AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ ಕೃಷ್ಣನ ಮಠಕ್ಕೆ ಭೇಟಿಕೊಟ್ಟ ಜೂ ಎನ್​ಟಿಆರ್-ರಿಷಬ್ ಶೆಟ್ಟಿ

ನೆರೆಯ ತೆಲುಗು ಚಿತ್ರರಂಗದ ಸ್ಟಾರ್ ನಟ ಜೂ ಎನ್​ಟಿಆರ್ ಇಂದು (ಆಗಸ್ಟ್ 31) ಉಡುಪಿ ಶ್ರೀ ಕೃಷ್ಣ ದೇವಾಲಯಕ್ಕೆ ಭೇಟಿ ನೀಡಿದ್ದರು. ಈ ಸಮಯದಲ್ಲಿ ನಟ ರಿಷಬ್ ಶೆಟ್ಟಿ ಹಾಗೂ ನಿರ್ದೇಶಕ ಪ್ರಶಾಂತ್ ನೀಲ್ ಸಹ ಜೊತೆಗಿದ್ದರು.

ಉಡುಪಿ ಕೃಷ್ಣನ ಮಠಕ್ಕೆ ಭೇಟಿಕೊಟ್ಟ ಜೂ ಎನ್​ಟಿಆರ್-ರಿಷಬ್ ಶೆಟ್ಟಿ
ಮಂಜುನಾಥ ಸಿ.
|

Updated on: Aug 31, 2024 | 3:49 PM

Share

ಉಡುಪಿ ಕೃಷ್ಣನ ಮಠಕ್ಕೆ ಹಲವು ಸಿನಿಮಾ ಸೆಲೆಬ್ರಿಟಿಗಳು, ರಾಜಕಾರಣಿಗಳು, ಉದ್ಯಮಿಗಳು ಭೇಟಿ ನೀಡಿ ಶ್ರೀ ಕೃಷ್ಣನ ಆಶೀರ್ವಾದ ಪಡೆದಿದ್ದಾರೆ. ಇದೀಗ ತೆಲುಗಿನ ಖ್ಯಾತ ನಟ ಜೂ ಎನ್​ಟಿಆರ್ ಉಡುಪಿ ಶ್ರೀ ಕೃಷ್ಣನ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ವಿಶೇಷವೆಂದರೆ ಜೂ ಎನ್​ಟಿಆರ್ ಅನ್ನು ಉಡುಪಿಗೆ ಕರೆತಂದಿರುವುದು ಕನ್ನಡದ ರಿಷಬ್ ಶೆಟ್ಟಿ.

ಜೂ ಎನ್​ಟಿಆರ್ ತಾಯಿ ಹನ ಉಡುಪಿ ಮೂಲದವರೇ ಆಗಿದ್ದಾರೆ. ಹಾಗಾಗಿ ಜೂ ಎನ್​ಟಿಆರ್​ಗೆ ಕರ್ನಾಟಕದೊಂದಿಗೆ ವಿಶೇಷ ಬಂಧವಿದೆ. ಕನ್ನಡವನ್ನು ಮಾತನಾಡಬಲ್ಲ, ಅರ್ಥ ಮಾಡಿಕೊಳ್ಳಬಲ್ಲ ಜೂ ಎನ್​ಟಿಆರ್, ಈ ಹಿಂದೆ ‘ಕಾಂತಾರ’ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದರು. ರಿಷಬ್ ಶೆಟ್ಟಿ ಜೊತೆಗೂ ಸಹ ಈ ಬಗ್ಗೆ ಮಾತನಾಡಿ ತಮ್ಮ ಮೆಚ್ಚುಗೆ ತಿಳಿಸಿದ್ದರು. ಇದರಿಂದ ಇಬ್ಬರ ನಡುವೆ ಉತ್ತಮ ಬಾಂಧವ್ಯ ಸೃಷ್ಟಿಯಾಗಿತ್ತು. ಇದೀಗ ಜೂ ಎನ್​ಟಿಆರ್ ಕೃಷ್ಣನ ದರ್ಶನಕ್ಕೆ ಬಂದಾಗ ರಿಷಬ್ ಶೆಟ್ಟಿ ಸಹ ಅವರಿಗೆ ಜೊತೆಯಾಗಿದ್ದಾರೆ. ಮಾತ್ರವಲ್ಲದೆ ನಿರ್ದೇಶಕ ಪ್ರಶಾಂತ್ ನೀಲ್ ಸಹ ಇವರ ಜೊತೆಗಿದ್ದರು.

ಇದನ್ನೂ ಓದಿ:ಹಾರರ್ ಸಿನಿಮಾ ಒಪ್ಪಿಕೊಂಡ ರಶ್ಮಿಕಾ ಮಂದಣ್ಣ; ಕರ್ನಾಟಕದಲ್ಲಿ ನಡೆಯಲಿದೆ ಕಥೆ

ಜೂ ಎನ್​ಟಿಆರ್​ಗೆ ಕನ್ನಡ ಚಿತ್ರರಂಗದ ಜೊತೆಗೆ ವಿಶೇಷ ಬಾಂಧವ್ಯ ಇದೆ. ಪುನೀತ್ ರಾಜ್​ಕುಮಾರ್ ಹಾಗೂ ಜೂ ಎನ್​ಟಿಆರ್ ಅತ್ಯಾಪ್ತ ಗೆಳೆಯರು. ಪುನೀತ್ ರಾಜ್​ಕುಮಾರ್ ನಟನೆಯ ಸಿನಿಮಾ ಒಂದರಲ್ಲಿ, ‘ಗೆಳೆಯ-ಗೆಳೆಯ’ ಎಂಬ ಹಾಡೊಂದನ್ನು ಜೂ ಎನ್​ಟಿಆರ್ ಹಾಡಿದ್ದರು. ಅಪ್ಪು ನಿಧನವಾದ ಸಮಯದಲ್ಲಿ ಜೂ ಎನ್​ಟಿಆರ್ ಆಗಮಿಸಿದ್ದರು. ಆ ಬಳಿಕ ಕರ್ನಾಟಕ ರತ್ನ ಕಾರ್ಯಕ್ರಮ ಮಾಡಿದಾಗಲೂ ಸಹ ಜೂ ಎನ್​ಟಿಆರ್ ಆಗಮಿಸಿದ್ದರು. ಈಗ ಉಡುಪಿ ಕೃಷ್ಣನ ದರ್ಶನಕ್ಕೆ ಬಂದಿದ್ದಾರೆ.

ಪ್ರಶಾಂತ್ ನೀಲ್ ನಿರ್ದೇಶನದ ‘ಡ್ರ್ಯಾಗನ್’ ಹೆಸರಿನ ಸಿನಿಮಾದಲ್ಲಿ ಜೂ ಎನ್​ಟಿಆರ್ ನಟಿಸಲಿದ್ದಾರೆ. ಸಿನಿಮಾದ ಮುಹೂರ್ತ ಇತ್ತೀಚೆಗಷ್ಟೆ ಮುಗಿದಿದೆ. ಸಿನಿಮಾದ ಚಿತ್ರೀಕರಣ ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿದ್ದು, ಸಿನಿಮಾದ ಚಿತ್ರೀಕರಣ ಪ್ರಾರಂಭ ಮಾಡುವ ಮುನ್ನ ದೇವರ ದರ್ಶನ ಮತ್ತು ಆಶೀರ್ವಾದ ಪಡೆಯಲೆಂದು ಜೂ ಎನ್​ಟಿಆರ್ ಕರ್ನಾಟಕಕ್ಕೆ ಬಂದಿದ್ದಾರೆ. ಇನ್ನುಳಿದಂತೆ ಜೂ ಎನ್​ಟಿಆರ್ ‘ದೇವರ’ ಹೆಸರಿನ ಸಿನಿಮಾದ ಚಿತ್ರೀಕರಣ ಮುಗಿಸಿದ್ದಾರೆ. ಪೋಸ್ಟ್ ಪ್ರೊಡಕ್ಷನ್ ಕೆಲಸ ಚಾಲ್ತಿಯಲ್ಲಿದೆ. ಹಿಂದಿಯಲ್ಲಿ ಹೃತಿಕ್ ರೋಷನ್ ಜೊತೆಗೆ ‘ವಾರ್’ ಸಿನಿಮಾ ಚಿತ್ರೀಕರಣ ಮುಗಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ