AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ: ಚಾಪ್ಟರ್ 1’ ಪ್ರೀ-ರಿಲೀಸ್ ಕಾರ್ಯಕ್ರಮಕ್ಕೆ ಜೂ. ಎನ್​ಟಿಆರ್ ಅತಿಥಿ

ಹೈದರಾಬಾದ್​​ನಲ್ಲಿ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಪ್ರೀ-ರಿಲೀಸ್ ಇವೆಂಟ್ ಅದ್ದೂರಿಯಾಗಿ ನಡೆಯಲಿದೆ. ತೆಲುಗು ಚಿತ್ರರಂಗದ ಸ್ಟಾರ್ ನಟ ಜೂನಿಯರ್ ಎನ್​ಟಿಆರ್​ ಅವರು ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಈ ಇವೆಂಟ್ ಜರುಗಲಿದೆ. ಆ ಕುರಿತು ಇಲ್ಲಿದೆ ಇನ್ನಷ್ಟು ಮಾಹಿತಿ..

‘ಕಾಂತಾರ: ಚಾಪ್ಟರ್ 1’ ಪ್ರೀ-ರಿಲೀಸ್ ಕಾರ್ಯಕ್ರಮಕ್ಕೆ ಜೂ. ಎನ್​ಟಿಆರ್ ಅತಿಥಿ
Kantara Chapter 1
ಮದನ್​ ಕುಮಾರ್​
|

Updated on: Sep 26, 2025 | 9:12 PM

Share

ಪ್ಯಾನ್ ಇಂಡಿಯಾ ಸ್ಟಾರ್ ರಿಷಬ್ ಶೆಟ್ಟಿ (Rishab Shetty) ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಬಿಡುಗಡೆಯತ್ತ ಸಂಪೂರ್ಣ ಗಮನ ಹರಿಸಿದ್ದಾರೆ. ಅಕ್ಟೋಬರ್ 2ರಂದು ವಿಶ್ವಾದ್ಯಂತ ಈ ಚಿತ್ರ ಬಿಡುಗಡೆ ಆಗಲಿದೆ. ಈಗಾಗಲೇ ಪ್ರಚಾರ ಕಾರ್ಯವನ್ನು ಭರದಿಂದ ಮಾಡಲಾಗುತ್ತಿದೆ. ವಿವಿಧ ನಗರಗಳಿಗೆ ತೆರಳಿ ಚಿತ್ರತಂಡ ಸುದ್ದಿಗೋಷ್ಠಿ ಮಾಡಿದೆ. ಇತ್ತೀಚೆಗೆ ಬಿಡುಗಡೆ ಆದ ಟ್ರೇಲರ್ ಸಖತ್ ಸದ್ದು ಮಾಡಿದೆ. ಈಗ ‘ಕಾಂತಾರ: ಚಾಪ್ಟರ್ 1’ (Kantara Chapter 1) ಸಿನಿಮಾದ ಪ್ರೀ-ರಿಲೀಸ್ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಇವೆಂಟ್​ಗೆ ಟಾಲಿವುಡ್ ನಟ ಜೂನಿಯರ್ ಎನ್​ಟಿಆರ್ (Jr NTR) ಅವರು ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ.

ಜೂನಿಯರ್ ಎನ್​ಟಿಆರ್ ಮತ್ತು ರಿಷಬ್ ಶೆಟ್ಟಿ ನಡುವೆ ಉತ್ತಮ ಸ್ನೇಹ ಇದೆ. ರಿಷಬ್ ಶೆಟ್ಟಿ ಅವರು ಕುಂದಾಪುರದವರು. ಜೂನಿಯರ್ ಎನ್​ಟಿಆರ್ ಅವರಿಗೆ ಕುಂದಾಪುರ ಎಂದರೆ ವಿಶೇಷ ಪ್ರೀತಿ. ಕನ್ನಡ ಚಿತ್ರರಂಗದ ಬಗ್ಗೆ ಅವರು ಗೌರವ ಹೊಂದಿದ್ದಾರೆ. ಈಗ ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಪ್ರೀ-ರಿಲೀಸ್ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಬರುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಹೈದರಾಬಾದ್​​ನಲ್ಲಿ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಪ್ರೀ-ರಿಲೀಸ್ ಇವೆಂಟ್ ನಡೆಯಲಿದೆ. ಜೆಆರ್​ಸಿ ಕನ್ವೆನ್ಷನ್ ಹಾಲ್​​ನಲ್ಲಿ ಸಾವಿರಾರು ಅಭಿಮಾನಿಗಳ ಎದುರಿನಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಜೂನಿಯರ್ ಎನ್​ಟಿಆರ್​ ಬರುತ್ತಾರೆ ಎಂದರೆ ಅವರನ್ನು ನೋಡಲು ಅಭಿಮಾನಿಗಳು ಮುಗಿಬೀಳುತ್ತಾರೆ. ಹಾಗಾಗಿ ಈ ಕಾರ್ಯಕ್ರಮ ಸಖತ್ ಅದ್ದೂರಿಯಾಗುವುದು ಗ್ಯಾರಂಟಿ.

ಈ ಮೊದಲು ಬಿಡುಗಡೆ ಆಗಿದ್ದ ‘ಕಾಂತಾರ’ ಸಿನಿಮಾ ತೆಲುಗಿನಲ್ಲಿ ಕೂಡ ಸೂಪರ್ ಹಿಟ್ ಆಗಿತ್ತು. ಈಗ ‘ಕಾಂತಾರ: ಚಾಪ್ಟರ್ 1’ ಸಿನಿಮಾ ತೆಲುಗಿಗೂ ಡಬ್ ಆಗಿ ಏಕಕಾಲಕ್ಕೆ ಬಿಡುಗಡೆ ಆಗುತ್ತಿದೆ. ಅಲ್ಲದೇ, ರಿಷಬ್ ಶೆಟ್ಟಿ ಅವರು ಈಗಾಗಲೇ ತೆಲುಗು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಪ್ರಶಾಂತ್ ವರ್ಮಾ ನಿರ್ದೇಶನದ ‘ಜೈ ಹನುಮಾನ್’ ಚಿತ್ರದಲ್ಲಿ ಅವರು ಅಭಿನಯಿಸುತ್ತಿದ್ದಾರೆ.

ಇದನ್ನೂ ಓದಿ: ‘ಕಾಂತಾರ: ಚಾಪ್ಟರ್ 1’ ಬಿಡುಗಡೆಗೂ ಮುನ್ನ ಕೊಲ್ಲೂರು ಮೂಕಾಂಬಿಕೆ ಆಶೀರ್ವಾದ ಪಡೆದ ರಿಷಬ್ ಶೆಟ್ಟಿ

ಈಗಾಗಲೇ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಟಿಕೆಟ್ ಬುಕಿಂಗ್ ಆರಂಭ ಆಗಿದೆ. ಜನರು ಮುಗಿಬಿದ್ದು ಟಿಕೆಟ್ ಬುಕ್ ಮಾಡುತ್ತಿದ್ದಾರೆ. ಮೊದಲ ದಿನ ದಾಖಲೆ ಮೊತ್ತದಲ್ಲಿ ಕಲೆಕ್ಷನ್ ಆಗುವ ನಿರೀಕ್ಷೆ ಇದೆ. ರುಕ್ಮಿಣಿ ವಸಂತ್, ರಿಷಬ್ ಶೆಟ್ಟಿ, ಗುಲ್ಶನ್ ದೇವಯ್ಯ, ರಾಕೇಶ್ ಪೂಜಾರಿ ಮುಂತಾದವರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ. ವಿಜಯ್ ಕಿರಗಂದೂರು ಅವರು ನಿರ್ಮಾಣ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ