AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jr NTR: ಕನ್ನಡದ ಜನತೆಗೆ ರಾಜ್ಯೋತ್ಸವದ ಶುಭಾಶಯ ತಿಳಿಸಿದ ಜೂನಿಯರ್​ ಎನ್​ಟಿಆರ್​​

Jr NTR | Kannada Rajyotsava: ಜೂನಿಯರ್​ ಎನ್​ಟಿಆರ್​ ಅವರಿಗೆ ಕನ್ನಡದ ಮೇಲೆ ವಿಶೇಷ ಪ್ರೀತಿ ಇದೆ. ಅನೇಕ ವೇದಿಕೆಗಳಲ್ಲಿ ಅವರು ಈ ವಿಚಾರವನ್ನು ಹೇಳಿಕೊಂಡಿದ್ದುಂಟು.

Jr NTR: ಕನ್ನಡದ ಜನತೆಗೆ ರಾಜ್ಯೋತ್ಸವದ ಶುಭಾಶಯ ತಿಳಿಸಿದ ಜೂನಿಯರ್​ ಎನ್​ಟಿಆರ್​​
ಕರ್ನಾಟಕ ಧ್ವಜ, ಜೂನಿಯರ್​ ಎನ್​ಟಿಆರ್​
TV9 Web
| Edited By: |

Updated on: Oct 31, 2022 | 7:30 AM

Share

ನವೆಂಬರ್​ ಬಂದರೆ ಕರುನಾಡಿನಲ್ಲಿ ಹಬ್ಬದ ವಾತಾವರಣ ನಿರ್ಮಾಣ ಆಗುತ್ತದೆ. ಎಲ್ಲೆಲ್ಲೂ ನಾಡಧ್ವಜ ರಾರಾಜಿಸುತ್ತದೆ. ಕನ್ನಡ ರಾಜ್ಯೋತ್ಸವ (Karnataka Rajyotsava) ಆಚರಣೆಗೆ ಇಡೀ ಕರ್ನಾಟಕ ಸಜ್ಜಾಗುತ್ತಿದೆ. ಈ ಬಾರಿಯ ರಾಜ್ಯೋತ್ಸವ ಸಂಭ್ರಮ ಅಪ್ಪು ಅಭಿಮಾನಿಗಳಿಗೆ ಹೆಚ್ಚು ವಿಶೇಷವಾಗಿರಲಿದೆ. ಯಾಕೆಂದರೆ, ನವೆಂಬರ್​ 1ರಂದು ಪುನೀತ್​ ರಾಜ್​ಕುಮಾರ್​ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ (Karnataka Ratna) ಪ್ರಶಸ್ತಿ ನೀಡಲಾಗುತ್ತಿದೆ. ಈ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಸ್ಟಾರ್​ ನಟರಾದ ಜೂನಿಯರ್​ ಎನ್​ಟಿಆರ್​ ಹಾಗೂ ರಜನಿಕಾಂತ್​ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುತ್ತಿದ್ದಾರೆ. ಅದಕ್ಕೀಗ ಕ್ಷಣಗಣನೆ ಆರಂಭ ಆಗಿದ್ದು, ಇಡೀ ಕರುನಾಡಿನ ಜನತೆಗೆ ಜೂನಿಯರ್​ ಎನ್​ಟಿಆರ್​ (Jr NTR) ಅವರು ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ.

ಪುನೀತ್​ ರಾಜ್​ಕುಮಾರ್​ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡುವ ಸಮಾರಂಭಕ್ಕೆ ಆಗಮಿಸಬೇಕು ಎಂದು ಜೂನಿಯರ್​ ಎನ್​ಟಿಆರ್​ ಅವರಿಗೆ ಕರ್ನಾಟಕ ಸರ್ಕಾರದ ಕಡೆಯಿಂದ ಆಹ್ವಾನ ಕಳಿಸಲಾಗಿತ್ತು. ಅದನ್ನು ಸ್ವೀಕರಿಸಿರುವ ಅವರು ಅಧಿಕೃತವಾಗಿ ಪತ್ರ ಮುಖೇನ ತಮ್ಮ ಉತ್ತರ ತಿಳಿಸಿದ್ದಾರೆ. ಈ ಸಮಾರಂಭಕ್ಕೆ ತಾವು ಬರುವುದು ಖಚಿತ ಎಂದು ಅವರು ಹೇಳಿದ್ದಾರೆ.

‘ಅಪ್ಪು ಅವರಿಗೆ ಈ ಗೌರವ ಸಲ್ಲುತ್ತಿರುವಾಗ ನಾನು ಅಲ್ಲಿ ಇರುವುದು ನನ್ನ ಪಾಲಿಗೆ ಹೆಮ್ಮೆಯ ಕ್ಷಣ ಮಾತ್ರವಲ್ಲದೇ ಅದು ನನ್ನ ಕರ್ತವ್ಯ ಕೂಡ ಹೌದು. ಕರ್ನಾಟಕ ಸರ್ಕಾರ ಆಯೋಜಿಸಿರುವ ಆ ಸಮಾರಂಭದಲ್ಲಿ ನನ್ನ ಉಪಸ್ಥಿತಿ ಇರುತ್ತದೆ ಎಂಬುದನ್ನು ಈ ಮೂಲಕ ಖಚಿತ ಪಡಿಸುತ್ತೇನೆ. ಇದೇ ಸಂದರ್ಭದಲ್ಲಿ ನಾನು ಕರುನಾಡಿನ ನನ್ನ ಸಹೋದರ ಮತ್ತು ಸಹೋದರಿಯರಿಗೆ ಕರ್ನಾಟಕ ರಾಜ್ಯೋತ್ಸವದ ಶುಭಾಶಯ ತಿಳಿಸುತ್ತೇನೆ’ ಎಂದು ಜೂನಿಯರ್​ ಎನ್​ಟಿಆರ್​ ಪತ್ರ ಬರೆದಿದ್ದಾರೆ.

ಇದನ್ನೂ ಓದಿ
Image
Jr NTR: ಜೂನಿಯರ್​ ಎನ್​ಟಿಆರ್​ ಮನೆಯಲ್ಲಿ ಅಪ್ಪು ಫೋಟೋ; ಕರುನಾಡ ಗೆಳೆಯನಿಗೆ ತೆಲುಗು​ ನಟನ ಗೌರವ
Image
ಪುನೀತ್​ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭ; ​ ನಟ ಜೂ. ಎನ್​ಟಿಆರ್-ರಜನಿಕಾಂತ್​ ಭಾಗಿ
Image
ಜ್ಯೂ. ಎನ್​ಟಿಆರ್ ಭೇಟಿ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್​ ಶಾ​; ಇಲ್ಲಿದೆ ಫೋಟೋ ಗ್ಯಾಲರಿ
Image
‘ಪುನೀತ್​ ನಟನೆಯ ಜೇಮ್ಸ್​ ನೋಡಿದ್ರಾ?’; ಈ ಪ್ರಶ್ನೆಗೆ ಕನ್ನಡದಲ್ಲೇ ಉತ್ತರಿಸಿದ ಜ್ಯೂ.ಎನ್​ಟಿಆರ್​

ಜೂನಿಯರ್​ ಎನ್​ಟಿಆರ್​ ಅವರ ತಾಯಿ ಕರ್ನಾಟಕದ ಕುಂದಾಪುರದವರು. ಆ ಕಾರಣದಿಂದಲೂ ಅವರಿಗೆ ಕನ್ನಡದ ಮೇಲೆ ವಿಶೇಷ ಪ್ರೀತಿ. ಅನೇಕ ವೇದಿಕೆಗಳಲ್ಲಿ ಅವರು ಈ ವಿಚಾರವನ್ನು ಹೇಳಿಕೊಂಡಿದ್ದುಂಟು. ಈ ಹಿಂದೆ ತೆಲುಗು ಬಿಗ್​ ಬಾಸ್​ ನಡೆಸಿಕೊಡುವಾಗಲೂ ಅವರು ಕನ್ನಡದಲ್ಲಿ ಮಾತನಾಡಿದ್ದರು. ಆ ವಿಡಿಯೋ ವೈರಲ್​ ಆಗಿತ್ತು. ಈ ವರ್ಷ ಅವರಿಗೆ ‘ಆರ್​ಆರ್​ಆರ್’ ಸಿನಿಮಾದಿಂದ ದೊಡ್ಡ ಯಶಸ್ಸು ಸಿಕ್ಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ