AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭ; ​ ನಟ ಜೂ. ಎನ್​ಟಿಆರ್-ರಜನಿಕಾಂತ್​ ಭಾಗಿ

Karnataka Ratna Puneeth Rajkumar: ಪುನೀತ್​ ರಾಜ್​ಕುಮಾರ್​ ಪರವಾಗಿ ಪತ್ನಿ ಅಶ್ವಿನಿ ಅವರು ‘ಕರ್ನಾಟಕ ರತ್ನ’ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಈ ಸಮಾರಂಭಕ್ಕೆ ಟಾಲಿವುಡ್​ ನಟ ಜೂನಿಯರ್​ ಎನ್​ಟಿಆರ್ ಸಾಕ್ಷಿ ಆಗಲಿದ್ದಾರೆ.

ಪುನೀತ್​ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭ; ​ ನಟ ಜೂ. ಎನ್​ಟಿಆರ್-ರಜನಿಕಾಂತ್​ ಭಾಗಿ
ಪುನೀತ್​ ರಾಜ್​ಕುಮಾರ್​, ಜೂನಿಯರ್​ ಎನ್​ಟಿಆರ್​
TV9 Web
| Edited By: |

Updated on:Oct 29, 2022 | 3:37 PM

Share

ನವೆಂಬರ್ 1ರಂದು ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಅದಕ್ಕಾಗಿ ಸಕಲ ಸಿದ್ಧತೆ ನಡೆದಿದೆ. ವಿಧಾನಸೌಧದಲ್ಲಿ ಈ ಸಮಾರಂಭ ನಡೆಯಲಿದೆ. ಕನ್ನಡ ರಾಜ್ಯೋತ್ಸವದ ದಿನವೇ ಅಪ್ಪುಗೆ ಈ ಗೌರವ ಸಲ್ಲಿಕೆ ಆಗುತ್ತಿದೆ. ಈ ಸಮಾರಂಭಕ್ಕೆ ಸಾಕ್ಷಿಯಾಗಲು ತೆಲುಗು ಚಿತ್ರರಂಗದ ಸ್ಟಾರ್​ ನಟ ಜೂನಿಯರ್​ ಎನ್​ಟಿಆರ್​ (Jr NTR) ಹಾಗೂ ರಜನಿಕಾಂತ್ ಅವರು ಆಗಮಿಸುವುದು ಖಚಿತ ಆಗಿದೆ. ಕರ್ನಾಟಕ ಸರ್ಕಾರದಿಂದ ಅವರಿಗೆ ಆಹ್ವಾನ ನೀಡಲಾಗಿದೆ. ಆಹ್ವಾನ ಸ್ವೀಕರಿಸಿರುವ ಅವರು ಕರ್ನಾಟಕ ರತ್ನ ಪ್ರಶಸ್ತಿ (Karnataka Ratna) ಪ್ರದಾನ ಸಮಾರಂಭಕ್ಕೆ ಬರಲು ಒಪ್ಪಿದ್ದಾರೆ.

ಪುನೀತ್​ ರಾಜ್​ಕುಮಾರ್​ ಅವರಿಗೆ ಎಲ್ಲ ಭಾಷೆಯ ಚಿತ್ರರಂಗದ ನಟರ ಜೊತೆಗೆ ಒಳ್ಳೆಯ ಒಡನಾಟ ಇತ್ತು. ಎಲ್ಲರನ್ನೂ ಅವರು ಸಮಾನವಾಗಿ ಪ್ರೀತಿಸುತ್ತಿದ್ದರು. ಜೂನಿಯರ್​ ಎನ್​ಟಿಆರ್​ ಜೊತೆಗೂ ಅವರು ಬಾಂಧವ್ಯ ಹೊಂದಿದ್ದರು. ಅಪ್ಪು ನಟಿಸಿದ್ದ ‘ಚಕ್ರವ್ಯೂಹ’ ಸಿನಿಮಾದ ‘ಗೆಳೆಯಾ.. ಗೆಳೆಯಾ..’ ಹಾಡಿಗೆ ಜೂನಿಯರ್​ ಎನ್​ಟಿಆರ್​ ಧ್ವನಿ ನೀಡಿದ್ದರು. ನೋವಿನ ಸಂಗತಿ ಎಂದರೆ ಇಂದು ಅವರ ಗೆಳೆಯ ಪುನೀತ್​ ರಾಜ್​ಕುಮಾರ್​ ಭೌತಿಕವಾಗಿ ನಮ್ಮೊಂದಿಗೆ ಇಲ್ಲ. ಮರಣೋತ್ತರವಾಗಿ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಲಾಗುತ್ತಿದೆ. ಆ ಕ್ಷಣವನ್ನು ಕಣ್ತುಂಬಿಕೊಳ್ಳಲು ಜೂನಿಯರ್​ ಎನ್​ಟಿಆರ್, ರಜನಿಕಾಂತ್​ ಆಗಮಿಸುತ್ತಿದ್ದಾರೆ.

ಪುನೀತ್​ ರಾಜ್​ಕುಮಾರ್​ ಪರವಾಗಿ ಅವರ ಪತ್ನಿ ಅಶ್ವಿನಿ ಅವರು ‘ಕರ್ನಾಟಕ ರತ್ನ’ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಈ ಸಮಾರಂಭಕ್ಕೆ ಡಾ. ರಾಜ್​ಕುಮಾರ್​ ಕುಟುಂಬದ ಸದಸ್ಯರು ಸಾಕ್ಷಿ ಆಗಲಿದ್ದಾರೆ. ಈ ಕ್ಷಣವನ್ನು ಸಂಭ್ರಮಿಸಲು ಅಪ್ಪು ಅಭಿಮಾನಿಗಳು ಕಾದಿದ್ದಾರೆ.

ಇದನ್ನೂ ಓದಿ
Image
Gandhada Gudi: ಗಳಗಳನೆ ಕಣ್ಣೀರು ಹಾಕಿದ ಅನುಶ್ರೀ; ‘ಗಂಧದ ಗುಡಿ’ಯಲ್ಲಿ ಅಪ್ಪು​ ನೋಡಿದ ಬಳಿಕ ನಿರೂಪಕಿ ಭಾವುಕ ಮಾತು
Image
Gandhada Gudi: ‘ಗಂಧದ ಗುಡಿ’ ಗೆಲುವಿಗೆ ಪ್ರಾರ್ಥನೆ; ದೊಡ್ಡ ಗಣಪತಿ ದೇವಸ್ಥಾನದಲ್ಲಿ ಟಿಕೆಟ್​ ಇಟ್ಟು ಅಮೋಘವರ್ಷ ಪೂಜೆ
Image
Gandhada Gudi: ರಿಲೀಸ್​ಗೂ ಮುನ್ನವೇ ದಾಖಲೆ ಬರೆದ ‘ಗಂಧದ ಗುಡಿ’: ಅಪ್ಪು ಕನಸನ್ನು ನನಸು ಮಾಡುತ್ತಿರುವ ಫ್ಯಾನ್ಸ್​
Image
Gandhada Gudi: ಅಂತೂ ಮೌನ ಮುರಿದ ಅಶ್ವಿನಿ ಪುನೀತ್​ ರಾಜ್​ಕುಮಾರ್​; ‘ಗಂಧದ ಗುಡಿ’ ಬಗ್ಗೆ ಇಲ್ಲಿದೆ ಮೊದಲ ಸಂದರ್ಶನ

ಪುನೀತ್​ ರಾಜ್​ಕುಮಾರ್​ ಅವರು ಕೇವಲ ನಟನಾಗಿ ಮಾತ್ರ ಜನಮನ ಗೆದ್ದವರಲ್ಲ. ಅನೇಕ ಸಾಮಾಜಿಕ ಕೆಲಸಗಳು ಕೂಡ ಅವರಿಂದ ಆಗಿತ್ತು. ಆ ಕಾರಣದಿಂದಲೂ ಅವರು ದೇಶದ ಯುವ ಜನತೆಗೆ ಮಾದರಿ ಆಗಿದ್ದಾರೆ. ಕಲಾ ಕ್ಷೇತ್ರ ಮತ್ತು ಸಮಾಜಕ್ಕೆ ಅವರು ನೀಡಿದ ಕೊಡುಗೆಯನ್ನು ಪರಿಗಣಿಸಿ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಪುನೀತ್​ ನಿಧನರಾಗಿ ಇಂದಿಗೆ (ಅ.29) ಒಂದು ವರ್ಷ ಕಳೆದಿದೆ. ಕುಟುಂಬದವರು ಅವರ ಪುಣ್ಯ ಸ್ಮರಣೆ ಸಲುವಾಗಿ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಅಪಾರ ಸಂಖ್ಯೆಯ ಅಭಿಮಾನಿಗಳು ಸಮಾಧಿಗೆ ಭೇಟಿ ನೀಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:24 am, Sat, 29 October 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು