AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗು ಬಿಗ್ ಬಾಸ್ ವೇದಿಕೆ ಮೇಲೆ ಕನ್ನಡದಲ್ಲೇ ಮಾತನಾಡಿದ್ದ ಜೂನಿಯರ್ ಎನ್​ಟಿಆರ್

ಜೂನಿಯರ್ ಎನ್ಟಿಆರ್ ಅವರಿಗೆ ಕರ್ನಾಟಕದಲ್ಲಿ ದೊಡ್ಡ ಅಭಿಮಾನಿ ಬಳಗವಿದೆ. ಅವರ ತಾಯಿ ಕುಂದಾಪುರದವರು ಎಂಬುದು ಅವರ ಕನ್ನಡದೊಂದಿಗಿನ ನಂಟನ್ನು ಸೂಚಿಸುತ್ತದೆ. ಬಿಗ್ ಬಾಸ್ ಕನ್ನಡದಲ್ಲಿ ಅವರ ಭಾಗವಹಿಸುವಿಕೆ ಮತ್ತು ಕನ್ನಡ ಕಲಾವಿದರೊಂದಿಗಿನ ಸಂಬಂಧಗಳು ಅವರ ಕನ್ನಡ ಪ್ರೀತಿಯನ್ನು ತೋರಿಸುತ್ತವೆ.

ತೆಲುಗು ಬಿಗ್ ಬಾಸ್ ವೇದಿಕೆ ಮೇಲೆ ಕನ್ನಡದಲ್ಲೇ ಮಾತನಾಡಿದ್ದ ಜೂನಿಯರ್ ಎನ್​ಟಿಆರ್
ಜೂ.ಎನ್​ಟಿಆರ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 28, 2024 | 7:41 AM

Share

ತೆಲುಗು ನಟ ಜೂನಿಯರ್ ಎನ್​ಟಿಆರ್ ಅವರಿಗೆ ಕರ್ನಾಟಕದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಇತ್ತೀಚಿಗಿನ ವರ್ಷಗಳಲ್ಲಂತೂ ಕನ್ನಡದ ಹಾಗೂ ಕರ್ನಾಟಕದ ಜೊತೆಗಿನ ನಂಟು ಹೆಚ್ಚಿದೆ. ಅವರು ಈ ಮೊದಲು ಬಿಗ್ ಬಾಸ್​ನಲ್ಲಿ ಕನ್ನಡದಲ್ಲಿ ಮಾತನಾಡಿದ್ದರು. ಈ ಮೂಲಕ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದರು. ಕನ್ನಡದ ಸ್ಪರ್ಧಿಗಳು ಬಿಗ್ ಬಾಸ್​ಗೆ ಬಂದಿದ್ದರು. ಅವರ ಜೊತೆ ಮಾತನಾಡಿದ್ದರು.

ತೆಲುಗು ಭಾಷೆಯಲ್ಲಿ ಕನ್ನಡದ ಕಲಾವಿದರು ಇದ್ದಾರೆ. ಅಲ್ಲಿನ ರಿಯಾಲಿಟಿ ಶೋನಲ್ಲೂ ಕನ್ನಡದವರು ಭಾಗಿ ಆಗಿದ್ದು ಇದೆ. ಜೂನಿಯರ್​ ಎನ್​ಟಿಆರ್ ಅವರು ಒಮ್ಮೆ ಬಿಗ್ ಬಾಸ್ ಹೋಸ್ಟ್ ಮಾಡಿದ್ದರು. ಆಗ ಸ್ಪರ್ಧಿಗಳು ಕನ್ನಡದಲ್ಲಿ ಮಾತನಾಡಿದ್ದರು. ಇದನ್ನು ಕೇಳಿ ಜೂನಿಯರ್ ಎನ್​ಟಿಆರ್ ಖುಷಿಪಟ್ಟಿದ್ದರು.

‘ಕನ್ನಡದಲ್ಲಿ ಚೆನ್ನಾಗಿ ಮಾತಾಡ್ತಾ ಇದೀರಾ ನೀವು. ಅವರು ಕನ್ನಡದವರಾ ಅಥವಾ ನೀವು ಕನ್ನಡದವರಾ’ ಎಂದು ಜೂನಿಯರ್ ಎನ್​ಟಿಆರ್ ಕೇಳಿದರು. ‘ನಾವಿಬ್ಬರೂ ಕನ್ನಡಿಗರು’ ಎನ್ನುವ ಉತ್ತರ ಅವರ ಕಡೆಯಿಂದ ಬಂತು. ಇದಕ್ಕೆ ಖುಷಿಯಿಂದ ಉತ್ತರಿಸಿದ ಜೂನಿಯರ್ ಎನ್​ಟಿಆರ್, ‘ನನ್ನ ಅಮ್ಮ ಕೂಡ ಕನ್ನಡದವರು. ಕುಂದಾಪುರದವರು’ ಎಂದು ಹೆಮ್ಮೆಯಿಂದ ಹೇಳಿಕೊಂಡರು ಜೂನಿಯರ್ ಎನ್​ಟಿಆರ್.

ಜೂನಿಯರ್ ಎನ್​ಟಿಆರ್ ಅವರು ಇತ್ತೀಚೆಗಷ್ಟೇ  ಅಮ್ಮನ ಜೊತೆ ಕುಂದಾಪುರಕ್ಕೆ ಭೇಟಿ ಕೊಟ್ಟಿದ್ದರು. ಅವರ ತಾಯಿಗೆ ಉಡುಪಿಗೆ ಭೇಟಿ ಕೊಡಬೇಕು ಎಂಬ ಆಸೆ ಇತ್ತು. ಅದನ್ನು ಈಡೇರಿಸಿದ್ದಾರೆ. ಕರ್ನಾಟಕಕ್ಕೆ ಬಂದಾಗೆಲ್ಲ ಜೂನಿಯರ್ ಎನ್​ಟಿಆರ್ ಕನ್ನಡದಲ್ಲೇ ಮಾತನಾಡಿ ಗಮನ ಸೆಳೆಯುತ್ತಾರೆ. ಪುನೀತ್ ರಾಜ್​ಕುಮಾರ್​ಗಾಗಿ ಅವರು ಒಂದನ್ನು ಹಾಡು ಹಾಡಿದ್ದರು. ಅವರು ಪುನೀತ್ ನಿಧನ ಹೊಂದಿದಾಗ ಸಾಕಷ್ಟು ಸಾಕಷ್ಟು ನೊಂದುಕೊಂಡಿದ್ದರು.

ಇದನ್ನೂ ಓದಿ: ಒಟಿಟಿಗೆ ಬರಲಿದೆ ಜೂ ಎನ್​ಟಿಆರ್ ‘ದೇವರ’, ಯಾವ್ಯಾವ ಸಿನಿಮಾ ಈ ವಾರ?

ಸಿನಿಮಾ ವಿಚಾರಕ್ಕೆ ಬರೋದಾದರೆ ಜೂನಿಯರ್ ಎನ್​ಟಿಆರ್ ಅವರ ನಟನೆಯ ‘ದೇವರ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿದೆ. ಈ ಸಿನಿಮಾ ಮಿಶ್ರಪ್ರತಿಕ್ರಿಯೆ ಪಡೆಯಿತು. ಇದನ್ನು ಸೋಲು ಎಂದಾಗಲೀ ಗೆಲುವು ಎಂದಾಗಲೀ ಹೇಳಲು ಸಾಧ್ಯವೇ ಇಲ್ಲ. ಇದಲ್ಲದೆ ‘ವಾರ್ 2’ ಸಿನಿಮಾ ಕೆಲಸಗಳಲ್ಲೂ ಅವರು ಬ್ಯುಸಿ ಆಗಲಿದ್ದಾರೆ. ಇದರ ಶೂಟ್ ಮುಂಬೈನಲ್ಲಿ ನಡೆಯುತ್ತಿದೆ. ಮತ್ತೊಂದು ವಿಶೇಷ ಎಂದರೆ ಕನ್ನಡಿಗ ಪ್ರಶಾಂತ್ ನೀಲ್ ಜೊತೆ ಅವರು ಸಿನಿಮಾ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ