AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಪುನೀತ್​ ಮೇಲೆ RSS ಕಾರ್ಯಕರ್ತೆ ಗಂಭೀರ ಆರೋಪ; ಮೌನ ಮುರಿಯಬೇಕಿದೆ ರಿಷಬ್​ ಶೆಟ್ಟಿ

Jyoti Suparna Chincholi | Rishab Shetty: ‘ಕಾಂತಾರ’ ಚಿತ್ರವನ್ನು ಹೊಗಳುವ ಭರದಲ್ಲಿ ಜ್ಯೋತಿ ಸುಪರ್ಣಾ ಚಿಂಚೋಳಿ ಅವರು ಡಾ. ರಾಜ್​ಕುಮಾರ್​ ಕುಟುಂಬದ ಬಗ್ಗೆ ಅವಹೇಳನಕಾರಿಯಾಗಿ ಟ್ವೀಟ್​ ಮಾಡಿದ್ದಾರೆ. ಇದಕ್ಕೆ ರಿಷಬ್​ ಶೆಟ್ಟಿಯವರ ಖಾತೆಯನ್ನೂ ಟ್ಯಾಗ್​ ಮಾಡಿದ್ದಾರೆ.

Puneeth Rajkumar: ಪುನೀತ್​ ಮೇಲೆ RSS ಕಾರ್ಯಕರ್ತೆ ಗಂಭೀರ ಆರೋಪ; ಮೌನ ಮುರಿಯಬೇಕಿದೆ ರಿಷಬ್​ ಶೆಟ್ಟಿ
ಪುನೀತ್​, ರಿಷಬ್​ ಬಗ್ಗೆ ಜ್ಯೋತಿ ಸುಪರ್ಣಾ ಚಿಂಚೋಳಿ ಟ್ವೀಟ್​
TV9 Web
| Edited By: |

Updated on: Nov 06, 2022 | 5:10 PM

Share

‘ಕರ್ನಾಟಕ ರತ್ನ’ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರನ್ನು ಕಳೆದುಕೊಂಡು ಇಡೀ ಕರುನಾಡು ಕಣ್ಣೀರು ಹಾಕುತ್ತಿದೆ. ದೇಶಾದ್ಯಂತ ಇರುವ ಸೆಲೆಬ್ರಿಟಿಗಳು ಕೂಡ ಅಪ್ಪು ಅವರ ಸಾಧನೆ ಮತ್ತು ವ್ಯಕ್ತಿತ್ವಕ್ಕೆ ತಲೆಬಾಗಿದ್ದಾರೆ. ಆದರೆ ಆರ್​ಎಸ್​ಎಸ್​ ಕಾರ್ಯಕರ್ತೆ ಜ್ಯೋತಿ ಸುಪರ್ಣಾ ಚಿಂಚೋಳಿ (Jyoti Suparna Chincholi) ಅವರು ಪುನೀತ್​ ರಾಜ್​ಕುಮಾರ್​ ಅವರನ್ನು ನೆಪೋಕಿಡ್​ ಎಂದು ಕರೆದಿದ್ದಾರೆ. ಇದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣ ಆಗಿದೆ. ಡಾ. ರಾಜ್​ಕುಮಾರ್​ ಕುಟುಂಬದ ಮೇಲೆ ಅವರು ನೆಪೋಟಿಸಂ (Nepotism) ಆರೋಪ ಹೊರಿಸಿದ್ದಾರೆ. ಈ ಕುರಿತು ಮಾಡಿರುವ ಟ್ವೀಟ್​ನಲ್ಲಿ ರಿಷಬ್​ ಶೆಟ್ಟಿ ಅವರನ್ನೂ ಜ್ಯೋತಿ ಟ್ಯಾಗ್​​ ಮಾಡಿದ್ದಾರೆ. ಹಾಗಾಗಿ ಈ ಬಗ್ಗೆ ರಿಷಬ್​ ಶೆಟ್ಟಿ ಮೌನ ಮುರಿಯಬೇಕಿದೆ. ‘ಕಾಂತಾರ’ ಸಿನಿಮಾವನ್ನು ಹೊಗಳುವ ಭರದಲ್ಲಿ ಜ್ಯೋತಿ ಸುಪರ್ಣಾ ಚಿಂಚೋಳಿ ಅವರು ಅಣ್ಣಾವ್ರು ಕುಟುಂಬದ ಬಗ್ಗೆ ಈ ರೀತಿಯಾಗಿ ಟ್ವೀಟ್​ ಮಾಡಿದ್ದಾರೆ.

ಡಾ. ರಾಜ್​ಕುಮಾರ್​ ಮಕ್ಕಳನ್ನು ಕರಣ್​ ಜೋಹರ್​ಗೆ ಹೋಲಿಸಿ ಜ್ಯೋತಿ ಸುಪರ್ಣಾ ಚಿಂಚೋಳಿ ಟ್ವೀಟ್​ ಮಾಡಿದ್ದಾರೆ. ಇದು ಈಗ ಚರ್ಚೆಗೆ ಕಾರಣ ಆಗಿದೆ. ಅಣ್ಣಾವ್ರು ಕುಟುಂಬದ ಅಭಿಮಾನಿಗಳು ಜ್ಯೋತಿ ವಿರುದ್ಧ ಗರಂ ಆಗಿದ್ದಾರೆ. ಎಷ್ಟೋ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ ಕೀರ್ತಿ ಡಾ. ರಾಜ್​ ಫ್ಯಾಮಿಲಿಗೆ ಸಲ್ಲುತ್ತದೆ. ಪುನೀತ್​ ರಾಜ್​ಕುಮಾರ್​ ಕೂಡ ತಮ್ಮ ‘ಪಿಆರ್​ಕೆ ಪ್ರೊಡಕ್ಷನ್ಸ್​’ ಬ್ಯಾನರ್​ ಮೂಲಕ ಹಲವರಿಗೆ ಅವಕಾಶ ನೀಡಿದ್ದರು. ಶಿವರಾಜ್​ಕುಮಾರ್​ ಅವರು ಇಂದಿಗೂ ಹೊಸಬರ ಬೆನ್ನು ತಟ್ಟುತ್ತಲೇ ಇದ್ದಾರೆ. ಅಂಥವರ ವಿರುದ್ಧವೇ ನೆಪೋಟಿಸಂ ಆರೋಪ ಮಾಡಿದ್ದಾರೆ ಜ್ಯೋತಿ.

ವಿವಾದಾತ್ಮಕ ಟ್ವೀಟ್​ನಲ್ಲಿ ಏನಿದೆ?

ಇದನ್ನೂ ಓದಿ
Image
‘ಹುಡುಗಿ’ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದ ರಾಮ್​ ಗೋಪಾಲ್​ ವರ್ಮಾ; ಜುಲೈ 15ಕ್ಕೆ ಸಿನಿಮಾ ರಿಲೀಸ್​
Image
‘ಡೇಂಜರಸ್​’ ಹುಡುಗಿಯರನ್ನು ಬೆಂಗಳೂರಿಗೆ ಕರೆತಂದು ಪರಿಚಯ ಮಾಡಿಸಿದ ರಾಮ್​ ಗೋಪಾಲ್ ವರ್ಮಾ
Image
‘ಕೆಜಿಎಫ್​ 2’, ಉಪೇಂದ್ರ ಮತ್ತು ಸ್ಯಾಂಡಲ್​ವುಡ್​ ಬಗ್ಗೆ ರಾಮ್​ ಗೋಪಾಲ್​ ವರ್ಮಾ ಹೇಳೋದು ಏನು?
Image
‘ಪುನೀತ್​ ಸಾವಿನಿಂದ ಕಟು ಸತ್ಯ ಬಯಲಾಗಿದೆ’: ಆತಂಕದಲ್ಲೇ ಅನಿಸಿಕೆ ಹಂಚಿಕೊಂಡ ರಾಮ್​ ಗೋಪಾಲ್​ ವರ್ಮಾ

‘ಬಾಲಿವುಡ್​ನಲ್ಲಿ ಕರಣ್​ ಜೋಹರ್​ ಇರುವ ರೀತಿ, ಕರ್ನಾಟಕದಲ್ಲಿ ಡಾ. ರಾಜ್​ಕುಮಾರ್​ ಅವರ ನೆಪೋಕಿಡ್ಸ್​ ದೇವರಿದ್ದಂತೆ. ಯಾರಾದರೂ ಸ್ಯಾಂಡಲ್​ವುಡ್​ನಲ್ಲಿ ಉಳಿಯಬೇಕಾದರೆ ಇವರಿಗೆ ಸಲಾಂ ಹೊಡೆಯಬೇಕು. ರಿಷಬ್​ ಶೆಟ್ಟಿ ಕೂಡ ಪುನೀತ್​ ರಾಜ್​ಕುಮಾರ್​ ಅವರಿಗೆ ಈ ಪಾತ್ರವನ್ನು ನೀಡಿದ್ದೆ ಅಂತ ಹೇಳಬೇಕಾಯಿತು’ ಎಂದು ಜ್ಯೋತಿ ಟ್ವೀಟ್​ ಆರಂಭಿಸಿದ್ದಾರೆ.

‘ಪುನೀತ್​ ನಿಧನದಿಂದ ನನಗೆ ಬೇಸರ ಆಗಿದೆ. ಆದರೆ ವಾಸ್ತವ ಏನೆಂದರೆ, ಪ್ರತಿಭಾವಂತ ನಟ/ನಿರ್ದೇಶಕ/ಬರಹಗಾರ ರಿಷಬ್​ ಶೆಟ್ಟಿ ಅವರು ಸ್ಯಾಂಡಲ್​ವುಡ್​ನಲ್ಲಿ ದಶಕಗಳ ಕಾಲ ಕಷ್ಟಪಡಬೇಕಾಯಿತು. ದಶಕದ ಹಿಂದೆಯೇ ಅವರು ಕನ್ನಡ ಚಿತ್ರರಂಗವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದು ಕನ್ನಡಿಗರು ಹೆಮ್ಮೆ ಪಡುವಂತೆ ಮಾಡುತ್ತಿದ್ದರು’ ಎಂದು ಜ್ಯೋತಿ ಟ್ವೀಟ್​ ಮಾಡಿದ್ದಾರೆ.

(ಜ್ಯೋತಿ ಸುಪರ್ಣಾ ಚಿಂಚೋಳಿ ಟ್ವೀಟ್)

‘ಪ್ರಾಮಾಣಿಕವಾಗಿ ಹೇಳಿ, ಪುನೀತ್​ಗೆ ಈ ಪಾತ್ರ ಮಾಡಲು ಸಾಧ್ಯವಾಗುತ್ತಿತ್ತಾ? ದೈವಾರಾಧನೆ ಮತ್ತು ಭೂತಕೋಲದಲ್ಲಿ ರಿಷಬ್​ ಅವರ ಮೂಲ ಸಂಸ್ಕೃತಿ ಇರುವುದರಿಂದ ಅವರಿಗೆ ಈ ದೈವಿ ಪರ್ಫಾರ್ಮೆನ್ಸ್​ ನೀಡಲು ಸಾಧ್ಯವಾಯ್ತು’ ಎಂದು ಜ್ಯೋತಿ ಪೋಸ್ಟ್​ ಮಾಡಿದ್ದಾರೆ. ಅವರ ಈ ಟ್ವಿಟರ್​ ಖಾತೆಯನ್ನು ನರೇಂದ್ರ ಮೋದಿ, ಸಿ.ಟಿ. ರವಿ ಮುಂತಾದವರು ಕೂಡ ಫಾಲೋ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್