AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಚಿತ್ರರಂಗದ ಕಾರ್ಮಿಕರಿಗೆ ನಿರ್ಮಾಪಕ ರಮೇಶ್ ರೆಡ್ಡಿ ಹಾಗೂ ಕೆ.ಮಂಜು ಕಡೆಯಿಂದ ಸಿಕ್ತು ನೆರವು

ಕನ್ನಡ ಚಲನಚಿತ್ರರಂಗದ ವಿವಿಧ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ರಮೇಶ್ ರೆಡ್ಡಿ ಹಾಗೂ ಕೆ.ಮಂಜು ಆಹಾರ ಪದಾರ್ಥಗಳನ್ನು ವಿತರಣೆ ಮಾಡಿದ್ದಾರೆ.

ಕನ್ನಡ ಚಿತ್ರರಂಗದ ಕಾರ್ಮಿಕರಿಗೆ ನಿರ್ಮಾಪಕ ರಮೇಶ್ ರೆಡ್ಡಿ ಹಾಗೂ ಕೆ.ಮಂಜು ಕಡೆಯಿಂದ ಸಿಕ್ತು ನೆರವು
ರಾಜೇಶ್ ದುಗ್ಗುಮನೆ
|

Updated on: Jun 12, 2021 | 9:04 PM

Share

ಕೊವಿಡ್ ಸಂಕಷ್ಟದ ಸಂದರ್ಭದಲ್ಲಿ ಸಿನಿಮಾ ಕಲಾವಿದರು, ಕಾರ್ಮಿಕರು ಕೆಲಸವಿಲ್ಲದೆ ಕೂತಿದ್ದಾರೆ. ಅನೇಕರಿಗೆ ಊಟಕ್ಕೂ ಪರಿತಪಿಸುವ ಸ್ಥಿತಿ ನಿರ್ಮಾಣ ಆಗಿದೆ. ಈ ಸಂದರ್ಭದಲ್ಲಿ ಸಾಕಷ್ಟು ಜನರು ಕನ್ನಡ ಚಿತ್ರರಂಗದ ಕಾರ್ಮಿಕರಿಗೆ ಸಹಾಯ ಮಾಡೋಕೆ ಮುಂದೆ ಬಂದಿದ್ದಾರೆ. ಈಗ ಕನ್ನಡ ಚಿತ್ರರಂಗದ ಕಾರ್ಮಿಕರಿಗೆ ನಿರ್ಮಾಪಕ ರಮೇಶ್ ರೆಡ್ಡಿ ಹಾಗೂ ಕೆ.ಮಂಜು ಕಡೆಯಿಂದ ನೆರವು ಸಿಕ್ಕಿದೆ.

ಕನ್ನಡ ಚಲನಚಿತ್ರರಂಗದ ವಿವಿಧ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ರಮೇಶ್ ರೆಡ್ಡಿ ಹಾಗೂ ಕೆ.ಮಂಜು ಆಹಾರ ಪದಾರ್ಥಗಳನ್ನು ವಿತರಣೆ ಮಾಡಿದ್ದಾರೆ. ಜೂನ್ 11ರ ಬೆಳಗ್ಗೆ 8:30ಕ್ಕೆ ಕೆ.ಆರ್. ರಸ್ತೆಯ ಗರಡಿ ಅಪಾರ್ಟ್ಮೆಂಟ್ ಪಕ್ಕದ ಮೈದಾನದಲ್ಲಿ ಬರಹಗಾರರು, ಸಂಕಲನ‌ ಹಾಗೂ ಛಾಯಾಗ್ರಹಣ ವಿಭಾಗದಲ್ಲಿ ಕಾರ್ಯ ನಿರ್ವಹಿಸುವವರು ಮತ್ತು ಆರ್ಪಿಗಳು ಸೇರಿದಂತೆ ಸುಮಾರು 300 ಕ್ಕೂ ಹೆಚ್ಚು ಜನರಿಗೆ ಉತ್ತಮ ದರ್ಜೆಯ ಆಹಾರ ಪದಾರ್ಥಗಳನ್ನು ಇವರು ನೀಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಕೆ. ಮಂಜು, ಈ ಹಿಂದೆ ಕೂಡ ನಿರ್ಮಾಪಕ ರಮೇಶ್ ರೆಡ್ಡಿ ಅವರ ನೇತೃತ್ವದಲ್ಲಿ ನಾವು ಹಲವರಿಗೆ ಆಹಾರ ಪದಾರ್ಥಗಳನ್ನು ಹಂಚಿದ್ದೇವೆ. ಮುಂದೆ ಕೂಡ ನಮ್ಮ ಕೈಲಾದಷ್ಟು ಸಹಾಯ ಮಾಡುತ್ತೇವೆ’ ಎನ್ನುತ್ತಾರೆ.

ಈ ಮೊದಲು ಸ್ಯಾಂಡಲ್ವುಡ್​​ನ ಸಾಕಷ್ಟು ನಟ-ನಟಿಯರು, ನಿರ್ಮಾಪಕರು ಹಾಗೂ ನಿರ್ದೇಶಕರು ಚಿತ್ರರಂಗದ ಕಾರ್ಮಿಕರಿಗೆ ಸಹಾಯ ಮಾಡಿದ್ದಾರೆ. ಯಶ್ ತಮ್ಮ ದುಡಿಮೆಯಲ್ಲಿ ಒಂದೂವರೆ ಕೋಟಿ ರೂಪಾಯಿ ಹಣವನ್ನು ಸಿನಿಮಾ ಕಾರ್ಮಿಕರಿಗೆ ಮೀಸಲಿಡುವ ಮೂಲಕ ಮಾದರಿ ಆಗಿದ್ದರು. ಉಪೇಂದ್ರ, ‘ಕೆಜಿಎಫ್ 2’ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು, ನಟಿ ಹರ್ಷಿಕಾ ಪೂಣಚ್ಚ, ಭುವನ್ ಪೊನ್ನಣ್ಣ ಕೂಡ ತಮ್ಮ ಕೈಲಾದ ಸಹಾಯ ಮಾಡಿದ್ದಾರೆ.

ಇದನ್ನೂ ಓದಿ: ಸಂಕಷ್ಟದಲ್ಲಿ ಇರುವವರಿಗೆ ಕೆಜಿಎಫ್​ ನಿರ್ಮಾಪಕ ವಿಜಯ್​ ಕಿರಗಂದೂರು ಸದ್ದಿಲ್ಲದೇ ಮಾಡಿದ ಸಹಾಯಗಳು ಒಂದೆರಡಲ್ಲ

ಅಭಿಮಾನಿಗಳ ಮನಗೆದ್ದ ರಾಧಿಕಾ ಪಂಡಿತ್​ ಮಗು ಯಥರ್ವ್​ ಯಶ್​ ಮುದ್ದಾದ ನಗು; ಇಲ್ಲಿದೆ ವಿಡಿಯೋ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ