ತೆಲುಗು ಬಿಗ್ ಬಾಸ್ ವೇದಿಕೆ ಮೇಲೆ ಕನ್ನಡದಲ್ಲೇ ಮಾತನಾಡಿದ್ದ ಜೂನಿಯರ್ ಎನ್​ಟಿಆರ್

ಜೂನಿಯರ್ ಎನ್ಟಿಆರ್ ಅವರಿಗೆ ಕರ್ನಾಟಕದಲ್ಲಿ ದೊಡ್ಡ ಅಭಿಮಾನಿ ಬಳಗವಿದೆ. ಅವರ ತಾಯಿ ಕುಂದಾಪುರದವರು ಎಂಬುದು ಅವರ ಕನ್ನಡದೊಂದಿಗಿನ ನಂಟನ್ನು ಸೂಚಿಸುತ್ತದೆ. ಬಿಗ್ ಬಾಸ್ ಕನ್ನಡದಲ್ಲಿ ಅವರ ಭಾಗವಹಿಸುವಿಕೆ ಮತ್ತು ಕನ್ನಡ ಕಲಾವಿದರೊಂದಿಗಿನ ಸಂಬಂಧಗಳು ಅವರ ಕನ್ನಡ ಪ್ರೀತಿಯನ್ನು ತೋರಿಸುತ್ತವೆ.

ತೆಲುಗು ಬಿಗ್ ಬಾಸ್ ವೇದಿಕೆ ಮೇಲೆ ಕನ್ನಡದಲ್ಲೇ ಮಾತನಾಡಿದ್ದ ಜೂನಿಯರ್ ಎನ್​ಟಿಆರ್
ಜೂ.ಎನ್​ಟಿಆರ್
Follow us
| Updated By: ರಾಜೇಶ್ ದುಗ್ಗುಮನೆ

Updated on: Oct 28, 2024 | 7:41 AM

ತೆಲುಗು ನಟ ಜೂನಿಯರ್ ಎನ್​ಟಿಆರ್ ಅವರಿಗೆ ಕರ್ನಾಟಕದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಇತ್ತೀಚಿಗಿನ ವರ್ಷಗಳಲ್ಲಂತೂ ಕನ್ನಡದ ಹಾಗೂ ಕರ್ನಾಟಕದ ಜೊತೆಗಿನ ನಂಟು ಹೆಚ್ಚಿದೆ. ಅವರು ಈ ಮೊದಲು ಬಿಗ್ ಬಾಸ್​ನಲ್ಲಿ ಕನ್ನಡದಲ್ಲಿ ಮಾತನಾಡಿದ್ದರು. ಈ ಮೂಲಕ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದರು. ಕನ್ನಡದ ಸ್ಪರ್ಧಿಗಳು ಬಿಗ್ ಬಾಸ್​ಗೆ ಬಂದಿದ್ದರು. ಅವರ ಜೊತೆ ಮಾತನಾಡಿದ್ದರು.

ತೆಲುಗು ಭಾಷೆಯಲ್ಲಿ ಕನ್ನಡದ ಕಲಾವಿದರು ಇದ್ದಾರೆ. ಅಲ್ಲಿನ ರಿಯಾಲಿಟಿ ಶೋನಲ್ಲೂ ಕನ್ನಡದವರು ಭಾಗಿ ಆಗಿದ್ದು ಇದೆ. ಜೂನಿಯರ್​ ಎನ್​ಟಿಆರ್ ಅವರು ಒಮ್ಮೆ ಬಿಗ್ ಬಾಸ್ ಹೋಸ್ಟ್ ಮಾಡಿದ್ದರು. ಆಗ ಸ್ಪರ್ಧಿಗಳು ಕನ್ನಡದಲ್ಲಿ ಮಾತನಾಡಿದ್ದರು. ಇದನ್ನು ಕೇಳಿ ಜೂನಿಯರ್ ಎನ್​ಟಿಆರ್ ಖುಷಿಪಟ್ಟಿದ್ದರು.

‘ಕನ್ನಡದಲ್ಲಿ ಚೆನ್ನಾಗಿ ಮಾತಾಡ್ತಾ ಇದೀರಾ ನೀವು. ಅವರು ಕನ್ನಡದವರಾ ಅಥವಾ ನೀವು ಕನ್ನಡದವರಾ’ ಎಂದು ಜೂನಿಯರ್ ಎನ್​ಟಿಆರ್ ಕೇಳಿದರು. ‘ನಾವಿಬ್ಬರೂ ಕನ್ನಡಿಗರು’ ಎನ್ನುವ ಉತ್ತರ ಅವರ ಕಡೆಯಿಂದ ಬಂತು. ಇದಕ್ಕೆ ಖುಷಿಯಿಂದ ಉತ್ತರಿಸಿದ ಜೂನಿಯರ್ ಎನ್​ಟಿಆರ್, ‘ನನ್ನ ಅಮ್ಮ ಕೂಡ ಕನ್ನಡದವರು. ಕುಂದಾಪುರದವರು’ ಎಂದು ಹೆಮ್ಮೆಯಿಂದ ಹೇಳಿಕೊಂಡರು ಜೂನಿಯರ್ ಎನ್​ಟಿಆರ್.

ಜೂನಿಯರ್ ಎನ್​ಟಿಆರ್ ಅವರು ಇತ್ತೀಚೆಗಷ್ಟೇ  ಅಮ್ಮನ ಜೊತೆ ಕುಂದಾಪುರಕ್ಕೆ ಭೇಟಿ ಕೊಟ್ಟಿದ್ದರು. ಅವರ ತಾಯಿಗೆ ಉಡುಪಿಗೆ ಭೇಟಿ ಕೊಡಬೇಕು ಎಂಬ ಆಸೆ ಇತ್ತು. ಅದನ್ನು ಈಡೇರಿಸಿದ್ದಾರೆ. ಕರ್ನಾಟಕಕ್ಕೆ ಬಂದಾಗೆಲ್ಲ ಜೂನಿಯರ್ ಎನ್​ಟಿಆರ್ ಕನ್ನಡದಲ್ಲೇ ಮಾತನಾಡಿ ಗಮನ ಸೆಳೆಯುತ್ತಾರೆ. ಪುನೀತ್ ರಾಜ್​ಕುಮಾರ್​ಗಾಗಿ ಅವರು ಒಂದನ್ನು ಹಾಡು ಹಾಡಿದ್ದರು. ಅವರು ಪುನೀತ್ ನಿಧನ ಹೊಂದಿದಾಗ ಸಾಕಷ್ಟು ಸಾಕಷ್ಟು ನೊಂದುಕೊಂಡಿದ್ದರು.

ಇದನ್ನೂ ಓದಿ: ಒಟಿಟಿಗೆ ಬರಲಿದೆ ಜೂ ಎನ್​ಟಿಆರ್ ‘ದೇವರ’, ಯಾವ್ಯಾವ ಸಿನಿಮಾ ಈ ವಾರ?

ಸಿನಿಮಾ ವಿಚಾರಕ್ಕೆ ಬರೋದಾದರೆ ಜೂನಿಯರ್ ಎನ್​ಟಿಆರ್ ಅವರ ನಟನೆಯ ‘ದೇವರ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿದೆ. ಈ ಸಿನಿಮಾ ಮಿಶ್ರಪ್ರತಿಕ್ರಿಯೆ ಪಡೆಯಿತು. ಇದನ್ನು ಸೋಲು ಎಂದಾಗಲೀ ಗೆಲುವು ಎಂದಾಗಲೀ ಹೇಳಲು ಸಾಧ್ಯವೇ ಇಲ್ಲ. ಇದಲ್ಲದೆ ‘ವಾರ್ 2’ ಸಿನಿಮಾ ಕೆಲಸಗಳಲ್ಲೂ ಅವರು ಬ್ಯುಸಿ ಆಗಲಿದ್ದಾರೆ. ಇದರ ಶೂಟ್ ಮುಂಬೈನಲ್ಲಿ ನಡೆಯುತ್ತಿದೆ. ಮತ್ತೊಂದು ವಿಶೇಷ ಎಂದರೆ ಕನ್ನಡಿಗ ಪ್ರಶಾಂತ್ ನೀಲ್ ಜೊತೆ ಅವರು ಸಿನಿಮಾ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Nithya Bhavishya: ದಿನ ಭವಿಷ್ಯ; ಸೋಮವಾರದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ದಿನ ಭವಿಷ್ಯ; ಸೋಮವಾರದ ರಾಶಿ ಭವಿಷ್ಯ ತಿಳಿಯಿರಿ
ನಿಖಿಲ್​ನನ್ನು ಜನರು ಅಭಿಮನ್ಯು ಮಾಡುವುದಿಲ್ಲ, ಅರ್ಜುನ ಮಾಡುತ್ತಾರೆ: HDK
ನಿಖಿಲ್​ನನ್ನು ಜನರು ಅಭಿಮನ್ಯು ಮಾಡುವುದಿಲ್ಲ, ಅರ್ಜುನ ಮಾಡುತ್ತಾರೆ: HDK
ಹಾಸನಾಂಬೆ ದರ್ಶನ ಪಡೆದ ಬಳಿಕ ಡಿ ಬಾಸ್ ಬಗ್ಗೆ ಮಾತಾಡಿದ ಗೆಳೆಯ ತರುಣ್ ಸುಧೀರ್
ಹಾಸನಾಂಬೆ ದರ್ಶನ ಪಡೆದ ಬಳಿಕ ಡಿ ಬಾಸ್ ಬಗ್ಗೆ ಮಾತಾಡಿದ ಗೆಳೆಯ ತರುಣ್ ಸುಧೀರ್
ಪ್ರಾರ್ಥನೆ ವೇಳೆ ಬಿತ್ತು ಹೂವು: ಕುಮಾರಸ್ವಾಮಿಗೆ ಶುಭ ಸೂಚನೆನಾ?
ಪ್ರಾರ್ಥನೆ ವೇಳೆ ಬಿತ್ತು ಹೂವು: ಕುಮಾರಸ್ವಾಮಿಗೆ ಶುಭ ಸೂಚನೆನಾ?
ಪ್ರಥಮ ಬಾರಿಗೆ ಚಾಮರಾಜನಗರಕ್ಕೆ ರಸಗೊಬ್ಬರ ಹೊತ್ತು ತಂದ ರೈಲು!
ಪ್ರಥಮ ಬಾರಿಗೆ ಚಾಮರಾಜನಗರಕ್ಕೆ ರಸಗೊಬ್ಬರ ಹೊತ್ತು ತಂದ ರೈಲು!
ಬಿಗ್​ಬಾಸ್ ಮನೆಯಲ್ಲಿ ಮಾನಸ ಹೇಗಿರಬೇಕು? ಸಲಹೆ ಕೊಟ್ಟ ಹನುಮಂತು
ಬಿಗ್​ಬಾಸ್ ಮನೆಯಲ್ಲಿ ಮಾನಸ ಹೇಗಿರಬೇಕು? ಸಲಹೆ ಕೊಟ್ಟ ಹನುಮಂತು
ಮಾಧುರಿ ಜೊತೆ ನೃತ್ಯ ಮಾಡುವಾಗ ವೇದಿಕೆ ಮೇಲೆ ಬಿದ್ದ ನಟಿ ವಿದ್ಯಾ ಬಾಲನ್
ಮಾಧುರಿ ಜೊತೆ ನೃತ್ಯ ಮಾಡುವಾಗ ವೇದಿಕೆ ಮೇಲೆ ಬಿದ್ದ ನಟಿ ವಿದ್ಯಾ ಬಾಲನ್
ವಕ್ಫ್​ ಮಂಡಳಿಯವರು ದೇವಸ್ಥಾನಕ್ಕೂ ನೋಟಿಸ್ ನೀಡುತ್ತಿದ್ದಾರೆ: ಯತ್ನಾಳ್​
ವಕ್ಫ್​ ಮಂಡಳಿಯವರು ದೇವಸ್ಥಾನಕ್ಕೂ ನೋಟಿಸ್ ನೀಡುತ್ತಿದ್ದಾರೆ: ಯತ್ನಾಳ್​
ಹಾಸನಾಂಬೆ ದರ್ಶನ ಪಡೆದ ಕುಮಾರಸ್ವಾಮಿ, ಪುತ್ರನ ಗೆಲುವಿಗಾಗಿ ವಿಶೇಷ ಪೂಜೆ
ಹಾಸನಾಂಬೆ ದರ್ಶನ ಪಡೆದ ಕುಮಾರಸ್ವಾಮಿ, ಪುತ್ರನ ಗೆಲುವಿಗಾಗಿ ವಿಶೇಷ ಪೂಜೆ
30 ಗ್ರಾಂ ಚಿನ್ನ, 100 ಗ್ರಾಂ ಬೆಳ್ಳಿ ಇದ್ದ ಬ್ಯಾಗ್ ವಾಪಸ್ ನೀಡಿದ ಕಂಡಕ್ಟರ್
30 ಗ್ರಾಂ ಚಿನ್ನ, 100 ಗ್ರಾಂ ಬೆಳ್ಳಿ ಇದ್ದ ಬ್ಯಾಗ್ ವಾಪಸ್ ನೀಡಿದ ಕಂಡಕ್ಟರ್