AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jr NTR: ಕನ್ನಡದ ಜನತೆಗೆ ರಾಜ್ಯೋತ್ಸವದ ಶುಭಾಶಯ ತಿಳಿಸಿದ ಜೂನಿಯರ್​ ಎನ್​ಟಿಆರ್​​

Jr NTR | Kannada Rajyotsava: ಜೂನಿಯರ್​ ಎನ್​ಟಿಆರ್​ ಅವರಿಗೆ ಕನ್ನಡದ ಮೇಲೆ ವಿಶೇಷ ಪ್ರೀತಿ ಇದೆ. ಅನೇಕ ವೇದಿಕೆಗಳಲ್ಲಿ ಅವರು ಈ ವಿಚಾರವನ್ನು ಹೇಳಿಕೊಂಡಿದ್ದುಂಟು.

Jr NTR: ಕನ್ನಡದ ಜನತೆಗೆ ರಾಜ್ಯೋತ್ಸವದ ಶುಭಾಶಯ ತಿಳಿಸಿದ ಜೂನಿಯರ್​ ಎನ್​ಟಿಆರ್​​
ಕರ್ನಾಟಕ ಧ್ವಜ, ಜೂನಿಯರ್​ ಎನ್​ಟಿಆರ್​
TV9 Web
| Edited By: |

Updated on: Oct 31, 2022 | 7:30 AM

Share

ನವೆಂಬರ್​ ಬಂದರೆ ಕರುನಾಡಿನಲ್ಲಿ ಹಬ್ಬದ ವಾತಾವರಣ ನಿರ್ಮಾಣ ಆಗುತ್ತದೆ. ಎಲ್ಲೆಲ್ಲೂ ನಾಡಧ್ವಜ ರಾರಾಜಿಸುತ್ತದೆ. ಕನ್ನಡ ರಾಜ್ಯೋತ್ಸವ (Karnataka Rajyotsava) ಆಚರಣೆಗೆ ಇಡೀ ಕರ್ನಾಟಕ ಸಜ್ಜಾಗುತ್ತಿದೆ. ಈ ಬಾರಿಯ ರಾಜ್ಯೋತ್ಸವ ಸಂಭ್ರಮ ಅಪ್ಪು ಅಭಿಮಾನಿಗಳಿಗೆ ಹೆಚ್ಚು ವಿಶೇಷವಾಗಿರಲಿದೆ. ಯಾಕೆಂದರೆ, ನವೆಂಬರ್​ 1ರಂದು ಪುನೀತ್​ ರಾಜ್​ಕುಮಾರ್​ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ (Karnataka Ratna) ಪ್ರಶಸ್ತಿ ನೀಡಲಾಗುತ್ತಿದೆ. ಈ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಸ್ಟಾರ್​ ನಟರಾದ ಜೂನಿಯರ್​ ಎನ್​ಟಿಆರ್​ ಹಾಗೂ ರಜನಿಕಾಂತ್​ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುತ್ತಿದ್ದಾರೆ. ಅದಕ್ಕೀಗ ಕ್ಷಣಗಣನೆ ಆರಂಭ ಆಗಿದ್ದು, ಇಡೀ ಕರುನಾಡಿನ ಜನತೆಗೆ ಜೂನಿಯರ್​ ಎನ್​ಟಿಆರ್​ (Jr NTR) ಅವರು ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ.

ಪುನೀತ್​ ರಾಜ್​ಕುಮಾರ್​ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡುವ ಸಮಾರಂಭಕ್ಕೆ ಆಗಮಿಸಬೇಕು ಎಂದು ಜೂನಿಯರ್​ ಎನ್​ಟಿಆರ್​ ಅವರಿಗೆ ಕರ್ನಾಟಕ ಸರ್ಕಾರದ ಕಡೆಯಿಂದ ಆಹ್ವಾನ ಕಳಿಸಲಾಗಿತ್ತು. ಅದನ್ನು ಸ್ವೀಕರಿಸಿರುವ ಅವರು ಅಧಿಕೃತವಾಗಿ ಪತ್ರ ಮುಖೇನ ತಮ್ಮ ಉತ್ತರ ತಿಳಿಸಿದ್ದಾರೆ. ಈ ಸಮಾರಂಭಕ್ಕೆ ತಾವು ಬರುವುದು ಖಚಿತ ಎಂದು ಅವರು ಹೇಳಿದ್ದಾರೆ.

‘ಅಪ್ಪು ಅವರಿಗೆ ಈ ಗೌರವ ಸಲ್ಲುತ್ತಿರುವಾಗ ನಾನು ಅಲ್ಲಿ ಇರುವುದು ನನ್ನ ಪಾಲಿಗೆ ಹೆಮ್ಮೆಯ ಕ್ಷಣ ಮಾತ್ರವಲ್ಲದೇ ಅದು ನನ್ನ ಕರ್ತವ್ಯ ಕೂಡ ಹೌದು. ಕರ್ನಾಟಕ ಸರ್ಕಾರ ಆಯೋಜಿಸಿರುವ ಆ ಸಮಾರಂಭದಲ್ಲಿ ನನ್ನ ಉಪಸ್ಥಿತಿ ಇರುತ್ತದೆ ಎಂಬುದನ್ನು ಈ ಮೂಲಕ ಖಚಿತ ಪಡಿಸುತ್ತೇನೆ. ಇದೇ ಸಂದರ್ಭದಲ್ಲಿ ನಾನು ಕರುನಾಡಿನ ನನ್ನ ಸಹೋದರ ಮತ್ತು ಸಹೋದರಿಯರಿಗೆ ಕರ್ನಾಟಕ ರಾಜ್ಯೋತ್ಸವದ ಶುಭಾಶಯ ತಿಳಿಸುತ್ತೇನೆ’ ಎಂದು ಜೂನಿಯರ್​ ಎನ್​ಟಿಆರ್​ ಪತ್ರ ಬರೆದಿದ್ದಾರೆ.

ಇದನ್ನೂ ಓದಿ
Image
Jr NTR: ಜೂನಿಯರ್​ ಎನ್​ಟಿಆರ್​ ಮನೆಯಲ್ಲಿ ಅಪ್ಪು ಫೋಟೋ; ಕರುನಾಡ ಗೆಳೆಯನಿಗೆ ತೆಲುಗು​ ನಟನ ಗೌರವ
Image
ಪುನೀತ್​ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭ; ​ ನಟ ಜೂ. ಎನ್​ಟಿಆರ್-ರಜನಿಕಾಂತ್​ ಭಾಗಿ
Image
ಜ್ಯೂ. ಎನ್​ಟಿಆರ್ ಭೇಟಿ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್​ ಶಾ​; ಇಲ್ಲಿದೆ ಫೋಟೋ ಗ್ಯಾಲರಿ
Image
‘ಪುನೀತ್​ ನಟನೆಯ ಜೇಮ್ಸ್​ ನೋಡಿದ್ರಾ?’; ಈ ಪ್ರಶ್ನೆಗೆ ಕನ್ನಡದಲ್ಲೇ ಉತ್ತರಿಸಿದ ಜ್ಯೂ.ಎನ್​ಟಿಆರ್​

ಜೂನಿಯರ್​ ಎನ್​ಟಿಆರ್​ ಅವರ ತಾಯಿ ಕರ್ನಾಟಕದ ಕುಂದಾಪುರದವರು. ಆ ಕಾರಣದಿಂದಲೂ ಅವರಿಗೆ ಕನ್ನಡದ ಮೇಲೆ ವಿಶೇಷ ಪ್ರೀತಿ. ಅನೇಕ ವೇದಿಕೆಗಳಲ್ಲಿ ಅವರು ಈ ವಿಚಾರವನ್ನು ಹೇಳಿಕೊಂಡಿದ್ದುಂಟು. ಈ ಹಿಂದೆ ತೆಲುಗು ಬಿಗ್​ ಬಾಸ್​ ನಡೆಸಿಕೊಡುವಾಗಲೂ ಅವರು ಕನ್ನಡದಲ್ಲಿ ಮಾತನಾಡಿದ್ದರು. ಆ ವಿಡಿಯೋ ವೈರಲ್​ ಆಗಿತ್ತು. ಈ ವರ್ಷ ಅವರಿಗೆ ‘ಆರ್​ಆರ್​ಆರ್’ ಸಿನಿಮಾದಿಂದ ದೊಡ್ಡ ಯಶಸ್ಸು ಸಿಕ್ಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು