AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಕುರಿತು ಹೊಸ ವಿಷಯ ತಿಳಿಯಲು ಅಮೆರಿಕಕ್ಕೆ ತೆರಳಿದ ಶ್ರೇಯಸ್ ಮಂಜು

ನಿರ್ಮಾಪಕ ಕೆ. ಮಂಜು ಅವರ ಪುತ್ರ, ನಟ ಶ್ರೇಯಸ್​ ಮಂಜು ಅವರು ಅಮೆರಿಕಕ್ಕೆ ತೆರಳಿದ್ದಾರೆ. ಅಲ್ಲಿ ಅವರು ಹಲವರನ್ನು ಭೇಟಿ ಆಗುತ್ತಿದ್ದಾರೆ. ವಿವಿಧ ರೀತಿಯ ತರಬೇತಿಗಳ ಮೂಲಕ ಸಿನಿಮಾ ಬಗ್ಗೆ ಹೊಸ ವಿಚಾರಗಳನ್ನು ತಿಳಿಯುವ ಉದ್ದೇಶದಿಂದ ಶ್ರೇಯಸ್​ ಮಂಜು ಅವರು ವಿದೇಶಕ್ಕೆ ತೆರಳಿದ್ದಾರೆ. ಮುಂದಿನ ಸಿನಿಮಾದ ತಯಾರಿಗಾಗಿ ಅವರು ಈ ಪ್ರವಾಸ ಮಾಡಿದ್ದಾರೆ.

ಸಿನಿಮಾ ಕುರಿತು ಹೊಸ ವಿಷಯ ತಿಳಿಯಲು ಅಮೆರಿಕಕ್ಕೆ ತೆರಳಿದ ಶ್ರೇಯಸ್ ಮಂಜು
ಶ್ರೇಯಸ್​ ಮಂಜು
ಮದನ್​ ಕುಮಾರ್​
|

Updated on: Aug 02, 2024 | 10:33 PM

Share

ಚಿತ್ರರಂಗದಲ್ಲಿ ದಿನೇ ದಿನೇ ಪೈಪೋಟಿ ಹೆಚ್ಚುತ್ತಿದೆ. ಹೊಸ ಕಲಾವಿದರ ಎಂಟ್ರಿ ಆಗುತ್ತಲೇ ಇದೆ. ಅದಕ್ಕೆ ತಕ್ಕಂತೆ ಹೊಸ ವಿಚಾರಗಳನ್ನು ಕಲಾವಿದರು ತಿಳಿದುಕೊಳ್ಳುವುದು ತುಂಬ ಅವಶ್ಯಕ. ಹೊಸ ಬಗೆಯ ತರಬೇತಿಗಳು ಕೂಡ ನಟರಿಗೆ ಅಗತ್ಯವಿದೆ. ಈ ನಿಟ್ಟಿನಲ್ಲಿ ನಟ ಶ್ರೇಯಸ್​ ಮಂಜು ಅವರು ವಿದೇಶಕ್ಕೆ ತೆರಳಿದ್ದಾರೆ. ಅಲ್ಲಿನ ಅನುಭವದ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. ನಿರ್ಮಾಪಕ ಕೆ. ಮಂಜು ಅವರ ಪುತ್ರನಾದ ಶ್ರೇಯಸ್​ ಅವರು ಅಮೆರಿಕದಲ್ಲಿ ಹಲವು ಬಗೆಯ ತರಬೇತಿಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಆ ಕುರಿತು ವಿವರ ಇಲ್ಲಿದೆ..

ಕನ್ನಡ ಚಿತ್ರರಂಗದ ಯುವನಟರ ಸಾಲಿನಲ್ಲಿ ಶ್ರೇಯಸ್ ಮಂಜು ಕೂಡ ಇದ್ದಾರೆ. ಅವರ ನಟಿಸಿದ ‘ವಿಷ್ಣುಪ್ರಿಯ’ ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗಿದೆ. ಬೇರೆ ಬೇರೆ ಪ್ರಾಜೆಕ್ಟ್​ಗಳ ಕಡೆಗೂ ಶ್ರೇಯಸ್​ ಅವರು ಗಮನ ಹರಿಸಿದ್ದಾರೆ. ಹಾಗಾಗಿ ಅವರು ಮುಂದಿನ ವರ್ಷ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚಿತ್ರೀಕರಿಸಲಾಗುವ ಹೊಸ ಆ್ಯಕ್ಷನ್ ಸಿನಿಮಾಗಾಗಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಶ್ರೇಯಸ್​ ಮಂಜು ಅವರು‌ ಕಳೆದ 2 ವಾರಗಳಿಂದ ಅಮೆರಿಕದ ಚಿಕಾಗೋ ಹಾಗೂ ನ್ಯೂಯಾರ್ಕ್‌ನ ಫಿಲ್ಮ್​ ಸಿಟಿಯ ವಿವಿಧ ನಟನಾ ಶಾಲೆಗಳಲ್ಲಿ ಮಾಸ್ಟರ್ ಕ್ಲಾಸ್ ತರಬೇತಿ ಪಡೆದುಕೊಳ್ಳುತ್ತಿದ್ದಾರೆ ಎಂಬುದು ವಿಶೇಷ. ಸಿನಿಮಾಗೆ ಸಂಬಂಧಿಸಿದಂತೆ ಹೊಸ ಬಗೆಯ ಆ್ಯಕ್ಷನ್ ತಂತ್ರಗಳ ಬಗ್ಗೆ ಕೂಡ ಅವರು ತರಬೇತಿ ಪಡೆಯುತ್ತಿದ್ದಾರೆ. ಅಲ್ಲಿನ ಹೊಸ ಜನರು ಮತ್ತು ಜಾಗದಲ್ಲಿ ಶ್ರೇಯಸ್ ಮಂಜು ಅವರು ಹಲವು ರೀತಿ ಅನುಭವ ಪಡೆಯುತ್ತಿದ್ದಾರೆ.

‘ಸಿನಿ ಕ್ಷೇತ್ರದಲ್ಲಿ ಸಕ್ರಿಯವಾಗಿರವ ಹೊಸ ವ್ಯಕ್ತಿಗಳನ್ನು ಭೇಟಿ ಮಾಡುವುದು ಮತ್ತು ಅವರ ಜೊತೆ ಚರ್ಚೆ ನಡೆಸುವುದರಿಂದ ನನಗೆ ಹೊಸ ಉತ್ಸಾಹ ಮೂಡಿದೆ. ಚಿತ್ರರಂಗದಲ್ಲಿ ದಿನದಿಂದ ದಿನಕ್ಕೆ ಹೊಸತನದ ಅವಿಷ್ಕಾರ ಆಗುತ್ತಿದೆ. ಕಲಾವಿದರಾಗಿ ನಾವೂ ಸಹ ಹೊಸದನ್ನು ಕಲಿಯಬೇಕು. ಆದ್ದರಿಂದ ಬಹಳ ವಿಷಯಗಳನ್ನು ತಿಳಿದುಕೊಳ್ಳುತ್ತಿದ್ದೇನೆ’ ಎಂದು ಶ್ರೇಯಸ್​ ಮಂಜು ಹೇಳಿದ್ದಾರೆ.

ಇದನ್ನೂ ಓದಿ: ಕನ್ನಡ ಚಿತ್ರರಂಗದ ಪರಿಸ್ಥಿತಿ, ಹಿರಿಯ ನಟ ಜಗ್ಗೇಶ್ ಕಣ್ಣೀರು

ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಅವರ ಕಾಂಬಿನೇಶನ್​ನ ಸಿನಿಮಾದ ಕೆಲಸಗಳು ಕೂಡ ಪ್ರಗತಿಯಲ್ಲಿವೆ. ಆ ಸಿನಿಮಾಗೆ ಎಸ್. ನಾರಾಯಣ್ ಅವರು ನಿರ್ದೇಶನ ಮಾಡಲಿದ್ದಾರೆ. ‘ವಿಷ್ಣು ಪ್ರಿಯಾ’ ಸಿನಿಮಾ ಬಿಡುಗಡೆ ಆದ ಬಳಿಕ ಶೀಘ್ರದಲ್ಲೇ ದುನಿಯಾ ವಿಜಯ್-ಶ್ರೇಯಸ್ ಮಂಜು ಕಾಂಬಿನೇಷನ್​ನ ಸಿನಿಮಾ ಬಗ್ಗೆ ಅಪ್​ಡೇಟ್​ ನೀಡಲು ನಿರ್ಧರಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ