AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ ಕೃಷ್ಣನ ಮಠಕ್ಕೆ ಭೇಟಿಕೊಟ್ಟ ಜೂ ಎನ್​ಟಿಆರ್-ರಿಷಬ್ ಶೆಟ್ಟಿ

ನೆರೆಯ ತೆಲುಗು ಚಿತ್ರರಂಗದ ಸ್ಟಾರ್ ನಟ ಜೂ ಎನ್​ಟಿಆರ್ ಇಂದು (ಆಗಸ್ಟ್ 31) ಉಡುಪಿ ಶ್ರೀ ಕೃಷ್ಣ ದೇವಾಲಯಕ್ಕೆ ಭೇಟಿ ನೀಡಿದ್ದರು. ಈ ಸಮಯದಲ್ಲಿ ನಟ ರಿಷಬ್ ಶೆಟ್ಟಿ ಹಾಗೂ ನಿರ್ದೇಶಕ ಪ್ರಶಾಂತ್ ನೀಲ್ ಸಹ ಜೊತೆಗಿದ್ದರು.

ಉಡುಪಿ ಕೃಷ್ಣನ ಮಠಕ್ಕೆ ಭೇಟಿಕೊಟ್ಟ ಜೂ ಎನ್​ಟಿಆರ್-ರಿಷಬ್ ಶೆಟ್ಟಿ
ಮಂಜುನಾಥ ಸಿ.
|

Updated on: Aug 31, 2024 | 3:49 PM

Share

ಉಡುಪಿ ಕೃಷ್ಣನ ಮಠಕ್ಕೆ ಹಲವು ಸಿನಿಮಾ ಸೆಲೆಬ್ರಿಟಿಗಳು, ರಾಜಕಾರಣಿಗಳು, ಉದ್ಯಮಿಗಳು ಭೇಟಿ ನೀಡಿ ಶ್ರೀ ಕೃಷ್ಣನ ಆಶೀರ್ವಾದ ಪಡೆದಿದ್ದಾರೆ. ಇದೀಗ ತೆಲುಗಿನ ಖ್ಯಾತ ನಟ ಜೂ ಎನ್​ಟಿಆರ್ ಉಡುಪಿ ಶ್ರೀ ಕೃಷ್ಣನ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ವಿಶೇಷವೆಂದರೆ ಜೂ ಎನ್​ಟಿಆರ್ ಅನ್ನು ಉಡುಪಿಗೆ ಕರೆತಂದಿರುವುದು ಕನ್ನಡದ ರಿಷಬ್ ಶೆಟ್ಟಿ.

ಜೂ ಎನ್​ಟಿಆರ್ ತಾಯಿ ಹನ ಉಡುಪಿ ಮೂಲದವರೇ ಆಗಿದ್ದಾರೆ. ಹಾಗಾಗಿ ಜೂ ಎನ್​ಟಿಆರ್​ಗೆ ಕರ್ನಾಟಕದೊಂದಿಗೆ ವಿಶೇಷ ಬಂಧವಿದೆ. ಕನ್ನಡವನ್ನು ಮಾತನಾಡಬಲ್ಲ, ಅರ್ಥ ಮಾಡಿಕೊಳ್ಳಬಲ್ಲ ಜೂ ಎನ್​ಟಿಆರ್, ಈ ಹಿಂದೆ ‘ಕಾಂತಾರ’ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದರು. ರಿಷಬ್ ಶೆಟ್ಟಿ ಜೊತೆಗೂ ಸಹ ಈ ಬಗ್ಗೆ ಮಾತನಾಡಿ ತಮ್ಮ ಮೆಚ್ಚುಗೆ ತಿಳಿಸಿದ್ದರು. ಇದರಿಂದ ಇಬ್ಬರ ನಡುವೆ ಉತ್ತಮ ಬಾಂಧವ್ಯ ಸೃಷ್ಟಿಯಾಗಿತ್ತು. ಇದೀಗ ಜೂ ಎನ್​ಟಿಆರ್ ಕೃಷ್ಣನ ದರ್ಶನಕ್ಕೆ ಬಂದಾಗ ರಿಷಬ್ ಶೆಟ್ಟಿ ಸಹ ಅವರಿಗೆ ಜೊತೆಯಾಗಿದ್ದಾರೆ. ಮಾತ್ರವಲ್ಲದೆ ನಿರ್ದೇಶಕ ಪ್ರಶಾಂತ್ ನೀಲ್ ಸಹ ಇವರ ಜೊತೆಗಿದ್ದರು.

ಇದನ್ನೂ ಓದಿ:ಹಾರರ್ ಸಿನಿಮಾ ಒಪ್ಪಿಕೊಂಡ ರಶ್ಮಿಕಾ ಮಂದಣ್ಣ; ಕರ್ನಾಟಕದಲ್ಲಿ ನಡೆಯಲಿದೆ ಕಥೆ

ಜೂ ಎನ್​ಟಿಆರ್​ಗೆ ಕನ್ನಡ ಚಿತ್ರರಂಗದ ಜೊತೆಗೆ ವಿಶೇಷ ಬಾಂಧವ್ಯ ಇದೆ. ಪುನೀತ್ ರಾಜ್​ಕುಮಾರ್ ಹಾಗೂ ಜೂ ಎನ್​ಟಿಆರ್ ಅತ್ಯಾಪ್ತ ಗೆಳೆಯರು. ಪುನೀತ್ ರಾಜ್​ಕುಮಾರ್ ನಟನೆಯ ಸಿನಿಮಾ ಒಂದರಲ್ಲಿ, ‘ಗೆಳೆಯ-ಗೆಳೆಯ’ ಎಂಬ ಹಾಡೊಂದನ್ನು ಜೂ ಎನ್​ಟಿಆರ್ ಹಾಡಿದ್ದರು. ಅಪ್ಪು ನಿಧನವಾದ ಸಮಯದಲ್ಲಿ ಜೂ ಎನ್​ಟಿಆರ್ ಆಗಮಿಸಿದ್ದರು. ಆ ಬಳಿಕ ಕರ್ನಾಟಕ ರತ್ನ ಕಾರ್ಯಕ್ರಮ ಮಾಡಿದಾಗಲೂ ಸಹ ಜೂ ಎನ್​ಟಿಆರ್ ಆಗಮಿಸಿದ್ದರು. ಈಗ ಉಡುಪಿ ಕೃಷ್ಣನ ದರ್ಶನಕ್ಕೆ ಬಂದಿದ್ದಾರೆ.

ಪ್ರಶಾಂತ್ ನೀಲ್ ನಿರ್ದೇಶನದ ‘ಡ್ರ್ಯಾಗನ್’ ಹೆಸರಿನ ಸಿನಿಮಾದಲ್ಲಿ ಜೂ ಎನ್​ಟಿಆರ್ ನಟಿಸಲಿದ್ದಾರೆ. ಸಿನಿಮಾದ ಮುಹೂರ್ತ ಇತ್ತೀಚೆಗಷ್ಟೆ ಮುಗಿದಿದೆ. ಸಿನಿಮಾದ ಚಿತ್ರೀಕರಣ ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿದ್ದು, ಸಿನಿಮಾದ ಚಿತ್ರೀಕರಣ ಪ್ರಾರಂಭ ಮಾಡುವ ಮುನ್ನ ದೇವರ ದರ್ಶನ ಮತ್ತು ಆಶೀರ್ವಾದ ಪಡೆಯಲೆಂದು ಜೂ ಎನ್​ಟಿಆರ್ ಕರ್ನಾಟಕಕ್ಕೆ ಬಂದಿದ್ದಾರೆ. ಇನ್ನುಳಿದಂತೆ ಜೂ ಎನ್​ಟಿಆರ್ ‘ದೇವರ’ ಹೆಸರಿನ ಸಿನಿಮಾದ ಚಿತ್ರೀಕರಣ ಮುಗಿಸಿದ್ದಾರೆ. ಪೋಸ್ಟ್ ಪ್ರೊಡಕ್ಷನ್ ಕೆಲಸ ಚಾಲ್ತಿಯಲ್ಲಿದೆ. ಹಿಂದಿಯಲ್ಲಿ ಹೃತಿಕ್ ರೋಷನ್ ಜೊತೆಗೆ ‘ವಾರ್’ ಸಿನಿಮಾ ಚಿತ್ರೀಕರಣ ಮುಗಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ