ಪುನೀತ್​ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭ; ​ ನಟ ಜೂ. ಎನ್​ಟಿಆರ್-ರಜನಿಕಾಂತ್​ ಭಾಗಿ

Karnataka Ratna Puneeth Rajkumar: ಪುನೀತ್​ ರಾಜ್​ಕುಮಾರ್​ ಪರವಾಗಿ ಪತ್ನಿ ಅಶ್ವಿನಿ ಅವರು ‘ಕರ್ನಾಟಕ ರತ್ನ’ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಈ ಸಮಾರಂಭಕ್ಕೆ ಟಾಲಿವುಡ್​ ನಟ ಜೂನಿಯರ್​ ಎನ್​ಟಿಆರ್ ಸಾಕ್ಷಿ ಆಗಲಿದ್ದಾರೆ.

ಪುನೀತ್​ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭ; ​ ನಟ ಜೂ. ಎನ್​ಟಿಆರ್-ರಜನಿಕಾಂತ್​ ಭಾಗಿ
ಪುನೀತ್​ ರಾಜ್​ಕುಮಾರ್​, ಜೂನಿಯರ್​ ಎನ್​ಟಿಆರ್​
Follow us
| Updated By: ರಾಜೇಶ್ ದುಗ್ಗುಮನೆ

Updated on:Oct 29, 2022 | 3:37 PM

ನವೆಂಬರ್ 1ರಂದು ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಅದಕ್ಕಾಗಿ ಸಕಲ ಸಿದ್ಧತೆ ನಡೆದಿದೆ. ವಿಧಾನಸೌಧದಲ್ಲಿ ಈ ಸಮಾರಂಭ ನಡೆಯಲಿದೆ. ಕನ್ನಡ ರಾಜ್ಯೋತ್ಸವದ ದಿನವೇ ಅಪ್ಪುಗೆ ಈ ಗೌರವ ಸಲ್ಲಿಕೆ ಆಗುತ್ತಿದೆ. ಈ ಸಮಾರಂಭಕ್ಕೆ ಸಾಕ್ಷಿಯಾಗಲು ತೆಲುಗು ಚಿತ್ರರಂಗದ ಸ್ಟಾರ್​ ನಟ ಜೂನಿಯರ್​ ಎನ್​ಟಿಆರ್​ (Jr NTR) ಹಾಗೂ ರಜನಿಕಾಂತ್ ಅವರು ಆಗಮಿಸುವುದು ಖಚಿತ ಆಗಿದೆ. ಕರ್ನಾಟಕ ಸರ್ಕಾರದಿಂದ ಅವರಿಗೆ ಆಹ್ವಾನ ನೀಡಲಾಗಿದೆ. ಆಹ್ವಾನ ಸ್ವೀಕರಿಸಿರುವ ಅವರು ಕರ್ನಾಟಕ ರತ್ನ ಪ್ರಶಸ್ತಿ (Karnataka Ratna) ಪ್ರದಾನ ಸಮಾರಂಭಕ್ಕೆ ಬರಲು ಒಪ್ಪಿದ್ದಾರೆ.

ಪುನೀತ್​ ರಾಜ್​ಕುಮಾರ್​ ಅವರಿಗೆ ಎಲ್ಲ ಭಾಷೆಯ ಚಿತ್ರರಂಗದ ನಟರ ಜೊತೆಗೆ ಒಳ್ಳೆಯ ಒಡನಾಟ ಇತ್ತು. ಎಲ್ಲರನ್ನೂ ಅವರು ಸಮಾನವಾಗಿ ಪ್ರೀತಿಸುತ್ತಿದ್ದರು. ಜೂನಿಯರ್​ ಎನ್​ಟಿಆರ್​ ಜೊತೆಗೂ ಅವರು ಬಾಂಧವ್ಯ ಹೊಂದಿದ್ದರು. ಅಪ್ಪು ನಟಿಸಿದ್ದ ‘ಚಕ್ರವ್ಯೂಹ’ ಸಿನಿಮಾದ ‘ಗೆಳೆಯಾ.. ಗೆಳೆಯಾ..’ ಹಾಡಿಗೆ ಜೂನಿಯರ್​ ಎನ್​ಟಿಆರ್​ ಧ್ವನಿ ನೀಡಿದ್ದರು. ನೋವಿನ ಸಂಗತಿ ಎಂದರೆ ಇಂದು ಅವರ ಗೆಳೆಯ ಪುನೀತ್​ ರಾಜ್​ಕುಮಾರ್​ ಭೌತಿಕವಾಗಿ ನಮ್ಮೊಂದಿಗೆ ಇಲ್ಲ. ಮರಣೋತ್ತರವಾಗಿ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಲಾಗುತ್ತಿದೆ. ಆ ಕ್ಷಣವನ್ನು ಕಣ್ತುಂಬಿಕೊಳ್ಳಲು ಜೂನಿಯರ್​ ಎನ್​ಟಿಆರ್, ರಜನಿಕಾಂತ್​ ಆಗಮಿಸುತ್ತಿದ್ದಾರೆ.

ಪುನೀತ್​ ರಾಜ್​ಕುಮಾರ್​ ಪರವಾಗಿ ಅವರ ಪತ್ನಿ ಅಶ್ವಿನಿ ಅವರು ‘ಕರ್ನಾಟಕ ರತ್ನ’ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಈ ಸಮಾರಂಭಕ್ಕೆ ಡಾ. ರಾಜ್​ಕುಮಾರ್​ ಕುಟುಂಬದ ಸದಸ್ಯರು ಸಾಕ್ಷಿ ಆಗಲಿದ್ದಾರೆ. ಈ ಕ್ಷಣವನ್ನು ಸಂಭ್ರಮಿಸಲು ಅಪ್ಪು ಅಭಿಮಾನಿಗಳು ಕಾದಿದ್ದಾರೆ.

ಇದನ್ನೂ ಓದಿ
Image
Gandhada Gudi: ಗಳಗಳನೆ ಕಣ್ಣೀರು ಹಾಕಿದ ಅನುಶ್ರೀ; ‘ಗಂಧದ ಗುಡಿ’ಯಲ್ಲಿ ಅಪ್ಪು​ ನೋಡಿದ ಬಳಿಕ ನಿರೂಪಕಿ ಭಾವುಕ ಮಾತು
Image
Gandhada Gudi: ‘ಗಂಧದ ಗುಡಿ’ ಗೆಲುವಿಗೆ ಪ್ರಾರ್ಥನೆ; ದೊಡ್ಡ ಗಣಪತಿ ದೇವಸ್ಥಾನದಲ್ಲಿ ಟಿಕೆಟ್​ ಇಟ್ಟು ಅಮೋಘವರ್ಷ ಪೂಜೆ
Image
Gandhada Gudi: ರಿಲೀಸ್​ಗೂ ಮುನ್ನವೇ ದಾಖಲೆ ಬರೆದ ‘ಗಂಧದ ಗುಡಿ’: ಅಪ್ಪು ಕನಸನ್ನು ನನಸು ಮಾಡುತ್ತಿರುವ ಫ್ಯಾನ್ಸ್​
Image
Gandhada Gudi: ಅಂತೂ ಮೌನ ಮುರಿದ ಅಶ್ವಿನಿ ಪುನೀತ್​ ರಾಜ್​ಕುಮಾರ್​; ‘ಗಂಧದ ಗುಡಿ’ ಬಗ್ಗೆ ಇಲ್ಲಿದೆ ಮೊದಲ ಸಂದರ್ಶನ

ಪುನೀತ್​ ರಾಜ್​ಕುಮಾರ್​ ಅವರು ಕೇವಲ ನಟನಾಗಿ ಮಾತ್ರ ಜನಮನ ಗೆದ್ದವರಲ್ಲ. ಅನೇಕ ಸಾಮಾಜಿಕ ಕೆಲಸಗಳು ಕೂಡ ಅವರಿಂದ ಆಗಿತ್ತು. ಆ ಕಾರಣದಿಂದಲೂ ಅವರು ದೇಶದ ಯುವ ಜನತೆಗೆ ಮಾದರಿ ಆಗಿದ್ದಾರೆ. ಕಲಾ ಕ್ಷೇತ್ರ ಮತ್ತು ಸಮಾಜಕ್ಕೆ ಅವರು ನೀಡಿದ ಕೊಡುಗೆಯನ್ನು ಪರಿಗಣಿಸಿ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಪುನೀತ್​ ನಿಧನರಾಗಿ ಇಂದಿಗೆ (ಅ.29) ಒಂದು ವರ್ಷ ಕಳೆದಿದೆ. ಕುಟುಂಬದವರು ಅವರ ಪುಣ್ಯ ಸ್ಮರಣೆ ಸಲುವಾಗಿ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಅಪಾರ ಸಂಖ್ಯೆಯ ಅಭಿಮಾನಿಗಳು ಸಮಾಧಿಗೆ ಭೇಟಿ ನೀಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:24 am, Sat, 29 October 22