AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನಿಯರ್​ ಎನ್​ಟಿಆರ್​ಗೆ ಕನ್ನಡದ ಮೇಲೆ ಇದೆ ವಿಶೇಷ ಪ್ರೀತಿ..

ಜೂನಿಯರ್ ಎನ್​ಟಿಆರ್ ಅವರು ತೆಲುಗು ಸಿನಿಮಾದಲ್ಲಿ ನಟಿಸಿದ್ದಾರೆ. ಅಲ್ಲಿ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಇದೆ. ಅವರಿಗೆ ಕನ್ನಡದ ಬಗ್ಗೆ ನಂಟು ಬೆಳೆದಿದ್ದು ಚಿಕ್ಕ ವಯಸ್ಸಿನಿಂದಲೇ. ಇದಕ್ಕೆ ಕಾರಣವೂ ಇದೆ. ಜೂನಿಯರ್​ ಎನ್​ಟಿಆರ್ ಅವರ ತಾಯಿ ಕನ್ನಡದವರು.

ಜೂನಿಯರ್​ ಎನ್​ಟಿಆರ್​ಗೆ ಕನ್ನಡದ ಮೇಲೆ ಇದೆ ವಿಶೇಷ ಪ್ರೀತಿ..
Jr NTR
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 01, 2024 | 7:46 AM

Share

ಜೂನಿಯರ್​ ಎನ್​ಟಿಆರ್ ಅವರು ಕನ್ನಡದ ಬಗ್ಗೆ ವಿಶೇಷ ಪ್ರೀತಿ ಹೊಂದಿದ್ದರು ಅನ್ನೋದು ಅನೇಕರಿಗೆ ಗೊತ್ತು. ಕನ್ನಡದ ರಾಜ್ಯೋತ್ಸವದ ದಿನ ಆ ವಿಚಾರವನ್ನು ನಾವು ಇಂದು ಮತ್ತೊಮ್ಮೆ ಹೇಳುತ್ತಿದ್ದೇವೆ. ಜೂನಿಯರ್​ ಎನ್​ಟಿಆರ್ ನಟನೆಯ ಚಿತ್ರಗಳು ಕನ್ನಡದಲ್ಲಿ ಡಬ್ ಆಗಿ ರಿಲೀಸ್ ಆದರೆ ತಾವೇ ಅದನ್ನು ಡಬ್ ಮಾಡುತ್ತಾರೆ ಅನ್ನೋದು ವಿಶೇಷ. ಕನ್ನಡದಲ್ಲಿ ಅವರು ಹಾಡನ್ನು ಹಾಡಿದ್ದರು. ಅವರು ಕರ್ನಾಟಕದಲ್ಲಿ ಸುದ್ದಿಗೋಷ್ಠಿಯನ್ನು ಕನ್ನಡದಲ್ಲೇ ಮಾಡುತ್ತಾರೆ.

ಜೂನಿಯರ್ ಎನ್​ಟಿಆರ್ ಅವರು ತೆಲುಗು ಸಿನಿಮಾದಲ್ಲಿ ನಟಿಸಿದ್ದಾರೆ. ಅಲ್ಲಿ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಇದೆ. ಅವರಿಗೆ ಕನ್ನಡದ ಬಗ್ಗೆ ನಂಟು ಬೆಳೆದಿದ್ದು ಚಿಕ್ಕ ವಯಸ್ಸಿನಿಂದಲೇ. ಇದಕ್ಕೆ ಕಾರಣವೂ ಇದೆ. ಜೂನಿಯರ್​ ಎನ್​ಟಿಆರ್ ಅವರ ತಾಯಿ ಕನ್ನಡದವರು. ಹೀಗಾಗಿ, ಅವರಿಗೆ ಕನ್ನಡದ ಮೇಲೆ ವಿಶೇಷ ಪ್ರೀತಿ ಬೆಳೆದಿದೆ ಎನ್ನಬಹುದು.

ಇನ್ನು, ಪುನೀತ್ ರಾಜ್​ಕುಮಾರ್ ಜೊತೆಗಿನ ಗೆಳೆತನದ ಕಾರಣದಿಂದಲೂ ಜೂನಿಯರ್ ಎನ್​ಟಿಆರ್ ಅವರಿಗೆ ಕನ್ನಡದ ಮೇಲೆ ವಿಶೇಷ ಪ್ರೀತಿ ಹುಟ್ಟಿದೆ ಎಂದು ಹೇಳಬಹುದು. ಪುನೀತ್ ಅವರ ಜೊತೆ ಜೂನಿಯರ್​ ಎನ್​ಟಿಆರ್​ಗೆ ವಿಶೇಷ ಪ್ರೀತಿ ಇತ್ತು. ಪುನೀತ್ ಸಿನಿಮಾಗಾಗಿ ‘ಗೆಳೆಯ..’ ಹಾಡನ್ನು ಕನ್ನಡದಲ್ಲೇ ಹಾಡಿದ್ದರು ಜೂನಿಯರ್ ಎನ್​ಟಿಆರ್.

ಈ ಮೊದಲು ರಿಲೀಸ್ ಆದ ‘ಆರ್​ಆರ್​ಆರ್’, ‘ದೇವರ’ ಸಿನಿಮಾಗಳನ್ನು ಕನ್ನಡದಲ್ಲಿ ಡಬ್ ಮಾಡಿ ರಿಲೀಸ್ ಮಾಡಲಾಗಿತ್ತು. ಜೂನಿಯರ್ ಎನ್​ಟಿಆರ್ ಅವರು ತಮ್ಮ ಪಾತ್ರಕ್ಕೆ ತಾವೇ ಡಬ್ ಮಾಡಿದ್ದರು. ಸ್ಟಾರ್ ಹೀರೋ ಎಂದಾಗ ಈ ರೀತಿಯ ರಿಸ್ಕ್​ನ ತೆಗೆದುಕೊಳ್ಳೋಕೆ ಯಾರೂ ಮುಂದಾಗುವುದಿಲ್ಲ. ಆದರೆ, ಜೂನಿಯರ್​ ಎನ್​ಟಿಆರ್ ಅವರು ಈ ರೀತಿಯ ಸಾಧನೆ ಮಾಡಿದ್ದರು. ಇದು ಅವರಿಗೆ ಕನ್ನಡದ ಮೇಲಿನ ಪ್ರೀತಿಗೆ ಸಿಕ್ಕ ಉದಾಹರಣೆ ಆಗಿದೆ.

ಇದನ್ನೂ ಓದಿ: ‘ಬಘೀರ’ ಯಶಸ್ಸು: ಪುನೀತ್ ರಾಜ್​ಕುಮಾರ್ ಚಿತ್ರ ಹಿಡಿದು ಡ್ಯಾನ್ಸ್ ಮಾಡಿದ ಶ್ರೀಮುರಳಿ

ಸಿನಿಮಾ ವಿಚಾರಕ್ಕೆ ಬರೋದಾದರೆ, ಜೂನಿಯರ್​ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ರಿಲೀಸ್ ಆಗಿ ಮಿಶ್ರಪ್ರತಿಕ್ರಿಯೆ ಪಡೆಯಿತು. ಅವರು ಈಗ ‘ವಾರ್ 2’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರದಲ್ಲಿ ಧ್ರುವ ಸರ್ಜಾ ಕೂಡ ನಟಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಇದಲ್ಲದೆ, ಪ್ರಶಾಂತ್ ನೀಲ್ ಸಿನಿಮಾದಲ್ಲೂ ಅವರು ಬಣ್ಣ ಹಚ್ಚುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ