AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನಿಯರ್​ ಎನ್​ಟಿಆರ್​ಗೆ ಕನ್ನಡದ ಮೇಲೆ ಇದೆ ವಿಶೇಷ ಪ್ರೀತಿ..

ಜೂನಿಯರ್ ಎನ್​ಟಿಆರ್ ಅವರು ತೆಲುಗು ಸಿನಿಮಾದಲ್ಲಿ ನಟಿಸಿದ್ದಾರೆ. ಅಲ್ಲಿ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಇದೆ. ಅವರಿಗೆ ಕನ್ನಡದ ಬಗ್ಗೆ ನಂಟು ಬೆಳೆದಿದ್ದು ಚಿಕ್ಕ ವಯಸ್ಸಿನಿಂದಲೇ. ಇದಕ್ಕೆ ಕಾರಣವೂ ಇದೆ. ಜೂನಿಯರ್​ ಎನ್​ಟಿಆರ್ ಅವರ ತಾಯಿ ಕನ್ನಡದವರು.

ಜೂನಿಯರ್​ ಎನ್​ಟಿಆರ್​ಗೆ ಕನ್ನಡದ ಮೇಲೆ ಇದೆ ವಿಶೇಷ ಪ್ರೀತಿ..
Jr NTR
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 01, 2024 | 7:46 AM

Share

ಜೂನಿಯರ್​ ಎನ್​ಟಿಆರ್ ಅವರು ಕನ್ನಡದ ಬಗ್ಗೆ ವಿಶೇಷ ಪ್ರೀತಿ ಹೊಂದಿದ್ದರು ಅನ್ನೋದು ಅನೇಕರಿಗೆ ಗೊತ್ತು. ಕನ್ನಡದ ರಾಜ್ಯೋತ್ಸವದ ದಿನ ಆ ವಿಚಾರವನ್ನು ನಾವು ಇಂದು ಮತ್ತೊಮ್ಮೆ ಹೇಳುತ್ತಿದ್ದೇವೆ. ಜೂನಿಯರ್​ ಎನ್​ಟಿಆರ್ ನಟನೆಯ ಚಿತ್ರಗಳು ಕನ್ನಡದಲ್ಲಿ ಡಬ್ ಆಗಿ ರಿಲೀಸ್ ಆದರೆ ತಾವೇ ಅದನ್ನು ಡಬ್ ಮಾಡುತ್ತಾರೆ ಅನ್ನೋದು ವಿಶೇಷ. ಕನ್ನಡದಲ್ಲಿ ಅವರು ಹಾಡನ್ನು ಹಾಡಿದ್ದರು. ಅವರು ಕರ್ನಾಟಕದಲ್ಲಿ ಸುದ್ದಿಗೋಷ್ಠಿಯನ್ನು ಕನ್ನಡದಲ್ಲೇ ಮಾಡುತ್ತಾರೆ.

ಜೂನಿಯರ್ ಎನ್​ಟಿಆರ್ ಅವರು ತೆಲುಗು ಸಿನಿಮಾದಲ್ಲಿ ನಟಿಸಿದ್ದಾರೆ. ಅಲ್ಲಿ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಇದೆ. ಅವರಿಗೆ ಕನ್ನಡದ ಬಗ್ಗೆ ನಂಟು ಬೆಳೆದಿದ್ದು ಚಿಕ್ಕ ವಯಸ್ಸಿನಿಂದಲೇ. ಇದಕ್ಕೆ ಕಾರಣವೂ ಇದೆ. ಜೂನಿಯರ್​ ಎನ್​ಟಿಆರ್ ಅವರ ತಾಯಿ ಕನ್ನಡದವರು. ಹೀಗಾಗಿ, ಅವರಿಗೆ ಕನ್ನಡದ ಮೇಲೆ ವಿಶೇಷ ಪ್ರೀತಿ ಬೆಳೆದಿದೆ ಎನ್ನಬಹುದು.

ಇನ್ನು, ಪುನೀತ್ ರಾಜ್​ಕುಮಾರ್ ಜೊತೆಗಿನ ಗೆಳೆತನದ ಕಾರಣದಿಂದಲೂ ಜೂನಿಯರ್ ಎನ್​ಟಿಆರ್ ಅವರಿಗೆ ಕನ್ನಡದ ಮೇಲೆ ವಿಶೇಷ ಪ್ರೀತಿ ಹುಟ್ಟಿದೆ ಎಂದು ಹೇಳಬಹುದು. ಪುನೀತ್ ಅವರ ಜೊತೆ ಜೂನಿಯರ್​ ಎನ್​ಟಿಆರ್​ಗೆ ವಿಶೇಷ ಪ್ರೀತಿ ಇತ್ತು. ಪುನೀತ್ ಸಿನಿಮಾಗಾಗಿ ‘ಗೆಳೆಯ..’ ಹಾಡನ್ನು ಕನ್ನಡದಲ್ಲೇ ಹಾಡಿದ್ದರು ಜೂನಿಯರ್ ಎನ್​ಟಿಆರ್.

ಈ ಮೊದಲು ರಿಲೀಸ್ ಆದ ‘ಆರ್​ಆರ್​ಆರ್’, ‘ದೇವರ’ ಸಿನಿಮಾಗಳನ್ನು ಕನ್ನಡದಲ್ಲಿ ಡಬ್ ಮಾಡಿ ರಿಲೀಸ್ ಮಾಡಲಾಗಿತ್ತು. ಜೂನಿಯರ್ ಎನ್​ಟಿಆರ್ ಅವರು ತಮ್ಮ ಪಾತ್ರಕ್ಕೆ ತಾವೇ ಡಬ್ ಮಾಡಿದ್ದರು. ಸ್ಟಾರ್ ಹೀರೋ ಎಂದಾಗ ಈ ರೀತಿಯ ರಿಸ್ಕ್​ನ ತೆಗೆದುಕೊಳ್ಳೋಕೆ ಯಾರೂ ಮುಂದಾಗುವುದಿಲ್ಲ. ಆದರೆ, ಜೂನಿಯರ್​ ಎನ್​ಟಿಆರ್ ಅವರು ಈ ರೀತಿಯ ಸಾಧನೆ ಮಾಡಿದ್ದರು. ಇದು ಅವರಿಗೆ ಕನ್ನಡದ ಮೇಲಿನ ಪ್ರೀತಿಗೆ ಸಿಕ್ಕ ಉದಾಹರಣೆ ಆಗಿದೆ.

ಇದನ್ನೂ ಓದಿ: ‘ಬಘೀರ’ ಯಶಸ್ಸು: ಪುನೀತ್ ರಾಜ್​ಕುಮಾರ್ ಚಿತ್ರ ಹಿಡಿದು ಡ್ಯಾನ್ಸ್ ಮಾಡಿದ ಶ್ರೀಮುರಳಿ

ಸಿನಿಮಾ ವಿಚಾರಕ್ಕೆ ಬರೋದಾದರೆ, ಜೂನಿಯರ್​ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ರಿಲೀಸ್ ಆಗಿ ಮಿಶ್ರಪ್ರತಿಕ್ರಿಯೆ ಪಡೆಯಿತು. ಅವರು ಈಗ ‘ವಾರ್ 2’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರದಲ್ಲಿ ಧ್ರುವ ಸರ್ಜಾ ಕೂಡ ನಟಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಇದಲ್ಲದೆ, ಪ್ರಶಾಂತ್ ನೀಲ್ ಸಿನಿಮಾದಲ್ಲೂ ಅವರು ಬಣ್ಣ ಹಚ್ಚುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?