವೇಳೆ ಸಮುದ್ರಕ್ಕೆ ಅಪ್ಪಳಿಸಿದ ಸ್ಪೇಸ್​ಎಕ್ಸ್​ನ ರಾಕೆಟ್
ಪರೀಕ್ಷಾರ್ಥ ಹಾರಾಟ ವೇಳೆ ಸಮುದ್ರಕ್ಕೆ ಅಪ್ಪಳಿಸಿದ ಸ್ಪೇಸ್​ಎಕ್ಸ್​ನ ರಾಕೆಟ್
VIDEO: ದಿಗ್ವೇಶ್ ಮಹಾ ಎಡವಟ್ಟು... ಇದೇ ಕಾರಣಕ್ಕೆ ಅಂಪೈರ್ ಔಟ್ ನೀಡಿಲ್ಲ
VIDEO: ದಿಗ್ವೇಶ್ ಮಹಾ ಎಡವಟ್ಟು... ಇದೇ ಕಾರಣಕ್ಕೆ ಅಂಪೈರ್ ಔಟ್ ನೀಡಿಲ್ಲ
ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ
ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ