AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಕುರಿತು ಹೊಸ ವಿಷಯ ತಿಳಿಯಲು ಅಮೆರಿಕಕ್ಕೆ ತೆರಳಿದ ಶ್ರೇಯಸ್ ಮಂಜು

ನಿರ್ಮಾಪಕ ಕೆ. ಮಂಜು ಅವರ ಪುತ್ರ, ನಟ ಶ್ರೇಯಸ್​ ಮಂಜು ಅವರು ಅಮೆರಿಕಕ್ಕೆ ತೆರಳಿದ್ದಾರೆ. ಅಲ್ಲಿ ಅವರು ಹಲವರನ್ನು ಭೇಟಿ ಆಗುತ್ತಿದ್ದಾರೆ. ವಿವಿಧ ರೀತಿಯ ತರಬೇತಿಗಳ ಮೂಲಕ ಸಿನಿಮಾ ಬಗ್ಗೆ ಹೊಸ ವಿಚಾರಗಳನ್ನು ತಿಳಿಯುವ ಉದ್ದೇಶದಿಂದ ಶ್ರೇಯಸ್​ ಮಂಜು ಅವರು ವಿದೇಶಕ್ಕೆ ತೆರಳಿದ್ದಾರೆ. ಮುಂದಿನ ಸಿನಿಮಾದ ತಯಾರಿಗಾಗಿ ಅವರು ಈ ಪ್ರವಾಸ ಮಾಡಿದ್ದಾರೆ.

ಸಿನಿಮಾ ಕುರಿತು ಹೊಸ ವಿಷಯ ತಿಳಿಯಲು ಅಮೆರಿಕಕ್ಕೆ ತೆರಳಿದ ಶ್ರೇಯಸ್ ಮಂಜು
ಶ್ರೇಯಸ್​ ಮಂಜು
ಮದನ್​ ಕುಮಾರ್​
|

Updated on: Aug 02, 2024 | 10:33 PM

Share

ಚಿತ್ರರಂಗದಲ್ಲಿ ದಿನೇ ದಿನೇ ಪೈಪೋಟಿ ಹೆಚ್ಚುತ್ತಿದೆ. ಹೊಸ ಕಲಾವಿದರ ಎಂಟ್ರಿ ಆಗುತ್ತಲೇ ಇದೆ. ಅದಕ್ಕೆ ತಕ್ಕಂತೆ ಹೊಸ ವಿಚಾರಗಳನ್ನು ಕಲಾವಿದರು ತಿಳಿದುಕೊಳ್ಳುವುದು ತುಂಬ ಅವಶ್ಯಕ. ಹೊಸ ಬಗೆಯ ತರಬೇತಿಗಳು ಕೂಡ ನಟರಿಗೆ ಅಗತ್ಯವಿದೆ. ಈ ನಿಟ್ಟಿನಲ್ಲಿ ನಟ ಶ್ರೇಯಸ್​ ಮಂಜು ಅವರು ವಿದೇಶಕ್ಕೆ ತೆರಳಿದ್ದಾರೆ. ಅಲ್ಲಿನ ಅನುಭವದ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. ನಿರ್ಮಾಪಕ ಕೆ. ಮಂಜು ಅವರ ಪುತ್ರನಾದ ಶ್ರೇಯಸ್​ ಅವರು ಅಮೆರಿಕದಲ್ಲಿ ಹಲವು ಬಗೆಯ ತರಬೇತಿಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಆ ಕುರಿತು ವಿವರ ಇಲ್ಲಿದೆ..

ಕನ್ನಡ ಚಿತ್ರರಂಗದ ಯುವನಟರ ಸಾಲಿನಲ್ಲಿ ಶ್ರೇಯಸ್ ಮಂಜು ಕೂಡ ಇದ್ದಾರೆ. ಅವರ ನಟಿಸಿದ ‘ವಿಷ್ಣುಪ್ರಿಯ’ ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗಿದೆ. ಬೇರೆ ಬೇರೆ ಪ್ರಾಜೆಕ್ಟ್​ಗಳ ಕಡೆಗೂ ಶ್ರೇಯಸ್​ ಅವರು ಗಮನ ಹರಿಸಿದ್ದಾರೆ. ಹಾಗಾಗಿ ಅವರು ಮುಂದಿನ ವರ್ಷ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚಿತ್ರೀಕರಿಸಲಾಗುವ ಹೊಸ ಆ್ಯಕ್ಷನ್ ಸಿನಿಮಾಗಾಗಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಶ್ರೇಯಸ್​ ಮಂಜು ಅವರು‌ ಕಳೆದ 2 ವಾರಗಳಿಂದ ಅಮೆರಿಕದ ಚಿಕಾಗೋ ಹಾಗೂ ನ್ಯೂಯಾರ್ಕ್‌ನ ಫಿಲ್ಮ್​ ಸಿಟಿಯ ವಿವಿಧ ನಟನಾ ಶಾಲೆಗಳಲ್ಲಿ ಮಾಸ್ಟರ್ ಕ್ಲಾಸ್ ತರಬೇತಿ ಪಡೆದುಕೊಳ್ಳುತ್ತಿದ್ದಾರೆ ಎಂಬುದು ವಿಶೇಷ. ಸಿನಿಮಾಗೆ ಸಂಬಂಧಿಸಿದಂತೆ ಹೊಸ ಬಗೆಯ ಆ್ಯಕ್ಷನ್ ತಂತ್ರಗಳ ಬಗ್ಗೆ ಕೂಡ ಅವರು ತರಬೇತಿ ಪಡೆಯುತ್ತಿದ್ದಾರೆ. ಅಲ್ಲಿನ ಹೊಸ ಜನರು ಮತ್ತು ಜಾಗದಲ್ಲಿ ಶ್ರೇಯಸ್ ಮಂಜು ಅವರು ಹಲವು ರೀತಿ ಅನುಭವ ಪಡೆಯುತ್ತಿದ್ದಾರೆ.

‘ಸಿನಿ ಕ್ಷೇತ್ರದಲ್ಲಿ ಸಕ್ರಿಯವಾಗಿರವ ಹೊಸ ವ್ಯಕ್ತಿಗಳನ್ನು ಭೇಟಿ ಮಾಡುವುದು ಮತ್ತು ಅವರ ಜೊತೆ ಚರ್ಚೆ ನಡೆಸುವುದರಿಂದ ನನಗೆ ಹೊಸ ಉತ್ಸಾಹ ಮೂಡಿದೆ. ಚಿತ್ರರಂಗದಲ್ಲಿ ದಿನದಿಂದ ದಿನಕ್ಕೆ ಹೊಸತನದ ಅವಿಷ್ಕಾರ ಆಗುತ್ತಿದೆ. ಕಲಾವಿದರಾಗಿ ನಾವೂ ಸಹ ಹೊಸದನ್ನು ಕಲಿಯಬೇಕು. ಆದ್ದರಿಂದ ಬಹಳ ವಿಷಯಗಳನ್ನು ತಿಳಿದುಕೊಳ್ಳುತ್ತಿದ್ದೇನೆ’ ಎಂದು ಶ್ರೇಯಸ್​ ಮಂಜು ಹೇಳಿದ್ದಾರೆ.

ಇದನ್ನೂ ಓದಿ: ಕನ್ನಡ ಚಿತ್ರರಂಗದ ಪರಿಸ್ಥಿತಿ, ಹಿರಿಯ ನಟ ಜಗ್ಗೇಶ್ ಕಣ್ಣೀರು

ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಅವರ ಕಾಂಬಿನೇಶನ್​ನ ಸಿನಿಮಾದ ಕೆಲಸಗಳು ಕೂಡ ಪ್ರಗತಿಯಲ್ಲಿವೆ. ಆ ಸಿನಿಮಾಗೆ ಎಸ್. ನಾರಾಯಣ್ ಅವರು ನಿರ್ದೇಶನ ಮಾಡಲಿದ್ದಾರೆ. ‘ವಿಷ್ಣು ಪ್ರಿಯಾ’ ಸಿನಿಮಾ ಬಿಡುಗಡೆ ಆದ ಬಳಿಕ ಶೀಘ್ರದಲ್ಲೇ ದುನಿಯಾ ವಿಜಯ್-ಶ್ರೇಯಸ್ ಮಂಜು ಕಾಂಬಿನೇಷನ್​ನ ಸಿನಿಮಾ ಬಗ್ಗೆ ಅಪ್​ಡೇಟ್​ ನೀಡಲು ನಿರ್ಧರಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ